Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:3 - ಕನ್ನಡ ಸತ್ಯವೇದವು C.L. Bible (BSI)

3 ಸೈಪ್ರಸನ್ನು ಸಮೀಪಿಸಿದಾಗ ಅದನ್ನು ಎಡಕ್ಕೆ ಬಿಟ್ಟು ಸಿರಿಯ ದೇಶದ ಕಡೆಗೆ ಸಾಗಿ, ಟೈರ್ ಎಂಬಲ್ಲಿ ಬಂದು ಇಳಿದೆವು. ಇಲ್ಲಿ ಹಡಗಿನ ಸರಕನ್ನು ಇಳಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮುಂದೆ ಕುಪ್ರದ್ವೀಪವನ್ನು ಕಂಡು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್ ಪಟ್ಟಣಕ್ಕೆ ಬಂದು ಇಳಿದೆವು. ಏಕೆಂದರೆ, ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮುಂದೆ ಕುಪ್ರದ್ವೀಪವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್‍ಪಟ್ಟಣಕ್ಕೆ ಬಂದು ಇಳಿದೆವು. ಯಾಕಂದರೆ ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾವು ಸೈಪ್ರಸ್ ದ್ವೀಪದ ಸಮೀಪದಲ್ಲಿ ನೌಕಾಯಾನ ಮಾಡಿದೆವು. ಅದು ನಮ್ಮ ಉತ್ತರದಿಕ್ಕಿನಲ್ಲಿ ಕಾಣುತ್ತಿತ್ತು. ಆದರೆ ನಾವು ಹಡಗನ್ನು ಅಲ್ಲಿ ನಿಲ್ಲಿಸದೆ ಸಿರಿಯ ದೇಶಕ್ಕೆ ಪ್ರಯಾಣ ಮಾಡಿ ಟೈರ್ ಪಟ್ಟಣದಲ್ಲಿ ಹಡಗನ್ನು ನಿಲ್ಲಿಸಿದೆವು. ಯಾಕೆಂದರೆ ಹಡಗಿನಿಂದ ಸರಕನ್ನು ಇಳಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸೈಪ್ರಸ್ ಹತ್ತಿರ ಬಂದು ಅದರ ದಕ್ಷಿಣಕ್ಕೆ ಪ್ರಯಾಣಮಾಡಿ ಸಿರಿಯಕ್ಕೆ ಹೋದೆವು. ನಮ್ಮ ನೌಕೆಯಲ್ಲಿದ್ದ ಸರಕುಗಳನ್ನು ಇಳಿಸಬೇಕಾಗಿದ್ದ ಟೈರ್ ಎಂಬಲ್ಲಿ ಬಂದು ಇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಮಿ ಸೈಪ್ರಸ್ ದ್ವಿಪಾಕ್ ಬಗುನ್ ಢಾವ್ಯಾಭಾಜುಕ್ ಸೊಡುನ್ ಸಿರಿಯಾ ದೆಶ್ಯಾಕ್ಡೆ ಜಾವ್ನ್, ತಿರ್ ಶಾರಾತ್ ಢೊನ್ ಇಬೆಕರ್ಲ್ಯಾಂವ್, ಕಶ್ಯಾಕ್ ಮಟ್ಲ್ಯಾರ್, ಥೈ ಢೊನಾತ್ನಾ ಸಾಮಾನ್ ಉತರ್ತಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:3
22 ತಿಳಿವುಗಳ ಹೋಲಿಕೆ  

ನಾವು ಅಲ್ಲಿಂದ ಹೊರಟೆವು. ಎದುರುಗಾಳಿ ಬೀಸುತ್ತಿತ್ತು. ಆದುದರಿಂದ ಸೈಪ್ರಸ್ ದ್ವೀಪದ ಮರೆಗೆ ಸಾಗಿದೆವು.


ಸೆಜರೇಯ ಪಟ್ಟಣದಿಂದ ಕೆಲವು ಶಿಷ್ಯರು ನಮ್ಮೊಡನೆ ಬಂದರು. ನಾವು ತಂಗಲಿದ್ದ ಸೈಪ್ರಸಿನ ಮ್ನಾಸೋನ ಎಂಬವನ ಮನೆಗೆ ಅವರು ನಮ್ಮನ್ನು ಕರೆದುಕೊಂಡು ಹೋದರು. ಈ ಮ್ನಾಸೋನನು ಆದಿಶಿಷ್ಯರಲ್ಲಿ ಒಬ್ಬನಾಗಿದ್ದನು.


ಹೆರೋದನು ಟೈರ್ ಮತ್ತು ಸಿದೋನಿನ ಜನರ ಮೇಲೆ ಕಡುಕೋಪಗೊಂಡಿದ್ದನು. ಅವರೆಲ್ಲರೂ ಒಟ್ಟಾಗಿ ಅವನನ್ನು ಸಂದರ್ಶಿಸಲು ಹೋದರು. ಮೊದಲು ಅರಮನೆಯ ಮೇಲ್ವಿಚಾರಕನಾದ ಬ್ಲಾಸ್ತನ ಮನಸ್ಸನ್ನು ತಮ್ಮ ಕಡೆ ಒಲಿಸಿಕೊಂಡರು. ಅನಂತರ ಅವರು ಹೆರೋದನೊಡನೆ ಸಂಧಾನಮಾಡಿಕೊಳ್ಳಲು ಯತ್ನಿಸಿದರು. ಏಕೆಂದರೆ, ಅವರು ದವಸಧಾನ್ಯಗಳಿಗಾಗಿ ಹೆರೋದನ ನಾಡನ್ನು ಅವಲಂಬಿಸಬೇಕಾಗಿತ್ತು.


ಜೋಸೆಫ್ ಎಂಬ ಲೇವಿಯನು ಅವರ ಸಂಗಡ ಇದ್ದನು. ಇವನ ಹುಟ್ಟೂರು ಸೈಪ್ರಸ್. ಇವನಿಗೆ ‘ಬಾರ್ನಬ’ (ಎಂದರೆ ಪ್ರೋತ್ಸಾಹಪುತ್ರ) ಎಂದು ಪ್ರೇಷಿತರು ಹೆಸರಿಟ್ಟಿದ್ದರು.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ಇದಾದ ಮೇಲೆ ಪೌಲನು ಕೊರಿಂಥದಲ್ಲಿ ಅನೇಕ ದಿನ ಇದ್ದನು. ಅನಂತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾಡಿದ್ದ ಹರಕೆಯ ಪ್ರಕಾರ ಕೆಂಖ್ರೆಯೆಂಬ ಸ್ಥಳದಲ್ಲಿ ಮುಂಡನ ಮಾಡಿಸಿಕೊಂಡನು.


ಅವನು ಸಿರಿಯ ಮತ್ತು ಸಿಲಿಸಿಯಗಳನ್ನು ಹಾದುಹೋಗುತ್ತಾ, ಅಲ್ಲಿದ್ದ ಕ್ರೈಸ್ತಸಭೆಗಳನ್ನು ದೃಢಪಡಿಸುತ್ತಾ ಪ್ರಯಾಣ ಬೆಳೆಸಿದನು.


ಹೀಗೆ ಇವರಿಬ್ಬರಲ್ಲಿ ತೀವ್ರ ವಾಗ್ವಾದ ಉಂಟಾಯಿತು. ಒಬ್ಬರನ್ನೊಬ್ಬರು ಬಿಟ್ಟು ಅಗಲಬೇಕಾಯಿತು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದನು.


“ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು!


ಹೀಗೆ ಪವಿತ್ರಾತ್ಮ ಅವರೇ ಕಳುಹಿಸಿದ ಬಾರ್ನಬ ಮತ್ತು ಸೌಲ ಸೆಲೂಸಿಯಾಕ್ಕೆ ಹೋದರು. ಅಲ್ಲಿಂದ ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದರು.


ಸ್ತೇಫನನು ಕೊಲೆಯಾದ ಮೊದಲ್ಗೊಂಡು ಉಂಟಾದ ಹಿಂಸಾಚಾರದ ನಿಮಿತ್ತ ಭಕ್ತಾದಿಗಳು ಚದರಿಹೋದರು. ಅವರಲ್ಲಿ ಕೆಲವರು ಫೆನಿಷ್ಯ, ಸೈಪ್ರಸ್, ಅಂತಿಯೋಕ್ಯದವರೆಗೂ ಹೋಗಿ ಶುಭಸಂದೇಶವನ್ನು ಸಾರಿದರು. ಆದರೆ ಇದನ್ನು ಸಾರಿದ್ದು ಯೆಹೂದ್ಯರಿಗೆ ಮಾತ್ರ.


“ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗುತ್ತಿದ್ದರು.


ಮೊಟ್ಟ ಮೊದಲನೆಯ ಆ ಜನಗಣತಿ, ಕುರೇನ್ಯನು ಸಿರಿಯ ನಾಡಿಗೆ ರಾಜ್ಯಪಾಲನಾಗಿದ್ದಾಗ ನಡೆಯಿತು.


:ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣೀತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಾಪಕ್ಕೆ ವಿಮುಖರಾಗುತ್ತಿದ್ದರು.


ಸಿರಿಯರ ಸೈನಿಕರು ಈಗಾಗಲೇ ಇಸ್ರಯೇಲಿನ ಗಡಿಯೊಳಗಿದ್ದಾರೆ ಎಂಬ ಸುದ್ದಿ ಜುದೇಯದ ಅರಸನಿಗೆ ಮುಟ್ಟಿದ್ದೇ ತಡ, ಅವನೂ ಅವನ ಪ್ರಜೆಗಳೆಲ್ಲರೂ ಹೆದರಿದರು. ಬಿರುಗಾಳಿಗೆ ಸಿಕ್ಕಿದ ಗಿಡಮರಗಳಂತೆ ನಡುಗಿದರು.


“ನನಗೆ ಮಣಿಯುವ ರಾಷ್ಟ್ರಗಳಲಿ I ಈಜಿಪ್ಟ್, ಬಾಬೆಲ್ ದೇಶಗಳನು ಲೆಕ್ಕಿಸುವೆ II ಜೆರುಸಲೇಮಿನ ನಿವಾಸಿಗಳಲಿ I ಪಿಲಿಷ್ಟಿಯ, ಟೈರ್, ಎಥಿಯೋಪಿಯ ಜನ ಸೇರಿವೆ II


ಟೈರ್ ನಾಡಿಗರು ನಿನಗೆ ಕಾಣಿಕೆಯಿತ್ತು ಸನ್ಮಾನಿಸುವರು I ಸಿರಿವಂತ ಪ್ರಜೆಗಳು ನಿನ್ನುಪಕಾರವನು ಕೋರಿಬರುವರು II


ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೆಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕಿತು.


ಇಸ್ರಯೇಲರು ಇನ್ನೊಮ್ಮೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಸರ್ವೇಶ್ವರನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಮತ್ತು ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಸರ್ವೇಶ್ವರನನ್ನಾದರೋ ಬಿಟ್ಟೇಬಿಟ್ಟರು.


ಅಲ್ಲಿ ಫೆನಿಷ್ಯಕ್ಕೆ ಹೋಗುವ ಹಡಗನ್ನು ಕಂಡು ಅದನ್ನೇರಿ ಪ್ರಯಾಣ ಮಾಡಿದೆವು.


ಟೈರ್‍ನಿಂದ ಹೊರಟು ಪ್ತೊಲೊಮಾಯ ಎಂಬಲ್ಲಿಗೆ ಬಂದಿಳಿದೆವು. ಅಲ್ಲಿ ಭಕ್ತಾದಿಗಳನ್ನು ವಂದಿಸಿ ಅವರೊಡನೆ ಒಂದು ದಿನ ಇದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು