Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:5 - ಕನ್ನಡ ಸತ್ಯವೇದವು C.L. Bible (BSI)

5 ಅವನಲ್ಲಿ ಏನಾದರೂ ತಪ್ಪಿದ್ದರೆ ನಿಮ್ಮ ಪ್ರಮುಖರು ನನ್ನ ಜೊತೆಯಲ್ಲೇ ಅಲ್ಲಿಗೆ ಬಂದು ಆಪಾದಿಸಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದಕಾರಣ ನಿಮ್ಮಲ್ಲಿ ಪ್ರಮುಖರು, ನನ್ನೊಂದಿಗೆ ಬಂದು ಆ ಮನುಷ್ಯನಲ್ಲಿ ಅಪವಾದ ಏನಾದರೂ ಇದ್ದರೆ ಅವನ ಮೇಲೆ ತಪ್ಪುಹೊರಿಸಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದಕಾರಣ ನಿಮ್ಮಲ್ಲಿ ಪ್ರಮುಖರು ನನ್ನೊಂದಿಗೆ ಬಂದು ಆ ಮನುಷ್ಯನಲ್ಲಿ ಅನುಚಿತವಾದದ್ದೇನಾದರೂ ಇದ್ದರೆ ಅವನ ಮೇಲೆ ತಪ್ಪುಹೊರಿಸಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿಮ್ಮ ನಾಯಕರಲ್ಲಿ ಕೆಲವರು ನನ್ನೊಂದಿಗೆ ಬರಲಿ. ಅವನು ನಿಜವಾಗಿಯೂ ಅಪರಾಧ ಮಾಡಿದ್ದರೆ ಅವನ ಮೇಲೆ ಸೆಜರೇಯದಲ್ಲೇ ಅವರು ದೋಷಾರೋಪಣೆ ಮಾಡಲಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮಲ್ಲಿಯ ಕೆಲವು ನಾಯಕರು ನನ್ನೊಂದಿಗೆ ಅಲ್ಲಿಗೆ ಬರಲಿ. ಅವನೇನಾದರೂ ತಪ್ಪು ಮಾಡಿದ್ದರೆ ಅವನ ಮೇಲಿನ ದೂರುಗಳನ್ನು ಆಪಾದಿಸಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತುಮ್ಚ್ಯಾ ಮುಖಂಡಾತ್ನಿ ಥೊಡಿ ಲೊಕಾ ಮಾಜ್ಯಾ ವಾಂಗ್ಡಾ ಯೆಂವ್ದಿ, ತೆನಿ ಪಾವ್ಲುಚಿ ಚುಕ್ ಸಾಂಗ್ತಲೆ ಹೊಲ್ಯಾರ್ ಸೆಜರೆಯಾತ್ ಸಾಂಗುಂದಿತ್ ಮನುನ್ ಜವಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:5
11 ತಿಳಿವುಗಳ ಹೋಲಿಕೆ  

ಇವನಿಗೆ ಮರಣದಂಡನೆ ವಿಧಿಸುವಂಥ ಅಪರಾಧವೇನೂ ನನಗೆ ಕಂಡುಬರಲಿಲ್ಲ. ಅಲ್ಲದೆ ಇವನು ಚಕ್ರವರ್ತಿಗೇ ಅಪೀಲುಮಾಡಿಕೊಂಡಿದ್ದಾನೆ. ಆದ್ದರಿಂದ ನಾನು ಇವನನ್ನು ಅವರಲ್ಲಿಗೆ ಕಳುಹಿಸಲು ನಿರ್ಧರಿಸಿದ್ದೇನೆ.


ನಾನು ಅವರಿಗೆ, ‘ಆಪಾದಿತನೂ ಆಪಾದಿಸುವವರೂ ಮುಖಾಮುಖಿಯಾಗಿ ನಿಲ್ಲಬೇಕು ; ತನ್ನ ಮೇಲೆ ಹೊರಿಸಲಾದ ಆಪಾದನೆಗಳ ವಿರುದ್ಧ ವಾದಿಸಲು ಆಪಾದಿತನಿಗೆ ಅವಕಾಶ ಕೊಡಬೇಕು. ಹಾಗೆ ಮಾಡದೆ ಅವರ ಕೈಗೊಪ್ಪಿಸುವುದು ರೋಮನರ ಪದ್ಧತಿಯಲ್ಲ,’ ಎಂದು ಹೇಳಿದೆ.


ಹಾಗೂ ಇವನ ಮೇಲೆ ತಪ್ಪುಹೊರಿಸುವವರು ತಮ್ಮ ಮುಂದೆ ಬರಬೇಕೆಂದು ಆಜ್ಞೆಯಿತ್ತನು; ತಾವೇ ಕೇಳಿನೋಡಿ; ನಾವು ಇವನ ವಿರುದ್ಧ ತಂದಿರುವ ದೂರುಗಳೆಲ್ಲಾ ಸತ್ಯವಾದುವು ಎಂದು ಇವನಿಂದಲೇ ತಮಗೆ ವ್ಯಕ್ತ ಆಗುವುದು,” ಎಂದನು.


ಆದರೂ ಇವನ ವಿರುದ್ಧ ಒಳಸಂಚು ನಡೆಯುತ್ತಲೇ ಇದೆಯೆಂದು ನನಗೆ ತಿಳಿದುಬಂದಿತು. ಕೂಡಲೇ ನಾನು ಇವನನ್ನು ತಮ್ಮ ಬಳಿಗೆ ಕಳುಹಿಸಿದ್ದೇನೆ. ಇವನ ಮೇಲೆ ತಪ್ಪುಹೊರಿಸುವವರು ತಮ್ಮ ಸನ್ನಿಧಾನದಲ್ಲೇ ಬಂದು ಆ ಆಪಾದನೆಗಳನ್ನು ನಿವೇದಿಸಬಹುದೆಂದು ಅಪ್ಪಣೆಮಾಡಿದ್ದೇನೆ.”


ಪೌಲನು ಮಾತನಾಡಬೇಕೆಂದಿರುವಾಗ, ಗಲ್ಲಿಯೋ ಯೆಹೂದ್ಯರನ್ನು ಸಂಬೋಧಿಸಿ, “ಯೆಹೂದ್ಯರೇ, ಅನ್ಯಾಯವಾಗಲಿ, ಅಕ್ರಮವಾಗಲಿ ನಡೆದಿದ್ದ ಪಕ್ಷದಲ್ಲಿ, ನಿಮ್ಮ ಅಪಾದನೆಗಳನ್ನು ತಾಳ್ಮೆಯಿಂದ ಕೇಳಬೇಕಾದುದು ಸರಿಯಷ್ಟೆ.


ಫೆಸ್ತನು ಅವರಿಗೆ, “ಪೌಲನು ಸೆಜರೇಯದಲ್ಲಿ ಕೈದಿಯಾಗಿದ್ದಾನೆ. ನಾನು ಬೇಗನೆ ಅಲ್ಲಿಗೆ ಹಿಂದಿರುಗಲಿದ್ದೇನೆ.


ಫೆಸ್ತನು ಅವರೊಂದಿಗೆ ಎಂಟು-ಹತ್ತು ದಿನಗಳನ್ನು ಕಳೆದು, ಸೆಜರೇಯಕ್ಕೆ ಮರಳಿ ಬಂದನು. ಮಾರನೆಯ ದಿನ ಅವನು ನ್ಯಾಯಸ್ಥಾನದಲ್ಲಿ ಕುಳಿತು ಪೌಲನನ್ನು ತನ್ನ ಮುಂದೆ ಕರೆದುತರಬೇಕೆಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು