Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:1 - ಕನ್ನಡ ಸತ್ಯವೇದವು C.L. Bible (BSI)

1 ಐದು ದಿನಗಳ ನಂತರ ಪ್ರಧಾನಯಾಜಕ ಅನನೀಯನು, ಕೆಲವು ಪ್ರಮುಖರನ್ನೂ ತೆರ್ತುಲ್ಲ ಎಂಬ ವಕೀಲನನ್ನೂ ಕರೆದುಕೊಂಡು ಬಂದನು. ಅವರು ರಾಜ್ಯಪಾಲ ಫೆಲಿಕ್ಸನ ಸನ್ನಿಧಾನದಲ್ಲಿ ಪೌಲನ ವಿರುದ್ಧ ದೂರಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಐದು ದಿನಗಳಾದ ಮೇಲೆ ಮಹಾಯಾಜಕನಾದ ಅನನೀಯನು, ಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಯನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು, ಪೌಲನ ಮೇಲೆ ದೇಶಾಧಿಪತಿಗೆ ದೂರು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಐದು ದಿವಸಗಳಾದ ಮೇಲೆ ಮಹಾಯಾಜಕನಾದ ಅನನೀಯನು ಸಭೇಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಲನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು ಪೌಲನ ಮೇಲೆ ದೇಶಾಧಿಪತಿಗೆ ಫಿರಿಯಾದಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಐದು ದಿನಗಳ ನಂತರ, ಪ್ರಧಾನಯಾಜಕ ಅನನೀಯನು ಯೆಹೂದ್ಯರ ಹಿರೀನಾಯಕರಲ್ಲಿ ಕೆಲವರನ್ನು ಮತ್ತು ತೆರ್ತುಲ್ಲ ಎಂಬ ವಕೀಲನನ್ನು ಕರೆದುಕೊಂಡು ರಾಜ್ಯಪಾಲನ ಎದುರಿನಲ್ಲಿ ಪೌಲನ ಮೇಲೆ ದೋಷಾರೋಪಣೆ ಮಾಡಲು ಸೆಜರೇಯ ಪಟ್ಟಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಐದು ದಿನಗಳ ನಂತರ ಮಹಾಯಾಜಕ ಅನನೀಯನು ಕೆಲವು ಹಿರಿಯರೊಂದಿಗೆ ಕೈಸರೈಯಕ್ಕೆ ಬಂದನು. ತನ್ನೊಂದಿಗೆ ಟೆರ್ಟುಲಸ್ ಎಂಬ ವಕೀಲನನ್ನು ಕರೆದುಕೊಂಡು ಬಂದು, ರಾಜ್ಯಪಾಲನಿಗೆ ಪೌಲನ ವಿರೋಧವಾಗಿ ದೂರುಗಳನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪಾಚ್ ದಿಸಾ ಕಳದ್ದ್ಯಾ ಮಾನಾ ಮುಖ್ಯ್ ಯಾಜಕ್ ಅನನಿಯಾ, ಜುದೆವಾಂಚ್ಯಾ ಜಾನ್ತ್ಯಾ ಮುಖಂಡಾಕ್ನಿ ಉಲ್ಲ್ಯಾ ಲೊಕಾಕ್ನಿ ಅನಿ ತೆರ್ತುಲ್ ಮನ್ತಲ್ಯಾ ವಕಿಲಾಕ್ ಬಲ್ವುನ್ ಘೆವ್ನ್ ರಾಜ್ಯ್ ಪಾಲಾಕ್ಡೆ ಪಾವ್ಲುಚೆರ್ ಚುಕ್ ಸಾಂಗುಚೆ ಮನುನ್ ಯೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:1
15 ತಿಳಿವುಗಳ ಹೋಲಿಕೆ  

ನಾನು ಜೆರುಸಲೇಮಿಗೆ ದೈವಾರಾಧನೆಗೆಂದು ಹೋಗಿ ಇಲ್ಲಿಗೆ ಹನ್ನೆರಡು ದಿನಗಳಿಗಿಂತ ಹೆಚ್ಚಾಗಿಲ್ಲ. ಇದನ್ನು ತಾವೇ ವಿಚಾರಿಸಿ ತಿಳಿದುಕೊಳ್ಳಬಹುದು.


ಇದನ್ನು ಕೇಳಿದ್ದೇ, ಪ್ರಧಾನ ಯಾಜಕ ಅನನೀಯನು ಪೌಲನ ಬಾಯಮೇಲೆ ಹೊಡೆಯುವಂತೆ ಹತ್ತಿರದಲ್ಲೇ ನಿಂತಿದ್ದವರಿಗೆ ಆಜ್ಞಾಪಿಸಿದನು.


ಅಲ್ಲಿ ಮುಖ್ಯಯಾಜಕರು ಮತ್ತು ಯೆಹೂದ್ಯರ ಮುಖಂಡರು ಪೌಲನ ವಿರುದ್ಧ ಅವನಿಗೆ ದೂರಿತ್ತರು.


“ನಿನ್ನ ಮೇಲೆ ತಪ್ಪು ಹೊರಿಸಿದವರು ಬಂದ ಮೇಲೆ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಿನಲ್ಲಿ ಇಡಬೇಕೆಂದು ಆಜ್ಞಾಪಿಸಿದನು.


ಆದರೂ ಇವನ ವಿರುದ್ಧ ಒಳಸಂಚು ನಡೆಯುತ್ತಲೇ ಇದೆಯೆಂದು ನನಗೆ ತಿಳಿದುಬಂದಿತು. ಕೂಡಲೇ ನಾನು ಇವನನ್ನು ತಮ್ಮ ಬಳಿಗೆ ಕಳುಹಿಸಿದ್ದೇನೆ. ಇವನ ಮೇಲೆ ತಪ್ಪುಹೊರಿಸುವವರು ತಮ್ಮ ಸನ್ನಿಧಾನದಲ್ಲೇ ಬಂದು ಆ ಆಪಾದನೆಗಳನ್ನು ನಿವೇದಿಸಬಹುದೆಂದು ಅಪ್ಪಣೆಮಾಡಿದ್ದೇನೆ.”


ಕುದುರೆಗಳನ್ನು ಸಜ್ಜುಗೊಳಿಸಿ ಪೌಲನನ್ನು ಏರಿಸಿ, ರಾಜ್ಯಪಾಲ ಫೆಲಿಕ್ಸರ ಬಳಿಗೆ ಭದ್ರವಾಗಿ ಕರೆದುಕೊಂಡು ಹೋಗಿರಿ.”


ಶುದ್ಧಾಚಾರದ ಏಳು ದಿನಗಳ ಅವಧಿ ಮುಗಿಯುತ್ತಿದ್ದಂತೆ ಏಷ್ಯದ ಕೆಲವು ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡರು. ಕೂಡಲೇ ಅವರು ಜನಸಮೂಹವನ್ನು ಉದ್ರೇಕಿಸಿ ಪೌಲನನ್ನು ಹಿಡಿದರು.


“ನೇರ ಮನಸ್ಕರನು ಕೊಲ್ಲಲು ಇರುಳೊಳು I ಬಿಲ್ಲು ಬಗ್ಗಿಸಿಹರಿದೋ ಆ ದುರುಳರು I ಎದೆಗೆ ಬಾಣವನು ಹೂಡಿ ನಿಂತಿರುವರು” II “ಓಡಿರಿ, ಪಕ್ಷಿಪಾರಿವಾಳಗಳಂತೆ ಗಿರಿಶಿಖರಗಳಿಗೆ I ಅಸ್ತಿವಾರವೆ ಕಿತ್ತಿರಲು, ಗತಿಯೆನಿತು ಸತ್ಯವಂತರಿಗೆ?” II


ನನ್ನ ಬೋಧನೆ ಹಾಗು ಮಾತುಕತೆ ಕೇವಲ ಬುದ್ಧಿವಂತಿಕೆಯಿಂದಾಗಲಿ, ಮಾತಿನ ಚಮತ್ಕಾರದಿಂದಾಗಲಿ ಕೂಡಿರಲಿಲ್ಲ; ಅದಕ್ಕೆ ಬದಲಾಗಿ ದೇವರ ಆತ್ಮವನ್ನು ಅವರ ಶಕ್ತಿಯನ್ನು ಸಮರ್ಥಿಸುತ್ತಿದ್ದವು.


ಸಹೋದರರೇ, ದೇವರ ಸತ್ಯಾರ್ಥವನ್ನು ಸಾರಲು ನಿಮ್ಮಲ್ಲಿಗೆ ನಾನು ಬಂದಾಗ ವಾಕ್ಚಾತುರ್ಯವನ್ನಾಗಲಿ, ಜ್ಞಾನಾಡಂಬರವನ್ನಾಗಲಿ ಪ್ರದರ್ಶಿಸುತ್ತಾ ಬರಲಿಲ್ಲ.


ನಾನು ಜೆರುಸಲೇಮಿಗೆ ಹೋಗಿದ್ದಾಗ ಯೆಹೂದ್ಯರ ಮುಖ್ಯಯಾಜಕರೂ ಪ್ರಮುಖರೂ ಅವನ ವಿರುದ್ಧ ಆಪಾದನೆಗಳನ್ನು ತಂದರು. ಅವನಿಗೆ ದಂಡನೆ ವಿಧಿಸುವಂತೆ ಕೇಳಿಕೊಂಡರು.


ನಿಯಮಿತ ದಿನದಂದು ಹೆರೋದನು ರಾಜಪೋಷಾಕನ್ನು ಧರಿಸಿಕೊಂಡು ಜನರನ್ನುದ್ದೇಶಿಸಿ ಭಾಷಣಮಾಡಿದನು.


ದಳಪತಿಗಳು ಮತ್ತು ಗಣ್ಯವ್ಯಕ್ತಿಗಳು, ಮಂತ್ರಿಗಳು ಮತ್ತು ಮಂತ್ರತಂತ್ರದವರು - ಎಲ್ಲರನ್ನು ತೊಲಗಿಸಿಬಿಡುವರು.


ಸವಾರರು ಸೆಜರೇಯವನ್ನು ತಲುಪಿ ರಾಜ್ಯಪಾಲನಿಗೆ ಪತ್ರವನ್ನು ಕೊಟ್ಟು ಪೌಲನನ್ನು ಅವನ ವಶಕ್ಕೊಪ್ಪಿಸಿದರು.


ಪೌಲನನ್ನು ಕರೆದುತಂದು ನಿಲ್ಲಿಸಿದಾಗ ತೆರ್ತುಲ್ಲನು ಅವನ ವಿರುದ್ಧ ಹೀಗೆಂದು ವಾದಿಸಲಾರಂಭಿಸಿದನು: “ಮಹಾಪ್ರಭುವೇ, ನಿಮ್ಮ ಮುಖಂಡತ್ವದಲ್ಲಿ ನಾವು ಶಾಂತಿ ಸೌಭಾಗ್ಯವನ್ನು ಸವಿಯುತ್ತಿದ್ದೇವೆ. ದೇಶ ಪ್ರಗತಿಗಾಗಿ ಆಗುತ್ತಿರುವ ಸುಧಾರಣೆಗಳಿಗೆ ತಮ್ಮ ಪರಾಮರಿಕೆಯೇ ಕಾರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು