Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಪೇತ್ರನು, “ಅನನೀಯಾ, ನಿನ್ನ ಆಸ್ತಿಯ ವಿಕ್ರಯದಿಂದ ಬಂದ ಹಣದ ಒಂದು ಭಾಗವನ್ನು ಬಚ್ಚಿಟ್ಟುಕೊಂಡು, ನೀನು ಪವಿತ್ರಾತ್ಮ ಅವರಿಗೆ ಏಕೆ ವಂಚನೆಮಾಡಿದೆ? ನಿನ್ನ ಹೃದಯದಲ್ಲಿ ಪಿಶಾಚಿಗೇಕೆ ಎಡೆಮಾಡಿಕೊಟ್ಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಪೇತ್ರನು - ಅನನೀಯಾ, ಸೈತಾನನು ನಿನ್ನ ಹೃದಯದಲ್ಲಿ ತುಂಬಿಕೊಂಡದ್ದೇನು? ನೀನು ಯಾಕೆ ಆ ಹೊಲದ ಕ್ರಯದಲ್ಲಿ ಕೆಲವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸಬೇಕೆಂದಿದ್ದೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪೇತ್ರನು, “ಅನನೀಯನೇ, ನಿನ್ನ ಹೃದಯವನ್ನು ಆಳಲು ನೀನು ಸೈತಾನನಿಗೆ ಒಪ್ಪಿಸಿಕೊಟ್ಟದ್ದೇಕೆ? ನೀನು ಸುಳ್ಳು ಹೇಳಿ, ಪವಿತ್ರಾತ್ಮನನ್ನು ಮೋಸಪಡಿಸಲು ಪ್ರಯತ್ನಿಸಿದೆ. ನೀನು ನಿನ್ನ ಜಮೀನನ್ನು ಮಾರಿದೆ, ಆದರೆ ಬಂದ ಹಣದಲ್ಲಿ ಒಂದು ಭಾಗವನ್ನು ನೀನು ನಿನಗೋಸ್ಕರ ಇಟ್ಟುಕೊಂಡದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಪೆದ್ರುನ್ ತೆಕಾ ಅನನಿಯಾಕ್ , ತುಜೆ ಸೆತ್ ಇಕುನ್ ಗಾವಾಲ್ಯಾ ಪೈಸಾತ್ ನಿಪ್ವುನ್ ಥವ್ನ್ ಘೆವ್ನ್ ಪವಿತ್ರ್ ಆತ್ಮ್ಯಾಕ್ ಮೊಸ್ ಕರ್ತೆ ಕಾಯ್ ಅನಿ ತುಜ್ಯಾ ಮನಾತ್ ಸೈತಾನಾಕ್ ಜಾಗೊ ದಿವಲ್ಲೆ ನ್ಹಯ್ ಮನುನ್ ಸಾಂಗ್ಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:3
25 ತಿಳಿವುಗಳ ಹೋಲಿಕೆ  

ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?


ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ.


ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ಪೇತ್ರನು, “ನೀನೂ ನಿನ್ನ ಪತಿಯೂ ಸರ್ವೇಶ್ವರನ ಆತ್ಮವನ್ನು ಪರೀಕ್ಷಿಸಲು ಹವಣಿಸಿದಿರೋ? ಇಗೋ, ನಿನ್ನ ಪತಿಯನ್ನು ಸಮಾಧಿಮಾಡಿಬಂದವರ ಕಾಲಿನ ಸಪ್ಪಳ. ಅವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದನು.


ಯೂದನು ಅದನ್ನು ತೆಗೆದುಕೊಂಡದ್ದೇ ತಡ, ಸೈತಾನನು ಅವನನ್ನು ಹೊಕ್ಕನು.


(ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).


ಆದ್ದರಿಂದ ದೇವರಿಗೆ ಶರಣರಾಗಿ ಬಾಳಿ, ಸೈತಾನನನ್ನು ಎದುರಿಸಿ ನಿಲ್ಲಿ. ಅವನು ನಿಮ್ಮಿಂದ ಪಲಾಯನಗೈಯುವನು.


ದೇವರಿಗೆ ನೀನು ಹರಕೆಯನ್ನು ಹೊತ್ತರೆ ತೀರಿಸಲು ತಡಮಾಡಬೇಡ. ದೇವರು ಮೂಢರಿಗೆ ಒಲಿಯುವುದಿಲ್ಲ. ನಿನ್ನ ಹರಕೆಯನ್ನು ತಪ್ಪದೆ ತೀರಿಸು.


ಈ ನಿಮಿತ್ತ ನೀನು, ‘ದೇವರಿಗೇನು ಗೊತ್ತು? ನ್ಯಾಯ ತೀರಿಸಬಲ್ಲನೆ ಕಾರ್ಗತ್ತಲು ಅಡ್ಡವಿರಲು?


ಮಾರುವುದಕ್ಕೆ ಮೊದಲು ಆಸ್ತಿ ನಿನಗೇ ಸೇರಿತ್ತು; ಮಾರಿದ ನಂತರವೂ ಅದರ ಹಣ ನಿನ್ನದೇ ಆಗಿತ್ತು. ಹೀಗಿರುವಲ್ಲಿ ಇಂಥಾ ದುಷ್ಟಯೋಚನೆ ಮಾಡಲು ನೀನೇಕೆ ಮನಸ್ಸುಮಾಡಿದೆ? ನೀನು ಸುಳ್ಳಾಡಿರುವುದು ಮನುಷ್ಯರಿಗಲ್ಲ, ದೇವರಿಗೆ,” ಎಂದನು.


ಬಂದ ಹಣದಲ್ಲಿ ಒಂದು ಭಾಗವನ್ನು ಅನನೀಯನು, ತನ್ನ ಪತ್ನಿಯ ಸಮ್ಮತಿ ಪಡೆದು, ಬಚ್ಚಿಟ್ಟುಕೊಂಡನು. ಉಳಿದುದನ್ನು ಪ್ರೇಷಿತರಿಗೆ ಪಾದಕಾಣಿಕೆಯಾಗಿ ಒಪ್ಪಿಸಿದನು.


ಅಷ್ಟರಲ್ಲಿ ಯೇಸುವಿನ ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತಿನ ಯೂದನು ಸೈತಾನನಿಗೆ ವಶನಾದನು.


“ನಿಮ್ಮ ದೇವರಾದ ಸರ್ವೇಶ್ವರನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಅವರು ತಪ್ಪದೆ ಅದನ್ನು ವಿಚಾರಿಸುವರು; ತೀರಿಸದೆ ಹೋಗುವುದು ಪಾಪ.


“ನಿಮ್ಮಲ್ಲಿ ಯಾರಾದರು ಸರ್ವೇಶ್ವರನಿಗೆ ಹರಕೆ ಮಾಡಿದರೆ, ಇಲ್ಲವೆ ತಾನು ವಸ್ತುವೊಂದನ್ನು ಮುಟ್ಟುವುದಿಲ್ಲವೆಂದು ಆಣೆಯಿಟ್ಟು ಹೇಳಿದರೆ ಅಂಥವನು ತನ್ನ ಮಾತನ್ನು ಮೀರದೆ ನುಡಿದಂತೆ ನೆರವೇರಿಸಬೇಕು.


ಒಬ್ಬನು ಶ್ರೀಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


“ಎಫ್ರಯಿಮಿನ ಸುಳ್ಳುತನ, ಇಸ್ರಯೇಲಿನ ಕಪಟತನ ನನ್ನನ್ನು ಮುತ್ತಿಕೊಂಡಿವೆ. ಸತ್ಯಸ್ವರೂಪಿಯೂ ಪರಮಪಾವನರೂ ಆದ ದೇವರಿಂದ ದೂರವಾಗಿ ಜುದೇಯವು ಅಲೆಯುತ್ತಿದೆ.


ದುಡುಕಿ ದೇವರಿಗೆ ಮುಡಿಪುಕಟ್ಟುವುದು, ಹರಕೆ ಹೊತ್ತ ಮೇಲೆ ವಿಚಾರಮಾಡುವುದು, ಉರುಳಿಗೆ ಸಿಕ್ಕಿಕೊಂಡಂತೆ ಆಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು