Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:16 - ಕನ್ನಡ ಸತ್ಯವೇದವು C.L. Bible (BSI)

16 ಸೆಜರೇಯ ಪಟ್ಟಣದಿಂದ ಕೆಲವು ಶಿಷ್ಯರು ನಮ್ಮೊಡನೆ ಬಂದರು. ನಾವು ತಂಗಲಿದ್ದ ಸೈಪ್ರಸಿನ ಮ್ನಾಸೋನ ಎಂಬವನ ಮನೆಗೆ ಅವರು ನಮ್ಮನ್ನು ಕರೆದುಕೊಂಡು ಹೋದರು. ಈ ಮ್ನಾಸೋನನು ಆದಿಶಿಷ್ಯರಲ್ಲಿ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ನಮ್ಮನ್ನು ಕರೆದುಕೊಂಡು ಹೋದರು. ಆ ಮನೆಯವನು ಪ್ರಥಮ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ಕರಕೊಂಡು ಹೋದರು. ಆ ಮನೆಯವನು ಆದಿ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸೆಜರೇಯ ಪಟ್ಟಣದಿಂದ ಯೇಸುವಿನ ಶಿಷ್ಯರಲ್ಲಿ ಕೆಲವರು ನಮ್ಮೊಂದಿಗೆ ಬಂದರು. ಈ ಶಿಷ್ಯರು ನಾವು ಇಳಿದುಕೊಳ್ಳಬೇಕಾಗಿದ್ದ ಸೈಪ್ರಸಿನ ಮ್ನಾಸೋನ ಎಂಬವನ ಮನೆಗೆ ನಮ್ಮನ್ನು ಕರೆದೊಯ್ದರು. ಯೇಸುವಿನ ಆದಿ ಶಿಷ್ಯರಲ್ಲಿ ಮ್ನಾಸೋನನು ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕೈಸರೈಯದಿಂದ ಕೆಲವು ಶಿಷ್ಯರು ನಮ್ಮೊಂದಿಗೆ ಬಂದು, ಮ್ನಾಸೋನ ಎಂಬುವನ ಮನೆಗೆ ನಾವು ಇಳಿದುಕೊಳ್ಳುವಂತೆ ಕರೆದುಕೊಂಡು ಹೋದರು. ಅವನು ಸೈಪ್ರಸ್ ದಿಂದ ಬಂದ ಪ್ರಥಮ ಶಿಷ್ಯರಲ್ಲಿ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಸೆಜಾರಾಕ್ನಾ ಉಲ್ಲಿ ಶಿಸಾಲೊಕಾ ಅಮ್ಚ್ಯಾ ವಾಂಗ್ಡಾ ಯೆವ್ನ್ ಅಮಿ ಜಾವ್ನ್ ರ್‍ಹಾತಲ್ಯಾ ಘರಾಪತರ್ ಅಮ್ಕಾ ಪಾವಸ್ಲ್ಯಾನಿ, ತ್ಯಾ ಘರಾತ್ಲೊ ಮಾನುಸ್ ಅದ್ದಿಚ್ಯಾ ಶಿಸಾತ್ನಿ ಎಕ್ಲೊ ಹೊವ್ನ್ ಹೊತ್ತೊ ಸೈಪುಸಾತ್ಲೊ ಮಾನುಸ್ ಮನ್ತಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:16
15 ತಿಳಿವುಗಳ ಹೋಲಿಕೆ  

ನರೆಗೂದಲು ಸುಂದರ ಕಿರೀಟ, ಸನ್ನಡತೆಗೆ ಸಿಗುವ ಪ್ರತಿಫಲ.


ಮಾರನೆಯ ದಿನ ಅಲ್ಲಿಂದ ಹೊರಟು ಸೆಜರೇಯಕ್ಕೆ ಬಂದೆವು. ಅಲ್ಲಿ ಶುಭಸಂದೇಶ ಪ್ರಚಾರಕ ಫಿಲಿಪ್ಪನ ಮನೆಗೆ ಹೋಗಿ ಅವನೊಡನೆ ತಂಗಿದೆವು. ಜೆರುಸಲೇಮಿನಲ್ಲಿ ಆಯ್ಕೆಯಾದ ಏಳುಮಂದಿಯಲ್ಲಿ ಇವನೂ ಒಬ್ಬನು.


ಆದರೂ ನಿನ್ನ ಮೇಲಿರುವ ಪ್ರೀತಿಯ ನಿಮಿತ್ತ ನಾನು ನಿನ್ನಲ್ಲಿ ವಿನಂತಿಸುತ್ತೇನೆ: ವೃದ್ಧಪ್ರಾಯನೂ ಮತ್ತು ಕ್ರಿಸ್ತಯೇಸುವಿಗೋಸ್ಕರ ಈಗ ಸೆರೆಯಾಳೂ ಆಗಿರುವ ಪೌಲನೆಂಬ ನಾನು ಒನೇಸಿಮನ ಪರವಾಗಿ ನಿನ್ನಲ್ಲಿ ವಿಜ್ಞಾಪಿಸುತ್ತೇನೆ.


ನನ್ನ ಸ್ವದೇಶೀಯರೂ ನನ್ನೊಡನೆ ಸೆರೆಯಲ್ಲಿ ಇದ್ದವರೂ ಆದ ಅಂದ್ರೋನಿಕನಿಗೂ ಯೂನ್ಯನಿಗೂ ನನ್ನ ನಮನಗಳು. ಅವರು ಪ್ರೇಷಿತರಂತೆ ಸನ್ಮಾನಿತರು; ಕ್ರಿಸ್ತಯೇಸುವನ್ನು ವಿಶ್ವಾಸಿಸುವುದರಲ್ಲಿ ನನಗಿಂತಲೂ ಮೊದಲಿಗರು.


ಹೀಗೆ ಇವರಿಬ್ಬರಲ್ಲಿ ತೀವ್ರ ವಾಗ್ವಾದ ಉಂಟಾಯಿತು. ಒಬ್ಬರನ್ನೊಬ್ಬರು ಬಿಟ್ಟು ಅಗಲಬೇಕಾಯಿತು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದನು.


ಸ್ತೇಫನನು ಕೊಲೆಯಾದ ಮೊದಲ್ಗೊಂಡು ಉಂಟಾದ ಹಿಂಸಾಚಾರದ ನಿಮಿತ್ತ ಭಕ್ತಾದಿಗಳು ಚದರಿಹೋದರು. ಅವರಲ್ಲಿ ಕೆಲವರು ಫೆನಿಷ್ಯ, ಸೈಪ್ರಸ್, ಅಂತಿಯೋಕ್ಯದವರೆಗೂ ಹೋಗಿ ಶುಭಸಂದೇಶವನ್ನು ಸಾರಿದರು. ಆದರೆ ಇದನ್ನು ಸಾರಿದ್ದು ಯೆಹೂದ್ಯರಿಗೆ ಮಾತ್ರ.


ಅನಂತರ ಅವರಿಗೆ ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನ ಪಡೆಯುವಂತೆ ಆಜ್ಞಾಪಿಸಿದನು. ಅದಾದ ಬಳಿಕ ತಮ್ಮೊಡನೆ ಕೆಲವು ದಿನ ಇರಬೇಕೆಂದು ಪೇತ್ರನನ್ನು ಆ ಜನರು ಕೇಳಿಕೊಂಡರು.


ಮರುದಿವಸ ಅವನು ಸೆಜರೇಯವನ್ನು ತಲುಪಿದನು. ಇತ್ತ ಕೊರ್ನೇಲಿಯನು ತಾನು ಆಹ್ವಾನಿಸಿದ ನೆಂಟರಿಷ್ಟರೊಡನೆ ಮತ್ತು ಆಪ್ತಮಿತ್ರರೊಡನೆ ಪೇತ್ರನಿಗಾಗಿ ಕಾಯುತ್ತಿದ್ದನು.


ಫಿಲಿಪ್ಪನಾದರೋ ಆಜೋತ್ ಎಂಬಲ್ಲಿ ಕಾಣಿಸಿಕೊಂಡನು. ಅಲ್ಲಿಂದ ಸೆಜರೇಯವನ್ನು ತಲುಪುವವರೆಗೆ ಎಲ್ಲಾ ಊರುಗಳಲ್ಲೂ ಶುಭಸಂದೇಶವನ್ನು ಸಾರುತ್ತಾ ಹೋದನು.


ಜೋಸೆಫ್ ಎಂಬ ಲೇವಿಯನು ಅವರ ಸಂಗಡ ಇದ್ದನು. ಇವನ ಹುಟ್ಟೂರು ಸೈಪ್ರಸ್. ಇವನಿಗೆ ‘ಬಾರ್ನಬ’ (ಎಂದರೆ ಪ್ರೋತ್ಸಾಹಪುತ್ರ) ಎಂದು ಪ್ರೇಷಿತರು ಹೆಸರಿಟ್ಟಿದ್ದರು.


ಸುದೀರ್ಘ ಚರ್ಚೆಯಾದ ನಂತರ ಪೇತ್ರನು ಎದ್ದುನಿಂತು ಹೀಗೆಂದನು: “ಸಹೋದರರೇ, ಅನ್ಯಧರ್ಮೀಯರು ಶುಭಸಂದೇಶವನ್ನು ನನ್ನ ಬಾಯಿಯಿಂದ ಕೇಳಿ ವಿಶ್ವಾಸಿಸಲೆಂದು ದೇವರು ನಿಮ್ಮ ಮಧ್ಯೆಯಿಂದ ನನ್ನನ್ನು ಬಹುದಿನಗಳ ಹಿಂದೆಯೇ ಆರಿಸಿಕೊಂಡರು. ಇದು ನಿಮಗೆ ತಿಳಿದ ವಿಷಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು