Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:14 - ಕನ್ನಡ ಸತ್ಯವೇದವು C.L. Bible (BSI)

14 ಆದರೂ ಪ್ರಭುವನ್ನು ವಿಶ್ವಾಸಿಸುತ್ತಿದ್ದ ಸ್ತ್ರೀಪುರುಷರ ಸಂಖ್ಯೆ ಅಧಿಕವಾಗುತ್ತಾ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮತ್ತು ಇನ್ನು ಎಷ್ಟೋ ಮಂದಿ ಸ್ತ್ರೀಪುರುಷರು ಕರ್ತನಲ್ಲಿ ನಂಬಿಕೆಯಿಟ್ಟು ಅವರ ಮಂಡಳಿಯಲ್ಲಿ ಸೇರಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮತ್ತು ಇನ್ನು ಎಷ್ಟೋ ಮಂದಿ ಗಂಡಸರೂ ಹೆಂಗಸರೂ ಕರ್ತನಲ್ಲಿ ನಂಬಿಕೆಯಿಡುವವರಾಗಿ ಅವರ ಮಂಡಲಿಯಲ್ಲಿ ಸೇರಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮತ್ತು ಹೆಚ್ಚುಹೆಚ್ಚು ಜನರು ಪ್ರಭುವನ್ನು ನಂಬಿಕೊಂಡರು. ಅನೇಕ ಸ್ತ್ರೀಯರೂ ಪುರುಷರೂ ವಿಶ್ವಾಸಿಗಳ ಸಮುದಾಯಕ್ಕೆ ಸೇರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೂ ಹೆಚ್ಚು ಜನ ಪುರುಷರೂ ಸ್ತ್ರೀಯರೂ ಕರ್ತ ದೇವರಲ್ಲಿ ವಿಶ್ವಾಸವನ್ನಿಟ್ಟು ಅವರ ಜೊತೆ ಸೇರಿಕೊಂಡರು. ಅವರು ವಿಶ್ವಾಸಿಗಳ ಸಂಖ್ಯೆಯಲ್ಲಿ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಲೈ ಲೊಕಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಮಿಳುಲಾಗಲಿ ,ಅನಿ ಲೈ ಲೊಕಾ ಘೊಮಾನ್ಸಾ ಅನಿ ಬಾಯ್ಕಾ ಮನ್ಸಾನಿ ಧನಿಯಾಚೆರ್ ವಿಶ್ವಾಸ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:14
24 ತಿಳಿವುಗಳ ಹೋಲಿಕೆ  

ದೇವರನ್ನು ಸ್ತುತಿಸುತ್ತಾ ಸಕಲರಿಗೆ ಅಚ್ಚುಮೆಚ್ಚಾಗಿ ಬಾಳುತ್ತಿದ್ದರು. ಜೀವೋದ್ಧಾರವನ್ನು ಹೊಂದುತ್ತಿದ್ದವರನ್ನೆಲ್ಲಾ ಪ್ರಭು ಈ ಸಭೆಗೆ ದಿನೇದಿನೇ ಸೇರಿಸಿಕೊಳ್ಳುತ್ತಿದ್ದರು.


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ಕ್ರಿಸ್ತಮಾರ್ಗವನ್ನು ಅನುಸರಿಸುವವರನ್ನು ಸ್ತ್ರೀ ಪುರುಷರೆನ್ನದೆ, ಬಂಧಿಸಿ ಅವರನ್ನು ಸೆರೆಮನೆಗೆ ತಳ್ಳಿದೆ. ಅವರನ್ನು ಮರಣಪರಿಯಂತರ ಪೀಡಿಸಿ ಹಿಂಸಿಸಿದೆ.


ಈ ಸಮಾಚಾರ ಜೊಪ್ಪದಲ್ಲೆಲ್ಲಾ ಹರಡಿತು. ಅನೇಕರು ಪ್ರಭುವನ್ನು ವಿಶ್ವಾಸಿಸಿದರು.


ಲುದ್ದ ಮತ್ತು ಸಾರೋನಿನ ನಿವಾಸಿಗಳೆಲ್ಲರೂ ಅವನನ್ನು ಕಂಡು ಪ್ರಭುವಿನ ಭಕ್ತರಾದರು.


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


ಈ ಹೊಸ ಮಾರ್ಗವನ್ನು ಅವಲಂಬಿಸುವವರು ಹೆಂಗಸರೇ ಆಗಿರಲಿ, ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು.


ಆದರೆ ಫಿಲಿಪ್ಪನು ದೇವರ ಸಾಮ್ರಾಜ್ಯ ಹಾಗೂ ಯೇಸುಕ್ರಿಸ್ತರ ಶುಭಸಂದೇಶವನ್ನು ಬೋಧಿಸಿದಾಗ ಅದರಲ್ಲಿ ವಿಶ್ವಾಸತಳೆದರು. ಸ್ತ್ರೀಪುರುಷರೆನ್ನದೆ ದೀಕ್ಷಾಸ್ನಾನವನ್ನು ಪಡೆದರು.


ಇತ್ತ ಸೌಲನು ಧರ್ಮಸಭೆಯನ್ನು ನಾಶಪಡಿಸಲು ತೊಡಗಿದನು; ಮನೆಮನೆಗೂ ನುಗ್ಗಿ ಸ್ತ್ರೀಪುರುಷರೆನ್ನದೆ ಭಕ್ತರನ್ನು ಎಳೆದುತಂದು ಸೆರೆಮನೆಗೆ ತಳ್ಳುತ್ತಿದ್ದನು.


ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.


ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಾದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.


“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.


ಯಾಜಕ ಎಜ್ರನು, ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ, ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದು ಬೆಳಗಿನಿಂದ ಮಧ್ಯಾಹ್ನದವರೆಗೂ ಓದಿದನು.


ಎಜ್ರನು ದೇವಾಲಯದ ಮುಂದೆ ಹೀಗೆ ಅಡ್ಡಬಿದ್ದು ಅಳುತ್ತಾ, ವಿಜ್ಞಾಪನೆಯನ್ನೂ ಪಾಪ ನಿವೇದನೆಯನ್ನೂ ಮಾಡುತ್ತಿರುವಾಗ ಇಸ್ರಯೇಲರ ಗಂಡಸರು, ಹೆಂಗಸರು ಹಾಗು ಮಕ್ಕಳು ಮಹಾಸಮೂಹವಾಗಿ ಅವನ ಬಳಿಗೆ ಬಂದು ಕೂಡಿದರು. ಜನರೆಲ್ಲರು ಅಲ್ಲಿ ಬಹಳವಾಗಿ ದುಃಖಿಸತೊಡಗಿದರು.


ನೆರೆದುಬಂದು ಸಭೆ ಸೇರಿದ್ದ ಇಸ್ರಯೇಲರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನು ಹಾಗು ದ್ರಾಕ್ಷಿ ಹಣ್ಣಿನಿಂದ ಮಾಡಿದ ಉಂಡೆಯನ್ನು ಕೊಡಿಸಿದನು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.


ಹೆಂಗಸರು ಹಾಗು ಗಂಡಸರು ಧಾರಾಳ ಮನಸ್ಸಿನಿಂದ ಸರ್ವೇಶ್ವರನಿಗೆ ಚಿನ್ನದ ಕಾಣಿಕೆಗಳನ್ನು, ಅಂದರೆ ಕಡಗ, ಮೂಗುತಿ, ಮುದ್ರೆಯುಂಗುರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.


ಬಾರ್ನಬನು ಸತ್ಪುರುಷನು, ಪವಿತ್ರಾತ್ಮಭರಿತನು ಹಾಗೂ ಅಗಾಧ ವಿಶ್ವಾಸವುಳ್ಳವನು. ಅನೇಕ ಜನರು ಪ್ರಭುವಿನ ಅನುಯಾಯಿಗಳಾದರು.


ಕ್ರಿಸ್ತಯೇಸುವಿಗೂ ಸೈತಾನನಿಗೂ ಎಲ್ಲಿಯ ನಂಟು? ವಿಶ್ವಾಸಿಗೂ ಅವಿಶ್ವಾಸಿಗೂ ಎಲ್ಲಿಯ ಸಹವಾಸ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು