Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:1 - ಕನ್ನಡ ಸತ್ಯವೇದವು C.L. Bible (BSI)

1 ಇತ್ತ ಭಕ್ತವಿಶ್ವಾಸಿಗಳ ಸಂಖ್ಯೆ ಹೆಚ್ಚುತ್ತಾ ಬಂದಿತು. ಆಗ ಗ್ರೀಕ್ ಮಾತನಾಡುತ್ತಾ ಇದ್ದವರ ಹಾಗೂ ಸ್ಥಳೀಯ ಭಾಷೆ ಮಾತನಾಡುತ್ತಿದ್ದವರ ನಡುವೆ ಬಿನ್ನಾಭಿಪ್ರಾಯ ಉಂಟಾಯಿತು. ದಿನನಿತ್ಯ ಮಾಡುವ ದೀನದಲಿತರ ಸೇವೆಯಲ್ಲಿ ತಮ್ಮ ಕಡೆಯ ವಿಧವೆಯರನ್ನು ಅಲಕ್ಷ್ಯಮಾಡಲಾಗುತ್ತಿದೆ ಎಂದು ಗ್ರೀಕರು ಗೊಣಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ದಿವಸಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್‍ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ - ದಿನದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವದಿಲ್ಲವೆಂದು ಗುಣುಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸುವಿನ ಶಿಷ್ಯರ ಸಂಖ್ಯೆಯು ಹೆಚ್ಚುಹೆಚ್ಚಾಗುತ್ತಿತ್ತು. ಆದರೆ ಈ ಸಮಯದಲ್ಲಿ ಗ್ರೀಕ್ ಮಾತಾಡುವ ಶಿಷ್ಯರು ಯೆಹೂದ್ಯ ಶಿಷ್ಯರಿಗೆ ದೂರು ಹೇಳಿದರು. ಪ್ರತಿದಿನ ಶಿಷ್ಯರಿಗೆ ಕೊಡುವಂಥವುಗಳಲ್ಲಿ ತಮ್ಮ ವಿಧವೆಯರಿಗೆ ಅವರ ಪಾಲು ದೊರೆಯುತ್ತಿಲ್ಲವೆಂದು ಅವರು ಆಪಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ದಿನಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಅವರಲ್ಲಿ ಗ್ರೀಕ್ ಮಾತನಾಡುವ ಯೆಹೂದ್ಯರು, ಹೀಬ್ರೂ ಭಾಷೆ ಮಾತನಾಡುವ ಯೆಹೂದ್ಯರ ವಿರೋಧವಾಗಿ ಗೊಣಗುಟ್ಟುತ್ತಿದ್ದರು. ಏಕೆಂದರೆ, “ಅನುದಿನದ ಉಪಚಾರದಲ್ಲಿ ಅವರು ತಮ್ಮ ವಿಧವೆಯರನ್ನು ಅಲಕ್ಷ್ಯಮಾಡುತ್ತಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜುಚ್ಯಾ ಶಿಸಾಂಚೊ ಅಂಕೊ ಜಾಸ್ತಿ ಹೊವ್ನನ್ಗೆತ್ ಹೊತ್ತೊ, ಖರೆ ತ್ಯಾ ಎಳಾರ್ ಗ್ರಿಕ್ ಬೊಲ್ತಲ್ಯಾ ಅನಿ ಥೈಚ್ ರಾತಲ್ಯಾ ಜುದೆವಾಂಚ್ಯಾ ಮದ್ದಿ ಝಗ್ಡೊ ಉಟ್ಲೊ, ಗ್ರಿಕ್ ಬೊಲ್ತಲ್ಯಾ ಜುದೆವಾನಿ ಅಪ್ನಾಚ್ಯಾ ಮದ್ಲ್ಯಾ ವಿದವ್ ಬಾಯ್ಕಾಕ್ನಿ ಸದ್ದಿಚ್ಯಾ ವಾಟ್ನಿಚ್ಯಾ ಎಳಾರ್ ಧ್ಯಾನ್ ದಿವ್ನ್ ಹೊಯ್ನಾ ಹೊಲಾ ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:1
38 ತಿಳಿವುಗಳ ಹೋಲಿಕೆ  

ಕಾರಣ - ಹೊಲಗದ್ದೆ, ಮನೆಮಾರು ಇದ್ದವರೆಲ್ಲರೂ ಅವುಗಳನ್ನು ವಿಕ್ರಯಿಸಿ, ಬಂದ ಹಣವನ್ನು ತಂದು ಪ್ರೇಷಿತರಿಗೆ ಪಾದಕಾಣಿಕೆಯಾಗಿ ಒಪ್ಪಿಸುತ್ತಿದ್ದರು. ಇವರು ಅದನ್ನು ಪ್ರತಿ ಒಬ್ಬರಿಗೂ ಅವರವರ ಅವಶ್ಯಕತೆಗೆ ತಕ್ಕಂತೆ ಹಂಚುತ್ತಿದ್ದರು.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.


ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ.


ಪೇತ್ರನು ಎದ್ದು ಅವರ ಜೊತೆಯಲ್ಲೇ ಹೊರಟುಬಂದನು. ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ಅಲ್ಲಿ ಕೂಡಿದ್ದ ವಿಧವೆಯರೆಲ್ಲರೂ ಅವನ ಸುತ್ತುವರಿದು ಅಳುತ್ತಾ, ದೋರ್ಕಳು ಜೀವದಿಂದ ಇದ್ದಾಗ ತಮಗೆ ಮಾಡಿಕೊಟ್ಟ ಬಟ್ಟೆಬರೆಗಳನ್ನು ಅವನಿಗೆ ತೋರಿಸಿದರು.


ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.


ದೇವರನ್ನು ಸ್ತುತಿಸುತ್ತಾ ಸಕಲರಿಗೆ ಅಚ್ಚುಮೆಚ್ಚಾಗಿ ಬಾಳುತ್ತಿದ್ದರು. ಜೀವೋದ್ಧಾರವನ್ನು ಹೊಂದುತ್ತಿದ್ದವರನ್ನೆಲ್ಲಾ ಪ್ರಭು ಈ ಸಭೆಗೆ ದಿನೇದಿನೇ ಸೇರಿಸಿಕೊಳ್ಳುತ್ತಿದ್ದರು.


ಹುಟ್ಟಿದ ಎಂಟನೆಯ ದಿನ ನನಗೆ ಸುನ್ನತಿಯಾಯಿತು; ಹುಟ್ಟಿನಿಂದ ನಾನು ಇಸ್ರಯೇಲನು, ಬೆನ್ಯಮೀನ ಕುಲದವನು; ಅಪ್ಪಟ ಹಿಬ್ರಿಯನು,


ಸೈಪ್ರಸ್ ಮತ್ತು ಸಿರೇನಿನ ಕೆಲವು ಭಕ್ತರಾದರೋ ಅಂತಿಯೋಕ್ಯಕ್ಕೆ ಹೋಗಿ ಪ್ರಭು ಯೇಸುವಿನ ಶುಭಸಂದೇಶವನ್ನು ಗ್ರೀಕರಿಗೂ ಸಾರಿದರು.


ಪೇತ್ರನು ಕೈ ನೀಡಿ ಆಕೆಯನ್ನು ಎತ್ತಿ ನಿಲ್ಲಿಸಿದನು. ಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ತಬಿಥಳನ್ನು ಅವರಿಗೆ ತೋರಿಸಿದನು.


ಗ್ರೀಕ್ ಮಾತನಾಡುತ್ತಿದ್ದ ಯೆಹೂದ್ಯರೊಡನೆ ಸಂಭಾಷಿಸುತ್ತಾ ಅವರ ವಿರುದ್ಧ ವಾದಿಸುತ್ತಿದ್ದನು. ಅವರಾದರೋ ಅವನನ್ನು ಕೊಲ್ಲಲು ಹವಣಿಸಿದರು.


ಆದರೂ ಪ್ರಭುವನ್ನು ವಿಶ್ವಾಸಿಸುತ್ತಿದ್ದ ಸ್ತ್ರೀಪುರುಷರ ಸಂಖ್ಯೆ ಅಧಿಕವಾಗುತ್ತಾ ಬಂದಿತು.


ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಾದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.


ಸೋದರ ಪ್ರೀತಿಯಲ್ಲಿ ನೆಲೆಯಾಗಿ ನಿಲ್ಲಿರಿ.


ಅವರು ಹಿಬ್ರಿಯರೋ? ನಾನೂ ಹಿಬ್ರಿಯನೇ. ಅವರು ಇಸ್ರಯೇಲರೋ? ನಾನೂ ಇಸ್ರಯೇಲನೇ. ಅವರು ಅಬ್ರಹಾಮನ ವಂಶದವರೋ? ನಾನೂ ಅದೆ ವಂಶದವನೇ.


ತಮ್ಮ ತಮ್ಮ ಆಸ್ತಿಪಾಸ್ತಿಯನ್ನು ಮಾರಿ ಬಂದ ಹಣವನ್ನು ಅವರವರ ಅವಶ್ಯಕತೆಗೆ ತಕ್ಕಂತೆ ಎಲ್ಲರಿಗೂ ಹಂಚುತ್ತಿದ್ದರು.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಅವುಗಳಿಂದ ಸ್ತುತಿಸ್ತೋತ್ರ ಕೇಳಿಬರುವುದು ಅಲ್ಲಿಂದ ನಲಿವುನಾದ ಕೇಳಿಸುವುದು. ಆ ಜನರನ್ನು ಹೆಚ್ಚಿಸುವೆನು, ಅವರು ಕೊಂಚವಾಗಿರರು. ಅವರನ್ನು ಘನಪಡಿಸುವೆನು, ಅವರು ಹೀನರಾಗಿರರು.


ಮುಂಬರುವ ಕಾಲದಲಿ ಬೇರೂರುವುದು ಯಕೋಬ ಸಂತಾನ. ಚಿಗುರಿ ಹೂ ಬಿಡುವುದು ಇಸ್ರಯೇಲ್ ಮನೆತನ, ಆ ವೃಕ್ಷಫಲದಿಂದ ತುಂಬಿರುವುದು ಜಗದೆಲ್ಲ ಜನ.


ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.


ಸಮೃದ್ಧಿಯಾಗಲಿ ನಾಡಿನ ದವಸಧಾನ್ಯ ನೆಲಮಲೆಗಳ ಮೇಲೆ I ಸೊಂಪಾಗಲಿ ಅದರ ಹಣ್ಣುಹಂಪಲು ಲೆಬನೋನಿನ ಮರಗಳಂತೆ I ಹುಲುಸಾಗಲಿ ನಗರ ನಿವಾಸಿಗಳ ಸಂಖ್ಯೆ ಬಯಲಿನ ಹುಲ್ಲಿನಂತೆ II


“ದೇವರು ನಮ್ಮಲ್ಲಿ ಇರುವ ಆತ್ಮವನ್ನು ಅತ್ಯಾಸಕ್ತಿಯಿಂದ ಅಪೇಕ್ಷಿಸುತ್ತಾರೆ,” ಎಂಬ ಪವಿತ್ರಗ್ರಂಥದ ವಾಕ್ಯವು ಹುರುಳಿಲ್ಲದ್ದೆಂದು ಭಾವಿಸುವಿರಾ?


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ಅರವತ್ತು ವರ್ಷಕ್ಕೆ ಕಡಿಮೆಯಿಲ್ಲದ ವಿಧವೆಯನ್ನು, ವಿಧವೆಯರ ಪಟ್ಟಿಗೆ ಸೇರಿಸಿಕೊಳ್ಳಬಹುದು. ಅಂಥವಳು ಒಂದೇ ಸಾರಿ ಮದುವೆ ಆದವಳಾಗಿರಬೇಕು.


ಮತ್ತೆ ಕೆಲವರು ಗೊಣಗುಟ್ಟಿದರು; ಸಂಹಾರಕ ದೂತನಿಂದ ಸಂಹರಿಸಲ್ಪಟ್ಟರು. ನೀವೂ ಅವರಂತೆ ಗೊಣಗುಟ್ಟುವವರಾಗಬೇಡಿ.


“ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎಂದು ನಿಮಗೆ ಕಟ್ಟಪ್ಪಣೆ ಮಾಡಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಬೋಧನೆ ಜೆರುಸಲೇಮ್ ಆದ್ಯಂತ ಹಬ್ಬಿಹರಡಿದೆ. ಅಷ್ಟುಮಾತ್ರವಲ್ಲ, ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದಿರುವಿರಿ,” ಎಂದು ಆಪಾದಿಸಿದನು.


ನಿನ್ನವರು ತಾಯಿತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಯರನ್ನು ಬಾದಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ಬಡವರ ಬಯಕೆಗಳನು ನಾನು ಭಂಗಪಡಿಸಿದೆನೋ? ವಿಧವೆಯ ಕಣ್ಣುಗಳನು ನಾನು ಮಂಕಾಗಿಸಿದೆನೋ?


ಸಾಯುತ್ತಿದ್ದವನು ಹರಸುತ್ತಿದ್ದುದು ನನ್ನನೇ ವಿಧವೆಯ ಹೃದಯ ನಲಿಯುವಂತೆ ಮಾಡುತ್ತಿದ್ದುದು ನಾನೇ.


“ದಶಮಾಂಶವನ್ನು ಕೊಡಬೇಕಾದ ಮೂರನೆಯ ಸಂವತ್ಸರದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ಪ್ರತ್ಯೇಕಿಸಿದಾಗ ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರು, ಪರದೇಶಿಗಳು, ತಾಯಿತಂದೆಯಿಲ್ಲದವರು ಹಾಗು ವಿಧವೆಯರೂ ಉಂಡು ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕು.


ಆಗ ಹನ್ನೆರಡುಮಂದಿ ಪ್ರೇಷಿತರು ಭಕ್ತವಿಶ್ವಾಸಿಗಳ ಸಭೆಯನ್ನು ಕರೆದು, “ನಾವು ದೇವರ ವಾಕ್ಯದ ಬೋಧನೆಯನ್ನು ಅವಗಣಿಸಿ ಊಟೋಪಚಾರಗಳ ಸೇವೆಯಲ್ಲಿ ಮಗ್ನರಾಗಿ ಇರುವುದು ಸರಿಯಲ್ಲ.


ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.


ಆಗ ಭಕ್ತರಲ್ಲಿ ಪ್ರತಿಯೊಬ್ಬರು ತಮ್ಮ ಶಕ್ತಿಗನುಸಾರ ಜುದೇಯದಲ್ಲಿ ವಾಸಿಸುತ್ತಿದ್ದ ಭಕ್ತಾದಿಗಳಿಗೆ ನೆರವು ನೀಡಲು ನಿರ್ಧರಿಸಿದರು.


ಸೇವಕನು ಸೇವೆಯಲ್ಲಿಯೂ ಬೋಧಕನು ಬೋಧಿಸುವುದರಲ್ಲಿಯೂ


ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು