Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:29 - ಕನ್ನಡ ಸತ್ಯವೇದವು C.L. Bible (BSI)

29 ಪೌಲನು ಪ್ರತ್ಯುತ್ತರವಾಗಿ, “ಅಲ್ಪಕಾಲವಾಗಲಿ, ದೀರ್ಘಕಾಲವಾಗಲಿ, ನೀವು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಎಲ್ಲರೂ ನನ್ನಂತೆಯೇ ಆಗಬೇಕೆಂಬುದೇ ದೇವರಲ್ಲಿ ನಾನು ಮಾಡುವ ಪ್ರಾರ್ಥನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಪೌಲನು; “ಅಲ್ಪಪ್ರಯತ್ನದಿಂದಾಗಲಿ, ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ, ಈ ಬೇಡಿಗಳ ಹೊರತು, ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಪೌಲನು - ಅಲ್ಪಪ್ರಯತ್ನದಿಂದಾಗಲಿ ಅಧಿಕಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ ಈ ಬೇಡಿಗಳ ಹೊರತು ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಪೌಲನು, “ಸುಲಭವೋ ಕಷ್ಟವೋ ಅದು ನನಗೆ ಮುಖ್ಯವಲ್ಲ. ನೀನು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಪ್ರತಿಯೊಬ್ಬರೂ ರಕ್ಷಣೆಹೊಂದಿ ನನ್ನಂತೆಯೇ ಆಗಬೇಕೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಪೌಲನು, “ಅಲ್ಪ ಕಾಲದಲ್ಲಾಗಲಿ, ದೀರ್ಘಕಾಲದಲ್ಲಾಗಲಿ ನೀವಷ್ಟೇ ಅಲ್ಲ, ನನ್ನ ಮಾತುಗಳನ್ನು ಇಂದು ಆಲಿಸುತ್ತಿರುವ ಪ್ರತಿಯೊಬ್ಬರೂ ಈ ಬೇಡಿಗಳನ್ನು ಹೊರತು ನನ್ನಂತೆಯೇ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತನ್ನಾ ಪಾವ್ಲುನ್, “ಸರಳ್ ಕಿ ಕಸ್ಟ್ ಕಿ ತೆ ಮಾಕಾ ಮುಖ್ಯ್ ನ್ಹಯ್ ತಿಯಾ ಎಕುಚ್ ನ್ಹಯ್, ಆಜ್ ಮಿಯಾ ಸಾಂಗಲ್ಲೆ ಆಯ್ಕುನ್ ಘೆಟಲ್ಲೊ ಹರಿಎಕ್ಲೊ ರಾಕನ್ ಹೊವ್ಚೆ ಅನಿ ಮಾಜ್ಯಾ ಸಾರ್ಕೆ ಹೊವ್ಚೆ ಮನುನ್ ಮಿಯಾ ದೆವಾಚ್ಯಾ ಜಗ್ಗೊಳ್ ಮಾಗ್ನಿ ಕರ್‍ತಾ, ಹೊಲ್ಯಾರ್ ಹ್ಯೊ ಅನ್ಮಾನ್ ತುಕಾ ನಕ್ಕೊ!” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:29
18 ತಿಳಿವುಗಳ ಹೋಲಿಕೆ  

ಶುಭಸಂದೇಶದ ನಿಮಿತ್ತ ನಾನು ಸೆರೆಯಾಳಾಗಿದ್ದರೂ ಪ್ರಭುವಿನ ರಾಯಭಾರಿಯಾಗಿದ್ದೇನೆ. ಎಂತಲೇ, ಈ ಶುಭಸಂದೇಶವನ್ನು ಧೈರ್ಯದಿಂದ ಸೂಕ್ತ ರೀತಿಯಲ್ಲಿ ಸಾರಲಾಗುವಂತೆ ನನಗಾಗಿ ಪ್ರಾರ್ಥಿಸಿರಿ.


ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ಸಹೋದರರೇ, ನನ್ನ ಸ್ವಜನರಾದ ಇಸ್ರಯೇಲರು ಜೀವೋದ್ಧಾರ ಹೊಂದಬೇಕೆಂದೇ ನನ್ನ ಹಾರ್ದಿಕ ಹಂಬಲ. ನಾನು ದೇವರಲ್ಲಿ ಮಾಡುವ ಪ್ರಾರ್ಥನೆಯೂ ಇದೇ.


ಸೈನ್ಯಾಧಿಪತಿ ಹತ್ತಿರಕ್ಕೆ ಬಂದು, ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟುವಂತೆ ಆಜ್ಞಾಪಿಸಿದನು. “ಇವನು ಯಾರು? ಇವನು ಮಾಡಿದ್ದೇನು?” ಎಂದು ವಿಚಾರಿಸಿದನು.


ನನ್ನನ್ನು ನಾನೇ ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ.


ಎಲ್ಲರೂ ನಾನಿರುವಂತೆ ಇರಬೇಕೆಂಬುದು ನನ್ನ ಅಭಿಲಾಷೆ. ಆದರೆ ದೇವರು ಪ್ರತಿಯೊಬ್ಬನಿಗೂ ವಿಶಿಷ್ಟ ವರವನ್ನು ದಯಪಾಲಿಸಿದ್ದಾರೆ. ಒಬ್ಬನಿಗೆ ಒಂದು ವರವಾದರೆ, ಮತ್ತೊಬ್ಬನಿಗೆ ಇನ್ನೊಂದು ವರವುಂಟು.


ಈಗಾಗಲೇ ನೀವು ಸಂತೃಪ್ತರಾಗಿಬಿಟ್ಟಿರೋ? ಇಷ್ಟಕ್ಕೇ ಶ್ರೀಮಂತರಾಗಿಬಿಟ್ಟಿರೋ? ನಮ್ಮನ್ನು ಬಿಟ್ಟು ನೀವು ಸಿಂಹಾಸನವೇರಿಬಿಟ್ಟಿರೋ? ನೀವು ನಿಜವಾಗಿಯೂ ರಾಜರಾಗಿದ್ದರೆ ಚೆನ್ನಾಗಿರುತ್ತಿತ್ತು! ಆಗ ನಾವೂ ನಿಮ್ಮ ಜೊತೆ ರಾಜ್ಯ ಆಳಬಹುದಿತ್ತು!


ಅವರು ಹಲವು ದಿನಗಳವರೆಗೆ ಅಲ್ಲೇ ತಂಗಿದ್ದರು. ಫೆಸ್ತನು ಪೌಲನ ವಿಷಯವನ್ನು ಅವನ ಮುಂದೆ ಪ್ರಸ್ತಾಪಿಸುತ್ತಾ, “ಫೆಲಿಕ್ಸನು ಕೈದಿಯಾಗಿ ಬಿಟ್ಟುಹೋದ ಒಬ್ಬ ವ್ಯಕ್ತಿ ಇಲ್ಲಿದ್ದಾನೆ.


ಹೆರೋದನು ಪೇತ್ರನನ್ನು ಜನರ ಮುಂದೆ ತರಬೇಕೆಂದಿದ್ದ ಹಿಂದಿನ ರಾತ್ರಿ ಅದು. ಪೇತ್ರನು ಇಬ್ಬರು ಸೈನಿಕರ ನಡುವೆ ನಿದ್ರಿಸುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಪಹರೆಯವರು ಸೆರೆಮನೆಯ ದ್ವಾರದಲ್ಲಿ ಕಾವಲಿದ್ದರು.


ನನಗೆ ಮಾನವ ಸಾಕ್ಷಿ ಬೇಕೆಂದು ಅಲ್ಲ; ಆದರೆ ಇದನ್ನೆಲ್ಲಾ ನಿಮ್ಮ ಉದ್ಧಾರಕ್ಕೆಂದು ನಾನು ಹೇಳುತ್ತಿದ್ದೇನೆ.


ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ.


ಒಂದು ದಿನ ಆಕೆ ತನ್ನ ಯಜಮಾನಿಗೆ, “ನಮ್ಮ ದಣಿಯವರು ಸಮಾರಿಯದಲ್ಲಿರುವ ಪ್ರವಾದಿಯ ಹತ್ತಿರ ಇದ್ದಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಅವರು ಇವರನ್ನು ಈ ಚರ್ಮರೋಗದಿಂದ ಗುಣಪಡಿಸುತ್ತಿದ್ದರು,” ಎಂದು ಹೇಳಿದಳು.


ಇದನ್ನು ಕೇಳಿದ್ದೇ ಅರಸನ ಎದೆಯೊಡೆಯಿತು. ಅವನು, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು! ಅಬ್ಷಾಲೋಮನೇ, ನನ್ನ ಮಗನೇ ಮಗನೇ,” ಎಂದು ಕೂಗಿ ಗೋಳಿಡುತ್ತಾ ಹೆಬ್ಬಾಗಿಲಿನ ಮೇಲಿದ್ದ ಕೋಣೆಗೆ ಹೋದನು.


ಅದಕ್ಕೆ ಮೋಶೆ, “ನನ್ನ ಗೌರವ ಕಾಪಾಡಲು ನಿನಗೇಕೆ ಅಸೂಯೆ? ಸರ್ವೇಶ್ವರನ ಅನುಗ್ರಹದಿಂದ ಅವರ ಜನರೆಲ್ಲರೂ ಆತ್ಮಶಕ್ತಿಯನ್ನು ಹೊಂದಿ ಪ್ರವಾದಿಸುವವರಾದರೆ ಎಷ್ಟೋ ಒಳ್ಳೆಯದು” ಎಂದನು.


“ಈ ಸಮಾಜವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ಈ ಮರುಭೂಮಿಗೆ ನಮ್ಮನ್ನು ಕರೆದು ತಂದಿದ್ದೀರಿ; ನಾವು ಈಜಿಪ್ಟಿನಲ್ಲಿದ್ದಾಗ ಸರ್ವೇಶ್ವರನ ಕೈಯಿಂದಲೆ ಸತ್ತಿದ್ದರೆ ಎಷ್ಟೊ ಲೇಸಾಗಿತ್ತು. ಆಗ ಮಾಂಸ ಪಾತ್ರೆಗಳ ಪಕ್ಕದಲ್ಲೇ ಕುಳಿತು ಹೊಟ್ಟೇ ತುಂಬ ಊಟಮಾಡುತ್ತಿದ್ದೆವು,” ಎಂದು ಗುಣಗಿದರು.


ಇದನ್ನು ಕೇಳಿದ ಯೆರೆಮೀಯನು, “ಇಲ್ಲ, ತಮ್ಮನ್ನು ಅವರ ಕೈಗೆ ಒಪ್ಪಿಸುವುದಿಲ್ಲ. ದಯವಿಟ್ಟು ನಾನು ತಮಗೆ ಹೇಳಿರುವ ಸರ್ವೇಶ್ವರನ ವಾಕ್ಯದಂತೆ ನಡೆದುಕೊಳ್ಳಿ. ನಡೆದುಕೊಂಡರೆ ತಮ್ಮ ಪ್ರಾಣ ಉಳಿಯುವುದು, ಒಳ್ಳೆಯದಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು