Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:10 - ಕನ್ನಡ ಸತ್ಯವೇದವು C.L. Bible (BSI)

10 ಈ ವಾಗ್ವಾದ ವಿಕೋಪಕ್ಕೆ ಹೋದುದರಿಂದ ಪೌಲನನ್ನು ಅವರು ಖಂಡತುಂಡಾಗಿಸಬಹುದೆಂದು ಸಹಸ್ರಾಧಿಪತಿ ಹೆದರಿದನು. ಅವನು ಸೈನಿಕರನ್ನು ಕಳುಹಿಸಿ ಪೌಲನನ್ನು ಸಭೆಯ ಮಧ್ಯದಿಂದ ಎತ್ತಿಕೊಂಡು ಕೋಟೆಗೆ ತರುವಂತೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಜಗಳವು ಬಹಳವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ - ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಆಜ್ಞೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈ ವಾಗ್ವಾದವು ಜಗಳವಾಯಿತು. ಯೆಹೂದ್ಯರು ಪೌಲನನ್ನು ತುಂಡುತುಂಡು ಮಾಡುವರೆಂಬ ಭಯದಿಂದ ಸೇನಾಧಿಪತಿಯು ಸಿಪಾಯಿಗಳಿಗೆ, “ಕೆಳಗೆ ಇಳಿದುಹೋಗಿ ಪೌಲನನ್ನು ಯೆಹೂದ್ಯರ ಬಳಿಯಿಂದ ಕೊಂಡೊಯ್ದು ಸೈನ್ಯದ ಕೋಟೆಯೊಳಗೆ ಇರಿಸಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಜನಸಮೂಹವು ಪೌಲನನ್ನು ಎಳೆದು ತುಂಡುತುಂಡಾಗಿ ಮಾಡುವರೇನೋ ಎಂದು ಸಹಸ್ರಾಧಿಪತಿಗೆ ಬಹಳ ಭಯವಾಯಿತು. ಸೈನಿಕರ ಗುಂಪುಗಳು ಕೆಳಗಿಳಿದು ಹೋಗಿ ಬಲಪ್ರಯೋಗದಿಂದ ಪೌಲನನ್ನು ಎತ್ತಿಕೊಂಡು ಸೈನಿಕ ಪಾಳ್ಯದೊಳಗೆ ಬರಬೇಕೆಂದು ಅವನು ಸೈನಿಕರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಹೆ ಬೊಲ್ನೆ ಮಾನಾ ಝಗ್ಡೊ ಹೊಲೆ, ಜುದೆವಾಂಚಿ ಲೊಕಾ ಪಾವ್ಲುಕ್ ತೊಡುನ್ ತುಕ್ಡೆ ಕಾಡುನ್ ಟಾಕಿತ್ ಮನ್ತಲ್ಯಾ ಭಿಂಯ್ಯಾನಿ ಸೈನಿಕಾಂಚ್ಯಾ ಅದಿಕಾರ್‍ಯಾನ್ ಸೈನಿಕಾಕ್ನಿ “ಖಾಲ್ತಿ ಉತ್ರುನ್ ಜಾವ್ನ್ ಪಾವ್ಲುಕ್ ಹೆಂಚ್ಯಾ ಜಗ್ಗೊಳ್ನಾ ನ್ಹೆವ್ನ್ ಸೈನಿಕಾಂಚ್ಯಾ ಕೊಟೆತ್ ಥವಾ” ಮನುನ್ ಹುಕುಮ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:10
16 ತಿಳಿವುಗಳ ಹೋಲಿಕೆ  

ನಿಮ್ಮ ಹೃದಯದಲ್ಲಿ ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ತುಂಬಿರುವಾಗ ಜ್ಞಾನಿಗಳೆಂದು ಕೊಚ್ಚಿಕೊಳ್ಳಬೇಡಿ; ಸತ್ಯಕ್ಕೆ ವಿರುದ್ಧವಾಗಿ ಸುಳ್ಳಾಡಬೇಡಿ.


ಸಹೋದರರೇ, ಇದನ್ನು ನೆನಪಿನಲ್ಲಿಡಿ; ನಿಮ್ಮಲ್ಲಿ ಪ್ರತಿಯೊಬ್ಬನು ಆಲಿಸುವುದರಲ್ಲಿ ಚುರುಕಾಗಿ, ಮಾತನಾಡುವುದರಲ್ಲಿ ದುಡುಕದೆ, ಸಿಟ್ಟುಗೊಳ್ಳುವುದರಲ್ಲಿ ಸಾವಧಾನವಾಗಿ ಇರಲಿ.


ಜನರು ಯಾವ ಕಾರಣದಿಂದ ಅವನ ವಿರುದ್ಧ ಹೀಗೆ ಮಾಡುತ್ತಿದ್ದಾರೆಂದು ಅರಿತುಕೊಳ್ಳಲು ಸಹಸ್ರಾಧಿಪತಿ ಪೌಲನನ್ನು ಕೋಟೆ ಒಳಕ್ಕೆಕೊಂಡೊಯ್ದು, ಚಾವಟಿಯಿಂದ ಹೊಡೆದು ವಿಚಾರಿಸುವಂತೆ ಆಜ್ಞಾಪಿಸಿದನು.


ಮರುದಿನ ಪೌಲನೊಂದಿಗೆ ಮುಂದೆಹೋಗಲು ಕುದುರೆ ಸವಾರರನ್ನು ಬಿಟ್ಟು, ಸೈನಿಕರು ಕೋಟೆಗೆ ಹಿಂದಿರುಗಿದರು.


ಈ ವ್ಯಕ್ತಿಯನ್ನು ಯೆಹೂದ್ಯರು ಹಿಡಿದು ಕೊಲ್ಲುವುದರಲ್ಲಿದ್ದರು. ಇವನು ರೋಮಿನ ಪೌರನೆಂದು ತಿಳಿದು, ನಾನು ಸೈನಿಕರೊಡನೆ ಹೋಗಿ ಇವನನ್ನು ಬಿಡಿಸಿದೆ.


ಈ ಒಳಸಂಚು ಪೌಲನ ಸೋದರಿಯ ಮಗನ ಕಿವಿಗೆ ಬಿದ್ದಿತು. ಅವನು ಕೋಟೆಯೊಳಗೆ ಹೋಗಿ ಅದನ್ನು ಪೌಲನಿಗೆ ತಿಳಿಸಿದನು.


ನನ್ನ ಪ್ರಜೆಯ ಮೈ ಚರ್ಮವನ್ನು ಸುಲಿಯುವುದಲ್ಲದೆ ಅವರ ಎಲುಬುಗಳನ್ನು ಮುರಿದುಹಾಕುತ್ತೀರಿ. ಹಂಡೆಯಲ್ಲಿನ ತುಂಡುಗಳಂತೆ, ಆವಿಗೆಯಲ್ಲಿನ ಮಾಂಸದ ಚೂರುಗಳಂತೆ ನನ್ನ ಪ್ರಜೆಯನ್ನು ಚೂರುಚೂರಾಗಿ ಕತ್ತರಿಸಿಹಾಕಿದ್ದೀರಿ.


ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II


ಇಲ್ಲದಿರೆ ಶತ್ರು ತಿಳಿದಾನು ನನಗೆ ರಕ್ಷಕನಿಲ್ಲವೆಂದು I ಝಲ್ಲನೆ ಸೀಳಿಬಿಟ್ಟಾನು ಸಿಂಹದಂತೆ ಮೇಲೆಬಿದ್ದು II


ಪೌಲನನ್ನು ಕೋಟೆಯೊಳಕ್ಕೆ ಕೊಂಡು ಒಯ್ಯುತ್ತಿದ್ದಾಗ, ಅವನು ಸೈನ್ಯಾಧಿಪತಿಗೆ, “ನಾನು ನಿಮ್ಮೊಡನೆ ಸ್ವಲ್ಪ ಮಾತಾಡಬಹುದೇ?’ ಎಂದನು. ಅದಕ್ಕೆ ಅವನು, “ನಿನಗೆ ಗ್ರೀಕ್‍ಭಾಷೆಯೂ ಗೊತ್ತಿದೆಯಾ?


ಇವನ ಮೇಲೆ ಅವರು ಹೊರಿಸಿರುವ ಆಪಾದನೆಗಳು ಏನೆಂದು ತಿಳಿದುಕೊಳ್ಳುವ ಉದ್ದೇಶದಿಂದ ನಾನು ಇವನನ್ನು ಅವರ ನ್ಯಾಯಸಭೆಯಲ್ಲಿ ಹಾಜರುಪಡಿಸಿದೆ.


ಪ್ರಭುವಿನ ಸೇವೆಯಲ್ಲಿ ನಾನು ಕೈಗೊಂಡ ಪ್ರಯಾಣಗಳು ಅನೇಕ; ನನಗೆ ಬಂದೊದಗಿದ ಅಪಾಯಗಳೂ ಅನೇಕ; ಪ್ರವಾಹಗಳ ಅಪಾಯ, ಕಳ್ಳಕಾಕರ ಅಪಾಯ, ಸ್ವಜನ ಹಾಗೂ ಅನ್ಯಜನರಿಂದ ಅಪಾಯ, ನಗರಗಳ ಹಾಗೂ ನಿರ್ಜನ‍ಪ್ರದೇಶಗಳ ಅಪಾಯ, ಕಡಲುಗಳ ಅಪಾಯ, ಕಪಟ ಸಹೋದರರಿಂದ ಅಪಾಯ - ಇವೆಲ್ಲಕ್ಕೂ ತುತ್ತಾದೆ.


ಆದರೆ, ಸಹಸ್ರಾಧಿಪತಿ ಲೂಸಿಯನು ಮಧ್ಯೆಬಂದು ಬಲಾತ್ಕಾರದಿಂದ ಇವನನ್ನು ನಮ್ಮಿಂದ ಬಿಡಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು