Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:20 - ಕನ್ನಡ ಸತ್ಯವೇದವು C.L. Bible (BSI)

20 ನಾವಂತೂ ಕಣ್ಣಾರೆ ಕಂಡು, ಕಿವಿಯಾರೆ ಕೇಳಿದ ವಿಷಯನ್ನು ಕುರಿತು ಮೌನದಿಂದಿರಲಾಗದು,” ಎಂದು ಬದಲು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾವಂತೂ ಸುಮ್ಮನಿರಲಾರೆವು. ನಾವು ಕಂಡ ಮತ್ತು ಕೇಳಿದ ಸಂಗತಿಗಳ ಬಗ್ಗೆ ಜನರಿಗೆ ಹೇಳಲೇಬೇಕು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ ಕಂಡಿದ್ದನ್ನೂ ಕೇಳಿದ್ದನ್ನೂ ಕುರಿತು ನಾವು ಮಾತನಾಡದೆ ಇರಲಾರೆವು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅಮಿ ತರ್ ಗಪ್ಪ್ ರಾನಾರ್ ನ್ಹಯ್ ಅಮಿ ಬಗಟಲ್ಲಿ ಅನಿ ಆಯ್ಕಲಿ ಸಂಗ್ತಿಯಾ ಲೊಕಾಕ್ನಿ ಸಾಂಗುಕುಚ್ ಹೊಯ್ನಾ ಮನುನ್ ಜವಾಬ್ ದಿಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:20
27 ತಿಳಿವುಗಳ ಹೋಲಿಕೆ  

ನೀನು ಕಂಡು ಕೇಳಿದ ವಿಷಯಗಳಿಗೆ ನೀನೇ ಎಲ್ಲ ಜನರಿಗೆ ಅವರ ಪರವಾಗಿ ಸಾಕ್ಷಿಯಾಗಬೇಕು.


‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.


ಈ ಘಟನೆಗಳಿಗೆ ನಾವು ಸಾಕ್ಷಿಗಳು; ನಾವು ಮಾತ್ರವಲ್ಲ, ದೈವೇಚ್ಛೆಯಂತೆ ನಡೆಯುವವರಿಗೆ ದೇವರು ದಯಪಾಲಿಸುವ ಪವಿತ್ರಾತ್ಮ ಅವರು ಕೂಡ ಸಾಕ್ಷಿಯಾಗಿದ್ದಾರೆ,” ಎಂದನು.


ಸೆರೆಯಾಗಿರುವ ನಿನ್ನ ಸ್ವಜನರ ಬಳಿಗೆಹೋಗಿ ಅವರು ಕೇಳಲಿ ಅಥವಾ ಕೇಳದೆಹೋಗಲಿ ಅವರನ್ನು ಪ್ರಭೋಧಿಸು; ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ,’ ಎಂದು ಅವರಿಗೆ ಸಾರಿಹೇಳು.”


ಸೀಲ ಮತ್ತು ತಿಮೊಥೇಯ ಮಕೆದೋನಿಯದಿಂದ ಬಂದ ಮೇಲೆ ಪೌಲನು ಶುಭಸಂದೇಶವನ್ನು ಸಾರುವುದರಲ್ಲೂ ಯೇಸುವೇ ಬರಬೇಕಾದ ಲೋಕೋದ್ಧಾರಕ ಎಂದು ಯೆಹೂದ್ಯರಿಗೆ ರುಜುವಾತುಪಡಿಸುವುದರಲ್ಲೂ ತನ್ನ ಸಮಯವನ್ನು ಕಳೆದನು.


ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.


ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ.


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಪ್ರಾರಂಭದಿಂದ ಕಣ್ಣಾರೆ ಕಂಡು ಶುಭಸಂದೇಶವನ್ನು ಸಾರಿದವರಿಂದಲೇ ನಾವು ಕೇಳಿದ ಘಟನೆಗಳವು.


ನಾನಾದರೋ ಸರ್ವೇಶ್ವರಸ್ವಾಮಿಯ ಆತ್ಮಪ್ರೇರಣೆಯಿಂದ, ಅವರ ಬಲಪರಾಕ್ರಮದಿಂದ, ನ್ಯಾಯನೀತಿಯಿಂದ ತುಂಬಿದವನು. ಯಕೋಬ ವಂಶಕ್ಕೆ ಅದರ ದ್ರೋಹವನ್ನು, ಇಸ್ರಯೇಲ್ ವಂಶಕ್ಕೆ ಅದರ ಪಾಪವನ್ನು ಪ್ರಕಟಿಸಲು ಸಮರ್ಥನು.


ಅಯ್ಯೋ, ನನ್ನ ಕರುಳು ಯಾತನೆಯಿಂದ ಕಿತ್ತುಬರುವಂತಿದೆ. ಅಕಟಾ ! ನನ್ನ ಗುಂಡಿಗೆಯ ಪಕ್ಕೆಗಳು ಸೀಳುವಂತಿದೆ, ಹೃದಯ ತಳಮಳಗೊಂಡಿದೆ ! ಇನ್ನು ಬಾಯಿಮುಚ್ಚಿಕೊಂಡಿರಲು ನನ್ನಿಂದಾಗದು; ನನ್ನ ಮನವೇ, ಕಾಳಗದ ಕಹಳೆಯನ್ನೂ ಯುದ್ಧದ ಕೋಲಾಹಲವನ್ನೂ ಕೇಳುತ್ತಿರುವೆ, ಅಲ್ಲವೆ?


ಆಗ ಸರ್ವೇಶ್ವರ ನನಗೆ, “ನಾನೊಬ್ಬ ತರುಣ ಎನ್ನಬೇಡ; ಯಾರ ಬಳಿಗೆ ನಿನ್ನನ್ನು ಕಳಿಸುತ್ತೇನೋ, ಅವರೆಲ್ಲರ ಬಳಿಗೆ ನೀನು ಹೋಗಲೇಬೇಕು; ನಾನು ಆಜ್ಞಾಪಿಸುವುದನ್ನೆಲ್ಲ ನುಡಿಯಲೇ ಬೇಕು.


ನನ್ನೊಳು ಉಸಿರಾಡಿತು ಸರ್ವೇಶ್ವರನಾತ್ಮ ನನ್ನ ಬಾಯೊಳಿತ್ತು ಆತನ ವಾಕ್ಯ.


ಆ ಜನರನ್ನು ಆಶೀರ್ವದಿಸಬೇಕೆಂಬ ಆದೇಶ ನನಗಿರುವುದು; ಸರ್ವೇಶ್ವರನಿತ್ತ ಆಶೀರ್ವಾದವನ್ನು ನಾನು ಮಾರ್ಪಡಿಸಲಾಗದು.


ಅದಕ್ಕೆ ಬಿಳಾಮನು, “ಅದಿರಲಿ, ನಾನೀಗ ಬಂದಾಯಿತು, ಆದರೆ ನಾನಾಗಿ ಏನನ್ನು ಹೇಳುವ ಶಕ್ತಿ ನನಗಿಲ್ಲ, ದೇವರು ಆಡಿಸಿದ ಮಾತನ್ನೇ ಹೇಳಲು ಸಾಧ್ಯ,” ಎಂದು ಹೇಳಿದನು.


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.


ಅಂದರೆ, ಸ್ನಾನಿಕ ಯೊವಾನ್ನನು ಸ್ನಾನದೀಕ್ಷೆಯನ್ನು ಕುರಿತು ಬೋಧಿಸಿದ ದಿನದಿಂದ ಯೇಸುವಿನ ಸ್ವರ್ಗಾರೋಹಣದ ದಿನದವರೆಗೂ ನಮ್ಮ ಸಂಗಡ ಇದ್ದವನಾಗಿರಬೇಕು.”


ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ನನಗೆ ಸಾಕಾಗಿದೆ,” ಎಂದೆನು. ಆಗ ಸರ್ವೇಶ್ವರ ನನಗೆ : “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟ಼ಗಳ ಮೇಲೂ ಕಾರಿಬಿಡು. ಗಂಡಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.


ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು