Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:3 - ಕನ್ನಡ ಸತ್ಯವೇದವು C.L. Bible (BSI)

3 ಅವರು ಫೆಸ್ತನನ್ನು ವಿನಂತಿಸಿ, ಪೌಲನನ್ನು ಜೆರುಸಲೇಮಿಗೆ ಕರೆತರಿಸುವ ಉಪಕಾರವನ್ನು ಮಾಡಬೇಕೆಂದು ಕೇಳಿಕೊಂಡರು. ಏಕೆಂದರೆ, ಮಾರ್ಗದಲ್ಲೇ ಪೌಲನನ್ನು ಕೊಲ್ಲುವ ಸಂಚನ್ನು ಹೂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ದಯಮಾಡಿ ಅವನನ್ನು ಯೆರೂಸಲೇವಿುಗೆ ಕರತರಿಸಬೇಕೆಂದು ಪೌಲನ ಕೇಡಿಗಾಗಿ ಬಿನ್ನಹವನ್ನು ಮಾಡಿದರು. ಮಾರ್ಗದಲ್ಲಿ ಅವನನ್ನು ಕೊಲ್ಲುವದಕ್ಕಾಗಿ ಹೊಂಚುಹಾಕಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಲ್ಲದೆ ಪೌಲನನ್ನು ಜೆರುಸಲೇಮಿಗೆ ಮರಳಿ ಕಳುಹಿಸಿಕೊಡಬೇಕೆಂದು ಅವರು ಫೆಸ್ತನನ್ನು ಕೇಳಿಕೊಂಡರು. ಅವರು ಪೌಲನನ್ನು ಮಾರ್ಗದಲ್ಲೇ ಕೊಲ್ಲಬೇಕೆಂಬ ಯೋಜನೆ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ತಮಗೆ ದಯೆತೋರಿ ಪೌಲನನ್ನು ಕೂಡಲೇ ಯೆರೂಸಲೇಮಿಗೆ ವರ್ಗಾಯಿಸಬೇಕೆಂದು ಫೆಸ್ತನನ್ನು ಬೇಡಿಕೊಂಡರು. ಏಕೆಂದರೆ ಪೌಲನು ಹಿಂದಿರುಗುವಾಗ ಮಾರ್ಗದಲ್ಲೇ ಅವನನ್ನು ಕೊಲ್ಲಬೇಕೆಂದು ಹೊಂಚುಹಾಕಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕಶ್ಯಾಕ್ ಮಟ್ಲ್ಯಾರ್, ಪಾವ್ಲು ಜರುಜಲೆಮಾಕ್ ಜಾತಾನಾ ವಾಟೆರುಚ್ ತೆಕಾ ಜಿವ್ ಕಾಡುನ್ ಟಾಕುಚೆ ಮನುನ್ ರಾಕುನ್ಗೆತ್ ಹೊತ್ತ್ಯಾ ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:3
16 ತಿಳಿವುಗಳ ಹೋಲಿಕೆ  

ಅದು ಸೌಲನಿಗೆ ತಿಳಿದುಬಂದಿತು. ಅವರು ಅವನನ್ನು ಕೊಲ್ಲಲು ಹಗಲಿರುಳು ಪಟ್ಟಣದ ದ್ವಾರಗಳನ್ನು ಕಾಯುತ್ತಿದ್ದರು.


“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” - ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.


ಈ ಹೊಸ ಮಾರ್ಗವನ್ನು ಅವಲಂಬಿಸುವವರು ಹೆಂಗಸರೇ ಆಗಿರಲಿ, ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು.


ನನ್ನನ್ನಾಗಲಿ, ಪಿತನನ್ನಾಗಲಿ ಅವರು ಅರಿತಿಲ್ಲದ ಕಾರಣ ನಿಮಗೆ ಹೀಗೆ ಮಾಡುವರು.


ಈ ಪದಾಧಿಕಾರಿಗಳು ಅರಸನ ಬಳಿಗೆ ಬಂದು, “ಒಡೆಯಾ, ಈ ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇವನು ನಗರದಲ್ಲಿರುವ ಸೈನಿಕರಿಗೂ ಜನರೆಲ್ಲರಿಗೂ ಇಂಥ ಭವಿಷ್ಯವನ್ನು ನುಡಿಯುತ್ತಾ ಅವರು ಎದೆಗುಂದುವಂತೆ ಮಾಡುತ್ತಿದ್ದಾನೆ. ಅವನು ಹಾರೈಸುವುದು ಜನರ ಕ್ಷೇಮವನ್ನಲ್ಲ ಹಾನಿಯನ್ನೇ,” ಎಂದು ದೂರಿತ್ತರು.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ಪ್ರಭುವಿನ ಸೇವೆಯಲ್ಲಿ ನಾನು ಕೈಗೊಂಡ ಪ್ರಯಾಣಗಳು ಅನೇಕ; ನನಗೆ ಬಂದೊದಗಿದ ಅಪಾಯಗಳೂ ಅನೇಕ; ಪ್ರವಾಹಗಳ ಅಪಾಯ, ಕಳ್ಳಕಾಕರ ಅಪಾಯ, ಸ್ವಜನ ಹಾಗೂ ಅನ್ಯಜನರಿಂದ ಅಪಾಯ, ನಗರಗಳ ಹಾಗೂ ನಿರ್ಜನ‍ಪ್ರದೇಶಗಳ ಅಪಾಯ, ಕಡಲುಗಳ ಅಪಾಯ, ಕಪಟ ಸಹೋದರರಿಂದ ಅಪಾಯ - ಇವೆಲ್ಲಕ್ಕೂ ತುತ್ತಾದೆ.


ದುಷ್ಟನೇ, ನೀತಿವಂತನ ಮನೆಗೆ ಕನ್ನಹಾಕಬೇಡ; ಅವನು ಕೂಡಿಸಿದ್ದನ್ನು ಕೊಳ್ಳೆಹೊಡೆಯಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು