Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:25 - ಕನ್ನಡ ಸತ್ಯವೇದವು C.L. Bible (BSI)

25 ಇವನಿಗೆ ಮರಣದಂಡನೆ ವಿಧಿಸುವಂಥ ಅಪರಾಧವೇನೂ ನನಗೆ ಕಂಡುಬರಲಿಲ್ಲ. ಅಲ್ಲದೆ ಇವನು ಚಕ್ರವರ್ತಿಗೇ ಅಪೀಲುಮಾಡಿಕೊಂಡಿದ್ದಾನೆ. ಆದ್ದರಿಂದ ನಾನು ಇವನನ್ನು ಅವರಲ್ಲಿಗೆ ಕಳುಹಿಸಲು ನಿರ್ಧರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂತು. ತಾನೇ ಚಕ್ರವರ್ತಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ ಇವನನ್ನು ಕಳುಹಿಸುವದಕ್ಕೆ ತೀರ್ಮಾನಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ಇವನನ್ನು ವಿಚಾರಣೆ ಮಾಡಿದಾಗ ಇವನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ. ಆದರೆ ಸೀಸರನಿಂದಲೇ ತನಗೆ ನ್ಯಾಯತೀರ್ಪಾಗಬೇಕೆಂದು ಇವನು ಕೇಳಿಕೊಂಡಿದ್ದಾನೆ. ಆದ್ದರಿಂದ ಇವನನ್ನು ರೋಮಿಗೆ ಕಳುಹಿಸಲು ನಾನು ತೀರ್ಮಾನಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇವನು ಮರಣದಂಡನೆಗೆ ಯೋಗ್ಯವಾದ ಯಾವುದೇ ಅಪರಾಧ ಮಾಡಿಲ್ಲ ಎಂದು ನಾನು ಕಂಡುಕೊಂಡಿದ್ದೇನೆ. ಆದರೆ ಇವನು ನೇರವಾಗಿ ಚಕ್ರವರ್ತಿಗೇ ತನ್ನ ಬೇಡಿಕೆ ಸಲ್ಲಿಸಿದ್ದರಿಂದ ಇವನನ್ನು ರೋಮ್ ನಗರಕ್ಕೆ ಕಳುಹಿಸಲು ತೀರ್ಮಾನಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಮಿಯಾ ಹೆಕಾ ಇಚಾರ್ನಿ ಕರ್‍ತಾನಾ ಹೆಜ್ಯಾಕ್ಡೆ ಕಾಯ್ಬಿ ಚುಕ್ ದಿಸುಕ್ನಾ, ಖರೆ ಸಿಸರಾನುಚ್ ಮಾಕಾ ವಿಚಾರ್ನಿ ಕರುಚೆ ಮನುನ್ ಹೆನಿ ಮಾಗುನ್ ಘೆಟ್ಲ್ಯಾನ್, ತಸೆ ಹೊವ್ನ್ ಹೆಕಾ ರೊಮಾಕ್ ಧಾಡುಚೆ ಮನುನ್ ಮಿಯಾ ನಿರ್ದಾರ್ ಕರ್‍ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:25
11 ತಿಳಿವುಗಳ ಹೋಲಿಕೆ  

ಅಲ್ಲಿ ನನಗೆ ಕಂಡುಬಂದ ಪ್ರಕಾರ ಅವರ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಇವನ ಮೇಲೆ ಆಪಾದನೆ ಹೊರಿಸಲಾಯಿತೇ ಹೊರತು ಮರಣದಂಡನೆಗಾಗಲಿ, ಸೆರೆಮನೆಗಾಗಲಿ, ಇವನನ್ನು ಗುರಿಪಡಿಸಬಹುದಾದ ಅಪರಾಧವೇನೂ ಇರಲಿಲ್ಲ.


ಆಗ ಅಲ್ಲಿ ದೊಡ್ಡ ಕೂಗಾಟವೆದ್ದಿತು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಧರ್ಮಶಾಸ್ತ್ರಿಗಳು ಎದ್ದು ನಿಂತು, “ಈ ಮನುಷ್ಯನಲ್ಲಿ ನಮಗೆ ಯಾವ ದೋಷವೂ ಕಾಣುವುದಿಲ್ಲ. ಒಂದು ಆತ್ಮವೋ ಅಥವಾ ಒಬ್ಬ ದೂತನೋ ಇವನೊಡನೆ ಮಾತನಾಡಿದ್ದರೂ ಮಾತನಾಡಿರಬಹುದು,” ಎಂದು ವಾದಿಸಿದರು.


ಪಿಲಾತನು ಮುಖ್ಯಯಾಜಕರನ್ನೂ ಜನರ ಗುಂಪನ್ನೂ ನೋಡಿ, “ಈ ಮನುಷ್ಯರಲ್ಲಿ ಶಿಕ್ಷಾರ್ಹದೋಷ ಯಾವುದೂ ನನಗೆ ಕಾಣುವುದಿಲ್ಲ,” ಎಂದನು.


ಅಲ್ಲಿಂದ ಹೊರಕ್ಕೆ ಹೋಗಿ, “ಮರಣದಂಡನೆಗಾಗಲಿ ಅಥವಾ ಸೆರೆಮನೆವಾಸಕ್ಕಾಗಲಿ ಗುರಿಮಾಡುವಂಥ ಯಾವ ತಪ್ಪನ್ನೂ ಈ ಮನುಷ್ಯ ಮಾಡಿಲ್ಲ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ಆಗ ಪಿಲಾತನು, “ಸತ್ಯ, ಸತ್ಯ ಎಂದರೆ ಏನು?” ಎಂದು ಪ್ರಶ್ನಿಸಿ ಅಲ್ಲಿ ನಿಲ್ಲದೆ ಹೊರಗೆಬಂದನು.


“ಜನರು ದಂಗೆಯೇಳುವಂತೆ ಈ ಮನುಷ್ಯ ಪ್ರೇರೇಪಿಸುತ್ತಾನೆಂದು ಇವನನ್ನು ನನ್ನ ಬಳಿಗೆ ಕರೆತಂದಿರಲ್ಲವೇ? ಇಗೋ, ನಿಮ್ಮ ಎದುರಿಗೇ ವಿಚಾರಣೆ ಮಾಡಿದ್ದೇನೆ; ಇವನಲ್ಲಿ ನೀವು ಆರೋಪಿಸುವಂಥ ದೋಷಗಳೊಂದೂ ನಮಗೆ ಕಾಣಲಿಲ್ಲ;


ಇದನ್ನು ಕೇಳಿದ ನಾಯಕರು ಮತ್ತು ಸಕಲ ಜನರು ಯಾಜಕ - ಪ್ರವಾದಿಗಳಿಗೆ, “ಇವನು ಮರಣದಂಡನೆಗೆ ಪಾತ್ರನಲ್ಲ. ಏಕೆಂದರೆ ನಮ್ಮ ದೇವರಾದ ಸರ್ವೇಶ್ವರನ ಹೆಸರಿನಲ್ಲೇ ಇದನ್ನು ನಮಗೆ ನುಡಿದಿದ್ದಾನೆ,” ಎಂದರು.


ಆದರೆ ಇವನ ಬಗ್ಗೆ ಮಹಾಸನ್ನಿಧಿಗೆ ಬರೆಯಲು ನಿರ್ದಿಷ್ಟವಾದುದೇನೂ ನನಗೆ ತೋಚುವುದಿಲ್ಲ. ಒಂದು ವಿಚಾರಣೆ ನಡೆಸಿದರೆ, ಅವರಿಗೆ ಬರೆಯಲು ಏನಾದರೂ ದೊರಕಬಹುದೆಂದು ತಿಳಿದು ಇವನನ್ನು ನಿಮ್ಮ ಮುಂದೆ, ಮುಖ್ಯವಾಗಿ ಅಗ್ರಿಪ್ಪ ರಾಜರೇ, ತಮ್ಮ ಮುಂದೆ, ಹಾಜರುಪಡಿಸಿರುತ್ತೇನೆ.


ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾದಮೇಲೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ‘ಔಗುಸ್ತದಳ’ ಎಂಬ ರೋಮಿನ ದಳಕ್ಕೆ ಸೇರಿದ ಜೂಲಿಯಸ್ ಎಂಬ ಶತಾಧಿಪತಿಯ ವಶಕ್ಕೆ ಒಪ್ಪಿಸಲಾಯಿತು.


ಇವರು ನನ್ನನ್ನು ವಿಚಾರಣೆಗೆ ಒಳಪಡಿಸಿದರು. ಮರಣದಂಡನೆಗೆ ಗುರಿಮಾಡುವಂಥ ಅಪರಾಧ ಏನನ್ನೂ ನನ್ನಲ್ಲಿ ಕಾಣಲಿಲ್ಲ. ಈ ಕಾರಣ ನನ್ನನ್ನು ಬಿಡುಗಡೆ ಮಾಡಬೇಕೆಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು