Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:24 - ಕನ್ನಡ ಸತ್ಯವೇದವು C.L. Bible (BSI)

24 ಜನರು ಯಾವ ಕಾರಣದಿಂದ ಅವನ ವಿರುದ್ಧ ಹೀಗೆ ಮಾಡುತ್ತಿದ್ದಾರೆಂದು ಅರಿತುಕೊಳ್ಳಲು ಸಹಸ್ರಾಧಿಪತಿ ಪೌಲನನ್ನು ಕೋಟೆ ಒಳಕ್ಕೆಕೊಂಡೊಯ್ದು, ಚಾವಟಿಯಿಂದ ಹೊಡೆದು ವಿಚಾರಿಸುವಂತೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬುದನ್ನು ಸಹಸ್ರಾಧಿಪತಿಯು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು, ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬದನ್ನು ಸಹಸ್ರಾಧಿಪತಿಯು ತಿಳುಕೊಳ್ಳುವದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಗ ಸೇನಾಧಿಪತಿಯು ಪೌಲನನ್ನು ದಂಡಿನ ಪಾಳೆಯದೊಳಗೆ ಕರೆದುಕೊಂಡು ಹೋಗಿ ಹೊಡೆಯಲು ಸೈನಿಕರಿಗೆ ಹೇಳಿದನು. ಜನರು ಪೌಲನ ವಿರೋಧವಾಗಿ ಈ ರೀತಿ ಕೂಗಲು ಕಾರಣವೇನೆಂದು ಪೌಲನಿಂದಲೇ ಹೇಳಿಸಬೇಕೆಂಬುದು ಸೇನಾಧಿಪತಿಯ ಅಪೇಕ್ಷೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸಹಸ್ರಾಧಿಪತಿಯು ಪೌಲನನ್ನು ಸೈನಿಕರ ಪಾಳ್ಯದೊಳಗೆ ಒಯ್ಯಬೇಕೆಂದು, ಅವನನ್ನು ಕೊರಡೆಗಳಿಂದ ಹೊಡೆದು ಯಾವ ಅಪರಾಧಕ್ಕಾಗಿ ಜನರು ಅವನಿಗೆ ವಿರೋಧವಾಗಿ ಅರಚುತ್ತಿದ್ದರು ಎಂಬುದನ್ನು ಅವನಿಂದ ವಿಚಾರಿಸಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ರೊಮಾಚ್ಯಾ ಸೈನಿಕಾಚ್ಯಾ ಮುಖಂಡಾನ್ ಪಾವ್ಲುಕ್ ಬುತ್ತುರ್ ಘೆವ್ನ್ ಜಾವ್ನ್ ಮಾರಾ ಮನುನ್ ಹುಕುಮ್ ದಿಲ್ಯಾನ್,ಲೊಕಾ ಅಶೆ ಬೊಬ್ ಮಾರುಕ್ ಕಾಯ್ ಕಾರನ್ ಮನ್ತಲೆ ತೆಜ್ಯಾಕ್ನಾಚ್ ಸಾಂಗ್ಸುಚೆ ಮನ್ತಲಿ ತ್ಯಾ ಮುಖಂಡಾಚಿ ಆಶ್ಯಾ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:24
11 ತಿಳಿವುಗಳ ಹೋಲಿಕೆ  

ಈ ವಾಗ್ವಾದ ವಿಕೋಪಕ್ಕೆ ಹೋದುದರಿಂದ ಪೌಲನನ್ನು ಅವರು ಖಂಡತುಂಡಾಗಿಸಬಹುದೆಂದು ಸಹಸ್ರಾಧಿಪತಿ ಹೆದರಿದನು. ಅವನು ಸೈನಿಕರನ್ನು ಕಳುಹಿಸಿ ಪೌಲನನ್ನು ಸಭೆಯ ಮಧ್ಯದಿಂದ ಎತ್ತಿಕೊಂಡು ಕೋಟೆಗೆ ತರುವಂತೆ ಆಜ್ಞಾಪಿಸಿದನು.


ಜನಜಂಗುಳಿಯಲ್ಲಿ ಹಲವರು ಹಲವಿಧವಾಗಿ ಕೂಗಾಡತೊಡಗಿದರು. ಗದ್ದಲ ಹೆಚ್ಚಾಗಿದ್ದುದರಿಂದ ಸೈನ್ಯಾಧಿಪತಿಗೆ ನಿಜಸ್ಥಿತಿಯನ್ನು ತಿಳಿಯಲಾಗಲಿಲ್ಲ. ಆದುದರಿಂದ ಪೌಲನನ್ನು ಕೋಟೆಯೊಳಕ್ಕೆ ಕೊಂಡೊಯ್ಯುವಂತೆ ಆಜ್ಞಾಪಿಸಿದನು.


ಆಮೇಲೆ ಪಿಲಾತನು ಯೇಸು ಸ್ವಾಮಿಯನ್ನು ಅಲ್ಲಿಂದ ಕರೆದೊಯ್ದು ಕೊರಡೆಗಳಿಂದ ಹೊಡೆಸಿದನು.


ವಿಶ್ವಾಸದಿಂದಲೇ ಮಹಿಳೆಯರು ಮೃತರಾಗಿದ್ದ ತಮ್ಮವರನ್ನು ಮರಳಿ ಜೀವಂತರಾಗಿ ಪಡೆದರು. ಕೆಲವರು ಇದಕ್ಕಿಂತ ಶ್ರೇಷ್ಠವಾದ ಪುನರುತ್ಥಾನವನ್ನು ಪಡೆಯುವ ಉದ್ದೇಶದಿಂದ ಬಿಡುಗಡೆಯನ್ನು ನಿರಾಕರಿಸಿ, ಹಿಂಸೆಬಾಧೆಗಳಿಗೆ ತುತ್ತಾಗಿ ಮರಣವನ್ನಪ್ಪಿದರು.


ಈ ವ್ಯಕ್ತಿಯನ್ನು ಯೆಹೂದ್ಯರು ಹಿಡಿದು ಕೊಲ್ಲುವುದರಲ್ಲಿದ್ದರು. ಇವನು ರೋಮಿನ ಪೌರನೆಂದು ತಿಳಿದು, ನಾನು ಸೈನಿಕರೊಡನೆ ಹೋಗಿ ಇವನನ್ನು ಬಿಡಿಸಿದೆ.


ಆದರೆ ಪೌಲನು ಅವರಿಗೆ, “ನಮ್ಮನ್ನು ಶಿಕ್ಷೆಗೊಳಪಡಿಸುವಂಥ ಅಪರಾಧವನ್ನೇನೂ ನಾವು ಮಾಡಿಲ್ಲ. ಅಲ್ಲದೆ ನಾವು ರೋಮಿನ ಪೌರರು, ಆದರೂ ನಮ್ಮನ್ನು ಬಹಿರಂಗವಾಗಿ ಛಡಿಗಳಿಂದ ಹೊಡಿಸಿದ್ದಾರೆ. ಸೆರೆಮನೆಗೆ ತಳ್ಳಿದ್ದಾರೆ; ಈಗ ಗೋಪ್ಯವಾಗಿ ನಮ್ಮನ್ನು ಕಳುಹಿಸಿಬಿಡಬೇಕೆಂದಿದ್ದಾರೆಯೆ? ಇಲ್ಲ, ಇದು ಸಾಧ್ಯವಿಲ್ಲ. ನ್ಯಾಯಾಧಿಪತಿಗಳೇ ಖುದ್ದಾಗಿ ಇಲ್ಲಿಗೆ ಬಂದು ನಮ್ಮನ್ನು ಬಿಡುಗಡೆ ಮಾಡಲಿ,” ಎಂದನು.


ಪೌಲನನ್ನು ಕೋಟೆಯೊಳಕ್ಕೆ ಕೊಂಡು ಒಯ್ಯುತ್ತಿದ್ದಾಗ, ಅವನು ಸೈನ್ಯಾಧಿಪತಿಗೆ, “ನಾನು ನಿಮ್ಮೊಡನೆ ಸ್ವಲ್ಪ ಮಾತಾಡಬಹುದೇ?’ ಎಂದನು. ಅದಕ್ಕೆ ಅವನು, “ನಿನಗೆ ಗ್ರೀಕ್‍ಭಾಷೆಯೂ ಗೊತ್ತಿದೆಯಾ?


ಇವರು ನನ್ನನ್ನು ವಿಚಾರಣೆಗೆ ಒಳಪಡಿಸಿದರು. ಮರಣದಂಡನೆಗೆ ಗುರಿಮಾಡುವಂಥ ಅಪರಾಧ ಏನನ್ನೂ ನನ್ನಲ್ಲಿ ಕಾಣಲಿಲ್ಲ. ಈ ಕಾರಣ ನನ್ನನ್ನು ಬಿಡುಗಡೆ ಮಾಡಬೇಕೆಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು