Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:35 - ಕನ್ನಡ ಸತ್ಯವೇದವು C.L. Bible (BSI)

35 “ನಿನ್ನ ಮೇಲೆ ತಪ್ಪು ಹೊರಿಸಿದವರು ಬಂದ ಮೇಲೆ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಿನಲ್ಲಿ ಇಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ” ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನಿನ್ನ ಮೇಲೆ ತಪ್ಪುಹೊರಿಸುವವರು ಬಂದನಂತರ ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ ಎಂದು ಹೇಳಿ ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬದಾಗಿ ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ರಾಜ್ಯಪಾಲನು, “ನಿನಗೆ ವಿರೋಧವಾಗಿರುವ ಯೆಹೂದ್ಯರು ಇಲ್ಲಿಗೆ ಬಂದಾಗ, ನಾನು ನಿನ್ನ ವಿಚಾರಣೆ ಮಾಡುತ್ತೇನೆ” ಎಂದು ಹೇಳಿದನು. ಬಳಿಕ ರಾಜ್ಯಪಾಲನು ಪೌಲನನ್ನು ಅರಮನೆಯೊಳಗೆ ಇರಿಸಬೇಕೆಂದು ಆಜ್ಞಾಪಿಸಿದನು. (ಈ ಕಟ್ಟಡವನ್ನು ಹೆರೋದನು ಕಟ್ಟಿಸಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ನಿನ್ನ ಮೇಲೆ ಆರೋಪ ಹೊರಿಸಿದವರು ಇಲ್ಲಿಗೆ ಬಂದು ತಲುಪಿದ ತರುವಾಯ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ, ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಲ್ಲಿಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ರಾಜ್ಯ್ ಪಾಲಾನ್ “ತುಕಾ ವಿರೊಧ್ ಹೊವ್ನ್ ಹೊತ್ತಿ ಜುದೆವಾಂಚಿ ಲೊಕಾ ಹಿತ್ತೆ ಯೆಲ್ಲ್ಯಾ ತನ್ನಾ ಮಿಯಾ ಇಚಾರ್ನೆ ಕರ್‍ತಾ”, ಮನುನ್ ಸಾಂಗ್ಲ್ಯಾನ್, ಮಾನಾ ಪಾವ್ಲುಕ್ ಹೆರೊದಾಚ್ಯಾ ಘರಾತ್ ಥವ್ಚೆ ಮನುನ್ ಹುಕುಮ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:35
14 ತಿಳಿವುಗಳ ಹೋಲಿಕೆ  

ಆದರೂ ಇವನ ವಿರುದ್ಧ ಒಳಸಂಚು ನಡೆಯುತ್ತಲೇ ಇದೆಯೆಂದು ನನಗೆ ತಿಳಿದುಬಂದಿತು. ಕೂಡಲೇ ನಾನು ಇವನನ್ನು ತಮ್ಮ ಬಳಿಗೆ ಕಳುಹಿಸಿದ್ದೇನೆ. ಇವನ ಮೇಲೆ ತಪ್ಪುಹೊರಿಸುವವರು ತಮ್ಮ ಸನ್ನಿಧಾನದಲ್ಲೇ ಬಂದು ಆ ಆಪಾದನೆಗಳನ್ನು ನಿವೇದಿಸಬಹುದೆಂದು ಅಪ್ಪಣೆಮಾಡಿದ್ದೇನೆ.”


ನಾನು ಅವರಿಗೆ, ‘ಆಪಾದಿತನೂ ಆಪಾದಿಸುವವರೂ ಮುಖಾಮುಖಿಯಾಗಿ ನಿಲ್ಲಬೇಕು ; ತನ್ನ ಮೇಲೆ ಹೊರಿಸಲಾದ ಆಪಾದನೆಗಳ ವಿರುದ್ಧ ವಾದಿಸಲು ಆಪಾದಿತನಿಗೆ ಅವಕಾಶ ಕೊಡಬೇಕು. ಹಾಗೆ ಮಾಡದೆ ಅವರ ಕೈಗೊಪ್ಪಿಸುವುದು ರೋಮನರ ಪದ್ಧತಿಯಲ್ಲ,’ ಎಂದು ಹೇಳಿದೆ.


ರಾಜ್ಯಪಾಲನ ಸೈನಿಕರು ಯೇಸುಸ್ವಾಮಿಯನ್ನು ರಾಜಭವನದ ಒಳಕ್ಕೆ ಕರೆದೊಯ್ದರು. ಅವರ ಸೈನ್ಯಪಡೆಯೆಲ್ಲವು ಸ್ವಾಮಿಯನ್ನು ಸುತ್ತುಗಟ್ಟಿತು.


ಕ್ರಿಸ್ತಮಾರ್ಗದ ಬಗ್ಗೆ ಚೆನ್ನಾಗಿ ಅರಿತುಕೊಂಡಿದ್ದ ಫೆಲಿಕ್ಸನು, “ಸಹಾಸ್ರಾಧಿಪತಿ ಲೂಸಿಯನು ಬಂದ ಮೇಲೆ ನಾನು ಈ ವ್ಯಾಜ್ಯವನ್ನು ತೀರ್ಮಾನಿಸುತ್ತೇನೆ,” ಎಂದು ಹೇಳಿ ವಿಚಾರಣೆಯನ್ನು ಮುಂದೂಡಿದನು.


ಆದರೆ, ಏಷ್ಯಾದಿಂದ ಬಂದಿದ್ದ ಯೆಹೂದ್ಯರು ಕೆಲವರು ಅಲ್ಲಿದ್ದರು. ನನ್ನ ಮೇಲೆ ಯಾವುದಾದರೂ ಆಪಾದನೆಯನ್ನು ಹೊರಿಸಬೇಕೆಂದಿದ್ದರೆ, ಅವರೇ ಇಲ್ಲಿ ತಮ್ಮ ಮುಂದೆ ಹಾಜರಿರಬೇಕಾಗಿತ್ತು.


ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ ಮಾತನಾಡುವಂತೆ ಅಪ್ಪಣೆ ಮಾಡಿದನು. ಆಗ ಪೌಲನು ಹೀಗೆಂದನು: “ತಾವು ಅನೇಕ ವರ್ಷಗಳಿಂದ ಈ ನಾಡಿನ ನ್ಯಾಯಾಧೀಶರಾಗಿದ್ದೀರಿ. ಅದನ್ನು ಅರಿತು ನಿರ್ಭಯನಾಗಿ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ.


ಐದು ದಿನಗಳ ನಂತರ ಪ್ರಧಾನಯಾಜಕ ಅನನೀಯನು, ಕೆಲವು ಪ್ರಮುಖರನ್ನೂ ತೆರ್ತುಲ್ಲ ಎಂಬ ವಕೀಲನನ್ನೂ ಕರೆದುಕೊಂಡು ಬಂದನು. ಅವರು ರಾಜ್ಯಪಾಲ ಫೆಲಿಕ್ಸನ ಸನ್ನಿಧಾನದಲ್ಲಿ ಪೌಲನ ವಿರುದ್ಧ ದೂರಿತ್ತರು.


ಆಮೇಲೆ ಅವರು ಯೇಸುವನ್ನು ಕಾಯಫನ ಮನೆಯಿಂದ ರಾಜ್ಯಪಾಲನ ನಿವಾಸಕ್ಕೆ ಕೊಂಡೊಯ್ದರು. ಆಗ ಮುಂಜಾನೆ, ಅರಮನೆಯೊಳಗೆ ಹೋದರೆ ಮಡಿಗೆಟ್ಟು ಹಬ್ಬದೂಟಕ್ಕೆ ಅಡ್ಡಿಯಾದೀತೆಂದು ಅವರೆಲ್ಲರು ಹೊರಗೇ ನಿಂತರು.


ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.


ಇದನ್ನು ಕೇಳಿದ್ದೇ ಹೆರೋದರಸನು ಬಹಳ ತಳಮಳಗೊಂಡನು; ಅಂತೆಯೇ ಜೆರುಸಲೇಮ್ ಆದ್ಯಂತವು ಗಲಿಬಿಲಿಗೊಂಡಿತು.


ಯೇಸುಸ್ವಾಮಿ ಜನಿಸಿದ್ದು ಹೆರೋದರಸನ ಕಾಲದಲ್ಲಿ: ಜುದೇಯ ನಾಡಿನ ಬೆತ್ಲೆಹೇಂ ಎಂಬ ಊರಿನಲ್ಲಿ.ಕೆಲವು ಜ್ಯೋತಿಷಿಗಳು ಪೂರ್ವದಿಕ್ಕಿನಿಂದ ಹೊರಟು ಜೆರುಸಲೇಮಿಗೆ ಬಂದರು.


ಈ ಪ್ರಕಾರ ಯೆರೆಮೀಯನನ್ನು ಹಗ್ಗಗಳ ಮೂಲಕ ಸೇದಿಕೊಂಡು ಬಾವಿಯಿಂದ ಮೇಲಕ್ಕೆ ಎತ್ತಿದರು. ಬಳಿಕ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.


ಅನಂತರ ಪೌಲನನ್ನು ಕಾವಲಿನಲ್ಲಿ ಇಡಬೇಕೆಂದೂ ಆದರೆ ಕಟ್ಟುನಿಟ್ಟು ಬೇಕಿಲ್ಲವೆಂದೂ ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು ತಡೆಯಬಾರದೆಂದೂ ಶತಾಧಿಪತಿಗೆ ಆಜ್ಞೆಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು