Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:10 - ಕನ್ನಡ ಸತ್ಯವೇದವು C.L. Bible (BSI)

10 ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ ಮಾತನಾಡುವಂತೆ ಅಪ್ಪಣೆ ಮಾಡಿದನು. ಆಗ ಪೌಲನು ಹೀಗೆಂದನು: “ತಾವು ಅನೇಕ ವರ್ಷಗಳಿಂದ ಈ ನಾಡಿನ ನ್ಯಾಯಾಧೀಶರಾಗಿದ್ದೀರಿ. ಅದನ್ನು ಅರಿತು ನಿರ್ಭಯನಾಗಿ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇಶಾಧಿಪತಿಯು ಪೌಲನಿಗೆ; ನೀನು ಮಾತನಾಡಬಹುದೆಂದು ಸನ್ನೆಮಾಡಲು, ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ; “ನೀನು ಅನೇಕ ವರ್ಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ, ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇಶಾಧಿಪತಿಯು ಪೌಲನಿಗೆ - ನೀನು ಮಾತಾಡಬಹುದೆಂದು ಸನ್ನೆಮಾಡಲು ಅವನು ಪ್ರತ್ಯುತ್ತರವನ್ನು ಹೇಳಿದ್ದೇನಂದರೆ - ನೀನು ಅನೇಕ ವರುಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ, ಮಾತಾಡಲು ಸೂಚಿಸಿದನು. ಆಗ ಪೌಲನು ಹೀಗೆಂದನು: “ರಾಜ್ಯಪಾಲನಾದ ಫೇಲಿಕ್ಸನೇ, ನೀನು ಅನೇಕ ವರ್ಷಗಳಿಂದ ಈ ದೇಶಕ್ಕೆ ನ್ಯಾಯಾಧೀಶನಾಗಿರುವುದು ನನಗೆ ಗೊತ್ತಿದೆ. ಆದ್ದರಿಂದ ಸಂತೋಷದಿಂದ ನಿನ್ನ ಮುಂದೆ ನನ್ನನ್ನು ಪ್ರತಿಪಾದಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ರಾಜ್ಯಪಾಲನು ಪೌಲನಿಗೆ ಮಾತನಾಡಬೇಕೆಂದು ಸನ್ನೆಮಾಡಿದಾಗ, ಪೌಲನು ಕೊಟ್ಟ ಉತ್ತರವಿದು: “ಅನೇಕ ವರ್ಷಗಳಿಂದ ತಾವು ಈ ದೇಶದ ಮೇಲೆ ನ್ಯಾಯಾಧೀಶರಾಗಿರುವುದನ್ನು ನಾನು ಬಲ್ಲೆ. ಆದ್ದರಿಂದ ನಾನು ಸಂತೋಷದಿಂದ ನನ್ನ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ರಾಜ್ಯ್ ಪಾಲಾನ್ ಪಾವ್ಲುಕ್ ಸೊನ್ನಾಯ್ ಕರುನ್ ಬೊಲುಕ್ ಲಾವ್ಲ್ಯಾನ್, ತನ್ನಾ ಪಾವ್ಲುನ್ ಸಾಂಗಲ್ಲೆ ಕಾಯ್ ಮಟ್ಲ್ಯಾರ್: ರಾಜ್ಯ್ ಪಾಲ್ ಫೆಲಿಕ್ಸಾ, ತಿಯಾ ಲೈ ವರ್ಸಾಂಚ್ಯಾಕ್ನಾ ಹ್ಯಾ ದೆಶ್ಯಾಕ್ ಝಡ್ತಿ ಕರ್‍ತಲೊ ಹೊವ್ನ್ ಹಾಸ್ ಮನ್ತಲೆ ಮಾಕಾ ಗೊತ್ತ್ ಹಾಯ್, ತಸೆ ಹೊವ್ನ್, ಮಿಯಾ ಮಾಜ್ಯಾ ಬಚಾವಾ ಸಾಟ್ನಿ ತುಜ್ಯಾ ಇದ್ರಾಕ್ ವಾದ್ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:10
12 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವನ್ನು ಪ್ರಭುವೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಾಪಿಸಿರಿ. ನಿಮ್ಮಲ್ಲಿರುವ ನಂಬಿಕೆ ನಿರೀಕ್ಷೆಯ ಬಗ್ಗೆ ಯಾರಾದರೂ ಪ್ರಶ್ನಿಸಿದರೆ ಅವರಿಗೆ ತಕ್ಕ ಉತ್ತರ ಕೊಡಲು ಸರ್ವದಾ ಸಿದ್ಧರಾಗಿರಿ.


ಅಗ್ರಿಪ್ಪನು ಪೌಲನಿಗೆ ಮಾತನಾಡಲು ಅಪ್ಪಣೆಕೊಡುತ್ತಾ, “ಈಗ ನಿನ್ನ ಪರವಾಗಿ ನೀನು ಮಾತನಾಡಬಹುದು,” ಎಂದನು. ಪೌಲನು ಕೈಯೆತ್ತಿ ಹೀಗೆ ವಾದಿಸತೊಡಗಿದನು:


ಕುದುರೆಗಳನ್ನು ಸಜ್ಜುಗೊಳಿಸಿ ಪೌಲನನ್ನು ಏರಿಸಿ, ರಾಜ್ಯಪಾಲ ಫೆಲಿಕ್ಸರ ಬಳಿಗೆ ಭದ್ರವಾಗಿ ಕರೆದುಕೊಂಡು ಹೋಗಿರಿ.”


ಸೈನ್ಯಾಧಿಪತಿ ಅಪ್ಪಣೆ ಕೊಡಲು, ಪೌಲನು ಮೆಟ್ಟಲಿನ ಮೇಲೆ ನಿಂತು ಜನರನ್ನು ನೋಡಿ ಮೌನವಾಗಿರುವಂತೆ ಕೈಸನ್ನೆ ಮಾಡಿದನು. ಆಗ ನಿಶ್ಯಬ್ದ ಉಂಟಾಯಿತು. ಅನಂತರ ಅವರನ್ನು ಸಂಬೋಧಿಸಿ ಹಿಬ್ರುಭಾಷೆಯಲ್ಲಿ ಮಾತಾಡುತ್ತಾ ಹೀಗೆಂದನು:


ಯೆಹೂದ್ಯರು ಅಲೆಕ್ಸಾಂಡರ್ ಎಂಬವನನ್ನು ಸಭೆಯ ಮುಂದಕ್ಕೆ ನೂಕಿದರು. ನೆರೆದಿದ್ದ ಕೆಲವರು ಅವನನ್ನು ಪುಸಲಾಯಿಸಿದರು. ಆಗ ಅಲೆಕ್ಸಾಂಡರನು ಮೌನವಾಗಿರುವಂತೆ ಕೈಸನ್ನೆಮಾಡಿ ಜನರಿಗೆ ಸಮಾಧಾನ ಹೇಳಲು ಪ್ರಯತ್ನಿಸಿದನು.


ಆದರೆ ಇದು ನಾಮನೇಮಗಳಿಗೆ ಹಾಗು ನಿಮ್ಮ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ಪ್ರಶ್ನೆ. ಅದನ್ನು ನಿಮ್ಮನಿಮ್ಮಲ್ಲೇ ಇತ್ಯರ್ಥಮಾಡಿಕೊಳ್ಳಿ. ಇಂಥ ವಿಷಯಗಳನ್ನು ವಿಚಾರಣೆಮಾಡಲು ನನಗೆ ಮನಸ್ಸಿಲ್ಲ,” ಎಂದು ಹೇಳಿ


ಆಗ ಪೌಲನು ಎದ್ದು ನಿಂತು ಜನರಿಗೆ ನಿಶ್ಯಬ್ದವಾಗಿರುವಂತೆ ಕೈಸನ್ನೆ ಮಾಡಿ, ಹೀಗೆಂದು ಉಪದೇಶ ಮಾಡಲಾರಂಭಿಸಿದನು: “ಇಸ್ರಯೇಲ್ ಬಾಂಧವರೇ, ಹಾಗು ನಿಜದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಕೇಳಿ:


ಪೇತ್ರನು ನಿಶ್ಯಬ್ದರಾಗಿರುವಂತೆ ಅವರಿಗೆ ಕೈಸನ್ನೆ ಮಾಡಿದನು. ಪ್ರಭು ತನ್ನನ್ನು ಹೇಗೆ ಸೆರೆಮನೆಯಿಂದ ಹೊರಗೆ ಕರೆತಂದರೆಂದು ವಿವರಿಸಿದನು. ಈ ವಿಷಯವನ್ನು ಯಕೋಬನಿಗೂ ಇತರ ಸಹೋದರರಿಗೂ ತಿಳಿಸಲು ಹೇಳಿ ಅಲ್ಲಿಂದ ಹೊರಟು ಬೇರೆ ಸ್ಥಳಕ್ಕೆ ಹೋದನು.


“ಒಂದು ನಗರದಲ್ಲಿ ಒಬ್ಬ ನ್ಯಾಯಾಧೀಶನಿದ್ದ. ಅವನು ದೇವರಿಗೂ ಭಯಪಡುತ್ತಿರಲಿಲ್ಲ; ಮಾನವರಿಗೂ ಲಕ್ಷ್ಯಕೊಡುತ್ತಿರಲಿಲ್ಲ.


ಅದಕ್ಕೆ ಯೇಸು, “ಏನಯ್ಯಾ, ನಿಮ್ಮಿಬ್ಬರ ನ್ಯಾಯತೀರಿಸುವುದಕ್ಕೂ ನಿಮ್ಮ ಸ್ವತ್ತನ್ನು ಭಾಗಮಾಡಿಕೊಡುವುದಕ್ಕೂ ನನ್ನನ್ನು ನೇಮಿಸಿದವರು ಯಾರು?” ಎಂದು ಮರುಪ್ರಶ್ನೆ ಹಾಕಿದರು.


ಮನುಷ್ಯನು ಮನುಷ್ಯನಿಗೆ ವಿರುದ್ಧ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುತ್ತಾರೆ. ಆದರೆ ಮನುಷ್ಯನು ಸರ್ವೇಶ್ವರನಿಗೆ ವಿರುದ್ಧ ಅಪರಾಧ ಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದನು. ಆದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಎಂದೇ ಅವರನ್ನು ಕೊಲ್ಲಬೇಕೆಂಬುದು ಸರ್ವೇಶ್ವರನ ಚಿತ್ತವಾಗಿತ್ತು.


“ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು