Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:24 - ಕನ್ನಡ ಸತ್ಯವೇದವು C.L. Bible (BSI)

24 ಈ ಸಮಾಚಾರವನ್ನು ಕೇಳಿದಕೂಡಲೇ ಭಕ್ತಾದಿಗಳು ಏಕಕಂಠದಿಂದ ದೇವರನ್ನು ಪ್ರಾರ್ಥಿಸುತ್ತಾ ಹೀಗೆಂದರು: “ಪ್ರಭುವೇ, ಇಹಪರಗಳನ್ನೂ ಸಮುದ್ರಸಾಗರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದವರು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು ಕೇಳಿ ಏಕಮನಸ್ಸಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು - ಒಡೆಯನೇ, ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇದನ್ನು ಕೇಳಿದಾಗ ವಿಶ್ವಾಸಿಗಳು ಏಕಮನಸ್ಸಿನಿಂದ ದೇವರಲ್ಲಿ ಪ್ರಾರ್ಥಿಸಿದರು: ಅವರೆಲ್ಲರಲ್ಲಿ ಒಂದೇ ಮನಸ್ಸಿತ್ತು. “ಒಡೆಯನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಲೋಕದಲ್ಲಿರುವ ಪ್ರತಿಯೊಂದನ್ನೂ ನಿರ್ಮಿಸಿದಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇದನ್ನು ಕೇಳಿ ಅವರೆಲ್ಲರೂ ಒಟ್ಟಾಗಿ ಸ್ವರವೆತ್ತಿ ದೇವರಿಗೆ ಪ್ರಾರ್ಥನೆ ಮಾಡಿದರು: “ಕರ್ತದೇವರೇ, ನೀನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಹೆ ಆಯ್ಕಲ್ಲಿ ದೆವಾಚಿ ಲೊಕಾ ದೆವಾಕ್ ಮಾಗ್ನಿ ಕರುಸಾಟಿ ಎಕಾಕ್ಡೆ ಗೊಳಾ ಹೊಲಿ ಅನಿ ತೆನಿ ಎಕುಚ್ ಮನಾನ್, ಮೊಟ್ಯಾ ಧನಿಯಾ, ಸರ್‍ಗ್ ಅನಿ ಜಿಮಿನ್ ಸಮುಂದರ್ ಅನಿ ಜಗಾತ್ಲೆ ಹರ್ ಎಕ್‍ಬಿ ರಚಲೈ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:24
20 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು.


“ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ಹೇ ಸರ್ವೇಶ್ವರಾ, ನೀವೊಬ್ಬರೇ ದೇವರು; ಉನ್ನತೋನ್ನತ ಆಕಾಶವನು, ಅದರ ಪರಿವಾರಗಳನು ಬುವಿಯನು, ಕಡಲನು, ಅದರ ಸರ್ವಜಲಚರಗಳನು ಸೃಷ್ಟಿಸಿದಾತ ನೀವು; ಸಮಸ್ತ ಪ್ರಾಣಿಗಳಿಗು ಜೀವಾಧಾರ ನೀವು; ಆರಾಧಿಸುತ್ತವೆ ನಿಮ್ಮನು ಆಕಾಶದ ಪರಿವಾರಗಳು.


“ಇಸ್ರಯೇಲಿನ ದೇವರೇ, ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.


ಸರ್ವೇಶ್ವರನನ್ನು ಸ್ತುತಿಸಿರಿ, ಸರ್ವೇಶ್ವರನನ್ನು ಸಂಕೀರ್ತಿಸಿರಿ. ಅವರು ಬಡವರ ಪ್ರಾಣವನ್ನು ಬಿಡಿಸಿದ್ದಾರೆ ಕೆಡುಕರ ಕೈಯಿಂದ.


“ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ದೇವರು ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಈ ಅಸ್ಸೀರಿಯನ ಕೈಯಿಂದ ಬಿಡಿಸಿರಿ.”


ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


ಪೇತ್ರ ಮತ್ತು ಯೊವಾನ್ನ ಬಂಧನದಿಂದ ಬಿಡುಗಡೆ ಹೊಂದಿದ ಮೇಲೆ ವಿಶ್ವಾಸಿಗಳಿಗೆ ಭೇಟಿಯಿತ್ತರು. ಮುಖ್ಯಯಾಜಕರು ಹಾಗೂ ಪ್ರಜಾಪ್ರಮುಖರು ತಮಗೆ ಹೇಳಿದ್ದನ್ನು ಅವರಿಗೆ ವರದಿಮಾಡಿದರು.


“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು