Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:10 - ಕನ್ನಡ ಸತ್ಯವೇದವು C.L. Bible (BSI)

10 ದೇವಾಲಯದ ಸುಂದರದ್ವಾರದ ಬಳಿ ಕುಳಿತು ಭಿಕ್ಷೆಬೇಡುತ್ತಿದ್ದವನು ಇವನೇ ಎಂದು ಜನರು ಗುರುತು ಹಚ್ಚಿದರು. ಅವನಿಗೆ ಸಂಭವಿಸಿದ್ದನ್ನು ಕಂಡು ಬೆಕ್ಕಸಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇವನು ದೇವಾಲಯದ ಸುಂದರ ದ್ವಾರವೆಂಬ ಬಾಗಿಲಿನಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದವನೆಂದು ಗುರುತುಹಿಡಿದು, ಅವನಿಗೆ ಸಂಭವಿಸಿರುವ ಅದ್ಭುತಕಾರ್ಯಕ್ಕೆ ವಿಸ್ಮಯಗೊಂಡು ಬಹಳ ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇವನು ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಕೂತು ಭಿಕ್ಷಾಬೇಡುತ್ತಿದ್ದವನೆಂದು ಗುರುತುಹಿಡಿದು ಅವನಿಗೆ ಸಂಭವಿಸಿದ್ದಕ್ಕೆ ವಿಸ್ಮಯಹಿಡಿದವರಾಗಿ ಬಹಳ ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನು ದೇವಾಲಯದ “ಸುಂದರದ್ವಾರದ” ಬಳಿಯಲ್ಲಿ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದ ಮನುಷ್ಯನೇ ಎಂದು ಗುರುತಿಸಿದರು. ಅವನಿಗೆ ಸಂಭವಿಸಿದ್ದರ ಬಗ್ಗೆ ಅವರು ವಿಸ್ಮಯಗೊಂಡು ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ ತ್ಯಾ “ಸುಂದರ್ ದಡ್ಪ್ಯಾತ್” ಭಿಕ್ ಮಾಗಿತ್ ಹೊತ್ತೊ ಹ್ಯೊಚ್ ತೊ ಮನುನ್ ವಳಕ್ಲ್ಯಾನಿ, ಅನಿ ತೆಂಕಾ ಹೆ ಕಶೆ ಹೊಲೆ ಮನುನ್ ಅಜಾಪ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:10
12 ತಿಳಿವುಗಳ ಹೋಲಿಕೆ  

‘ಸುಂದರದ್ವಾರ’ ಎಂದು ಕರೆಯಲಾದ ಬಾಗಿಲ ಬಳಿ ಹುಟ್ಟುಕುಂಟನೊಬ್ಬ ಇದ್ದನು. ಅವನನ್ನು ಪ್ರತಿದಿನ ಹೊತ್ತುತಂದು ಈ ದ್ವಾರದ ಬಳಿ ಬಿಡಲಾಗುತ್ತಿತ್ತು. ಅವನು ದೇವಾಲಯಕ್ಕೆ ಬರುತ್ತಿದ್ದ ಜನರಿಂದ ಭಿಕ್ಷೆಬೇಡುತ್ತಿದ್ದನು.


ಅದಕ್ಕೆ ಉತ್ತರವಾಗಿ ಯೇಸು, “ಇವನ ಪಾಪವಾಗಲಿ, ಇವನನ್ನು ಹೆತ್ತವರ ಪಾಪವಾಗಲಿ ಇದಕ್ಕೆ ಕಾರಣವಲ್ಲ, ದೇವರ ಕಾರ್ಯ ಇವನಲ್ಲಿ ವ್ಯಕ್ತವಾಗುವಂತೆ ಹೀಗಾಗಿದೆ.


ಪುತ್ರನೆಂದರೆ ಪಿತನಿಗೆ ಪ್ರೀತಿ. ಆದುದರಿಂದ ತಾವು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ಇದಲ್ಲದೆ ಇನ್ನೂ ಎಷ್ಟೋ ಮಿಗಿಲಾದ ಕಾರ್ಯಗಳನ್ನು ಪುತ್ರನಿಗೆ ತೋರಿಸುತ್ತಾರೆ. ಅವುಗಳನ್ನು ಕಂಡು ನೀವು ಬೆರಗಾಗುವಿರಿ.


ದೇವರ ಮಹತ್ವವನ್ನು ಕಂಡ ಎಲ್ಲರೂ ಆಶ್ಚರ್ಯಚಕಿತರಾದರು. ಯೇಸುಸ್ವಾಮಿ ಮಾಡಿದ ಸಕಲ ಮಹತ್ಕಾರ್ಯಗಳನ್ನು ಕುರಿತು ಜನರೆಲ್ಲರೂ ಸೋಜಿಗಪಡುತ್ತಿರುವಲ್ಲಿ, ಶಿಷ್ಯರಿಗೆ,


ಸರ್ವರೂ ಭ್ರಮೆಗೊಂಡು, ಇದರ ಅರ್ಥವಾದರೂ ಏನೆಂದು ಒಬ್ಬರನ್ನು ಒಬ್ಬರು ವಿಸ್ಮಯದಿಂದ ವಿಚಾರಿಸತೊಡಗಿದರು.


ಅವರೆಲ್ಲರೂ ವಿಸ್ಮಿತರಾಗಿ, “ಹೀಗೆ ಮಾತನಾಡುವ ಇವರೆಲ್ಲಾ ಗಲಿಲೇಯದವರಲ್ಲವೇ?


ಜನರೆಲ್ಲರೂ ಆಶ್ಚರ್ಯಚಕಿತರಾದರು. “ಎಂಥಾ ಮಾತುಗಳಿವು! ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆಮಾಡುತ್ತಾನೆ; ಅವು ಕೂಡ ಈತ ಹೇಳಿದ ಹಾಗೆ ಕೇಳುತ್ತವಲ್ಲಾ!” ಎಂದು ತಮ್ಮತಮ್ಮೊಳಗೇ ಮಾತನಾಡಿಕೊಂಡರು.


ಈ ಊರಿನವರು ಯೇಸುಸ್ವಾಮಿಯನ್ನು ಗುರುತು ಹಚ್ಚಿದ್ದೇ ತಡ ಸುತ್ತಮುತ್ತಲಿನ ಊರುಗಳಿಗೆಲ್ಲಾ ಹೇಳಿಕಳುಹಿಸಿದರು. ರೋಗರುಜಿನಗಳಿಂದ ನರಳುತ್ತಿದ್ದವರನ್ನು ಕರೆದುಕೊಂಡು ಬಂದರು.


ಅವನ ನೆರೆಯವರು ಮತ್ತು ಹಿಂದೆ ಅವನು ಭಿಕ್ಷೆಬೇಡುತ್ತಿದ್ದಾಗ ಅವನನ್ನು ನೋಡಿದ್ದವರು, “ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೆ?” ಎಂದು ವಿಚಾರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು