Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:24 - ಕನ್ನಡ ಸತ್ಯವೇದವು C.L. Bible (BSI)

24 ‘ಪೌಲನೇ, ಭಯಪಡಬೇಡ. ನೀನು ಚಕ್ರವರ್ತಿಯ ಸಮ್ಮುಖದಲ್ಲಿ ನಿಲ್ಲಲೇಬೇಕಾಗಿದೆ; ಇಗೋ, ನಿನ್ನ ಸಂಗಡ ಪ್ರಯಾಣಮಾಡುವ ಎಲ್ಲರ ಪ್ರಾಣಗಳನ್ನು ದೇವರು ನಿನ್ನ ನಿಮಿತ್ತ ಉಳಿಸಿದ್ದಾರೆ,’ ಎಂದು ಅಭಯವಿತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಪೌಲನೇ, ಭಯಪಡಬೇಡ, ನೀನು ಚಕ್ರವರ್ತಿಯ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣ ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು ನನ್ನ ಸಂಗಡ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದೇವರ ದೂತನು, ‘ಪೌಲನೇ, ಭಯಪಡಬೇಡ! ನೀನು ಸೀಸರನ ಮುಂದೆ ನಿಂತುಕೊಳ್ಳಬೇಕು. ನಿನ್ನೊಂದಿಗೆ ನೌಕಾಯಾನ ಮಾಡತ್ತಿರುವ ಎಲ್ಲಾ ಜನರ ಪ್ರಾಣಗಳನ್ನು ಉಳಿಸುವುದಾಗಿ ದೇವರು ನಿನಗೆ ವಾಗ್ದಾನವನ್ನು ಮಾಡಿದ್ದಾನೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ‘ಪೌಲನೇ, ಭಯಪಡಬೇಡ. ನೀನು ಕೈಸರನ ಮುಂದೆ ನಿಲ್ಲಬೇಕು. ಇಗೋ, ದೇವರು ನಿನ್ನೊಂದಿಗೆ ಪ್ರಯಾಣ ಮಾಡುತ್ತಿರುವವರ ಪ್ರಾಣಗಳನ್ನು ನಿನಗೆ ಉಳಿಸಿಕೊಟ್ಟಿದ್ದಾರೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ದೆವಾಚ್ಯಾ ದುತಾನ್ ಮಾಕಾ, ಪಾವ್ಲು, ಭಿಂವ್‌ನಕ್ಕೊ! ತಿಯಾ ಸಿಸರಾಚ್ಯಾ ಇದ್ರಾಕ್ ಇಬೆ ರ್‍ಹಾವ್ಕ್ ಪಾಜೆ ತುಜ್ಯಾ ವೈಲ್ಯಾ ದಯಾ ವೈನಾ ತುಜ್ಯಾ ವಾಂಗ್ಡಾ ಜಾಯ್ತ್ ಹೊತ್ತ್ಯಾ ಹರ್ ಎಕ್ಲ್ಯಾಚೊ ಜಿವ್ಬಿ ದೆವ್ ಹುರ್ವುತಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:24
35 ತಿಳಿವುಗಳ ಹೋಲಿಕೆ  

ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.


ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.


ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ ಲೋಟನು ವಾಸವಾಗಿದ್ದ ಊರುಗಳನ್ನೇನೋ ಹಾಳುಮಾಡಿದರು, ಆದರೆ ಅಬ್ರಹಾಮನನ್ನು ನೆನಪಿಗೆ ತಂದುಕೊಂಡು ಲೋಟನನ್ನು ತಪ್ಪಿಸಿ ಕಾಪಾಡಿದರು.


ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ


ಹಡಗಿನಲ್ಲಿ ನಾವು ಒಟ್ಟು ಇನ್ನೂರ ಎಪ್ಪತ್ತಾರು ಮಂದಿ ಇದ್ದೆವು.


ಆಗ ಎಲೀಷನು, “ಹೆದರಬೇಡ; ಅವರ ಕಡೆ ಇರುವವರಿಗಿಂತಲೂ ನಮ್ಮ ಕಡೆ ಇರುವವರು ಹೆಚ್ಚಾಗಿದ್ದಾರೆ,” ಎಂದು ಹೇಳಿ,


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ಮಿಕ್ಕವರು ಹಲಗೆಗಳ ಅಥವಾ ಹಡಗಿನ ತುಂಡುಗಳ ಸಹಾಯದಿಂದ ದಡಸೇರಬೇಕೆಂತಲೂ ಆಜ್ಞೆಮಾಡಿದನು. ಹೀಗೆ ಎಲ್ಲರೂ ಸುರಕ್ಷಿತವಾಗಿ ದಡವನ್ನು ಸೇರಿದರು.


ಹಾಗೇನಾದರೂ ಮಾಡಿ, ಮರಣದಂಡನೆಗೆ ಅರ್ಹನಾಗಿದ್ದರೆ, ಅದಕ್ಕೆ ಗುರಿಯಾಗಲು ಹಿಂಜರಿಯುವುದಿಲ್ಲ. ಆದರೆ ಅವರು ನನ್ನ ವಿರುದ್ಧ ತಂದಿರುವ ಆಪಾದನೆಗಳು ಜೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಚಕ್ರವರ್ತಿಗೇ ಅಪೀಲುಮಾಡಿಕೊಳ್ಳುತ್ತೇನೆ,” ಎಂದನು.


ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯದ ಮೂಲಕ ಜೆರುಸಲೇಮಿಗೆ ಹೋಗಲು ನಿರ್ಧರಿಸಿಕೊಂಡನು. ಅಲ್ಲಿಗೆ ಹೋದ ಮೇಲೆ ರೋಮ್ ನಗರವನ್ನು ಕೂಡ ನೋಡಬೇಕು ಎಂಬುದು ಅವನ ಉದ್ದೇಶ ಆಗಿತ್ತು.


ಅದಕ್ಕೆ ಯೇಸು, “ಹಗಲಿಗೆ ಹನ್ನೆರಡು ತಾಸು ಉಂಟಲ್ಲವೆ? ಹಗಲಿನಲ್ಲಿ ನಡೆಯುವವನು ಎಡವಿಬೀಳುವುದಿಲ್ಲ. ಏಕೆಂದರೆ ಈ ಲೋಕದ ಬೆಳಕು ಅವನಿಗೆ ಕಾಣಿಸುತ್ತದೆ.


ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಂದೆ ಎಳೆದೊಯ್ಯುವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.


ಸರ್ವೇಶ್ವರಸ್ವಾಮಿಯ ಕೃಪೆಯಿಂದ ಇಬ್ಬನಿಯೂ ತುಂತುರುಮಳೆಯೂ ಮಾನವನ ನೆರವನ್ನು ನಿರೀಕ್ಷಿಸದೆ, ಹುಲ್ಲನ್ನು ಸಮೃದ್ಧಿಗೊಳಿಸುತ್ತವೆ. ಅಂತೆಯೇ ಯಕೋಬನ ಅಳಿದುಳಿದ ವಂಶದವರು ಹಲವಾರು ಜನಾಂಗಗಳ ಮಧ್ಯೆ ನೆಲಸಿ, ಅವರ ಅಭ್ಯುದಯಕ್ಕೆ ಕಾರಣರಾಗುವರು.


ಆಗ ಎಲೀಯನು, “ಹೆದರಬೇಡ, ನೀನು ಹೇಳಿದಂತೆ ಮಾಡು; ಆದರೆ ಮೊದಲು ಅದರಿಂದ ನನಗೆ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ; ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.


ಆಗ ದೇವರು, “ನಾನೇ ದೇವರು, ನಿನ್ನ ತಂದೆ ಆರಾಧಿಸಿದ ದೇವರು, ನೀನು ಈಜಿಪ್ಟ್ ದೇಶಕ್ಕೆ ಹೋಗಲು ಅಂಜಬೇಡ; ಅಲ್ಲಿ ನಿನ್ನಿಂದ ಮಹಾಜನಾಂಗ ಉತ್ಪನ್ನವಾಗುವಂತೆ ಮಾಡುವೆನು;


ಸರ್ವೇಶ್ವರ ಜೋಸೆಫನೊಂದಿಗೆ ಇದ್ದರು. ಅವನು ಕೈಗೊಂಡ ಕೆಲಸವೆಲ್ಲ ಜಯವಾಗುವಂತೆ ಮಾಡುತ್ತಿದ್ದರು. ಈ ಕಾರಣ ಸೆರೆಮನೆಯ ಯಜಮಾನ ಅಲ್ಲಿಯ ಎಲ್ಲ ವಿಷಯದಲ್ಲೂ ನಿಶ್ಚಿಂತನಾಗಿದ್ದನು.


ಹೀಗೆ ತನ್ನ ಮನೆಮಂದಿರದ ಮೇಲೂ ಆಸ್ತಿಪಾಸ್ತಿಯ ಮೇಲೂ ಜೋಸೆಫನನ್ನೇ ಆಡಳಿತಗಾರನನ್ನಾಗಿ ನೇಮಿಸಿದ. ಜೋಸೆಫನ ಪ್ರಯುಕ್ತ ಸರ್ವೇಶ್ವರ ಆ ಈಜಿಪ್ಟಿನವನ ಮನೆತನವನ್ನು ಹರಸಿದರು. ಮನೆಯಲ್ಲೂ ಸರ್ವೇಶ್ವರ ಸ್ವಾಮಿಯ ಆಶೀರ್ವಾದವಿತ್ತು.


ಅದಕ್ಕೆ ಲಾಬಾನನು, “ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ತಂಗಿರು. ಸರ್ವೇಶ್ವರ ಸ್ವಾಮಿ ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಗೊಳಿಸಿದ್ದಾರೆಂದು ಶಾಸ್ತ್ರೋಕ್ತವಾಗಿ ತಿಳಿದುಕೊಂಡಿದ್ದೇನೆ.


ತರುವಾಯ ದಾನಿಯೇಲನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ್ದ ಅರ್ಯೋಕನ ಬಳಿಗೆ ಹೋದನು. ಅವನಿಗೆ, “ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಬೇಡ. ನನ್ನನ್ನು ರಾಜನ ಸನ್ನಿಧಿಗೆ ಸೇರಿಸಿಬಿಡು, ನಾನು ಆ ಕನಸಿನ ಉದ್ದೇಶವನ್ನು ರಾಜನಿಗೆ ತಿಳಿಸುವೆನು,” ಎಂದು ಕೇಳಿಕೊಂಡನು.


ಆಗ ಪೌಲನು ಶತಾಧಿಪತಿಯನ್ನು ಮತ್ತು ಸೈನಿಕರನ್ನು ಉದ್ದೇಶಿಸಿ, “ಈ ನಾವಿಕರು ಹಡಗಿನಲ್ಲೇ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯದು,” ಎಂದು ಎಚ್ಚರಿಸಿದನು.


ಕೈದಿಗಳಲ್ಲಿ ಯಾರೂ ಈಜಿ ತಲೆತಪ್ಪಿಸಿಕೊಳ್ಳದಂತೆ ಅವರನ್ನು ಕೊಲ್ಲಬೇಕೆಂದು ಸೈನಿಕರು ಆಲೋಚನೆ ಮಾಡಿದರು.


ಇದಲ್ಲದೆ, ನಿಮ್ಮೆಲ್ಲರ ಪ್ರಾರ್ಥನೆಗಳ ಫಲವಾಗಿ ದೇವರು ನನ್ನನ್ನು ಇಲ್ಲಿಂದ ಬಿಡುಗಡೆ ಮಾಡಿ ನಿಮ್ಮ ಬಳಿಗೆ ಕಳುಹಿಸುವರು ಎಂಬ ನಂಬಿಕೆ ನನಗಿದೆ. ಆದ್ದರಿಂದ ನನಗಾಗಿ ಒಂದು ಅತಿಥಿ ಕೊಠಡಿಯನ್ನು ಸಿದ್ಧಪಡಿಸಿಟ್ಟುಕೊಂಡಿರು.


ನಿನ್ನ ನೀಚತನದಿಂದ ನಿನ್ನಂಥವನಿಗೇ ನಷ್ಟ ನಿನ್ನ ಸಜ್ಜನಿಕೆಯಿಂದ ನರಜನ್ಮದವನಿಗೇ ಲಾಭ.


ನಿನ್ನನ್ನು ಕೂಗಿಕೊಂಡಾಗ ಸಮೀಪಕ್ಕೆ ಬಂದೆ “ಭಯಪಡಬೇಡ” ಎಂದು ಅಭಯನೀಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು