Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:3 - ಕನ್ನಡ ಸತ್ಯವೇದವು C.L. Bible (BSI)

3 ಇದನ್ನು ಕೇಳಿ ಸಿಟ್ಟುಗೊಂಡಿದ್ದ ಅವರು ಪೇತ್ರ ಯೊವಾನ್ನರನ್ನು ಬಂಧಿಸಿದರು. ಆಗಲೇ ಹೊತ್ತು ಮೀರಿದ್ದರಿಂದ ಮಾರನೆಯ ದಿನದವರೆಗೆ ಅವರನ್ನು ಸೆರೆಮನೆಯಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರನ್ನು ಹಿಡಿದು ಆಗಲೇ ಸಾಯಂಕಾಲವಾಗಿದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೂದ್ಯ ನಾಯಕರು ಪೇತ್ರ ಮತ್ತು ಯೋಹಾನರನ್ನು ಬಂಧಿಸಿ ಸೆರೆಮನೆಗೆ ಹಾಕಿದರು. ಆಗಲೇ ಕತ್ತಲಾಗಿತ್ತು. ಆದ್ದರಿಂದ ಅವರು ಪೇತ್ರ ಮತ್ತು ಯೋಹಾನರನ್ನು ಮರುದಿನದವರೆಗೆ ಸೆರೆಯಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ಪೇತ್ರ ಯೋಹಾನರನ್ನು ಬಂಧಿಸಿ, ಸಂಜೆಯಾದ್ದರಿಂದ ಮರುದಿನದವರೆಗೆ ಅವರನ್ನು ಸೆರೆಮನೆಯಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಸೆ ಹೊವ್ನ್ ಪೆದ್ರುಕ್ ಅನಿ ಜುವಾಂವಾಕ್ ಜುದೆವಾಂಚ್ಯಾ ಮುಖಂಡಾನಿ ದುಸ್ರ್ಯಾಂದಿಸಿ ಪತರ್ ಬಿ ಬಂಧಿಖಾನ್ಯಾತ್ ಥವಲ್ಲ್ಯಾನಿ ಕಶ್ಯಾಕ್ ಮಟ್ಲ್ಯಾರ್ ತ್ಯಾ ದಿಸಾ ಕಾಳೊಕ್ ಹೊವ್ನ್ ಗೆಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:3
11 ತಿಳಿವುಗಳ ಹೋಲಿಕೆ  

ಪ್ರೇಷಿತರನ್ನು ಬಂಧಿಸಿ ಊರ ಸೆರೆಯಲ್ಲಿಟ್ಟರು.


ಈ ಹೊಸ ಮಾರ್ಗವನ್ನು ಅವಲಂಬಿಸುವವರು ಹೆಂಗಸರೇ ಆಗಿರಲಿ, ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು.


ಇತ್ತ ಸೌಲನು ಧರ್ಮಸಭೆಯನ್ನು ನಾಶಪಡಿಸಲು ತೊಡಗಿದನು; ಮನೆಮನೆಗೂ ನುಗ್ಗಿ ಸ್ತ್ರೀಪುರುಷರೆನ್ನದೆ ಭಕ್ತರನ್ನು ಎಳೆದುತಂದು ಸೆರೆಮನೆಗೆ ತಳ್ಳುತ್ತಿದ್ದನು.


ಹೀಗೆ ಜನರನ್ನೂ ಪ್ರಮುಖರನ್ನೂ ನ್ಯಾಯಶಾಸ್ತ್ರಜ್ಞರನ್ನೂ ಪ್ರಚೋದಿಸಿದರು. ಸ್ತೇಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ಎಳೆದು ತರುವಂತೆ ಮಾಡಿದರು.


ಅನಂತರ ಸೈನಿಕರು, ಸಹಸ್ರಾಧಿಪತಿ ಹಾಗು ಯೆಹೂದ್ಯರು ಕಳುಹಿಸಿದ್ದ ಕಾವಲಾಳುಗಳು ಯೇಸುವನ್ನು ಹಿಡಿದು ಕಟ್ಟಿ ಮೊದಲು ಅನ್ನನ ಬಳಿಗೆ ಕೊಂಡೊಯ್ದರು.


ಅನಂತರ ಅವರು ಯೇಸುಸ್ವಾಮಿಯನ್ನು ಬಂಧಿಸಿ ಪ್ರಧಾನಯಾಜಕನ ಭವನಕ್ಕೆ ಕರೆದುಕೊಂಡು ಹೋದರು. ದೂರದಿಂದ ಪೇತ್ರನು ಹಿಂದೆಹಿಂದೆಯೇ ಹೋದನು.


ಅನಂತರ ಯೇಸು ತಮ್ಮನ್ನು ಹಿಡಿಯುವುದಕ್ಕೆ ಬಂದಿದ್ದ ಮುಖ್ಯಯಾಜಕರನ್ನೂ ದೇವಾಲಯದ ಪಹರೆಯ ದಳಪತಿಗಳನ್ನೂ ಪ್ರಮುಖರನ್ನೂ ನೋಡಿ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನು ಮತ್ತು ಲಾಠಿಗಳನ್ನು ತೆಗೆದುಕೊಂಡು ಬಂದಿರುವಿರೋ?


ಯೊವಾನ್ನನು ಬಂಧಿತನಾದನೆಂದು ಯೇಸುಸ್ವಾಮಿ ಕೇಳಿ, ಆ ಪ್ರಾಂತ್ಯವನ್ನು ಬಿಟ್ಟು ಗಲಿಲೇಯಕ್ಕೆ ಹೊರಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು