Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:2 - ಕನ್ನಡ ಸತ್ಯವೇದವು C.L. Bible (BSI)

2 ಆಗ ಹನ್ನೆರಡುಮಂದಿ ಪ್ರೇಷಿತರು ಭಕ್ತವಿಶ್ವಾಸಿಗಳ ಸಭೆಯನ್ನು ಕರೆದು, “ನಾವು ದೇವರ ವಾಕ್ಯದ ಬೋಧನೆಯನ್ನು ಅವಗಣಿಸಿ ಊಟೋಪಚಾರಗಳ ಸೇವೆಯಲ್ಲಿ ಮಗ್ನರಾಗಿ ಇರುವುದು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಒಟ್ಟುಗೂಡಿಸಿ, “ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುವುದು ಸರಿಯಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯಮಂಡಲಿಯನ್ನು ಕೂಡಿಸಿ - ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುತ್ತಿರುವದು ತಕ್ಕದ್ದಲ್ಲವಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಹನ್ನೆರಡು ಮಂದಿ ಅಪೊಸ್ತಲರು ಇಡೀ ಶಿಷ್ಯಸಮುದಾಯದ ಸಭೆಯನ್ನು ಕರೆದು ಅವರಿಗೆ, “ದೇವರ ವಾಕ್ಯವನ್ನು ಬೋಧಿಸುವುದು ನಮ್ಮ ಕೆಲಸ. ಆದರೆ ಅದು ನಿಂತುಹೋಗುವುದು ಸರಿಯಲ್ಲ! ನಾವು ಜನರಿಗೆ ಊಟವನ್ನು ಒದಗಿಸಲು ಸಹಾಯ ಮಾಡುವುದಕ್ಕಿಂತಲೂ ದೇವರ ವಾಕ್ಯೋಪದೇಶವನ್ನು ಮುಂದುವರಿಸುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ ಆ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಸೇರಿಸಿ, “ನಾವು ದೇವರ ವಾಕ್ಯ ಬೋಧಿಸುವ ಸೇವೆಯನ್ನು ಕಡೆಗಣಿಸಿ, ಆಹಾರ ವಿತರಣೆಗಾಗಿ ಸಮಯ ಕಳೆಯುತ್ತಿರುವುದು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಬಾರಾ ಲೊಕಾ ಅಪೊಸ್ತಲಾನಿ ಸಗ್ಳ್ಯಾ ಶಿಸಾಂಚೊ ತಾಂಡೊ ಎಕಾಕ್ಡೆ ಬಲ್ವುನ್ ತೆಂಕಾ,ದೆವಾಚ್ಯಾ ಗೊಸ್ಟಿಯಾ ಶಿಕ್ವುತಲ್ಯಾಚ್ಯಾ ಬದ್ಲಾಕ್ ಪೈಶ್ಯಾ ಪಾನಿಯಾಚೆಚ್ ವಿಶಯ್ ಘೆವ್ನ್ ಅಮಿ ಬಸ್ತಲೆ ಸಮಾ ನ್ಹಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:2
10 ತಿಳಿವುಗಳ ಹೋಲಿಕೆ  

ಯುದ್ಧಕ್ಕೆ ಹೋಗುವ ಯಾವ ಸೈನಿಕನೂ ಲೋಕವ್ಯವಹಾರಗಳಲ್ಲಿ ಸಿಕ್ಕಿಕೊಳ್ಳನು. ಏಕೆಂದರೆ, ತನ್ನನ್ನು ಸೈನ್ಯಕ್ಕೆ ಸೇರಿಸಿಕೊಂಡವನನ್ನು ಮೆಚ್ಚಿಸಲು ಅವನು ಪ್ರಯತ್ನಿಸುತ್ತಾನೆ.


ನಾನು ದೂತರ ಮುಖಾಂತರ ಅವರಿಗೆ, “ನನಗೆ ಮುಖ್ಯವಾದ ಕಾರ್ಯವಿದೆ; ಅದನ್ನು ಬಿಟ್ಟು ಬಂದರೆ ಕೆಲಸ ನಿಂತುಹೋಗುತ್ತದೆ; ನಾನು ಬರಲಾಗದು,” ಎಂದು ಹೇಳಿಸಿದೆ.


ಏಕೆಂದರೆ, ಒಬ್ಬ ಕೈದಿಯ ವಿರುದ್ಧ ಇರುವ ಆಪಾದನೆಗಳನ್ನು ಸ್ಪಷ್ಟವಾಗಿ ಸೂಚಿಸದೆ ಅವನನ್ನು ಕಳುಹಿಸುವುದು ಸರಿಯಲ್ಲವೆಂದು ನನಗೆ ಅನಿಸುತ್ತದೆ,” ಎಂದನು.


ನೀನು ಇಲ್ಲಿಗೆ ಬಂದಿರುವುದು ಅವರಿಗೆ ಖಂಡಿತವಾಗಿ ತಿಳಿದೇ ತಿಳಿಯುತ್ತದೆ. ಈಗ ಏನು ಮಾಡೋಣ?


ಆಗ ಪೇತ್ರ ಮತ್ತು ಯೊವಾನ್ನರು, “ನಾವು ದೇವರಿಗೆ ವಿಧೇಯರಾಗಬೇಕೋ? ನಿಮಗೆ ವಿಧೇಯರಾಗಬೇಕೋ? ದೇವರ ದೃಷ್ಟಿಯಲ್ಲಿ ಯಾವುದು ಸರಿ? ನೀವೇ ನಿರ್ಣಯಿಸಿರಿ.


ಇತ್ತ ಭಕ್ತವಿಶ್ವಾಸಿಗಳ ಸಂಖ್ಯೆ ಹೆಚ್ಚುತ್ತಾ ಬಂದಿತು. ಆಗ ಗ್ರೀಕ್ ಮಾತನಾಡುತ್ತಾ ಇದ್ದವರ ಹಾಗೂ ಸ್ಥಳೀಯ ಭಾಷೆ ಮಾತನಾಡುತ್ತಿದ್ದವರ ನಡುವೆ ಬಿನ್ನಾಭಿಪ್ರಾಯ ಉಂಟಾಯಿತು. ದಿನನಿತ್ಯ ಮಾಡುವ ದೀನದಲಿತರ ಸೇವೆಯಲ್ಲಿ ತಮ್ಮ ಕಡೆಯ ವಿಧವೆಯರನ್ನು ಅಲಕ್ಷ್ಯಮಾಡಲಾಗುತ್ತಿದೆ ಎಂದು ಗ್ರೀಕರು ಗೊಣಗುಟ್ಟಿದರು.


ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಸನ್ಮಾನಿತರೂ ಆಗಿರುವ ಏಳು ವ್ಯಕ್ತಿಗಳನ್ನು ನಿಮ್ಮಿಂದ ಆರಿಸಿಕೊಳ್ಳಿ, ನಾವು ಅವರಿಗೆ ಈ ಜವಾಬ್ದಾರಿಯನ್ನು ವಹಿಸುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು