Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:24 - ಕನ್ನಡ ಸತ್ಯವೇದವು C.L. Bible (BSI)

24 ದೇವಾಲಯದ ದಳಪತಿ ಮತ್ತು ಮುಖ್ಯಯಾಜಕರು ಇದನ್ನು ಕೇಳಿ, ಇದರಿಂದೇನಾಗುವುದೋ ಎಂದು ಕಳವಳಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ದೇವಾಲಯದ ಅಧಿಪತಿಯೂ ಮಹಾಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನಾದೀತೋ ಎಂದು ಕಳವಳಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದೇವಾಲಯದ ಕಾವಲುಗಾರರ ನಾಯಕನು ಮತ್ತು ಮಹಾಯಾಜಕರು ಇದನ್ನು ಕೇಳಿ ಗಲಿಬಿಲಿಗೊಂಡರು. ಇದರಿಂದ ಏನಾಗುವುದೋ ಎಂದು ಅವರು ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಈ ವರದಿಯನ್ನು ಕೇಳಿದಾಗ, ದೇವಾಲಯದ ಕಾವಲುಗಾರರ ದಳಪತಿಯೂ ಮುಖ್ಯಯಾಜಕರೂ ಇದರಿಂದ ಏನಾಗುವುದೋ ಎಂದು ಕಳವಳಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಗುಡಿಚ್ಯಾ ರಾಕ್ವಾಲ್ಯಾಂಚೊ ಮುಖಂಡ್ ಅನಿ ಮುಖ್ಯ್ ಯಾಜಕಾ ಹೆ ಆಯ್ಕಲ್ಯಾ ಮಾನಾ ಅಪೊಸ್ತಲಾಕ್ನಿ ಕಾಯ್ ಹೊವ್ಕ್ ಫಿರೆ ಮನುನ್ ಅಜಾಪ್ ಹೊಲ್ಲ್ಯಾನಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:24
17 ತಿಳಿವುಗಳ ಹೋಲಿಕೆ  

ಆಗ ಆ ದಳಪತಿ ಅಧಿಕಾರಿಗಳೊಡನೆ ಹೋಗಿ ಪ್ರೇಷಿತರನ್ನು ಕರೆದುಕೊಂಡು ಬಂದನು. ಜನರು ತಮ್ಮ ಮೇಲೆ ಕಲ್ಲು ತೂರಬಹುದೆಂಬ ಭಯದಿಂದ ಪ್ರೇಷಿತರ ಮೇಲೆ ಅವರು ಯಾವ ಬಲಪ್ರಯೋಗವನ್ನೂ ಮಾಡಲಿಲ್ಲ.


ಪೇತ್ರ ಮತ್ತು ಯೊವಾನ್ನ ಜನರನ್ನು ಉದ್ದೇಶಿಸಿ ಇನ್ನೂ ಮಾತನಾಡುತ್ತಿದ್ದರು. ಆಗ ಯಾಜಕರೂ ಮಹಾದೇವಾಲಯದ ದಳಪತಿಗಳೂ ಸದ್ದುಕಾಯರೂ ಅಲ್ಲಿಗೆ ಬಂದರು.


ನಡೆದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. ಇದನ್ನು ಅರಿತ ಆ ಸಭಾಸದಸ್ಯರಿಗೆ ಪ್ರೇಷಿತರನ್ನು ಶಿಕ್ಷಿಸುವ ಮಾರ್ಗ ತೋಚದೆಹೋಯಿತು. ಆದುದರಿಂದ ಅವರನ್ನು ಇನ್ನೂ ಅಧಿಕವಾಗಿ ಎಚ್ಚರಿಸಿ ಕಳುಹಿಸಿಬಿಟ್ಟರು.


ಸರ್ವರೂ ಭ್ರಮೆಗೊಂಡು, ಇದರ ಅರ್ಥವಾದರೂ ಏನೆಂದು ಒಬ್ಬರನ್ನು ಒಬ್ಬರು ವಿಸ್ಮಯದಿಂದ ವಿಚಾರಿಸತೊಡಗಿದರು.


ಇದನ್ನೆಲ್ಲಾ ಕಂಡ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ? ನಮ್ಮ ಕೈಯಿಂದ ಏನೂ ಆಗಲಿಲ್ಲ. ಇಡೀ ಜಗತ್ತೇ ಅವನ ಹಿಂದೆ ಹೋಗುತ್ತಿದೆಯಲ್ಲಾ !” ಎಂದುಕೊಂಡರು.


ಅನಂತರ ಯೇಸು ತಮ್ಮನ್ನು ಹಿಡಿಯುವುದಕ್ಕೆ ಬಂದಿದ್ದ ಮುಖ್ಯಯಾಜಕರನ್ನೂ ದೇವಾಲಯದ ಪಹರೆಯ ದಳಪತಿಗಳನ್ನೂ ಪ್ರಮುಖರನ್ನೂ ನೋಡಿ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನು ಮತ್ತು ಲಾಠಿಗಳನ್ನು ತೆಗೆದುಕೊಂಡು ಬಂದಿರುವಿರೋ?


ಆ ಯೂದನು ಮುಖ್ಯಯಾಜಕರ ಬಳಿಗೆ ಹಾಗೂ ಮಹಾದೇವಾಲಯದ ಪಹರೆಯ ದಳಪತಿಗಳ ಬಳಿಗೆ ಹೋಗಿ, ಯೇಸುವನ್ನು ಅವರಿಗೆ ಹಿಡಿದುಕೊಡುವ ವಿಧಾನವನ್ನು ಕುರಿತು ಸಮಾಲೋಚಿಸಿದನು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


“ನಾವು ಸೆರೆಮನೆಗೆ ಹೋದಾಗ ಅದಕ್ಕೆ ಹಾಕಿದ್ದ ಬೀಗ ಮುದ್ರೆಯೇನೋ ಭದ್ರವಾಗಿತ್ತು. ಪಹರೆಯವರು ದ್ವಾರದಲ್ಲಿ ಕಾವಲಿದ್ದರು. ಆದರೆ ದ್ವಾರವನ್ನು ತೆರೆದು ನೋಡಿದಾಗ ಒಳಗೆ ಯಾರನ್ನೂ ನಾವು ಕಾಣಲಿಲ್ಲ,” ಎಂದು ತಿಳಿಸಿದರು.


ಅಷ್ಟರಲ್ಲಿ ಒಬ್ಬನು ಅಲ್ಲಿಗೆ ಬಂದು, “ಇಗೋ, ನೀವು ಸೆರೆಮನೆಯಲ್ಲಿಟ್ಟವರು ದೇವಾಲಯದಲ್ಲಿ ನಿಂತು ಜನರಿಗೆ ಬೋಧಿಸುತ್ತಿದ್ದಾರೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು