Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:22 - ಕನ್ನಡ ಸತ್ಯವೇದವು C.L. Bible (BSI)

22 ಆದರೆ, ಇಂದಿನವರೆಗೂ ದೇವರು ನನಗೆ ನೆರವಾಗುತ್ತಾ ಬಂದಿದ್ದಾರೆ. ಎಂದೇ ದೊಡ್ಡವರು ಚಿಕ್ಕವರೆನ್ನದೆ, ಎಲ್ಲರಿಗೂ ಕ್ರಿಸ್ತಯೇಸುವಿನ ಪರವಾಗಿ ಸಾಕ್ಷಿನೀಡುತ್ತಾ ನಿಮ್ಮ ಮುಂದೆ ನಿಂತಿರುತ್ತೇನೆ. ನಾನು ಹೇಳುತ್ತಿರುವುದು, ಪ್ರವಾದಿಗಳು ಮತ್ತು ಮೋಶೆಯು ಮುಂದೆ ಏನು ಸಂಭವಿಸುವುದೆಂದು ಹೇಳಿದ್ದರೋ, ಅದನ್ನೇ ಹೊರತು ಮತ್ತೇನನ್ನೂ ನಾನು ಹೇಳುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಆಗುವವೆಂದು ತಿಳಿಸಿದ ಸಂಗತಿಗಳನ್ನೇ ಹೊರತು ಇನ್ನೇನೂ ಹೇಳುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ದೇವರು ನನಗೆ ಸಹಾಯಮಾಡಿದನು. ಆತನು ಇಂದಿನವರೆಗೂ ನನಗೆ ಸಹಾಯಮಾಡುತ್ತಿದ್ದಾನೆ. ಆದ್ದರಿಂದಲೇ ಇಂದು ಇಲ್ಲಿ ನಿಂತುಕೊಂಡಿದ್ದೇನೆ ಮತ್ತು ನಾನು ಕಂಡ ಸಂಗತಿಗಳ ಬಗ್ಗೆ ಜನರಿಗೆಲ್ಲಾ ಸಾಕ್ಷಿ ಹೇಳುತ್ತಿದ್ದೇನೆ. ಆದರೆ ನಾನು ಯಾವ ಹೊಸದನ್ನೂ ಹೇಳದೆ, ಮೋಶೆ ಮತ್ತು ಪ್ರವಾದಿಗಳು ಮುಂದೆ ನೆರವೇರುತ್ತವೆ ಎಂದು ಹೇಳಿದ ಸಂಗತಿಗಳನ್ನೇ ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತ್ಯಾ ದಿಸ್ಸಾತ್ನಿ ದೆವಾನ್ ಮಾಕಾ ಮಜತ್ ಕರ್‍ಲ್ಯಾನ್. ತೊ ಮಾಕಾ ಆಜ್ ಪತರ್ ಮಜತ್ ಕರುನ್ಗೆತ್ ಹಾಯ್, ತೆಚಾಸಾಟ್ನಿ ಮಿಯಾ ಆಜ್ ಹಿತ್ತೆ ಇಬೆ ಹಾವ್, ಅನಿ ಮಿಯಾ ಬಗಟಲ್ಲ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಸಾಂಗಿನಸ್ತಾನಾ, ಮೊಯ್ಜೆಚ್ಯಾ ಅನಿ ಪ್ರವಾದಿಂಚ್ಯಾ ಇದ್ರಾಕ್ ಖರೆ ಕರ್‍ತಾ ಮನುನ್ ಸಾಂಗಲ್ಲಿ ಸಂಗ್ತಿಯಾ ಸಗ್ಳ್ಯಿ ಸಾಂಗುಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:22
42 ತಿಳಿವುಗಳ ಹೋಲಿಕೆ  

ಇಷ್ಟನ್ನು ಮಾತ್ರ ನಾನು ಒಪ್ಪಿಕೊಳ್ಳುತ್ತೇನೆ: ಇವರು ಕುಪ್ರಸಿದ್ಧವೆಂದು ನಿಂದಿಸುವ ಮಾರ್ಗವನ್ನು ಅನುಸರಿಸುವವನು ನಾನು. ಆ ಮಾರ್ಗದ ಪ್ರಕಾರ ನಮ್ಮ ಪೂರ್ವಜರ ದೇವರನ್ನು ಆರಾಧಿಸುತ್ತೇನೆ. ಧರ್ಮಶಾಸ್ತ್ರದಲ್ಲೂ ಪ್ರವಾದಿಗಳ ಗ್ರಂಥದಲ್ಲೂ ಬರೆದಿರುವುದನ್ನೆಲ್ಲ ನಂಬುತ್ತೇನೆ.


ಮೋಶೆಯಲ್ಲಿ ನಿಮಗೆ ವಿಶ್ವಾಸ ಇದ್ದಿದ್ದರೆ ನನ್ನಲ್ಲಿ ವಿಶ್ವಾಸ ಇಡುತ್ತಿದ್ದಿರಿ. ಏಕೆಂದರೆ, ಆತನು ಬರೆದುದು ನನ್ನನ್ನು ಕುರಿತೇ.


ಎಲ್ಲಾ ಪ್ರವಾದಿಗಳು ಅವರನ್ನು ಕುರಿತೇ ಸಾಕ್ಷಿ ನೀಡಿದ್ದಾರೆ; ಅವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನೂ ಅವರ ನಾಮದ ಶಕ್ತಿಯಿಂದ ಪಾಪಕ್ಷಮೆಯನ್ನು ಪಡೆಯುವನೆಂದು ಪ್ರವಾದನೆಮಾಡಿದ್ದಾರೆ.”


ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.


ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು.


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಈಗಲಾದರೋ ಧರ್ಮಶಾಸ್ತ್ರದ ನೆರವಿಲ್ಲದೆಯೇ ದೇವರಿಂದ ದೊರಕುವ ಸತ್ಸಂಬಂಧವು ಪ್ರಕಟವಾಗಿದೆ. ಇದಕ್ಕೆ ಧರ್ಮಶಾಸ್ತ್ರವೂ ಪ್ರವಾದನಾಗ್ರಂಥವೂ ಸಾಕ್ಷಿಯಾಗಿವೆ.


ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಸರ್ವೇಶ್ವರ ಇಲ್ಲಿಯವರೆಗೆ ನಮಗೆ ಸಹಾಯ ಮಾಡಿದರು,” ಎಂದು ಹೇಳಿ ಅದಕ್ಕೆ, ‘ಎಬನೆಜೆರ್’ ಎಂದು ಹೆಸರಿಟ್ಟನು.


ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.


ಯೆಹೂದ್ಯರಿಂದಲೂ ಅನ್ಯಜನರಿಂದಲೂ ನಾನು ನಿನ್ನನ್ನು ಕಾಪಾಡುತ್ತೇನೆ. ಇವರ ಬಳಿಗೇ ನಾನು ನಿನ್ನನ್ನು ಕಳುಹಿಸುತ್ತಿದ್ದೇನೆ.


ನಮ್ಮ ಪೂರ್ವಜರಿಗೆ ದೇವರು ಮಾಡಿದ ವಾಗ್ದಾನದಲ್ಲಿ ನಂಬಿಕೆಯಿಟ್ಟುದಕ್ಕಾಗಿಯೇ ನಾನು ಇಂದು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ.


ಪವಿತ್ರಗ್ರಂಥದಿಂದಲೇ ನಿತ್ಯಜೀವ ಲಭಿಸುವುದೆಂದು ಭಾವಿಸಿ, ನೀವು ಅದನ್ನು ಪರಿಶೀಲಿಸಿ ನೋಡುತ್ತೀರಿ. ಆ ಗ್ರಂಥವು ಸಹ ನನ್ನ ಪರವಾಗಿ ಸಾಕ್ಷಿಹೇಳುತ್ತದೆ.


ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು.


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ಅನಂತರ, “ಮೊದಲೇ ಬರೆದಿರುವ ಪ್ರಕಾರ ಕ್ರಿಸ್ತನು ಯಾತನೆಯನ್ನು ಅನುಭವಿಸಿ ಸತ್ತು ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿತ್ತು;


ನಮಗುದ್ಧಾರ ಪ್ರಭುವಿನ ನಾಮದಲಿ I ಭೂಮ್ಯಾಕಾಶವನು ಸೃಜಿಸಿದಾತನಲಿ II


ಶತ್ರುಗಳೆಮ್ಮ ತಲೆಮೇಲೆ ರಥವನೋಡಗೊಳಿಸಿದೆ I ಅಗ್ನಿಯನೂ ಜಲವನೂ ದಾಟುವಂತೆ ಮಾಡಿದೆ I ಕೊನೆಗೆ ಸಮೃದ್ಧ ನಾಡಿಗೆಮ್ಮನು ಸೇರಿಸಿದೆ II


ನನ್ನ ಶತ್ರುಗಳಿಗೆ ವಿಧಿಸುವನಾದೇವ ಪ್ರತಿದಂಡನೆ I ಜನಾಂಗಗಳನು ಅಧೀನಪಡಿಸುವನಾತ ನನಗೆ II


ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ನಮ್ಮ ದೇವರ ಕೃಪಾಹಸ್ತ ನಮ್ಮನ್ನು ಪಾಲಿಸುತ್ತಾ ಇತ್ತು. ಶತ್ರುಗಳ ಹಾಗು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ಅವರು ನಮ್ಮನ್ನು ಪಾರುಮಾಡಿದರು.


ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.


ಕೆರಳಿದವು ವಿಶ್ವ ರಾಷ್ಟ್ರಗಳು ಎರಗಿತು ನಿನ್ನ ಪ್ರಕೋಪವು ಸಮೀಪಿಸಿತು ಮೃತರ ನ್ಯಾಯತೀರ್ಪಿನ ದಿನವು ಬಂದಿದೆ ಸಮಯ ಸನ್ಮಾನಿಸಲು ನಿನ್ನ ದಾಸರನು, ಪ್ರವಾದಿಗಳನು, ದೇವಪ್ರಜೆಗಳನು ನಿನ್ನಲ್ಲಿ ಭಯಭಕುತಿಯುಳ್ಳ ಹಿರಿಯ ಕಿರಿಯರನು. ಇದಿಗೋ ಬಂದಿದೆ ಗಳಿಗೆಯು ಲೋಕನಾಶಕರನ್ನು ವಿನಾಶಗೊಳಿಸಲು", ಎಂದು ಹಾಡಿದರು.


ನಾನು ಅನುಭವಿಸಿದ ಹಿಂಸೆನೋವುಗಳ ಮತ್ತು ಕಷ್ಟದುಃಖಗಳ ಕುರಿತು ಕೇಳಿರುವೆ. ಅಂತಿಯೋಕ್ಯ, ಇಕೋನಿಯ ಮತ್ತು ಲುಸ್ತ್ರ ಪಟ್ಟಣಗಳಲ್ಲಿ ನಾನು ಎಂಥ ಕ್ರೂರವಾದ ಹಿಂಸೆ ಅನುಭವಿಸಿದೆನೆಂಬುದು ನಿನಗೆ ತಿಳಿಯದ ವಿಷಯವೇನೂ ಅಲ್ಲ. ಆದರೆ ಪ್ರಭು ನನ್ನನ್ನು ಇವೆಲ್ಲವುಗಳಿಂದ ಪಾರುಮಾಡಿದರು.


ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತಾನೆ, ನಿಜ. ಆದರೆ ಅಯ್ಯೋ, ನರಪುತ್ರನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ! ಅವನು ಹುಟ್ಟದೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದರು.


ನನಗೆ ಐವರು ಸೋದರರಿದ್ದಾರೆ; ಅವರೂ ಈ ಯಾತನಾಸ್ಥಳಕ್ಕೆ ಬಾರದಂತೆ ಇವನು ಹೋಗಿ ಎಚ್ಚರಿಕೆ ಕೊಡಲಿ,’ ಎಂದು ಬೇಡಿಕೊಂಡ.


ಯೇಸುವನ್ನು ಕುರಿತು ಪವಿತ್ರಗ್ರಂಥ ಹೇಳುವುದೆಲ್ಲವೂ ನೆರವೇರಿದ ಮೇಲೆ ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಮಾಡಿದರು.


ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು.


ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ಥಾನ ಹೊಂದಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು