Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:10 - ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಪೌಲನು, “ನಾನು ಚಕ್ರವರ್ತಿಯ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ತಮಗೆ ಚೆನ್ನಾಗಿ ತಿಳಿದಿರುವಂತೆ ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪೌಲನು - ನಾನು ಚಕ್ರವರ್ತಿಯ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10-11 ಪೌಲನು, “ಈಗ ನಾನು ಸೀಸರನ ನ್ಯಾಯಾಸ್ಥಾನದ ಮುಂದೆ ನಿಂತಿದ್ದೇನೆ. ನನಗೆ ತೀರ್ಪಾಗಬೇಕಾದದ್ದು ಇಲ್ಲಿಯೇ! ನಾನು ಯೆಹೂದ್ಯರಿಗೆ ಯಾವ ಅಪರಾಧವನ್ನೂ ಮಾಡಿಲ್ಲ. ಇದು ಸತ್ಯವೆಂದು ನಿನಗೆ ಗೊತ್ತಿದೆ. ನಾನು ಅಪರಾಧಿಯಾಗಿದ್ದು ಧರ್ಮಶಾಸ್ತ್ರವು ನನಗೆ ಮರಣದಂಡನೆ ವಿಧಿಸಿದರೆ, ನಾನು ಆ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಇವರ ದೋಷಾರೋಪಣೆಗಳು ಸತ್ಯವಾಗಿಲ್ಲದಿದ್ದರೆ, ನನ್ನನ್ನು ಇವರ ಕೈಗೆ ಒಪ್ಪಿಸಲು ಯಾರಿಗೂ ಸಾಧ್ಯವಿಲ್ಲ! ನನ್ನ ವಿಷಯವನ್ನು ಸೀಸರನೇ ಪರಿಶೀಲಿಸಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ಪೌಲನು, “ಈಗ ನಾನು ಕೈಸರನ ನ್ಯಾಯಾಲಯದ ಎದುರಿನಲ್ಲಿ ನಿಂತುಕೊಂಡಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ನೀವೇ ಚೆನ್ನಾಗಿ ತಿಳಿದುಕೊಂಡಿರುವಂತೆ ನಾನು ಯೆಹೂದ್ಯರಿಗೆ ವಿರೋಧವಾಗಿ ಯಾವ ತಪ್ಪನ್ನೂ ಮಾಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಪಾವ್ಲುನ್, “ಅತ್ತಾ ಮಿಯಾ ಸಿಸರಾಚ್ಯಾ ಝಡ್ತಿ ಕರ್‍ತಲ್ಯಾ ಜಾಗ್ಯಾಚ್ಯಾ ಫಿಡ್ಯಾತ್ ಇಬೆ ಹಾಯ್ ಮಾಕಾ ಹಿತ್ತೆಚ್ ನಿರ್ದಾರ್ ಹೊವ್ಚೆ ಮಿಯಾ ಜುದೆವಾಂಚ್ಯಾ ಲೊಕಾಕ್ನಿ ಕಾಯ್ಬಿ ಚುಕ್ ಕರುಕ್ನಾ ಹೆ ಖರೆಚ್ ಮನ್ತಲೆ ತುಕಾ ಅನಿ ತುಜ್ಯಾ ವಾಂಗ್ಡಿಯಾಕ್ನಿ ಲೈ ಬರೆ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:10
12 ತಿಳಿವುಗಳ ಹೋಲಿಕೆ  

ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ಇವರು ನನ್ನನ್ನು ವಿಚಾರಣೆಗೆ ಒಳಪಡಿಸಿದರು. ಮರಣದಂಡನೆಗೆ ಗುರಿಮಾಡುವಂಥ ಅಪರಾಧ ಏನನ್ನೂ ನನ್ನಲ್ಲಿ ಕಾಣಲಿಲ್ಲ. ಈ ಕಾರಣ ನನ್ನನ್ನು ಬಿಡುಗಡೆ ಮಾಡಬೇಕೆಂದಿದ್ದರು.


ಅಲ್ಲಿಂದ ಹೊರಕ್ಕೆ ಹೋಗಿ, “ಮರಣದಂಡನೆಗಾಗಲಿ ಅಥವಾ ಸೆರೆಮನೆವಾಸಕ್ಕಾಗಲಿ ಗುರಿಮಾಡುವಂಥ ಯಾವ ತಪ್ಪನ್ನೂ ಈ ಮನುಷ್ಯ ಮಾಡಿಲ್ಲ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ಇವನಿಗೆ ಮರಣದಂಡನೆ ವಿಧಿಸುವಂಥ ಅಪರಾಧವೇನೂ ನನಗೆ ಕಂಡುಬರಲಿಲ್ಲ. ಅಲ್ಲದೆ ಇವನು ಚಕ್ರವರ್ತಿಗೇ ಅಪೀಲುಮಾಡಿಕೊಂಡಿದ್ದಾನೆ. ಆದ್ದರಿಂದ ನಾನು ಇವನನ್ನು ಅವರಲ್ಲಿಗೆ ಕಳುಹಿಸಲು ನಿರ್ಧರಿಸಿದ್ದೇನೆ.


ಆ ಜನರು ಅಸೂಯೆಯಿಂದಲೇ ಯೇಸುವನ್ನು ಹಿಡಿದೊಪ್ಪಿಸಿದ್ದಾರೆಂದು ಅವನಿಗೆ ಅರಿವಾಗಿತ್ತು.


ಆದುದರಿಂದ ಅವರು ನನ್ನೊಡನೆ ಇಲ್ಲಿಗೆ ಬಂದರು. ನಾನು ತಡಮಾಡದೆ ಮರುದಿನವೇ ನ್ಯಾಯಸ್ಥಾನದಲ್ಲಿ ಕುಳಿತು ಅವನನ್ನು ನನ್ನ ಮುಂದೆ ತರುವಂತೆ ಆಜ್ಞೆಮಾಡಿದೆ.


ಫೆಸ್ತನು ಅವರೊಂದಿಗೆ ಎಂಟು-ಹತ್ತು ದಿನಗಳನ್ನು ಕಳೆದು, ಸೆಜರೇಯಕ್ಕೆ ಮರಳಿ ಬಂದನು. ಮಾರನೆಯ ದಿನ ಅವನು ನ್ಯಾಯಸ್ಥಾನದಲ್ಲಿ ಕುಳಿತು ಪೌಲನನ್ನು ತನ್ನ ಮುಂದೆ ಕರೆದುತರಬೇಕೆಂದು ಆಜ್ಞಾಪಿಸಿದನು.


ಅಲ್ಲಿ ನನಗೆ ಕಂಡುಬಂದ ಪ್ರಕಾರ ಅವರ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಇವನ ಮೇಲೆ ಆಪಾದನೆ ಹೊರಿಸಲಾಯಿತೇ ಹೊರತು ಮರಣದಂಡನೆಗಾಗಲಿ, ಸೆರೆಮನೆಗಾಗಲಿ, ಇವನನ್ನು ಗುರಿಪಡಿಸಬಹುದಾದ ಅಪರಾಧವೇನೂ ಇರಲಿಲ್ಲ.


ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು