Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:9 - ಕನ್ನಡ ಸತ್ಯವೇದವು C.L. Bible (BSI)

9 ಆದರೆ ಕೆಲವರು ಸ್ತೇಫನನ ವಿರೋಧಿಗಳಾಗಿದ್ದರು. ಇವರು ‘ಬಿಡುಗಡೆ ಹೊಂದಿದವರು’ ಎಂಬವರ ಪ್ರಾರ್ಥನಾ ಮಂದಿರಕ್ಕೆ ಸೇರಿದವರು. ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರೂ ಇದರ ಸದಸ್ಯರಾಗಿದ್ದರು. ಇವರೊಡನೆ ಸಿಲಿಸಿಯ ಹಾಗೂ ಏಷ್ಯಾದ ಯೆಹೂದ್ಯರೂ ಸೇರಿ ಸ್ತೇಫನನೊಂದಿಗೆ ತರ್ಕ ಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ಲಿಬೆರ್ತೀನರೆಂಬವರ ಸಮಾಜದವರಲ್ಲಿಯೂ ಕುರೇನ್ಯದವರ ಮತ್ತು ಅಲೆಕ್ಸಾಂದ್ರಿಯದವರ ಸಮಾಜದವರಲ್ಲಿಯೂ ಕಿಲಿಕ್ಯ ಆಸ್ಯ ಸೀಮೆಗಳಿಂದ ಬಂದವರ ಸಮಾಜದವರಲ್ಲಿಯೂ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ಕೆಲವು ಯೆಹೂದ್ಯರು ಬಂದು ಅವನೊಂದಿಗೆ ವಾದಿಸಿದರು. ಈ ಯೆಹೂದ್ಯರು ಸಭಾಮಂದಿರಕ್ಕೆ ಸೇರಿದವರು. ಅದಕ್ಕೆ “ಬಿಡುಗಡೆ ಹೊಂದಿದವರ ಸಭಾಮಂದಿರ” ಎಂದು ಕರೆಯುತ್ತಿದ್ದರು. (ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರಿಗೋಸ್ಕರವಾಗಿಯೂ ಈ ಸಭಾಮಂದಿರವಿತ್ತು.) ಸಿಲಿಸಿಯ ಮತ್ತು ಏಷ್ಯಾದಿಂದ ಬಂದ ಯೆಹೂದ್ಯರೂ ಅವರೊಂದಿಗಿದ್ದರು. ಅವರೆಲ್ಲರೂ ಬಂದು ಅವನೊಂದಿಗೆ ವಾದಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ, “ಬಿಡುಗಡೆ ಹೊಂದಿದವರು” ಎಂಬ ಯೆಹೂದ್ಯ ಸಭಾಮಂದಿರಕ್ಕೆ ಸೇರಿದವರಿಂದ ವಿರೋಧ ಉಂಟಾಯಿತು. ಅವರು ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಮತ್ತು ಏಷ್ಯಾ ಪ್ರಾಂತಗಳಿಂದ ಬಂದ ಯೆಹೂದ್ಯರಾಗಿದ್ದರು. ಅವರು ಸ್ತೆಫನನೊಂದಿಗೆ ತರ್ಕಿಸುವುದಕ್ಕೆ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ಥೊಡಿ ಜುದೆವಾಂಚಿ ಲೊಕಾ ಯೆವ್ನ್ ತೆಚ್ಯಾ ವಾಂಗ್ಡಾ ವಾದ್ ಕರ್‍ಲ್ಯಾನಿ, ಹಿ ಲೊಕಾ ಜುದೆವಾಂಚ್ಯಾ ಸಿನಾಗೊಗಾಕ್ ಸಮಂದ್ ಪಡಲ್ಲಿ, ತೆಕಾ ಸುಟ್ಕಾ ಹೊಲ್ಲ್ಯಾಂಚೆ ಸಿನಾಗೊಗ್ ಮನುನ್ ಬಲ್ವಿತ್, ಸಿರೆನಾತ್ನಾ ಅನಿ ಅಲೆಕ್ಸಾಂಡ್ರಿಯಾತ್ನಾ ಜುದೆವಾಂಚ್ಯಾಸಾಟ್ನಿ ಹೆ ಸಿನಾಗೊಗ್ ಹೊತ್ತೆ, ಸಿಲಿಸಿಯಾ ಅನಿ ಎಶ್ಯಾತ್ನಾ ಯೆಲ್ಲಿ ಜುದೆವಾಂಚಿ ಲೊಕಾಬಿ ತೆಂಚ್ಯಾ ವಾಂಗ್ಡಾ ಹೊತ್ತಿ, ತೆನಿ ಸಗ್ಳ್ಯಾನಿ ಯೆವ್ನ್ ಸ್ತೆಪನಾಚ್ಯಾ ವಿರೊದ್ ವಾದ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:9
27 ತಿಳಿವುಗಳ ಹೋಲಿಕೆ  

ರಾಜ್ಯಪಾಲನು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದ ನಿವಾಸಿ ಎಂದು ವಿಚಾರಿಸಿ ಅವನು ಸಿಲಿಸಿಯದಿಂದ ಬಂದವನೆಂದು ತಿಳಿದುಕೊಂಡನು.


“ನಾನೊಬ್ಬ ಯೆಹೂದ್ಯನು, ಸಿಲಿಸಿಯದ ತಾರ್ಸ ಎಂಬಲ್ಲಿ ಹುಟ್ಟಿದವನು. ಆದರೆ, ಇದೇ ಜೆರುಸಲೇಮಿನಲ್ಲಿ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪೂರ್ವಜರ ಧರ್ಮಶಾಸ್ತ್ರವನ್ನು ಕಟ್ಟುನಿಟ್ಟಾಗಿ ಕಲಿತವನು. ಇಲ್ಲಿ ಇಂದು ನೆರೆದಿರುವ ನೀವೆಲ್ಲರೂ ದೈವಾಭಿಮಾನಿಗಳಾಗಿರುವಂತೆಯೇ ನಾನು ದೈವಾಭಿಮಾನಿಯಾಗಿದ್ದೆ.


ಅವನು ಸಿರಿಯ ಮತ್ತು ಸಿಲಿಸಿಯಗಳನ್ನು ಹಾದುಹೋಗುತ್ತಾ, ಅಲ್ಲಿದ್ದ ಕ್ರೈಸ್ತಸಭೆಗಳನ್ನು ದೃಢಪಡಿಸುತ್ತಾ ಪ್ರಯಾಣ ಬೆಳೆಸಿದನು.


“ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು!


ಸೈನಿಕರು ಯೇಸುಸ್ವಾಮಿಯನ್ನು ಕರೆದುಕೊಂಡು ಊರಹೊರಗೆ ಹೋಗುತ್ತಿದ್ದಾಗ ಸಿರೇನ್ ಪಟ್ಟಣದ ಸಿಮೋನ್ ಎಂಬಾತನನ್ನು ಕಂಡರು. ಯೇಸುವಿನ ಶಿಲುಬೆಯನ್ನು ಹೊತ್ತುಬರುವಂತೆ ಅವನನ್ನು ಬಲವಂತಮಾಡಿದರು.


ಅನಂತರ ನಾನು ಸಿರಿಯ ಮತ್ತು ಸಿಲಿಸಿಯ ಪ್ರಾಂತ್ಯಗಳಿಗೆ ಹೋದೆ.


ಶುದ್ಧಾಚಾರದ ಏಳು ದಿನಗಳ ಅವಧಿ ಮುಗಿಯುತ್ತಿದ್ದಂತೆ ಏಷ್ಯದ ಕೆಲವು ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡರು. ಕೂಡಲೇ ಅವರು ಜನಸಮೂಹವನ್ನು ಉದ್ರೇಕಿಸಿ ಪೌಲನನ್ನು ಹಿಡಿದರು.


ಹೀಗೆ ಎರಡು ವರ್ಷಗಳು ಕಳೆದವು. ಇದರ ಪರಿಣಾಮವಾಗಿ ಏಷ್ಯಾದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಪ್ರಭುವಿನ ವಾಕ್ಯವನ್ನು ಕೇಳಲು ಅನುಕೂಲವಾಯಿತು.


ಅಲೆಕ್ಸಾಂಡ್ರಿಯದ ಅಪೊಲ್ಲೋಸ್ ಎಂಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನೊಬ್ಬ ಉತ್ತಮ ಭಾಷಣಕಾರ ಹಾಗೂ ಪವಿತ್ರಗ್ರಂಥದಲ್ಲಿ ಪಾಂಡಿತ್ಯಪಡೆದವನು.


ಏಷ್ಯದಲ್ಲಿ ಅವರು ಶುಭಸಂದೇಶವನ್ನು ಸಾರಕೂಡದೆಂದು ಪವಿತ್ರಾತ್ಮ ನಿಷೇಧಿಸಿದ್ದರಿಂದ ಅವರು ಫ್ರಿಜಿಯ ಮತ್ತು ಗಲಾತ್ಯಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು.


ಇದೆಲ್ಲಾ ಸಂಭವಿಸುವುದಕ್ಕೆ ಮುಂಚೆ ನಿಮ್ಮನ್ನು ಬಂಧಿಸಿ ಹಿಂಸೆಗೊಳಪಡಿಸುವರು. ಪ್ರಾರ್ಥನಾಮಂದಿರಗಳಿಗೂ ಕಾರಾಗೃಹಗಳಿಗೂ ಎಳೆದೊಪ್ಪಿಸುವರು; ನನ್ನ ನಾಮದ ನಿಮಿತ್ತ ಅರಸರ ಹಾಗೂ ಅಧಿಪತಿಗಳ ಮುಂದಕ್ಕೆ ಎಳೆಯುವರು.


“ನಿಮ್ಮ ವಿಷಯದಲ್ಲೂ ಎಚ್ಚರಿಕೆಯಿಂದಿರಿ. ನಿಮ್ಮನ್ನು ನ್ಯಾಯಸ್ಥಾನಗಳಿಗೆ ಎಳೆಯುವರು; ಪ್ರಾರ್ಥನಾಮಂದಿರಗಳಲ್ಲಿ ಹೊಡೆಯುವರು. ನನ್ನ ನಿಮಿತ್ತ ನೀವು ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಬೇಕಾಗುವುದು. ಅವರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.


ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು.


ಹೀಗಿರುವಾಗ ಜ್ಞಾನಿಯೆಲ್ಲಿ? ಶಾಸ್ತ್ರಜ್ಞನೆಲ್ಲಿ? ಜಗತ್ತಿನ ತರ್ಕನಿಪುಣನೆಲ್ಲಿ? ಪ್ರಪಂಚದ ಜ್ಞಾನವನ್ನು ದೇವರು ಹುಚ್ಚುತನವಾಗಿಸಿಲ್ಲವೇ?


ಅನೇಕ ಬಾರಿ ನಾನು ಅವರನ್ನು ಪ್ರಾರ್ಥನಾಮಂದಿರಗಳಲ್ಲೆಲ್ಲಾ ಬಾಧೆಪಡಿಸಿದೆ. ಹೀಗೆ, ವಿಶ್ವಾಸಭ್ರಷ್ಟರಾಗುವಂತೆ ಬಲಾತ್ಕರಿಸಿದೆ. ನನ್ನ ಕೋಪೋದ್ರೇಕಕ್ಕೆ ಎಲ್ಲೆ ಇರಲಿಲ್ಲ. ಹೊರನಾಡಿನ ಊರುಗಳಿಗೂ ಅವರನ್ನು ಬೆನ್ನಟ್ಟಿಹೋಗಿ ಹಿಂಸೆಪಡಿಸಿದೆ.


ಅದಕ್ಕೆ ಪ್ರತ್ಯುತ್ತರವಾಗಿ ನಾನು, ‘ಪ್ರಭೂ, ನಿಮ್ಮಲ್ಲಿ ವಿಶ್ವಾಸವಿಟ್ಟವರನ್ನು ನಾನು ಸೆರೆಹಿಡಿದೆ; ಪ್ರಾರ್ಥನಾಮಂದಿರಗಳಿಗೆ ಹೋಗಿ ಅವರನ್ನು ಚಾವಟಿಯಿಂದ ಹೊಡೆದೆ.


ಪೌಲನು ಪ್ರತ್ಯುತ್ತರವಾಗಿ, “ನಾನು ಯೆಹೂದ್ಯನು, ತಾರ್ಸದವನು, ಸಿಲಿಸಿಯ ಪ್ರಾಂತ್ಯದ ಪ್ರಖ್ಯಾತ ಪಟ್ಟಣದವನು. ಈ ಜನರೊಡನೆ ಮಾತನಾಡಲು ದಯವಿಟ್ಟು ಅವಕಾಶಕೊಡಿ,” ಎಂದು ಭಿನ್ನವಿಸಿದನು.


ಪೌಲ ಎಂಬವನು ಏನು ಮಾಡುತ್ತಿರುವನೆಂದು ನೀವು ನೋಡಿದ್ದೀರಿ ಹಾಗೂ ಕೇಳಿದ್ದೀರಿ; ಕೈಯಿಂದ ಮಾಡಿದ ಆಕೃತಿಗಳು ದೇವರೇ ಅಲ್ಲವೆಂದು ಇಲ್ಲಿ ಎಫೆಸದಲ್ಲೂ ಹೆಚ್ಚುಕಡಿಮೆ ಇಡೀ ಏಷ್ಯದಲ್ಲೂ ಪ್ರಚಾರಮಾಡುತ್ತಿದ್ದಾನೆ; ಮಾತ್ರವಲ್ಲ, ಅನೇಕ ಜನರನ್ನು ಮನವೊಲಿಸಿ ಮಾರ್ಪಡಿಸಿಬಿಟ್ಟಿದ್ದಾನೆ.


ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯ ಸ್ನೇಹಿತ ಮೆನಹೇನ ಮತ್ತು ಸೌಲ.


ಸೈಪ್ರಸ್ ಮತ್ತು ಸಿರೇನಿನ ಕೆಲವು ಭಕ್ತರಾದರೋ ಅಂತಿಯೋಕ್ಯಕ್ಕೆ ಹೋಗಿ ಪ್ರಭು ಯೇಸುವಿನ ಶುಭಸಂದೇಶವನ್ನು ಗ್ರೀಕರಿಗೂ ಸಾರಿದರು.


ಅವರಲ್ಲಿ ಕೆಲವರನ್ನು ಕೊಲೆಮಾಡುವಿರಿ, ಶಿಲುಬೆಗೆ ಏರಿಸುವಿರಿ, ಮತ್ತೆ ಕೆಲವರನ್ನು ನಿಮ್ಮ ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವಿರಿ. ಊರಿಂದೂರಿಗೆ ಅಟ್ಟಿ ಅವರನ್ನು ಪೀಡಿಸುವಿರಿ.


ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ.


ಶುದ್ಧಾಚಾರದ ವಿಧಿಯನ್ನು ಮುಗಿಸಿಕೊಂಡು, ನನ್ನೀ ಕಾರ್ಯದಲ್ಲಿ ನಿರತನಾಗಿದ್ದಾಗ ಇವರು ನನ್ನನ್ನು ಮಹಾದೇವಾಲಯದಲ್ಲಿ ಕಂಡರು. ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಯಾವ ಗಲಭೆಗೂ ಅವಕಾಶವಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು