Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:7 - ಕನ್ನಡ ಸತ್ಯವೇದವು C.L. Bible (BSI)

7 ಟೈರ್‍ನಿಂದ ಹೊರಟು ಪ್ತೊಲೊಮಾಯ ಎಂಬಲ್ಲಿಗೆ ಬಂದಿಳಿದೆವು. ಅಲ್ಲಿ ಭಕ್ತಾದಿಗಳನ್ನು ವಂದಿಸಿ ಅವರೊಡನೆ ಒಂದು ದಿನ ಇದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾವು ತೂರ್ ಪಟ್ಟಣದಿಂದ ಹೊರಟು ಪ್ತೊಲೆಮಾಯಕ್ಕೆ ಸೇರಿ ಸಮುದ್ರಪ್ರಯಾಣವನ್ನು ಮುಗಿಸಿದೆವು. ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿನ ಇದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾವು ತೂರ್‍ಪಟ್ಟಣದಿಂದ ಹೊರಟು ಪ್ತೊಲೆಮಾಯಕ್ಕೆ ಸೇರಿ ಸಮುದ್ರಪ್ರಯಾಣವನ್ನು ಮುಗಿಸಿದೆವು. ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿವಸ ಇದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾವು ಟೈರ್ ನಿಂದ ನಮ್ಮ ಪ್ರಯಾಣವನ್ನು ಮುಂದುವರೆಸಿ ಪ್ಟೊಲೊಮಾಯ ಎಂಬಲ್ಲಿಗೆ ಹೋದೆವು. ಅಲ್ಲಿಯ ಸಹೋದರರನ್ನು (ವಿಶ್ವಾಸಿಗಳು) ವಂದಿಸಿ ಅವರೊಂದಿಗೆ ಒಂದು ದಿನ ಇದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಟೈರ್ ಪಟ್ಟಣದಿಂದ ನಮ್ಮ ಪ್ರಯಾಣ ಮುಂದುವರಿಸಿ ಪ್ತೊಲೆಮಾಯ ಎಂಬಲ್ಲಿಗೆ ಬಂದಿಳಿದೆವು. ಅಲ್ಲಿಯ ಸಹೋದರರನ್ನು ವಂದಿಸಿ ಅವರೊಂದಿಗೆ ಒಂದು ದಿನ ಇದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಮಿ ತುರ್ ಶಾರಾತ್ನಾ ಅಮ್ಚೆ ಪ್ರಯಾನ್ ಫಿಡೆ ಕರುನ್ ಪ್ತೊಲೊಮಾ ಮನ್ತಲೊ ಶಾರಾಕ್ ಗೆಲ್ಯಾಂವ್ ಥೈ ಹೊತ್ತ್ಯಾ ದೆವಾಚೆರ್ ವಿಶ್ವಾಸ್ ಥವಲ್ಲ್ಯಾ ಲೊಕಾಕ್ನಿ ವಂದನ್ ಕರುನ್ ಎಕ್ ದಿಸ್ ಥೈ ಹೊತ್ತ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:7
13 ತಿಳಿವುಗಳ ಹೋಲಿಕೆ  

ನಿಮ್ಮ ಸಭಾನಾಯಕರೆಲ್ಲರಿಗೂ ಎಲ್ಲಾ ದೇವಜನರಿಗೂ ನನ್ನ ವಂದನೆಗಳು. ಇಟಲಿಯಿಂದ ಬಂದ ಸಹೋದರರು ನಿಮಗೆ ವಂದನೆ ತಿಳಿಸಿದ್ದಾರೆ.


ಸಿರಾಕೂಸ್ ಎಂಬ ಪಟ್ಟಣವನ್ನು ಸೇರಿ ಅಲ್ಲಿ ಮೂರು ದಿನ ತಂಗಿದೆವು.


ಕೆಲವು ದಿನಗಳಾದ ನಂತರ ರಾಜ ಅಗ್ರಿಪ್ಪನು ಬೆರ್ನಿಸಳೊಂದಿಗೆ ಫೆಸ್ತನನ್ನು ಅಭಿನಂದಿಸಲು ಸೆಜರೇಯಕ್ಕೆ ಬಂದನು.


ಪೌಲನು ಅವರಿಗೆ ನಮಸ್ಕರಿಸಿ ತನ್ನ ಸೇವೆಯ ಮೂಲಕ ದೇವರು ಯೆಹೂದ್ಯೇತರರ ಮಧ್ಯೆ ಮಾಡಿದ ಮಹತ್ಕಾರ್ಯಗಳನ್ನು ಒಂದೊಂದಾಗಿ ವರದಿಮಾಡಿದನು.


ಅಲ್ಲಿ ನಾವು ಕೆಲವು ದಿನ ಇದ್ದೆವು. ಆಗ ಅಗಬ ಎಂಬ ಪ್ರವಾದಿ ನಮ್ಮನ್ನು ನೋಡಲು ಜುದೇಯದಿಂದ ಬಂದನು.


ಅವನು ಸೆಜರೇಯವನ್ನು ಸೇರಿದನು. ಅಲ್ಲಿಂದ ಜೆರುಸಲೇಮಿಗೆ ಹೋಗಿ ಧರ್ಮಸಭೆಯನ್ನು ಸಂಧಿಸಿ ಅಂತಿಯೋಕ್ಯಕ್ಕೆ ಬಂದನು.


ಹೆರೋದನು ಟೈರ್ ಮತ್ತು ಸಿದೋನಿನ ಜನರ ಮೇಲೆ ಕಡುಕೋಪಗೊಂಡಿದ್ದನು. ಅವರೆಲ್ಲರೂ ಒಟ್ಟಾಗಿ ಅವನನ್ನು ಸಂದರ್ಶಿಸಲು ಹೋದರು. ಮೊದಲು ಅರಮನೆಯ ಮೇಲ್ವಿಚಾರಕನಾದ ಬ್ಲಾಸ್ತನ ಮನಸ್ಸನ್ನು ತಮ್ಮ ಕಡೆ ಒಲಿಸಿಕೊಂಡರು. ಅನಂತರ ಅವರು ಹೆರೋದನೊಡನೆ ಸಂಧಾನಮಾಡಿಕೊಳ್ಳಲು ಯತ್ನಿಸಿದರು. ಏಕೆಂದರೆ, ಅವರು ದವಸಧಾನ್ಯಗಳಿಗಾಗಿ ಹೆರೋದನ ನಾಡನ್ನು ಅವಲಂಬಿಸಬೇಕಾಗಿತ್ತು.


ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ?


ಅದು ಮುಗಿಯುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವುದಕ್ಕಾಗಿ ಮುಂದೆ ಹೋದನು.


ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ ಎರಡು ರೊಟ್ಟಿಗಳನ್ನು ಕೊಡುವರು; ನೀನು ಅವುಗಳನ್ನು ತೆಗೆದುಕೊಳ್ಳಬೇಕು.


ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:


ಸೈಪ್ರಸನ್ನು ಸಮೀಪಿಸಿದಾಗ ಅದನ್ನು ಎಡಕ್ಕೆ ಬಿಟ್ಟು ಸಿರಿಯ ದೇಶದ ಕಡೆಗೆ ಸಾಗಿ, ಟೈರ್ ಎಂಬಲ್ಲಿ ಬಂದು ಇಳಿದೆವು. ಇಲ್ಲಿ ಹಡಗಿನ ಸರಕನ್ನು ಇಳಿಸಬೇಕಾಗಿತ್ತು.


ನಾವು ಜೆರುಸಲೇಮಿಗೆ ಬಂದಾಗ ಅಲ್ಲಿನ ಸಹೋದರರು ನಮ್ಮನ್ನು ಸಂತೋಷದಿಂದ ಸ್ವಾಗತಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು