Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:31 - ಕನ್ನಡ ಸತ್ಯವೇದವು C.L. Bible (BSI)

31 ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ ಪಾಪಪರಿಹಾರವನ್ನೂ ದಯಪಾಲಿಸುವದಕ್ಕಾಗಿ ನಾಯಕನೆಂತಲೂ ರಕ್ಷಕನೆಂತಲೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ದೇವರಿಂದ ಆತನ ಬಲಗಡೆಗೆ ಏರಿಸಲ್ಪಟ್ಟಾತನೇ ಯೇಸು. ಎಲ್ಲಾ ಯೆಹೂದ್ಯರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದರ ಮೂಲಕ ಪಾಪಕ್ಷಮೆ ಹೊಂದಿಕೊಳ್ಳಲೆಂದು ದೇವರು ಯೇಸುವನ್ನು ನಮ್ಮ ನಾಯಕನನ್ನಾಗಿಯೂ ರಕ್ಷಕನನ್ನಾಗಿಯೂ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಇಸ್ರಾಯೆಲಾಚಿ ಲೊಕಾ ಪಾಪಾಸಾಟಿ ಮನ್ ಪರ್ತುನ್ ಪಾಪಾಕ್ನಾ ಸುಟ್ಕಾ ಘೆವ್ಕ್ ಸಾಟ್ನಿ ದೆವಾನ್ ತೆಕಾ ಅಮ್ಚೊ ರಾಕ್ನಾರಿ ಅನಿ ಮುಂಖಡ್ ಕರುನ್ ಅಪ್ಲ್ಯಾ ಉಜ್ವ್ಯಾ ಬಾಜುಕ್ ಬಸ್ವುನ್ ಘೆಟ್ಲಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:31
57 ತಿಳಿವುಗಳ ಹೋಲಿಕೆ  

ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು.


ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ.


ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ನಮ್ಮ ಉದ್ಧಾರಕರಾದ ಏಕೈಕ ದೇವರಿಗೆ ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಅಧಿಪತ್ಯ, ಅಧಿಕಾರ ಆದಿಯಲ್ಲಿ ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲಿ! ಆಮೆನ್.


ನಮ್ಮ ಪ್ರಭು ಹಾಗೂ ಉದ್ಧಾರಕ ಯೇಸುಕ್ರಿಸ್ತರ ಅಮರ ರಾಜ್ಯವನ್ನು ಪ್ರವೇಶಿಸುವ ಭಾಗ್ಯವನ್ನು ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.


ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಈ ಪುತ್ರನಲ್ಲಿ ನಮಗೆ ಪಾಪಕ್ಷಮೆ ದೊರಕಿದೆ, ವಿಮೋಚನೆ ಲಭಿಸಿದೆ.


ನಾವಾದರೋ ಸ್ವರ್ಗಸಾಮ್ರಾಜ್ಯದ ಪ್ರಜೆಗಳು, ಉದ್ಧಾರಕರಾದ ಪ್ರಭು ಯೇಸುಕ್ರಿಸ್ತರು ಪುನರಾಗಮಿಸುವುದು ಅಲ್ಲಿಂದಲೇ ಎಂದು ಎದುರುನೋಡುತ್ತಿದ್ದೇವೆ.


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ನೀವು ಯಾರನ್ನು ಕ್ಷಮಿಸುತ್ತೀರೋ ಅವನನ್ನು ನಾನೂ ಕ್ಷಮಿಸುತ್ತೇನೆ. ನಾನು ಯಾವುದನ್ನಾದರೂ ಕ್ಷಮಿಸಿದ್ದರೆ ಅಥವಾ ಕ್ಷಮಿಸಬೇಕಾಗಿದ್ದರೆ ಅದನ್ನು ಕ್ರಿಸ್ತಯೇಸುವಿನ ಸಮ್ಮುಖದಲ್ಲಿ ನಿಮಗೋಸ್ಕರ ಕ್ಷಮಿಸುತ್ತೇನೆ.


ಈ ದಾವೀದನ ಸಂತತಿಯಿಂದಲೇ ದೇವರು ತಮ್ಮ ವಾಗ್ದಾನದ ಪ್ರಕಾರ ಇಸ್ರಯೇಲ್ ಜನರಿಗೆ ಒಬ್ಬ ಉದ್ಧಾರಕನನ್ನು ಕಳುಹಿಸಿದರು. ಇವರೇ ಯೇಸುಸ್ವಾಮಿ.


ನೀವು ಶಿಲುಬೆಗೇರಿಸಿ ಕೊಂದದ್ದು ಈ ಯೇಸುವನ್ನೇ. ದೇವರು ಅವರನ್ನು ಪುನರುತ್ಥಾನಗೊಳಿಸಿದ್ದಾರೆ. ‘ಮನೆಕಟ್ಟುವವರಾದ ನೀವು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು’ ಎಂದು ಬರೆದಿರುವುದು ಇವರನ್ನು ಕುರಿತೇ.


ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


“ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುಸ್ವಾಮಿಯನ್ನೇ ದೇವರು ಪ್ರಭುವನ್ನಾಗಿಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ.”


‘ಕಣ್ಣಾರೆ ನೋಡಿಯೂ ಅವರು ಕಾಣರು; ಕಿವಿಯಾರೆ ಕೇಳಿಯೂ ಅವರು ಗ್ರಹಿಸರು. ಕಂಡು ಗ್ರಹಿಸಿದರೆ ಅವರು ದೇವರತ್ತ ತಿರುಗಿಯಾರು; ಪಾಪಕ್ಷಮೆ ಹೊಂದಿಯಾರು’,” ಎಂದರು.


ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರವುಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ,


ಸತ್ಯಗ್ರಂಥದಲ್ಲಿ ಲಿಖಿತವಾದುದನ್ನು ಈಗ ನಿನಗೆ ತಿಳಿಸುತ್ತೇನೆ. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಕಾವಲುದೂತನಾದ ಮಿಕಾಯೇಲನ ಹೊರತು ನನಗೆ ಬೆಂಬಲಿಗರಾಗತಕ್ಕವರು ಇನ್ನಾರೂ ಇಲ್ಲ.


ಇದನ್ನು ತಿಳಿದು ಮನದಟ್ಟು ಮಾಡಿಕೊ, ‘ಹಿಂದಿರುಗಿ ಜೆರುಸಲೇಮನ್ನು ಪುನರ್‍ ನಿರ್ಮಿಸಿ’ ಎಂಬ ದೈವೋಕ್ತಿ ಹೊರಡುವಂದಿನಿಂದ ಪ್ರಭುವಾಗಿ ಅಭಿಷಿಕ್ತನಾದವನು ಬರುವುದರೊಳಗೆ ಏಳು ಸಾರಿ ಏಳು ವರ್ಷಗಳು ಕಳೆಯಬೇಕು. ಅದು ಪುನಃ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಕಟ್ಟಲ್ಪಟ್ಟು ಏಳು ಸಾರಿ ಅರವತ್ತೆರಡು ವರ್ಷಗಳು ಇರುವುದು. ಆ ಕಾಲವು ಬಹು ಕಷ್ಟಕರವಾದ ಕಾಲವಾಗಿರುವುದು.


ನನ್ನ ದಾಸ ಯಕೋಬನಿಗೆ ನಾನು ದಯಪಾಲಿಸಿದ ನಾಡಿನಲ್ಲಿ ಅವರು ವಾಸಿಸುವರು. ಹೌದು, ನಿಮ್ಮ ಪಿತೃಗಳು ವಾಸಿಸಿದ ನಾಡಿನಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ದಾಸ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ಸರ್ವೇಶ್ವರನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ದಾಸ ದಾವೀದನು ಅವರನ್ನಾಳುವ ಪ್ರಭುವಾಗಿರುವನು; ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.


ಆಶ್ರಯ ಪಡೆವುವು ಅದರ ರೆಂಬೆಗಳ ನೆರಳಲಿ, ಆಗ ತಿಳಿವುವು ವನದ ವೃಕ್ಷಗಳು: ಎತ್ತರವಾದ ಮರಗಳ ತಗ್ಗಿಸುವವನು ತಗ್ಗಾದುದನು ಎತ್ತರಪಡಿಸುವವನು ಹಸುರಾದುದನು ಒಣಗಿಸುವವನು ಒಣಗಿದುದನು ಚಿಗುರಿಸುವವನು ಸರ್ವೇಶ್ವರ ನಾನೇ ಎಂದು ಇದ ನುಡಿದವ ನಾನು, ನುಡಿದುದನು ನಡೆಸುವವ ನಾನು.”


ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.


ಹೇಳಿ, ನ್ಯಾಯಸ್ಥಾನಕ್ಕೆ ಬಂದು ನಿಮ್ಮ ವಾದವನ್ನು ಮಂಡಿಸಿ; ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಪರ್ಯಾಲೋಚಿಸಿ ನೋಡಲಿ. ಪ್ರಾರಂಭದಿಂದಲೂ ಈ ವಿಷಯವನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮುಂಚೆಯೇ ತಿಳಿಸಿದವನು ನಾನಲ್ಲದೆ ಇನ್ಯಾರು? ನನ್ನ ಹೊರತು ಇನ್ನು ಯಾವ ದೇವರೂ ಇಲ್ಲ; ನಾನಲ್ಲದೆ ಸತ್ಯಸ್ವರೂಪನು, ಉದ್ಧಾರಕನು ಆದ ದೇವನಿಲ್ಲವೇ ಇಲ್ಲ.


“ನಾನು, ನಾನೇ ಸರ್ವೇಶ್ವರ, ನನ್ನ ಹೊರತು ಇಲ್ಲ ಬೇರೆ ಉದ್ಧಾರಕ.


ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


ನಿನ್ನ ಪ್ರೀತಿಸತ್ಯತೆಗಳು ಇರುವುವು ಅವನೊಂದಿಗೆ I ನನ್ನ ನಾಮ ಪ್ರಯುಕ್ತ ಕೋಡು ಮೂಡುವುದವನಿಗೆ II


ಹಿಂದೊಮ್ಮೆ ನೀ ದರ್ಶನವಿತ್ತು ಇಂತೆಂದೆ ನಿನ್ನ ಭಕ್ತರಿಗೆ: I “ರಕ್ಷಾಬಲವನು ಅನುಗ್ರಹಿಸಿರುವೆ ಶೂರವೀರನೋರ್ವನಿಗೆ I ಪ್ರಜೆಗಳಲೊರ್ವ ಯುವಕನನು ಏರಿಸಿರುವೆ ಉನ್ನತಸ್ಥಾನಕೆ II


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ನಮ್ಮ ಪ್ರಭು ಹಾಗೂ ಉದ್ಧಾರಕರಾದ ಯೇಸುಕ್ರಿಸ್ತರನ್ನು ಕುರಿತ ಜ್ಞಾನದ ಮೂಲಕ ಕೆಲವರು ಲೋಕದ ಕಲ್ಮಶದಿಂದ ಪಾರಾಗಿ ನಿರ್ಮಲರಾಗುತ್ತಾರೆ. ಇಂಥವರು ಮರಳಿ ಅದರಲ್ಲೇ ಸಿಲುಕಿಕೊಂಡು ಅದಕ್ಕೆ ಗುಲಾಮರಾದರೆ ಅವರ ಅಂತಿಮ ಗತಿ ಮೊದಲ ಗತಿಗಿಂತಲೂ ಅಧೋಗತಿಯಾಗಿರುತ್ತದೆ.


ಬದಲಿಗೆ, ತಾವು ಒಳ್ಳೆಯವರು ಮತ್ತು ಸ್ವಾಮಿನಿಷ್ಠೆಯುಳ್ಳವರು ಎಂದು ಹೆಸರು ಪಡೆಯಲಿ. ಜಗದ್ರಕ್ಷಕರಾದ ದೇವರ ಉಪದೇಶಕ್ಕೆ ಎಲ್ಲಾ ವಿಧದಲ್ಲೂ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಬೋಧಿಸು.


ಆಗ ಅವರು, ಆ ಮಹಿಳೆಗೆ, “ನೀನು ಹೇಳಿದುದರಿಂದ ಮಾತ್ರವೇ ಈಗ ನಾವು ನಂಬುತ್ತಿಲ್ಲ, ನಾವೇ ಕಿವಿಯಾರೆ ಕೇಳಿ ನಂಬಿದ್ದೇವೆ; ಲೋಕೋದ್ಧಾರಕ ಇವರೇ ಎಂದು ನಮಗೀಗ ತಿಳಿಯಿತು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು