Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:9 - ಕನ್ನಡ ಸತ್ಯವೇದವು C.L. Bible (BSI)

9 “ನನ್ನ ವಿಷಯದಲ್ಲಿ ಹೇಳುವುದಾದರೆ, ಒಮ್ಮೆ ನಾನು ಯೇಸುವಿನ ನಾಮವನ್ನೇ ನಿರ್ಮೂಲಮಾಡಬೇಕೆಂದಿದ್ದೆ; ಅದಕ್ಕೆ ಅಗತ್ಯವಾದುದನ್ನೆಲ್ಲ ಮಾಡುವುದು ನನ್ನ ಕರ್ತವ್ಯ ಎಂದು ಎಣಿಸಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡಿಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನಾನು ಫರಿಸಾಯನಾಗಿದ್ದಾಗ ನಜರೇತಿನ ಯೇಸುವಿನ ಹೆಸರಿಗೆ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಬೇಕೆಂದು ಆಲೋಚಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನಜರೇತಿನ ಯೇಸುವಿನ ಹೆಸರನ್ನು ವಿರೋಧಿಸಲು ಅನೇಕ ಸಂಗತಿಗಳನ್ನು ಮಾಡಬೇಕೆಂದು ನಾನು ಸಹ ಒಮ್ಮೆ ಯೋಚಿಸಿಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಿಯಾ ನಜರೆತಾಚ್ಯಾ ಜೆಜುಚ್ಯಾ ನಾವಾನ್ ವಿರೊಧ್ ಹೊವ್ನ್ ಲೈ ಸಗ್ಳ್ಯಿ ಕಾಮಾ ಕರುಚೆ ಮನುನ್ ಯೆವಜಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:9
16 ತಿಳಿವುಗಳ ಹೋಲಿಕೆ  

ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆತೋರಿದರು.


ನಾನು ‘ಪ್ರಭೂ, ನೀವಾರು?’ ಎಂದು ಕೇಳಿದೆ. ‘ನೀನು ಹಿಂಸೆಪಡಿಸುತ್ತಿರುವ ನಜರೇತಿನ ಯೇಸುವೇ ನಾನು,’ ಎಂದರು ಅವರು.


ಧರ್ಮಶಾಸ್ತ್ರದ ದೃಷ್ಟಿಯಲ್ಲಿ ನಿಷ್ಠಾವಂತ ಫರಿಸಾಯನು; ಮತಾಶಕ್ತಿಯ ಹಿತದೃಷ್ಟಿಯಿಂದ ಧರ್ಮಸಭೆಯ ಹಿಂಸಕನು; ಧರ್ಮಶಾಸ್ತ್ರ ವಿಧಿನಿಯಮಗಳ ಪಾಲನೆಯಲ್ಲಿ ನಿಂದಾರಹಿತನು.


ದೇವರ ವಿಷಯದಲ್ಲಿ ಅವರು ಬಹಳ ನಿಷ್ಠಾವಂತರು ಎಂದು ಒತ್ತಿಹೇಳಬಲ್ಲೆ. ಆದರೆ ಆ ನಿಷ್ಠೆ ನೈಜಜ್ಞಾನವನ್ನು ಆಧರಿಸಿಲ್ಲ.


ಈ ವ್ಯಕ್ತಿ ಒಂದು ದೊಡ್ಡ ಪೀಡೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಕಲಹವೆಬ್ಬಿಸುತ್ತಾನೆ. ಅಲ್ಲದೆ, ‘ನಜರೇನ’ ಎಂಬ ಕುಪ್ರಸಿದ್ಧ ಪಂಥದ ಒಬ್ಬ ಮುಖಂಡನೂ ಆಗಿದ್ದಾನೆ.


ಅದಕ್ಕೆ ಅವನು ಪ್ರತ್ಯುತ್ತರವಾಗಿ, “ನೀವು ಮಾಡುತ್ತಿರುವುದಾದರೂ ಏನು? ನಿಮ್ಮ ಅಳುವಿನಿಂದ ನನ್ನ ಹೃದಯವನ್ನು ಸೀಳುತ್ತಿರುವಿರಾ? ನಾನು ಜೆರುಸಲೇಮಿನಲ್ಲಿ ಬಂಧಿತನಾಗುವುದಕ್ಕೆ ಮಾತ್ರವಲ್ಲ, ಪ್ರಭು ಯೇಸುವಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಅವನು ನನ್ನ ನಾಮದ ನಿಮಿತ್ತ ಎಷ್ಟು ಕಷ್ಟಕಾರ್ಪಣ್ಯಗಳನ್ನು ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುತ್ತೇನೆ,” ಎಂದರು.


ಆದರೆ ಪೇತ್ರನು, “ಹಣಕಾಸೇನೂ ನನ್ನಲ್ಲಿಲ್ಲ, ನನ್ನಲ್ಲಿ ಇರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಆಜ್ಞಾಪಿಸುತ್ತೇನೆ, ಎದ್ದು ನಡೆ” ಎನ್ನುತ್ತಾ.


ನೀವು ನನ್ನವರಾದುದರಿಂದ ಅವರು ನಿಮ್ಮನ್ನು ಹೀಗೆ ಕಾಣುವರು. ಏಕೆಂದರೆ ನನ್ನನ್ನು ಕಳುಹಿಸಿದಾತನನ್ನು ಅವರು ಅರಿಯರು.


“ಸಹೋದರರೇ, ನೀವೂ ನಿಮ್ಮ ಅಧಿಕಾರಿಗಳೂ ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನಾನು ಬಲ್ಲೆ.


ಇತ್ತ ಸೌಲನು ಯೇಸುಸ್ವಾಮಿಯ ಅನುಯಾಯಿಗಳಿಗೆ ಬೆದರಿಕೆ ಹಾಕುತ್ತಾ ಅವರನ್ನು ಸಂಹರಿಸಬೇಕೆಂದಿದ್ದನು.


“ನಾನೊಬ್ಬ ಯೆಹೂದ್ಯನು, ಸಿಲಿಸಿಯದ ತಾರ್ಸ ಎಂಬಲ್ಲಿ ಹುಟ್ಟಿದವನು. ಆದರೆ, ಇದೇ ಜೆರುಸಲೇಮಿನಲ್ಲಿ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪೂರ್ವಜರ ಧರ್ಮಶಾಸ್ತ್ರವನ್ನು ಕಟ್ಟುನಿಟ್ಟಾಗಿ ಕಲಿತವನು. ಇಲ್ಲಿ ಇಂದು ನೆರೆದಿರುವ ನೀವೆಲ್ಲರೂ ದೈವಾಭಿಮಾನಿಗಳಾಗಿರುವಂತೆಯೇ ನಾನು ದೈವಾಭಿಮಾನಿಯಾಗಿದ್ದೆ.


ಕ್ರಿಸ್ತಮಾರ್ಗವನ್ನು ಅನುಸರಿಸುವವರನ್ನು ಸ್ತ್ರೀ ಪುರುಷರೆನ್ನದೆ, ಬಂಧಿಸಿ ಅವರನ್ನು ಸೆರೆಮನೆಗೆ ತಳ್ಳಿದೆ. ಅವರನ್ನು ಮರಣಪರಿಯಂತರ ಪೀಡಿಸಿ ಹಿಂಸಿಸಿದೆ.


ಆ ಜನರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ; ಅವನು ಸಾಯಬೇಕು; ಏಕೆಂದರೆ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನು ಕಡಿದುಹಾಕಿದ್ದಾನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು