Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:6 - ಕನ್ನಡ ಸತ್ಯವೇದವು C.L. Bible (BSI)

6 ಫೆಸ್ತನು ಅವರೊಂದಿಗೆ ಎಂಟು-ಹತ್ತು ದಿನಗಳನ್ನು ಕಳೆದು, ಸೆಜರೇಯಕ್ಕೆ ಮರಳಿ ಬಂದನು. ಮಾರನೆಯ ದಿನ ಅವನು ನ್ಯಾಯಸ್ಥಾನದಲ್ಲಿ ಕುಳಿತು ಪೌಲನನ್ನು ತನ್ನ ಮುಂದೆ ಕರೆದುತರಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಯೆರುಸಲೇಮಿನಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿನಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು, ಪೌಲನನ್ನು ಕರತರಬೇಕೆಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಅವರಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿವಸಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕೂತುಕೊಂಡು ಪೌಲನನ್ನು ತರಬೇಕೆಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಫೆಸ್ತನು ಇನ್ನೂ ಎಂಟು-ಹತ್ತು ದಿನಗಳವರೆಗೆ ಜೆರುಸಲೇಮಿನಲ್ಲಿ ಇದ್ದನು. ಬಳಿಕ ಅವನು ಸೆಜರೇಯಕ್ಕೆ ಹಿಂತಿರುಗಿದನು. ಮರುದಿನ ಅವನು ಸೈನಿಕರಿಗೆ ಪೌಲನನ್ನು ತನ್ನ ಮುಂದೆ ಕರೆದುಕೊಂಡು ಬರಬೇಕೆಂದು ತಿಳಿಸಿದನು. ಫೆಸ್ತನು ನ್ಯಾಯಾಸ್ಥಾನದ ಮೇಲೆ ಕುಳಿತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಎಂಟು ಹತ್ತು ದಿನಗಳನ್ನು ಅವರೊಂದಿಗೆ ಕಳೆದ ತರುವಾಯ ಅವನು ಕೈಸರೈಯಕ್ಕೆ ಹೋದನು. ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು ತನ್ನ ಮುಂದೆ ಪೌಲನನ್ನು ಕರೆತರಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಫೆಸ್ತಾ ಅನಿಬಿ ಆಟಾಕ್ನಾ ಧಾ ದಿಸಾ ಪತರ್ ಜೆರುಜಲೆಮಾತುಚ್ ರಾವ್ನ್, ಮಾನಾ ತೊ ಸೆಜರೆಯಾಕ್ ಪರ್ತುನ್ ಗೆಲೊ, ದುಸ್ರೆಂದಿಸಿ ತೆನಿ ಪಾವ್ಲುಕ್ ಬಲ್ವುನ್ ಹಾನುನ್ ಅಪ್ನಾಚ್ಯಾ ಫಿಡ್ಯಾತ್ ಇಬೆಕರಾ ಮನುನ್ ಸೈನಿಕಾಕ್ನಿ ಸಾಂಗ್ಲಾನ್, ಅನಿ ತೊ ಝಡ್ತಿ ಕರ್‍ತಲ್ಯಾ ಸಿವಾಸನಾರ್ ಬಸುನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:6
11 ತಿಳಿವುಗಳ ಹೋಲಿಕೆ  

ಆದುದರಿಂದ ಅವರು ನನ್ನೊಡನೆ ಇಲ್ಲಿಗೆ ಬಂದರು. ನಾನು ತಡಮಾಡದೆ ಮರುದಿನವೇ ನ್ಯಾಯಸ್ಥಾನದಲ್ಲಿ ಕುಳಿತು ಅವನನ್ನು ನನ್ನ ಮುಂದೆ ತರುವಂತೆ ಆಜ್ಞೆಮಾಡಿದೆ.


ಅದಕ್ಕೆ ಪೌಲನು, “ನಾನು ಚಕ್ರವರ್ತಿಯ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ತಮಗೆ ಚೆನ್ನಾಗಿ ತಿಳಿದಿರುವಂತೆ ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಿಲ್ಲ.


ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.


ಹೀಗಿದ್ದರೂ ನೀವು ಬಡವನನ್ನು ಅವಮಾನಕ್ಕೆ ಈಡುಮಾಡಿದಿರಿ. ನಿಮ್ಮನ್ನು ತುಳಿದು ಹಿಂಸಿಸುವವರು ಮತ್ತು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆಯುವವರು ಸಿರಿವಂತರೇ ಅಲ್ಲವೇ?


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ಅವರ ಆ ಕೂಗನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿದನು. ‘ಹಾಸುಗಲ್ಲು’ ಎಂಬ ಕಟ್ಟೆಯ ಮೇಲಿದ್ದ ನ್ಯಾಯಪೀಠದ ಮೇಲೆ ಕುಳಿತುಕೊಂಡನು. ಯೆಹೂದ್ಯರ ಭಾಷೆಯಲ್ಲಿ ಆ ಸ್ಥಳಕ್ಕೆ ‘ಗಬ್ಬಥ’ ಎಂದು ಹೆಸರು.


ಫಿಲಿಪ್ಪನಾದರೋ ಆಜೋತ್ ಎಂಬಲ್ಲಿ ಕಾಣಿಸಿಕೊಂಡನು. ಅಲ್ಲಿಂದ ಸೆಜರೇಯವನ್ನು ತಲುಪುವವರೆಗೆ ಎಲ್ಲಾ ಊರುಗಳಲ್ಲೂ ಶುಭಸಂದೇಶವನ್ನು ಸಾರುತ್ತಾ ಹೋದನು.


ಫೆಸ್ತನು ಅಧಿಕಾರ ವಹಿಸಿಕೊಂಡು ಮೂರು ದಿನಗಳಾದನಂತರ ಸೆಜರೇಯದಿಂದ ಜೆರುಸಲೇಮಿಗೆ ಹೋದನು.


ಫೆಸ್ತನು ಅವರಿಗೆ, “ಪೌಲನು ಸೆಜರೇಯದಲ್ಲಿ ಕೈದಿಯಾಗಿದ್ದಾನೆ. ನಾನು ಬೇಗನೆ ಅಲ್ಲಿಗೆ ಹಿಂದಿರುಗಲಿದ್ದೇನೆ.


ಅವನಲ್ಲಿ ಏನಾದರೂ ತಪ್ಪಿದ್ದರೆ ನಿಮ್ಮ ಪ್ರಮುಖರು ನನ್ನ ಜೊತೆಯಲ್ಲೇ ಅಲ್ಲಿಗೆ ಬಂದು ಆಪಾದಿಸಲಿ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು