Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:20 - ಕನ್ನಡ ಸತ್ಯವೇದವು C.L. Bible (BSI)

20 ಇದನ್ನು ಕೇಳಿದ ಅವರು ದೇವರನ್ನು ಕೊಂಡಾಡಿದರು. ಅನಂತರ ಅವರು ಪೌಲನಿಗೆ ಹೀಗೆಂದರು: "ಸಹೋದರಾ, ನಿನಗೆ ತಿಳಿದಿರುವಂತೆ ಯೆಹೂದ್ಯರಲ್ಲಿ ಭಕ್ತವಿಶ್ವಾಸಿಗಳಾಗಿರುವವರು ಸಾವಿರಾರು ಮಂದಿ ಇದ್ದಾರೆ; ಅವರೆಲ್ಲರೂ ಯೆಹೂದ್ಯ ಧರ್ಮಶಾಸ್ತ್ರದಲ್ಲಿ ಬಹಳ ಶ್ರದ್ಧೆ ಉಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರು ಇದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ ಹೇಳಿದ್ದು - ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೋಡುತ್ತೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದಲ್ಲಿ ಅಭಿಮಾನಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಈ ಸಂಗತಿಗಳನ್ನು ಕೇಳಿದ ಹಿರಿಯರು ದೇವರನ್ನು ಕೊಂಡಾಡಿದರು. ಬಳಿಕ ಅವರು ಪೌಲನಿಗೆ, “ಸಹೋದರನೇ, ವಿಶ್ವಾಸಿಗಳಿಗಾಗಿ ಪರಿವರ್ತನೆಗೊಂಡಿರುವ ಸಾವಿರಾರು ಮಂದಿ ಯೆಹೂದ್ಯರನ್ನು ನೀನು ಇಲ್ಲಿ ಕಾಣಬಹುದು. ಆದರೆ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗುವುದು ಬಹಳ ಮುಖ್ಯವೆಂಬುದು ಇವರ ಆಲೋಚನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ಅದನ್ನು ಕೇಳಿ, ದೇವರನ್ನು ಕೊಂಡಾಡಿದರು. ಅನಂತರ ಪೌಲನಿಗೆ, “ಸಹೋದರನೇ, ಸಾವಿರಾರು ಜನ ಯೆಹೂದ್ಯರು ನಂಬಿರುವುದನ್ನು ಕಾಣುತ್ತೀಯಲ್ಲಾ, ಅವರೆಲ್ಲರೂ ಮೋಶೆಯ ನಿಯಮದ ಅಭಿಮಾನಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೆನಿ ಹೆ ಆಯಿಕ್ಲ್ಯಾನಿ ದೆವಾಕ್ ಸ್ತುತಿ ಕರ್‍ಲ್ಯಾನಿ, ಅನಿ ತೆನಿ ಪಾವ್ಲುಕ್ ಭಾವಾ, ಹಜಾರ್ಘಟ್ಲಿ ಜುದೆವಾಂಚಿ ಲೊಕಾ ವಿಶ್ವಾಸಿ ಹೊವ್ನ್ ಬದಲಲ್ಲೆ ತಿಯಾ ಬಗುಕ್ ಲಾಗ್ಲೈಯ್, ಅನಿ ಖಾಯ್ದ್ಯಾಂಚೆ ಪುಸ್ತಕ್ ದೆವಸ್ಪಾನ್ ವಾಚುಲ್ಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:20
28 ತಿಳಿವುಗಳ ಹೋಲಿಕೆ  

ದೇವರ ವಿಷಯದಲ್ಲಿ ಅವರು ಬಹಳ ನಿಷ್ಠಾವಂತರು ಎಂದು ಒತ್ತಿಹೇಳಬಲ್ಲೆ. ಆದರೆ ಆ ನಿಷ್ಠೆ ನೈಜಜ್ಞಾನವನ್ನು ಆಧರಿಸಿಲ್ಲ.


ಇದಲ್ಲದೆ, ನಾನು ನನ್ನ ಪೂರ್ವಜರ ಮತಸಂಪ್ರದಾಯಗಳಲ್ಲಿ ಅತ್ಯಧಿಕ ನಿಷ್ಠೆಯುಳ್ಳವನಾಗಿದ್ದೆ. ಯೆಹೂದ್ಯ ಮತಾಚರಣೆಯಲ್ಲಿ ಅನೇಕ ಸಮವಯಸ್ಕರಿಗಿಂತ ಎಷ್ಟೋ ಮುಂದಾಗಿದ್ದೆ.


“ನಾನೊಬ್ಬ ಯೆಹೂದ್ಯನು, ಸಿಲಿಸಿಯದ ತಾರ್ಸ ಎಂಬಲ್ಲಿ ಹುಟ್ಟಿದವನು. ಆದರೆ, ಇದೇ ಜೆರುಸಲೇಮಿನಲ್ಲಿ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪೂರ್ವಜರ ಧರ್ಮಶಾಸ್ತ್ರವನ್ನು ಕಟ್ಟುನಿಟ್ಟಾಗಿ ಕಲಿತವನು. ಇಲ್ಲಿ ಇಂದು ನೆರೆದಿರುವ ನೀವೆಲ್ಲರೂ ದೈವಾಭಿಮಾನಿಗಳಾಗಿರುವಂತೆಯೇ ನಾನು ದೈವಾಭಿಮಾನಿಯಾಗಿದ್ದೆ.


ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತ ವಿಶ್ವಾಸಿಗಳಿಗೆ, “ಮೋಶೆಯ ನಿಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ಧಾರ ಪಡೆಯಲಾರಿರಿ,” ಎಂದು ಬೋಧಿಸತೊಡಗಿದರು.


ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು.


ಫರಿಸಾಯ ಪಂಥಕ್ಕೆ ಸೇರಿದ ಕೆಲವು ಭಕ್ತರು ಮಾತ್ರ ಎದ್ದುನಿಂತು, ಅನ್ಯಧರ್ಮೀಯರು ಸುನ್ನತಿಮಾಡಿಸಿಕೊಳ್ಳಲೇಬೇಕು, ಅವರು ಮೋಶೆಯ ನಿಯಮಗಳನ್ನು ಅನುಸರಿಸುವಂತೆ ಆಜ್ಞೆ ಮಾಡಲೇಬೇಕು,” ಎಂದರು.


ಪ್ರಭು ತಮ್ಮ ಸದ್ಭಕ್ತರೆಲ್ಲರಿಂದ ಸನ್ಮಾನವನ್ನೂ ವಿಶ್ವಾಸಿಗಳೆಲ್ಲರಿಂದ ಗೌರವವನ್ನೂ ಪಡೆಯುವ ಆ ದಿನದಲ್ಲಿ ಇದೆಲ್ಲಾ ಸಂಭವಿಸುವುದು. ನಾವು ನಿಮಗಿತ್ತ ಸಾಕ್ಷಿಯನ್ನು ನಂಬಿದ ನೀವೆಲ್ಲರೂ ಅವರೊಂದಿಗಿರುವಿರಿ.


ನಮ್ಮ ಕಡೆಯ ಕೆಲವು ಜನರು ನಮ್ಮಿಂದ ಯಾವ ಆದೇಶವನ್ನೂ ಪಡೆಯದೆ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮ ಮನಸ್ಸನ್ನು ಕಲಕಿದರೆಂಬ ಸಮಾಚಾರ ನಮ್ಮ ಗಮನಕ್ಕೆ ಬಂದಿದೆ.


ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.


ನಡೆದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. ಇದನ್ನು ಅರಿತ ಆ ಸಭಾಸದಸ್ಯರಿಗೆ ಪ್ರೇಷಿತರನ್ನು ಶಿಕ್ಷಿಸುವ ಮಾರ್ಗ ತೋಚದೆಹೋಯಿತು. ಆದುದರಿಂದ ಅವರನ್ನು ಇನ್ನೂ ಅಧಿಕವಾಗಿ ಎಚ್ಚರಿಸಿ ಕಳುಹಿಸಿಬಿಟ್ಟರು.


ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಾದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಗೋದಿಯಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಅದು ಒಂಟಿಯಾಗಿ ಉಳಿಯುತ್ತದೆ; ಅದು ಸತ್ತರೆ ಮಾತ್ರ ಸಮೃದ್ಧಿಯಾದ ಫಲವನ್ನು ಕೊಡುತ್ತದೆ.


ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”


ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ.


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ಮಣಿಯಿರಿ, ಪ್ರಭುವಿನಲಿ ಭಯಭಕುತಿಯುಳ್ಳವರೇ I ಭಜಿಸಿರಿ ಇಸ್ರಯೇಲರೇ, ಯಾಕೋಬ ಕುಲಜರೇ II


ಈ ಕಾರಣ ನನ್ನನ್ನು ಕುರಿತು ಅವರು ದೇವರನ್ನು ಕೊಂಡಾಡುತ್ತಿದ್ದರು.


ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು