Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:41 - ಕನ್ನಡ ಸತ್ಯವೇದವು C.L. Bible (BSI)

41 ಆದರೆ ಮಧ್ಯದಲ್ಲಿ ಹಡಗು ಮರಳು ದಿಬ್ಬಕ್ಕೆ ಢಿಕ್ಕಿಹೊಡೆದು ನೆಲ ಹತ್ತಿತ್ತು. ಹಡಗಿನ ಮುಂಭಾಗ ದಿಣ್ಣೆಗೆ ಸಿಲುಕಿ ಅಲ್ಲಾಡದೆ ನಿಂತಿತು; ಹಿಂಭಾಗ ಹುಚ್ಚು ಅಲೆಗಳ ಹೊಡೆತಕ್ಕೆ ಸಿಕ್ಕಿ ತುಂಡುತುಂಡಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆದರೆ ಮಧ್ಯದಲ್ಲಿ ಅವರಿಗೆ ಮರಳದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ದಿಣ್ಣೆಗೆ ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ಹುಚ್ಚು ಅಲೆಗಳ ಹೊಡೆತದಿಂದ ಒಡೆದು ತುಂಡಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆದರೆ ಮಧ್ಯದಲ್ಲಿ ಅವರಿಗೆ ಮರಳುದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಗುತ್ತಾ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಆದರೆ ಹಡಗು ಉಸುಬಿನ ದಿಬ್ಬಕ್ಕೆ ಅಪ್ಪಳಿಸಿತು. ಹಡಗಿನ ಮುಂಭಾಗವು ಅದರಲ್ಲಿ ಸಿಕ್ಕಿಕೊಂಡಿತು. ಹಡಗು ಚಲಿಸಲಾಗಲಿಲ್ಲ. ಬಳಿಕ ದೊಡ್ಡ ಅಲೆಗಳು ಹಡಗಿನ ಹಿಂಭಾಗಕ್ಕೆ ಬಡಿದು ಚೂರುಚೂರು ಮಾಡಲಾರಂಭಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆದರೆ ನೌಕೆ ಮಧ್ಯದಲ್ಲಿ ಮರುಳು ದಿಬ್ಬಕ್ಕೆ ಅಪ್ಪಳಿಸಿ ಮುಳುಗಲಿಕ್ಕೆ ಪ್ರಾರಂಭಿಸಿತು. ನೌಕೆಯ ಮುಂಭಾಗ ಮರಳಲ್ಲಿ ಸಿಕ್ಕಿ ಅಲ್ಲಾಡದೇ ನಿಂತಿತು; ಹಿಂಭಾಗ ಬಿರುಗಾಳಿಯ ಹೊಡೆತಕ್ಕೆ ಸಿಕ್ಕಿ ಮುರಿದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಖರೆ ಮೊಟಿ ಢೊನ್ ರೆತಿಚ್ಯಾ ಗುಡ್ಯಾಕ್ ಆಡ್ಲುನ್ ಢೊನಾಚೊ ಫಿಡ್ಲೊ ಭಾಗ್ ರೆತಿತ್ ಸಿರ್ಕುನ್ ಪಡಲ್ಯಾಕ್ ಢೊನ್ ಚಾಲ್ವುಕ್ ಹೊವ್ಕ್ ನಾ, ಮಾನಾ ಮೊಟಿ ಲಾಟಾ ಯೆವ್ನ್ ಢೊನಾಚ್ಯಾ ಫಾಟ್ಲ್ಯಾ ಭಾಜುಕ್ ಮಾರುನ್ ತುಕ್ಡೆ ತುಕ್ಡೆ ಕರುನ್ ಟಾಕುಕ್ ಲಾಗ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:41
11 ತಿಳಿವುಗಳ ಹೋಲಿಕೆ  

ಹುಟ್ಟುಹಾಕುವವರು ನಿನ್ನ ಸಿಕ್ಕಿಸಿಹರು ಮಹಾತರಂಗಗಳಿಗೆ ಸಾಗರಮಧ್ಯೆ ಒಡೆದು ಚೂರಾಗಿರುವೆ ಸಿಕ್ಕಿ ಮೂಡಣಗಾಳಿಗೆ.


ಹಡಗಿನವರು ಅದನ್ನು ಮೇಲಕ್ಕೆ ಎಳೆದು ಹಗ್ಗಗಳಿಂದ ಹಡಗಿನ ಅಡಿಭಾಗಕ್ಕೆ ಬಿಗಿಯಾಗಿ ಕಟ್ಟಿದರು. ಅನಂತರ ‘ಸುರ್ತಿಸ್’ ಎಂಬ ಉಸುಬಿನಲ್ಲಿ ಹಡಗು ಎಲ್ಲಿ ಸಿಕ್ಕಿಕೊಳ್ಳುವುದೋ ಎಂಬ ಭಯ ಆವರಿಸಿತು. ಆದುದರಿಂದ ಅವರು ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಯೇ ಹಡಗು ತೇಲಲೆಂದು ಬಿಟ್ಟರು.


ಮುಳುಗಿಹೋದರು ಅಗಾಧ ಜಲದೊಳು ಸರಕುಸಮೇತ ನಿನ್ನ ಸೇರಿದ್ದ ಜನರು; ಹಾಳಾದೆ ನೀನು ಸಮುದ್ರ ಸಾಗರದೊಳು.


ಆಗ ಮಾರೇಷಾ ಊರಿನ ದೋದಾವಾಹುವಿನ ಮಗ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧವಾಗಿ, “ನೀನು ಅಹಜ್ಯನೊಡನೆ ಒಪ್ಪಂದಮಾಡಿಕೊಂಡಿದ್ದರಿಂದ ಸರ್ವೇಶ್ವರ ನಿನ್ನ ಕೆಲಸವನ್ನು ಹಾಳುಮಾಡುವರು,” ಎಂದು ಪ್ರವಾದಿಸಿದನು. ಆ ಹಡಗುಗಳು ಒಡೆದುಹೋದುದರಿಂದ ತಾರ್ಷೀಷಿಗೆ ಹೊರಡಲೇ ಇಲ್ಲ.


ಇದಲ್ಲದೆ, ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು.


ಅನಂತರ ನಾವಿಕರು ಹಡಗಿನ ಮುಂಭಾಗದಲ್ಲಿ ಕೆಲವು ಲಂಗರುಗಳನ್ನು ಹಾಕುವಂತೆ ನಟಿಸಿ, ದೋಣಿಯನ್ನು ನೀರಿಗಿಳಿಸಿ, ಹಡಗನ್ನು ಬಿಟ್ಟು ಪಲಾಯನ ಮಾಡಬೇಕೆಂದಿದ್ದರು.


ಎಂದೇ ಹಗ್ಗಗಳನ್ನು ಕತ್ತರಿಸಿ ಲಂಗರುಗಳನ್ನು ಸಮುದ್ರದಲ್ಲೇ ಮುಳುಗಲೆಂದು ಬಿಟ್ಟರು. ಚುಕ್ಕಾಣಿಗಳಿಗೆ ಕಟ್ಟಲಾದ ಹಗ್ಗಗಳನ್ನು ಬಿಚ್ಚಿದರು. ಅನಂತರ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡದತ್ತ ಚಲಿಸಬಿಟ್ಟರು.


ಕೈದಿಗಳಲ್ಲಿ ಯಾರೂ ಈಜಿ ತಲೆತಪ್ಪಿಸಿಕೊಳ್ಳದಂತೆ ಅವರನ್ನು ಕೊಲ್ಲಬೇಕೆಂದು ಸೈನಿಕರು ಆಲೋಚನೆ ಮಾಡಿದರು.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು