Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:8 - ಕನ್ನಡ ಸತ್ಯವೇದವು C.L. Bible (BSI)

8 ಪೊಪ್ಲಿಯನ ತಂದೆ ಜ್ವರದಿಂದಲೂ ರಕ್ತಬೇಧಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ, ಪ್ರಾರ್ಥನೆ ಮಾಡಿ, ತನ್ನ ಕರಗಳನ್ನು ಅವನ ಮೇಲಿಟ್ಟು, ಅವನನ್ನು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಪೀಡಿತನಾಗಿ ಮಲಗಿದ್ದನು. ಪೌಲನು ಅವನ ಬಳಿಗೆ ಹೋಗಿ ದೇವರ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ವಾಸಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪೊಪ್ಲಿಯನ ತಂದೆಯು ಬಹಳ ಅಸ್ವಸ್ಥನಾಗಿದ್ದನು. ಅವನಿಗೆ ಜ್ವರವಿತ್ತು ಮತ್ತು ರಕ್ತಭೇದಿಯಾಗುತ್ತಿತ್ತು. ಪೌಲನು ಅವನ ಬಳಿಗೆ ಹೋಗಿ ಅವನಿಗಾಗಿ ಪ್ರಾರ್ಥಿಸಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪೊಪ್ಲಿಯನ ತಂದೆ ಅಸ್ವಸ್ಥತೆಯಿಂದ ಮಲಗಿದ್ದನು. ಅವನು ಜ್ವರ ಮತ್ತು ರಕ್ತ ಭೇದಿಯಿಂದ ಬಾಧೆಗೊಳಗಾಗಿದ್ದನು. ಪೌಲನು ಅವನನ್ನು ಸಂದರ್ಶಿಸಿ, ಪ್ರಾರ್ಥನೆಮಾಡಿ, ಅವನ ಮೇಲೆ ತನ್ನ ಹಸ್ತಗಳನ್ನಿಟ್ಟು ಅವನನ್ನು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಪೊಪ್ಲಿಯಾಚ್ಯಾ ಬಾಬಾಕ್ ಲೈ ಆರಾಮ್ ನತ್ತೆ , ತೆಕಾ ತಾಪ್ ಯೆಲ್ಲೊ ಅನಿ ರಗಾತ್ ಮೈದಾನ್ ಲಾಗಲಿ, ಪಾವ್ಲುನ್ ತೆಚ್ಯಾ ಜಗ್ಗೊಳ್ ಜಾವ್ನ್ ತೆಚ್ಯಾ ಸಾಟ್ನಿ ಮಾಗ್ನಿ ಕರುನ್ ತೆಜ್ಯಾರ್ ಹಾತ್ ಥವ್ನ್ ತೆಕಾ ಗುನ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:8
22 ತಿಳಿವುಗಳ ಹೋಲಿಕೆ  

ಪೇತ್ರನು ಅವರೆಲ್ಲರನ್ನೂ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಅನಂತರ ಶವದ ಕಡೆಗೆ ತಿರುಗಿ, “ತಬಿಥಾ, ಮೇಲಕ್ಕೇಳು,” ಎಂದನು. ಆಕೆ ಕಣ್ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತಳು.


ಕೆಲವು ರೋಗಿಗಳ ಮೇಲೆ ಕೈಗಳನ್ನಿರಿಸಿ, ಅವರನ್ನು ಗುಣಪಡಿಸಿದ್ದನ್ನು ಬಿಟ್ಟರೆ ಇನ್ನಾವ ಮಹತ್ತಾದ ಕಾರ್ಯಗಳನ್ನೂ ಅವರು ಅಲ್ಲಿ ಮಾಡಲಾಗಲಿಲ್ಲ.


ಕೈಗಳಿಂದ ಸರ್ಪಗಳನ್ನು ಎತ್ತಿದರೂ ವಿಷಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು. ಅವರು ರೋಗಿಗಳ ಮೇಲೆ ಕೈ ಇಟ್ಟರೆ ರೋಗಿಗಳು ಗುಣಹೊಂದುವರು,” ಎಂದರು.


ಯೇಸುಸ್ವಾಮಿ ಹೀಗೆ ಬೋಧಿಸುತ್ತಿರುವಾಗಲೇ ಯೆಹೂದ್ಯ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನು ಯೇಸುವಿನ ಮುಂದೆ ಮೊಣಕಾಲೂರಿ, “ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ತಾವು ದಯಮಾಡಿಸಿ ತಮ್ಮ ಹಸ್ತವನ್ನು ಆಕೆಯ ಮೇಲಿಡಬೇಕು. ಅವಳು ಮರಳಿ ಬದುಕುವಳು,” ಎಂದು ಬೇಡಿಕೊಂಡನು.


ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾಪಂಡಿತರನ್ನು ನೇಮಿಸಿದ್ದಾರೆ.


ಅದೇ ಪವಿತ್ರಾತ್ಮರಿಂದ ಒಬ್ಬನಿಗೆ ಅಗಾಧ ವಿಶ್ವಾಸವೂ ಇನ್ನೊಬ್ಬನಿಗೆ ಸ್ವಸ್ಥತೆಯನ್ನೀಯುವ ಶಕ್ತಿಯೂ ದೊರಕುತ್ತವೆ.


ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ. ದೆವ್ವಗಳನ್ನು ಬಿಡಿಸಿರಿ, ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ.


ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು.


ಆಕೆಯ ಮೇಲೆ ತಮ್ಮ ಹಸ್ತಗಳನ್ನಿಟ್ಟರು. ತಕ್ಷಣವೇ ಆಕೆ ನೆಟ್ಟಗಾದಳು ಮತ್ತು ದೇವರಿಗೆ ಸ್ತುತಿಸ್ತೋತ್ರ ಸಲ್ಲಿಸಿದಳು.


ಸಂಜೆಯಾಗುತ್ತಿದ್ದಂತೆ ಜನರು ತಮ್ಮ ಮನೆಯಲ್ಲಿ ವಿಧವಿಧವಾದ ಕಾಯಿಲೆಯಿಂದ ನರಳುತ್ತಿದ್ದವರನ್ನೆಲ್ಲಾ ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಪ್ರತಿಯೊಬ್ಬನ ಮೇಲೆ ತಮ್ಮ ಕೈಯಿಟ್ಟು ಗುಣಪಡಿಸಿದರು.


ಮಾತನಾಡಲಾಗದ ಒಬ್ಬ ಕಿವುಡನನ್ನು ಜನರು ಅವರ ಬಳಿಗೆ ಕರೆತಂದರು. ಅವನ ಮೇಲೆ ಕೈಗಳನ್ನಿಡಬೇಕೆಂದು ಬೇಡಿಕೊಂಡರು.


ಅವನು ಯೇಸುವನ್ನು ನೋಡಿದೊಡನೆ ಅವರ ಪಾದಕ್ಕೆರಗಿ, “ನನ್ನ ಪುಟ್ಟ ಮಗಳು ಮರಣಾವಸ್ಥೆಯಲ್ಲಿದ್ದಾಳೆ; ತಾವು ಬಂದು ತಮ್ಮ ಹಸ್ತವನ್ನು ಅವಳ ಮೇಲಿಟ್ಟು, ಅವಳು ಗುಣಹೊಂದಿ ಬದುಕುವಂತೆ ಅನುಗ್ರಹಿಸಬೇಕು,” ಎಂದು ಬಹಳವಾಗಿ ವಿನಂತಿಸಿದನು.


ಅನಂತರ ಬತ್ತಿದ ಕೈಯುಳ್ಳವನನ್ನು ನೋಡಿ, “ಕೈಚಾಚು” ಎಂದರು. ಅವನು ಚಾಚಿದನು. ಅದು ಪುನಶ್ಚೇತನಗೊಂಡು ಇನ್ನೊಂದು ಕೈಯ ಹಾಗೆ ಸಂಪೂರ್ಣ ಸ್ವಸ್ಥವಾಯಿತು.


ಆ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನ ಹೊಲಗದ್ದೆಗಳು ನಾವಿದ್ದ ಸ್ಥಳದ ಪಕ್ಕದಲ್ಲೇ ಇದ್ದವು. ಅವನು ನಮ್ಮನ್ನು ಸ್ವಾಗತಿಸಿ ಮೂರು ದಿನಗಳವರೆಗೆ ಆದರದಿಂದ ಸತ್ಕರಿಸಿದನು.


ಇದಾದ ನಂತರ ದ್ವೀಪದಲ್ಲಿದ್ದ ಮಿಕ್ಕರೋಗಿಗಳೂ ಬಂದು ಪೌಲನಿಂದ ಆರೋಗ್ಯವನ್ನು ಪಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು