Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:1 - ಕನ್ನಡ ಸತ್ಯವೇದವು C.L. Bible (BSI)

1 ಪೌಲನು ಆ ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ಬಂಧುಭಾಂದವರೇ, ಈ ದಿನದವರೆಗೂ ನಾನು ದೇವರ ಸಮ್ಮುಖದಲ್ಲಿ ನನ್ನ ಮನಸ್ಸಾಕ್ಷಿಯ ಪ್ರಕಾರ ಬಾಳಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ - ಸಹೋದರರೇ, ನಾನು ಈ ದಿನದವರೆಗೂ ಒಳ್ಳೇ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪೌಲನು ಯೆಹೂದ್ಯರ ನ್ಯಾಯಸಭೆಯನ್ನು ದೃಷ್ಟಿಸಿ ನೋಡಿ, “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪೌಲನು ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ನನ್ನ ಸಹೋದರರೇ, ಇಂದಿನವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ನಾನು ದೇವರ ಮುಂದೆ ನಡೆದುಕೊಂಡಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತನ್ನಾ ಪಾವ್ಲುನ್ ಜುದೆವಾಂಚ್ಯಾ ಝಡ್ತಿ ಕರ್‍ತಲ್ಯಾ ತಾಂಡ್ಯಾಕುಚ್ ಬಗುನ್, “ಮಾಜ್ಯಾ ಭಾವಾನು ಮಿಯಾ ಆಜ್ ಪತರ್ ದೆವಾಚ್ಯಾ ಫಿಡೆ ಬರ್‍ಯಾ ಮಾನಾನ್ ಚಲುನ್ಗೆತ್ ಯೆಲಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:1
17 ತಿಳಿವುಗಳ ಹೋಲಿಕೆ  

ಅಂತೆಯೇ, ದೇವರ ಹಾಗೂ ಮಾನವರ ಮುಂದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ಬಾಳಲು ಪ್ರಯತ್ನಿಸುತ್ತಿದ್ದೇನೆ.


ನಾನು ಹಗಲಿರುಳೂ ನನ್ನ ಪ್ರಾರ್ಥನೆಯಲ್ಲಿ ತಪ್ಪದೆ ನಿನ್ನನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಪೂರ್ವಿಕರ ಹಾಗೆ ಶುದ್ಧಮನಸ್ಸಾಕ್ಷಿಯಿಂದ ನನ್ನ ಆರಾಧ್ಯ ದೇವರಿಗೆ ನಿನ್ನ ವಿಷಯವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅಂದು ನೀನು ಸುರಿಸಿದ ಕಣ್ಣೀರನ್ನು ನಾನು ಇನ್ನೂ ಮರೆತಿಲ್ಲ. ನಿನ್ನನ್ನು ಪುನಃ ನೋಡಿ ಆನಂದಪಡಬೇಕೆಂದು ಹಂಬಲಿಸುತ್ತಿದ್ದೇನೆ.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ನಮಗಾಗಿಯೂ ಪ್ರಾರ್ಥಿಸಿರಿ. ಎಲ್ಲಾ ವಿಷಯಗಳಲ್ಲಿ ನಾವು ಸಜ್ಜನರಾಗಿ ನಡೆದುಕೊಳ್ಳಬೇಕೆಂಬುದೇ ನಮ್ಮ ಅಪೇಕ್ಷೆ. ನಮ್ಮ ಮನಸ್ಸಾಕ್ಷಿ ಶುದ್ಧವಾಗಿದೆಯೆಂಬ ದೃಢನಂಬಿಕೆ ನಮಗಿದೆ.


ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಾಕ್ಷಿಗೆ ತೋರುವುದಿಲ್ಲ. ಆದರೂ ನಾನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯನಿರ್ಣಯ ಮಾಡುವವರು ಪ್ರಭುವೇ.


ಇದಕ್ಕೆ ಪ್ರಧಾನಯಾಜಕರು ಮತ್ತು ಪ್ರಮುಖರ ಇಡೀ ಸಭೆಯೇ ಸಾಕ್ಷಿ. ನಾನು ಅವರಿಂದಲೇ ದಮಸ್ಕಸಿನಲ್ಲಿರುವ ಯೆಹೂದ್ಯ ಬಾಂಧವರಿಗೆ ಪತ್ರಗಳನ್ನು ಪಡೆದು, ಆ ಪಟ್ಟಣಕ್ಕೆ ಹೊರಟೆ. ಅಲ್ಲಿಂದ ಕ್ರೈಸ್ತರನ್ನು ಬಂಧಿಸಿ, ಜೆರುಸಲೇಮಿಗೆ ತಂದು ಶಿಕ್ಷಿಸಬೇಕೆಂಬುದೇ ನನ್ನ ಉದ್ದೇಶವಾಗಿತ್ತು.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯ ಪಂಥದವರು ಮತ್ತೆ ಕೆಲವರು ಫರಿಸಾಯ ಪಂಥದವರು. ಇದನ್ನು ಗಮನಿಸಿದ ಪೌಲನು, “ಸಹೋದರರೇ, ನಾನೊಬ್ಬ ಫರಿಸಾಯ, ಫರಿಸಾಯರ ವಂಶಜ. ಸತ್ತವರು ಪುನರುತ್ಥಾನ ಹೊಂದುತ್ತಾರೆ ಎಂಬ ನಮ್ಮ ನಿರೀಕ್ಷೆಯ ನಿಮಿತ್ತ ನಾನು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಧ್ವನಿಯೆತ್ತಿ ಸಭೆಯಲ್ಲಿ ಹೇಳಿದನು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಸತ್ಯಸಂಧನು ಸಿಂಹದಂತೆ ಧೈರ್ಯದಿಂದಿರುವನು.


ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು.


ಯೆಹೂದ್ಯರು ಪೌಲನ ವಿರುದ್ಧ ತಂದ ಆಪಾದನೆ ಏನೆಂದು ಖಚಿತವಾಗಿ ತಿಳಿದುಕೊಳ್ಳಲು ಸಹಸ್ರಾಧಿಪತಿ ಅಪೇಕ್ಷಿಸಿದನು. ಮಾರನೆಯ ದಿನ ಪೌಲನನ್ನು ಬಿಡುಗಡೆ ಮಾಡಿದನು. ಮುಖ್ಯಯಾಜಕರು ಮತ್ತು ನ್ಯಾಯಸಭೆಯ ಪ್ರಮುಖರು ಕೂಡುವಂತೆ ಆಜ್ಞಾಪಿಸಿದನು. ಪೌಲನನ್ನು ಕರೆದುಕೊಂಡು ಹೋಗಿ ಆ ಸಭೆಯ ಮುಂದೆ ನಿಲ್ಲಿಸಿದನು.


ನ್ಯಾಯಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನ ಮುಖವನ್ನೇ ದಿಟ್ಟಿಸಿ ನೋಡಿದರು. ಅದು ದೇವದೂತನ ಮುಖದಂತೆ ಕಂಗೊಳಿಸಿತು.


“ಭ್ರಾತೃಗಳೇ, ಪಿತೃಗಳೇ, ಈಗ ನಾನು ಮಾಡಹೋಗುವ ನನ್ನ ಸಮರ್ಥನೆಗೆ ಕಿವಿಗೊಡಿ.”


ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.


ಆದುದರಿಂದ ನೀವು ನ್ಯಾಸಭೆಯವರೊಂದಿಗೆ ಸೇರಿ ಪೌಲನನ್ನು ನಿಮ್ಮ ಬಳಿಗೆ ಕರೆದುತರಬೇಕೆಂದು ಸಹಸ್ರಾಧಿಪತಿಗೆ ಹೇಳಿಕಳುಹಿಸಿರಿ. ಅವನ ಬಗ್ಗೆ ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆಯೆಂದು ನಟಿಸಿರಿ. ನಾವು ಹೊಂಚುಹಾಕಿಕೊಂಡಿದ್ದು ಅವನು ಇಲ್ಲಿಗೆ ಬರುವ ಮೊದಲೇ ಅವನನ್ನು ಸಂಹರಿಸಿಬಿಡುತ್ತೇವೆ,” ಎಂದರು.


ಅದಕ್ಕೆ ಆ ಯುವಕನು, “ಯೆಹೂದ್ಯರು ಒಂದುಗೂಡಿ ಒಂದು ತೀರ್ಮಾನ ಕೈಗೊಂಡಿದ್ದಾರೆ. ಅದರ ಪ್ರಕಾರ ಪೌಲನ ಬಗ್ಗೆ ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆಯೆಂದು ನಟಿಸಿ, ಅವನನ್ನು ನಾಳೆ ನ್ಯಾಯಸಭೆಯ ಮುಂದೆ ಹಾಜರುಪಡಿಸುವಂತೆ ಕೇಳಿಕೊಳ್ಳಲಿದ್ದಾರೆ.


ಇವನ ಮೇಲೆ ಅವರು ಹೊರಿಸಿರುವ ಆಪಾದನೆಗಳು ಏನೆಂದು ತಿಳಿದುಕೊಳ್ಳುವ ಉದ್ದೇಶದಿಂದ ನಾನು ಇವನನ್ನು ಅವರ ನ್ಯಾಯಸಭೆಯಲ್ಲಿ ಹಾಜರುಪಡಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು