Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:13 - ಕನ್ನಡ ಸತ್ಯವೇದವು C.L. Bible (BSI)

13 ದಾರಿಯಲ್ಲಿ, ನಡು ಮಧ್ಯಾಹ್ನದ ವೇಳೆಯಲ್ಲಿ, ಓ ರಾಜರೇ, ಸೂರ್ಯನಿಗಿಂತಲೂ ಪ್ರಕಾಶಮಾನವಾದ ಬೆಳಕೊಂದು ಆಕಾಶದಿಂದ ಹೊಳೆಯುವುದನ್ನು ಕಂಡೆ. ಅದು ನನ್ನ ಮತ್ತು ಸಹಪ್ರಯಾಣಿಕರ ಸುತ್ತಲೂ ಆವರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತು ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವುದನ್ನು ನಾನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ರಾಜನೇ, ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದಾದ ಒಂದು ಬೆಳಕು ನನ್ನ ಸುತ್ತಲೂ ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ದಮಸ್ಕದ ದಾರಿಯಲ್ಲಿ ಹೋಗುತ್ತಿದ್ದೆನು. ಆಗ ಮಧ್ಯಾಹ್ನವಾಗಿತ್ತು. ಇದ್ದಕ್ಕಿದ್ದಂತೆ ಆಗ ಆಕಾಶದಿಂದ ಸೂರ್ಯನಿಗಿಂತಲೂ ಪ್ರಕಾಶಮಾನವಾದ ಬೆಳಕೊಂದು ಬಂದು ನನ್ನ ಸುತ್ತಲೂ ಮತ್ತು ನನ್ನೊಂದಿಗೆ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಪ್ರಜ್ವಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ರಾಜರೇ, ಮಧ್ಯಾಹ್ನದ ಸಮಯದಲ್ಲಿ, ಮಾರ್ಗ ಮಧ್ಯದಲ್ಲಿ ನಾನು, ಆಕಾಶದಿಂದ ಸೂರ್ಯನ ಪ್ರಕಾಶಕ್ಕಿಂತಲೂ ಹೆಚ್ಚಾಗಿ ಹೊಳೆಯುವ ಒಂದು ಬೆಳಕನ್ನು ಕಂಡೆನು. ಅದು ನನ್ನ ಸುತ್ತಲೂ ನನ್ನ ಸಂಗಡಿಗರ ಸುತ್ತಲೂ ಪ್ರಕಾಶಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಿಯಾ ದಮಸ್ಕಾಚ್ಯಾ ವಾಟೆನ್ ಜಾಯ್ತ್ ಹೊತ್ತೊ, ತನ್ನಾ ದೊಪಾರ್ ಹೊಲ್ಲಿ ತಾಬೊಡ್ತೊಬ್ ತನ್ನಾ ಮಳ್ಬಾಕ್ನಾ ದಿಸಾಚ್ಯಾ ಕಿಂತಾ ಹೊಳಾವ್ತಲೊ ಉಜ್ವೊಡ್ ಯೆವ್ನ್ ಮಾಜ್ಯಾ ಅನಿ ಮಾಜ್ಯಾ ವಾಂಗ್ಡಾ ಪ್ರಯಾನ್ ಕರ್ತಾಲ್ಯಾಚ್ಯಾ ಬೊತ್ಯಾನ್ ಹೊಳಾವ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:13
10 ತಿಳಿವುಗಳ ಹೋಲಿಕೆ  

ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಸ್ವಾಮಿ ರೂಪಾಂತರ ಹೊಂದಿದರು, ಅವರ ಮುಖ ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಪ್ರಜ್ವಲಿಸಿತು.


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ಅವರ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು. ಬಾಯೊಳಗಿಂದ ಹರಿತವಾದ ಇಬ್ಬಾಯಿಯ ಖಡ್ಗವು ಹೊರಬಂದಿತ್ತು. ಅವರ ಮುಖ ನಡುಮಧ್ಯಾಹ್ನದ ಸೂರ್ಯನಂತೆ ಪ್ರಕಾಶಿಸುತ್ತಿತ್ತು.


“ಹೀಗೆ ಪ್ರಯಾಣ ಮಾಡುತ್ತಾ ದಮಸ್ಕಸನ್ನು ಸಮೀಪಿಸಿದೆ. ಆಗ ಸುಮಾರು ನಡುಮಧ್ಯಾಹ್ನ. ಇದ್ದಕ್ಕಿದ್ದಂತೆ ಆಕಾಶದಿಂದ ಮಹಾಬೆಳಕೊಂದು ನನ್ನ ಸುತ್ತಲೂ ಮಿಂಚಿತು.


ಅವನು ಅಲ್ಲಿಂದ ಪ್ರಯಾಣಮಾಡುತ್ತಾ ದಮಸ್ಕಸ್ ಪಟ್ಟಣವನ್ನು ಸಮೀಪಿಸಿದನು. ಇದ್ದಕ್ಕಿದ್ದಂತೆ ಆಕಾಶದಿಂದ ಬೆಳಕೊಂದು ಮಿಂಚಿ ಅವನ ಸುತ್ತಲೂ ಆವರಿಸಿತು.


ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.


ನಾಚುವನು ಚಂದ್ರ, ಹೇಸುವನು ಸೂರ್ಯ, ಏಕೆನೆ ಆಳುವರು ಸೇನಾಧೀಶ್ವರ ಸರ್ವೇಶ್ವರ ಸಿಯೋನ್ ಪರ್ವತದೊಳು, ಜೆರುಸಲೇಮ್ ನಗರದೊಳು. ಪ್ರತ್ಯಕ್ಷವಾಗುವುದಾತನ ಮಹಿಮಾಪ್ರಭಾವವು, ಅಲ್ಲಿನ ಜನನಾಯಕರ ಸಮ್ಮುಖದೊಳು.


ನನ್ನೊಡನೆ ಇದ್ದವರಿಗೆ ಬೆಳಕೇನೋ ಕಾಣಿಸಿತು. ಆದರೆ ನನ್ನೊಡನೆ ಮಾತಾಡುತ್ತಿದ್ದ ವಾಣಿ ಅವರಿಗೆ ಕೇಳಿಸಲಿಲ್ಲ.


“ಈ ಉದ್ದೇಶದಿಂದಲೇ ಒಮ್ಮೆ ಮುಖ್ಯಯಾಜಕರಿಂದ ಅಧಿಕಾರವನ್ನು ಹಾಗೂ ಆಯೋಗವನ್ನು ಪಡೆದು, ದಮಸ್ಕಸಿಗೆ ಹೊರಟೆ.


ನಾವೆಲ್ಲರೂ ನೆಲಕ್ಕೆ ಉರುಳಿದೆವು. ಆಗ, ‘ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ? ಮುಳ್ಳುಗೋಲಿನ ಮೊನೆಯನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ?’ ಎಂಬ ವಾಣಿ ಹಿಬ್ರು ಭಾಷೆಯಲ್ಲಿ ನನಗೆ ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು