Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:26 - ಕನ್ನಡ ಸತ್ಯವೇದವು C.L. Bible (BSI)

26 ಆಗ ಆ ದಳಪತಿ ಅಧಿಕಾರಿಗಳೊಡನೆ ಹೋಗಿ ಪ್ರೇಷಿತರನ್ನು ಕರೆದುಕೊಂಡು ಬಂದನು. ಜನರು ತಮ್ಮ ಮೇಲೆ ಕಲ್ಲು ತೂರಬಹುದೆಂಬ ಭಯದಿಂದ ಪ್ರೇಷಿತರ ಮೇಲೆ ಅವರು ಯಾವ ಬಲಪ್ರಯೋಗವನ್ನೂ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಅಧಿಪತಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು; ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಬಲಾತ್ಕಾರ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ದಳಪತಿ ಮತ್ತು ಅವನ ಜನರು ಹೋಗಿ ಅಪೊಸ್ತಲರನ್ನು ಮರಳಿ ಕರೆತಂದರು. ಆದರೆ ಸೈನಿಕರು ಒತ್ತಾಯ ಮಾಡಲಿಲ್ಲ. ಯಾಕೆಂದರೆ ಅವರು ಜನರಿಗೆ ಭಯಪಟ್ಟರು. ಜನರು ಕೋಪಗೊಂಡು ಕಲ್ಲೆಸೆದು ತಮ್ಮನ್ನು ಕೊಲ್ಲಬಹುದೆಂದು ಅವರು ಹೆದರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ದಳಪತಿಯು ತನ್ನ ಅಧಿಕಾರಿಗಳೊಂದಿಗೆ ಹೋಗಿ ಅಪೊಸ್ತಲರನ್ನು ಕರೆದುಕೊಂಡು ಬಂದನು. ಜನರು ತಮಗೆ ಕಲ್ಲೆಸೆದಾರೆಂಬ ಭಯ ಅವರಿಗಿದ್ದುದರಿಂದ ಅಪೊಸ್ತಲರನ್ನು ಬಲವಂತಮಾಡದೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ಅಧಿಕಾರಿನಿ ಅನಿ ಲೊಕಾನಿ ಜಾವ್ನ್ ಅಪೊಸ್ತಲಾಕ್ನಿ ಬಲ್ವುನ್ ಹಾನ್ಲ್ಯಾನಿ , ಖರೆ ಸೈನಿಕಾನಿ ವತ್ತಾಯ್ ಕರುಕ್ ನಾತ್ ಕಶ್ಯಾಕ್ ಮಟ್ಲ್ಯಾರ್ ತೆನಿ ಲೊಕಾಕ್ನಿ ಭಿಂವ್‍ಲ್ಲ್ಯಾನಿ ಲೊಕಾಕ್ನಿ ರಾಗ್ ಯೆವ್ನ್ ಗುಂಡೆ ಮಾರುನ್ ಅಪ್ನಾಕ್ನಿ ಜಿಂವ್ ಕಾಡ್ತಿಲ್ ಮನುನ್ ಭಿಂವ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:26
13 ತಿಳಿವುಗಳ ಹೋಲಿಕೆ  

ಹೊರಗಿನವರು ಅವರನ್ನು ಬಹಳವಾಗಿ ಹೊಗಳುತ್ತಿದ್ದರೂ ಅವರ ಸಂಗಡ ಸೇರಲು ಯಾರಿಗೂ ಧೈರ್ಯವಿರಲಿಲ್ಲ.


ನಡೆದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. ಇದನ್ನು ಅರಿತ ಆ ಸಭಾಸದಸ್ಯರಿಗೆ ಪ್ರೇಷಿತರನ್ನು ಶಿಕ್ಷಿಸುವ ಮಾರ್ಗ ತೋಚದೆಹೋಯಿತು. ಆದುದರಿಂದ ಅವರನ್ನು ಇನ್ನೂ ಅಧಿಕವಾಗಿ ಎಚ್ಚರಿಸಿ ಕಳುಹಿಸಿಬಿಟ್ಟರು.


ದೇವಾಲಯದ ದಳಪತಿ ಮತ್ತು ಮುಖ್ಯಯಾಜಕರು ಇದನ್ನು ಕೇಳಿ, ಇದರಿಂದೇನಾಗುವುದೋ ಎಂದು ಕಳವಳಗೊಂಡರು.


ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಕೊಲ್ಲಿಸಲು ಆಲೋಚನೆ ಮಾಡುತ್ತಿದ್ದರು; ಜನರ ಭಯ ಅವರಿಗೆ ಇದ್ದುದರಿಂದ ಅದಕ್ಕೆ ಗುಟ್ಟಾದ ಮಾರ್ಗವನ್ನು ಹುಡುಕುತ್ತಿದ್ದರು.


ತಮ್ಮನ್ನೇ ಕುರಿತು ಈ ಸಾಮತಿಯನ್ನು ಹೇಳಿದ್ದಾರೆಂದು ಅರಿತುಕೊಂಡ ಧರ್ಮಶಾಸ್ತ್ರಿಗಳು ಮತ್ತು ಮುಖ್ಯಯಾಜಕರು ಅಲ್ಲೇ ಯೇಸುವನ್ನು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟರು.


ಮನುಷ್ಯರಿಂದ ಬಂದಿತೆಂದು ಹೇಳಿದೆ ವಾದರೆ ಯೊವಾನ್ನನು ಪ್ರವಾದಿಯೆಂದು ಜನರೆಲ್ಲರಿಗೆ ಮನದಟ್ಟಾಗಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರು,” ಎಂದುಕೊಂಡರು.


ಆದರೆ,, ‘ಹಬ್ಬದ ಸಂದರ್ಭದಲ್ಲಿ ನಾವು ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ಜನರು ದಂಗೆಯೆದ್ದಾರು,’ ಎಂದೂ ಮಾತಾಡಿಕೊಂಡರು.


ಅದಕ್ಕೆ ಅವರು ತಮ್ಮತಮ್ಮೊಳಗೇ ಹೀಗೆಂದು ತರ್ಕಮಾಡಲಾರಂಭಿಸಿದರು: “ದೇವರಿಂದ ಬಂತು ಎಂದು ಉತ್ತರಿಸಿದರೆ, ‘ಹಾಗಾದರೆ ನೀವೇಕೆ ಆತನನ್ನು ನಂಬಲಿಲ್ಲ?’ ಎಂದು ಕೇಳುವನು. ‘ಮನುಷ್ಯರಿಂದ ಬಂತು’ ಎಂದು ಹೇಳಿದೆವಾದರೆ ಜನಸಮೂಹಕ್ಕೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೊವಾನ್ನನು ಒಬ್ಬ ಪ್ರವಾದಿಯೆಂದು ಸರ್ವರೂ ಸನ್ಮಾನಿಸುತ್ತಾರೆ,” ಎಂದುಕೊಂಡರು.


ಯೊವಾನ್ನನನ್ನು ಕೊಲ್ಲಿಸಬೇಕೆಂದಿದ್ದರೂ ಹೆರೋದನು ಜನರಿಗೆ ಹೆದರಿದ್ದನು. ಅವರು ಆತನನ್ನು ಪ್ರವಾದಿಯೆಂದು ಭಾವಿಸಿದ್ದರು.


ಅಲ್ಲಿ ಧರ್ಮಶಾಸ್ತ್ರಿಗಳೂ ಪ್ರಮುಖರೂ ಸಭೆಸೇರಿದ್ದರು. ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು, ಹೊರಾಂಗಣವನ್ನು ಹೊಕ್ಕು ಪಹರೆಯವರ ಜೊತೆ ಕುಳಿತುಕೊಂಡನು. ಇದೆಲ್ಲ ಹೇಗೆ ಕೊನೆಗೊಳ್ಳುವುದೆಂದು ನೋಡಬೇಕೆಂಬ ಉದ್ದೇಶ ಅವನದಾಗಿತ್ತು.


ಆ ಯೂದನು ಮುಖ್ಯಯಾಜಕರ ಬಳಿಗೆ ಹಾಗೂ ಮಹಾದೇವಾಲಯದ ಪಹರೆಯ ದಳಪತಿಗಳ ಬಳಿಗೆ ಹೋಗಿ, ಯೇಸುವನ್ನು ಅವರಿಗೆ ಹಿಡಿದುಕೊಡುವ ವಿಧಾನವನ್ನು ಕುರಿತು ಸಮಾಲೋಚಿಸಿದನು.


ಈ ಅಧಿಕಾರಿಗಳು ಸೆರೆಮನೆಗೆ ಬಂದಾಗ ಅಲ್ಲಿ ಪ್ರೇಷಿತರನ್ನು ಕಾಣಲಿಲ್ಲ. ಹಿಂದಿರುಗಿ ಹೋಗಿ ನ್ಯಾಯಸಭೆಗೆ ಈ ವಿಷಯವನ್ನು ವರದಿಮಾಡಿದರು;


ಅಷ್ಟರಲ್ಲಿ ಒಬ್ಬನು ಅಲ್ಲಿಗೆ ಬಂದು, “ಇಗೋ, ನೀವು ಸೆರೆಮನೆಯಲ್ಲಿಟ್ಟವರು ದೇವಾಲಯದಲ್ಲಿ ನಿಂತು ಜನರಿಗೆ ಬೋಧಿಸುತ್ತಿದ್ದಾರೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು