Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:18 - ಕನ್ನಡ ಸತ್ಯವೇದವು C.L. Bible (BSI)

18 ಅಂತೆಯೇ, ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ, “ಕೈದಿ ಪೌಲನು, ನನ್ನನ್ನು ಕರೆದು, ಈ ಯುವಕನನ್ನು ನಿಮ್ಮಲ್ಲಿಗೆ ಕರೆದುಕೊಂಡು ಬರಲು ತಿಳಿಸಿದನು. ನಿಮಗೆ ಹೇಳಬೇಕಾದ ವಿಷಯವೇನೋ ಇದೆಯಂತೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; “ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಇದೆಯಂತೆ” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ - ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಅದೆಯಂತೆ ಎಂಬದಾಗಿ ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ಸೇನಾಧಿಕಾರಿಯು ಪೌಲನ ಸೋದರಳಿಯನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋದನು. ಆ ಅಧಿಕಾರಿಯು ಸೇನಾಧಿಪತಿಗೆ, “ಈ ಯೌವನಸ್ಥನನ್ನು ನಿನ್ನ ಬಳಿಗೆ ಕರೆದುಕೊಂಡು ಹೋಗಬೇಕೆಂದು ಸೆರೆವಾಸದಲ್ಲಿರುವ ಪೌಲನು ನನ್ನನ್ನು ಕೇಳಿಕೊಂಡನು ಇವನು ನಿನಗೊಂದು ಸಂದೇಶವನ್ನು ತಿಳಿಸಬೇಕೆಂದಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದರಂತೆ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ, “ನಿಮಗೆ ತಿಳಿಸತಕ್ಕ ವಿಷಯವಿದೆಯೆಂದು ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯುವಕನನ್ನು ನಿಮ್ಮ ಬಳಿ ತರುವಂತೆ ಬೇಡಿಕೊಂಡಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತಸೆ ಹೊವ್ನ್, ಅಧಿಕಾರಿನ್ ಪಾವ್ಲುಚ್ಯಾ ಭೆನಿಚ್ಯಾ ಲೆಕಾಕ್ ಸೈನಿಕಾಂಚ್ಯಾ ಅಧಿಕಾರಿಕ್ಡೆ ನ್ಹೆಲ್ಯಾನ್. ಅನಿ ಹ್ಯಾ ದಾಂಡ್ಗ್ಯಾ ಮಾನ್ಸಾಕ್ ತುಜ್ಯಾಕ್ಡೆ ಬಲ್ವುನ್ ನ್ಹೆ ಮನುನ್ ಬಂಧಿಖಾನ್ಯಾತ್ ಹೊತ್ತ್ಯಾ ಪಾವ್ಲುನ್ ತುಕಾ ಎಕ್ ಖಬರ್ ಧಾಡುನ್ ದಿಲಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:18
11 ತಿಳಿವುಗಳ ಹೋಲಿಕೆ  

ಅನ್ಯಜನರಾದ ನಿಮ್ಮ ನಿಮಿತ್ತ ಯೇಸುಕ್ರಿಸ್ತರ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


ಆದರೂ ನಿನ್ನ ಮೇಲಿರುವ ಪ್ರೀತಿಯ ನಿಮಿತ್ತ ನಾನು ನಿನ್ನಲ್ಲಿ ವಿನಂತಿಸುತ್ತೇನೆ: ವೃದ್ಧಪ್ರಾಯನೂ ಮತ್ತು ಕ್ರಿಸ್ತಯೇಸುವಿಗೋಸ್ಕರ ಈಗ ಸೆರೆಯಾಳೂ ಆಗಿರುವ ಪೌಲನೆಂಬ ನಾನು ಒನೇಸಿಮನ ಪರವಾಗಿ ನಿನ್ನಲ್ಲಿ ವಿಜ್ಞಾಪಿಸುತ್ತೇನೆ.


ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ.


ಮೂರು ದಿನಗಳ ನಂತರ ಪೌಲನು ಸ್ಥಳೀಯ ಯೆಹೂದ್ಯ ಮುಖಂಡರು ತನ್ನ ಬಳಿಗೆ ಬರುವಂತೆ ಹೇಳಿಕಳುಹಿಸಿದನು. ಅವರು ಬಂದಾಗ, “ನನ್ನ ಸೋದರ ಇಸ್ರಯೇಲರೇ, ನಾನು ನಮ್ಮ ಜನರಿಗೆ ವಿರೋಧವಾಗಿಯಾಗಲಿ, ನಮ್ಮ ಪೂರ್ವಜರಿಂದ ಬಂದ ಸಂಪ್ರದಾಯಗಳಿಗೆ ವಿರೋಧವಾಗಿಯಾಗಲಿ, ಏನನ್ನೂ ಮಾಡಿಲ್ಲ; ಆದರೂ ಜೆರುಸಲೇಮಿನಲ್ಲಿ ನನ್ನನ್ನು ಕೈದಿಯನ್ನಾಗಿಸಿ ರೋಮನರ ಕೈಗೆ ಒಪ್ಪಿಸಲಾಯಿತು.


ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾದಮೇಲೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ‘ಔಗುಸ್ತದಳ’ ಎಂಬ ರೋಮಿನ ದಳಕ್ಕೆ ಸೇರಿದ ಜೂಲಿಯಸ್ ಎಂಬ ಶತಾಧಿಪತಿಯ ವಶಕ್ಕೆ ಒಪ್ಪಿಸಲಾಯಿತು.


ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


ಅದಕ್ಕೆ ಯೇಸು, “ಸಿಮೋನ್, ನಾನು ನಿನಗೆ ಹೇಳಬೇಕಾದ ವಿಷಯ ಒಂದಿದೆ,” ಎಂದರು. ಸಿಮೋನನು, “ಅದೇನು ಹೇಳಿ ಗುರುವೇ,” ಎಂದನು.


ಅನಂತರ ಸೈನಿಕರು, ಸಹಸ್ರಾಧಿಪತಿ ಹಾಗು ಯೆಹೂದ್ಯರು ಕಳುಹಿಸಿದ್ದ ಕಾವಲಾಳುಗಳು ಯೇಸುವನ್ನು ಹಿಡಿದು ಕಟ್ಟಿ ಮೊದಲು ಅನ್ನನ ಬಳಿಗೆ ಕೊಂಡೊಯ್ದರು.


ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; ಇವನು ಅವರಿಗೆ ತಿಳಿಸಬೇಕಾದ ವಿಷಯ ಒಂದಿದೆ,” ಎಂದನು.


ಆಗ ಸಹಸ್ರಾಧಿಪತಿ ಆ ಯುವಕನ ಕೈಹಿಡಿದು, ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, “ನೀನು ನನಗೆ ಹೇಳಬೇಕೆಂದು ಇರುವ ವಿಷಯವೇನು?” ಎಂದು ವಿಚಾರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು