Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:24 - ಕನ್ನಡ ಸತ್ಯವೇದವು C.L. Bible (BSI)

24 ಈ ರೀತಿ ಪೌಲನು ತನ್ನ ಪರವಾಗಿ ವಾದಿಸುತ್ತಿದ್ದಾಗ ಫೆಸ್ತನು, “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಗಟ್ಟಿಯಾಗಿ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ - ಪೌಲನೇ, ನೀನು ಮರುಳಾಗಿದ್ದೀ; ನೀನು ಬಹಳವಾಗಿ ಮಾಡುವ ಶಾಸ್ತ್ರವಿಚಾರವು ನಿನ್ನನ್ನು ಮರುಳುಗೊಳಿಸುತ್ತದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಪೌಲನು ತನ್ನ ಪರವಾಗಿ ಈ ಸಂಗತಿಗಳನ್ನು ಹೇಳುತ್ತಿರಲು ಫೆಸ್ತನು, “ಪೌಲನೇ, ನೀನು ಹುಚ್ಚನಾಗಿರುವೆ! ಅಧಿಕ ಅಧ್ಯಯನ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ!” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಧ್ಯೆ ಬಾಯಿ ಹಾಕಿ, “ಪೌಲನೇ, ನಿನಗೆ ಹುಚ್ಚುಹಿಡಿದಿದೆ! ನಿನ್ನ ಅಧಿಕಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ,” ಎಂದು ಗಟ್ಟಿಯಾಗಿ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅಪ್ನಾಂಚ್ಯಾ ವೈನಾ ಹಿ ಸಂಗ್ತಿಯಾ ಪಾವ್ಲು ಸಾಂಗಿತ್ ರಾತಾನಾ ಫೆಸ್ತ್ ಮನ್ತಲೊ ಪಾವ್ಲು ತಿಯಾ ,ಪಿಸೊ ಹೊಲ್ಲೆಯ್! ತಿಯಾ ಶಿಕಲೆ ಲೈ ಹೊವ್ನ್ ತುಕಾ ಪಿಸೊ ಹೊಯ್ ಸಾರ್ಕೆ ಕರ್‍ಲಾ! ಮನುನ್ ಬೊಬ್ ಮಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:24
19 ತಿಳಿವುಗಳ ಹೋಲಿಕೆ  

ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.


ನಮಗೆ ಬುದ್ಧಿಭ್ರಮಣೆಯಾಗಿದೆಯೆಂದು ಭಾವಿಸುತ್ತೀರೋ? ಹಾಗಿದ್ದರೆ ಅದು ದೇವರ ಮಹಿಮೆಗಾಗಿ ನಾವು ಸ್ವಸ್ಥಬುದ್ಧಿಯುಳ್ಳವರೆಂದು ನೆನೆಸುತ್ತೀರೋ? ಹಾಗಿದ್ದರೆ ಅದು ನಿಮ್ಮ ಹಿತಕ್ಕಾಗಿ.


ಕ್ರಿಸ್ತಯೇಸುವಿನ ನಿಮಿತ್ತ ನಾವಂತೂ ಹುಚ್ಚರು, ನೀವಾದರೋ ಕ್ರಿಸ್ತಯೇಸುವಿನಲ್ಲಿ ಬುದ್ಧಿವಂತರು; ನಾವು ಬಲಹೀನರು, ನೀವು ಬಲಾಢ್ಯರು; ನಾವು ಅವಮಾನಿತರು, ನೀವು ಸನ್ಮಾನಿತರು!


:ಈತನಿಗೆ ಹುಚ್ಚು ಹಿಡಿದಿದೆ,” ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದ್ದರಿಂದ ಯೇಸುವಿನ ಬಂಧುಗಳು ಯೇಸುವನ್ನು ಹಿಡಿದುತರಲು ಹೊರಟರು.


ಅನೇಕ ಬಾರಿ ನಾನು ಅವರನ್ನು ಪ್ರಾರ್ಥನಾಮಂದಿರಗಳಲ್ಲೆಲ್ಲಾ ಬಾಧೆಪಡಿಸಿದೆ. ಹೀಗೆ, ವಿಶ್ವಾಸಭ್ರಷ್ಟರಾಗುವಂತೆ ಬಲಾತ್ಕರಿಸಿದೆ. ನನ್ನ ಕೋಪೋದ್ರೇಕಕ್ಕೆ ಎಲ್ಲೆ ಇರಲಿಲ್ಲ. ಹೊರನಾಡಿನ ಊರುಗಳಿಗೂ ಅವರನ್ನು ಬೆನ್ನಟ್ಟಿಹೋಗಿ ಹಿಂಸೆಪಡಿಸಿದೆ.


‘ಸರ್ವೇಶ್ವರ ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ದೇವಾಲಯದ ಯಾಜಕನನ್ನಾಗಿ ನೇಮಿಸಿದ್ದಾರೆ. ಯಾವನಾದರು ಮೈದುಂಬಿ ಪ್ರವಾದಿಯಾಗಿ ನಟಿಸಿದ್ದೇ ಆದರೆ ಅವನನ್ನು ಕೊಳಕ್ಕೆಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ನಿನಗೆ ವಹಿಸಿದ್ದಾರೆ.


ಯೇಹುವು ಮರಳಿ ತನ್ನ ಒಡೆಯನ ಸೇವಕರ ಹತ್ತಿರ ಬಂದನು. ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಅವನು, “ಆ ಮನುಷ್ಯ ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೆ ಗೊತ್ತಲ್ಲವೆ?” ಎಂದು ಉತ್ತರಕೊಟ್ಟನು.


ಸತ್ತವರ ಪುನರುತ್ಥಾನದ ಬಗ್ಗೆ ಪೌಲನು ಮಾತಾಡಿದಾಗ ಕೆಲವರು ಪರಿಹಾಸ್ಯಮಾಡಿದರು. ಉಳಿದವರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ,” ಎಂದರು.


ಇಗೋ, ದಂಡನೆಯ ದಿನಗಳು ಸಮೀಪಿಸಿವೆ; ಮುಯ್ಯಿ ತೀರಿಸುವ ದಿನಗಳು ಬಂದಿವೆ. ಇಸ್ರಯೇಲರಿಗೆ ಇದು ತಿಳಿದಿರಲಿ. “ಪ್ರವಾದಿಯು ಹುಚ್ಚನು; ದೇವರಾತ್ಮಪ್ರೇರಿತನು ಮೂರ್ಖನು,” ಎಂದು ಹೇಳಿಕೊಳ್ಳುತ್ತೀರಿ. ಅತ್ಯಧಿಕವಾಗಿರುವ ನಿಮ್ಮ ಅಧರ್ಮ, ಮಿತಿಮೀರಿರುವ ನಿಮ್ಮ ದ್ವೇಷ ಇದಕ್ಕೆ ಕಾರಣ.


ಆದರೆ ನೀತಿನಿಯಮ, ಇಂದ್ರಿಯನಿಗ್ರಹ, ಬರಲಿರುವ ದೈವತೀರ್ಪಿನ ದಿನ ಇವುಗಳನ್ನು ಪ್ರಸ್ತಾಪಿಸಿದಾಗ ಫೆಲಿಕ್ಸನು ದಿಗಿಲುಗೊಂಡನು. “ಸದ್ಯಕ್ಕೆ, ನೀನು ಹೋಗಬಹುದು; ಸಮಯ ಒದಗಿದಾಗ ನಿನ್ನನ್ನು ಕರೆಯಿಸುತ್ತೇನೆ,” ಎಂದನು


“ಭ್ರಾತೃಗಳೇ, ಪಿತೃಗಳೇ, ಈಗ ನಾನು ಮಾಡಹೋಗುವ ನನ್ನ ಸಮರ್ಥನೆಗೆ ಕಿವಿಗೊಡಿ.”


“ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;


ಆಗ ಯೆಹೂದ್ಯರಲ್ಲಿ ಕೆಲವರು ಯೇಸು ಸ್ವಾಮಿಗೆ, “ನೀನು ಸಮಾರಿಯದವನು. ದೆವ್ವಹಿಡಿದವನು, ಎಂದು ನಾವು ಹೇಳಿದ್ದು ಸರಿಯಾಗಿದೆ ಅಲ್ಲವೆ?” ಎಂದರು.


ಅದನ್ನು ಕೇಳಿ ಯೆಹೂದ್ಯ ಅಧಿಕಾರಿಗಳು ಬೆರಗಾದರು. “ಕಲಿಯದಿದ್ದರೂ ಈ ಮನುಷ್ಯನಿಗೆ ಇಷ್ಟೆಲ್ಲಾ ಪಾಂಡಿತ್ಯ ಎಲ್ಲಿಂದ ಬಂದಿತು?” ಎಂದು ವಿಚಾರಿಸತೊಡಗಿದರು.


ಹೀಗೆ ಎರಡು ವರ್ಷಗಳು ಕಳೆದವು. ಪೊರ್ಸಿಯ ಫೆಸ್ತ ಎಂಬವನು ಫೆಲಿಕ್ಸನ ಸ್ಥಾನದಲ್ಲಿ ರಾಜ್ಯಪಾಲನಾಗಿ ಬಂದನು. ಫೆಲಿಕ್ಸನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಿಕೊಳ್ಳುವ ಸಲುವಾಗಿ ಪೌಲನನ್ನು ಸೆರೆಮನೆಯಲ್ಲೇ ಬಿಟ್ಟುಹೋದನು.


ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು