Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:23 - ಕನ್ನಡ ಸತ್ಯವೇದವು C.L. Bible (BSI)

23 ಅದೇನೆಂದರೆ, ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕು; ಸತ್ತು ಪುನರುತ್ಥಾನವಾದವರಲ್ಲಿ ಮೊತ್ತಮೊದಲಿಗನಾಗಿ ಯೆಹೂದ್ಯರಿಗೂ ಅನ್ಯಧರ್ಮೀಯರಿಗೂ ಪರಂಜ್ಯೋತಿಯನ್ನು ಪ್ರಕಟಿಸಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ಸಂಗತಿಗಳು ಏನಂದರೆ - ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಕ್ರಿಸ್ತನು ಬಾಧೆಪಟ್ಟು ಸತ್ತು, ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದುಬಂದು, ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಬೆಳಕನ್ನು ತರುತ್ತಾನೆಂದು ಮೋಶೆ ಮತ್ತು ಪ್ರವಾದಿಗಳು ಹೇಳಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಕ್ರಿಸ್ತ ಯೇಸು ಶ್ರಮೆಹೊಂದಿ, ಸತ್ತವರೊಳಗಿಂದ ಜೀವಂತರಾಗಿ ಮೊದಲು ಎದ್ದು ತಮ್ಮ ಜನರಿಗೂ ಯೆಹೂದ್ಯರಲ್ಲದವರಿಗೂ ಬೆಳಕಿನ ಸಂದೇಶವನ್ನು ತರುವರು ಎಂದು ಪ್ರವಾದಿಗಳು ಮತ್ತು ಮೋಶೆಯು ಹೇಳಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಕ್ರಿಸ್ತ್ ಮರುನ್ ಮರ್‍ನಾತ್ನಾ ಅದ್ದಿಚೊ ಹೊವ್ನ್ ಉಟುನ್ ಯೆವ್ನ್, ಜುದೆವಾಕ್ನಿ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಉಜ್ವೊಡ್ ಹಾನ್ತಾ ಮನುನ್ ಮೊಯ್ಜೆನ್ ಅನಿ ಪ್ರವಾದಿಯಾನಿ ಸಾಂಗ್ಲಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:23
29 ತಿಳಿವುಗಳ ಹೋಲಿಕೆ  

ಕ್ರಿಸ್ತನು ಇಂತಹ ಸಂಕಷ್ಟಗಳನ್ನು ಅನುಭವಿಸಿ ತನ್ನ ಮಹಿಮಾಸಿದ್ಧಿಯನ್ನು ಪಡೆಯಬೇಕಿತ್ತು ಅಲ್ಲವೇ?” ಎಂದರು.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.


ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು.


ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನಾಗಿಯೇ ಅದನ್ನು ಧಾರೆಯೆರೆಯುತ್ತೇನೆ. ಅದನ್ನು ಧಾರೆಯೆರೆಯುವ ಹಕ್ಕು ನನಗಿದೆ. ಅದನ್ನು ಪುನಃ ಪಡೆಯುವ ಹಕ್ಕು ಸಹ ನನಗಿದೆ. ಈ ಆಜ್ಞೆಯನ್ನು ನಾನು ನನ್ನ ಪಿತನಿಂದ ಪಡೆದಿದ್ದೇನೆ,” ಎಂದು ನುಡಿದರು.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಸತ್ತವರನ್ನು ದೇವರು ಪುನರುತ್ಥಾನಗೊಳಿಸುತ್ತಾರೆಂಬುದನ್ನು ನಂಬಲು ಅಸಾಧ್ಯವೆಂದು ಇಲ್ಲಿರುವ ನೀವು ತಾನೇ ಭಾವಿಸುವುದೇಕೆ?


“ಯೇಸುವನ್ನು ಸಮಾಧಿಯಲ್ಲೇ ಕೊಳೆತುಹೋಗಲು ಬಿಡದೆ ಮರಣದಿಂದ ಪುನರುತ್ಥಾನಗೊಳಿಸಿದ ದೇವರು ಹೀಗೆಂದಿದ್ದಾರೆ: ‘ನಾನು ದಾವೀದನಿಗೆ ವಾಗ್ದಾನಮಾಡಿದ ಪವಿತ್ರ ಹಾಗೂ ನಿಶ್ಚಿತ ವರಗಳನ್ನು ನಿಮಗೆ ಕೊಡುತ್ತೇನೆ.’


ಕ್ರಿಸ್ತಯೇಸು ಯಾತನೆಯನ್ನು ಅನುಭವಿಸಬೇಕೆಂದು ದೇವರು ಪ್ರವಾದಿಗಳೆಲ್ಲರ ಮುಖಾಂತರ ಆಗಲೇ ಮುಂತಿಳಿಸಿದ್ದರು. ಆ ಪ್ರವಾದನೆಗಳನ್ನು ಈಗ ನೆರವೇರಿಸಿದ್ದಾರೆ.


ಯೇಸು, ಅವಳಿಗೆ, “ಪುನರುತ್ಥಾನವೂ ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು.


ಅನಂತರ, “ಮೊದಲೇ ಬರೆದಿರುವ ಪ್ರಕಾರ ಕ್ರಿಸ್ತನು ಯಾತನೆಯನ್ನು ಅನುಭವಿಸಿ ಸತ್ತು ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿತ್ತು;


ಹೀಗೆ ಎದ್ದವರು ಸಮಾಧಿಗಳಿಂದ ಹೊರಗೆಬಂದು, ಯೇಸು ಪುನರುತ್ಥಾನ ಹೊಂದಿದ ಬಳಿಕ ಪವಿತ್ರನಗರಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.


ಸರ್ವೇಶ್ವರ ಸ್ವಾಮಿಯಾದ ನಾನು ಕೈ ಹಿಡಿದು ಕಾದಿರಿಸುವೆನು ನಿನ್ನನು, ಕರೆದಿಹೆನು ನಿನ್ನನ್ನು ಸದ್ಧರ್ಮ ಸಾಧನೆಗಾಗಿ ಇತ್ತಿರುವೆನು ನಿನ್ನನು ಜನರಿಗೆ ಒಡಂಬಡಿಕೆಯಾಗಿ ನೇಮಿಸಿರುವೆನು ನಿನ್ನನು ರಾಷ್ಟ್ರಗಳಿಗೆ ಬೆಳಕಾಗಿ.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತಾನೆ, ನಿಜ. ಆದರೆ ಅಯ್ಯೋ, ನರಪುತ್ರನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ! ಅವನು ಹುಟ್ಟದೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದರು.


ಸಮುವೇಲನೂ ಅವನ ನಂತರ ಬಂದ ಎಲ್ಲ ಪ್ರವಾದಿಗಳೂ ಈ ದಿನಗಳಲ್ಲಿ ನಡೆಯುತ್ತಿರುವುದನ್ನು ದೈವದತ್ತವಾಗಿ ಸಾರಿದ್ದಾರೆ.


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು