Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:42 - ಕನ್ನಡ ಸತ್ಯವೇದವು C.L. Bible (BSI)

42 ಆಗ ದೇವರು ಅವರಿಗೆ ವಿಮುಖರಾದರು. ಆಕಾಶದ ಗ್ರಹಗಳನ್ನೇ ಅವರು ಪೂಜಿಸಲೆಂದು ಬಿಟ್ಟುಬಿಟ್ಟರು. ಇದನ್ನು ಕುರಿತೇ ಪ್ರವಾದಿಗಳ ಗ್ರಂಥದಲ್ಲಿ: ‘ಓ ಇಸ್ರಯೇಲರೇ, ನೀವು ಮರಳುಗಾಡಿನಲ್ಲಿ ನಾಲ್ವತ್ತು ವರ್ಷಗಳಕಾಲ ದಹನಬಲಿಗಳನ್ನು ಅರ್ಪಿಸಿದ್ದು ನನಗಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ, “‘ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಲವತ್ತು ವರ್ಷ ನನಗೆ ಯಜ್ಞಗಳನ್ನೂ, ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರ ಗಣವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ - ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಾಲ್ವತ್ತು ವರುಷ ನನಗೆ ಯಜ್ಞಗಳನ್ನೂ ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಆದರೆ ದೇವರು ಅವರಿಗೆ ವಿರೋಧವಾಗಿ, ಆಕಾಶದ ಸುಳ್ಳುದೇವರುಗಳನ್ನು ಪೂಜಿಸುವಂತೆ ಅವರನ್ನು ಬಿಟ್ಟುಬಿಟ್ಟನು. ಇದರ ಬಗ್ಗೆ ಪ್ರವಾದಿಗಳ ಪುಸ್ತಕದಲ್ಲಿ ಹೀಗೆ ಬರೆದಿದೆ: ದೇವರು ಹೀಗೆನ್ನುತ್ತಾನೆ, ‘ಯೆಹೂದ್ಯ ಜನರಾದ ನೀವು ನಲವತ್ತು ವರ್ಷಗಳ ಕಾಲ ಮರಳುಗಾಡಿನಲ್ಲಿದ್ದಾಗ ನನಗೆ ಯಜ್ಞಗಳನ್ನು ಅರ್ಪಿಸಲಿಲ್ಲ; ಕಾಣಿಕೆಗಳನ್ನು ತರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ಗ್ರಹಗಳನ್ನೇ ಆರಾಧಿಸುವಂತೆ ಅವರನ್ನು ಬಿಟ್ಟುಬಿಟ್ಟರು. ಇದರ ವಿಷಯವಾಗಿ ಪ್ರವಾದಿಗಳ ಗ್ರಂಥದಲ್ಲಿ: “ ‘ಇಸ್ರಾಯೇಲಿನ ಮನೆತನದವರೇ, ನಲವತ್ತು ವರ್ಷ ಅರಣ್ಯದಲ್ಲಿ ಯಜ್ಞಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಿದ್ದು ನನಗಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಖರೆ ದೆವಾನ್ ತೆಂಕಾ ವಿರೊಧ್ ಹೊವ್ನ್ ಮಳ್ಬಾತ್ಲೊ ದಿಸ್, ಚಂದ್ರಾಮ್ ಅನಿ ಚುಕ್ಕಿಯಾಕ್ನಿ ಫುಜ್ಯಾ ಕರುಕ್ ಸೊಡುನ್ ದಿಲ್ಯಾನ್, ಹೆಚ್ಯಾ ವಿಶಯಾತ್ ಪ್ರವಾದ್ಯಾಂಚ್ಯಾ ಪುಸ್ತಕಾತ್ ಅಶೆ ಲಿವಲ್ಲೆ ಹಾಯ್: ದೆವ್ ಅಸೊ ಮನ್ತಾ, ತುಮಿ ಜುದೆವಾಂಚ್ಯಾ ಲೊಕಾನಿ, ಭಜನ್ ಕರುಚೆ ಮನುನ್ ಚಾಳಿಸ್ ವರ್ಸಾ ಡಂಗ್ಳಿತ್ ರಾತಾನಾ ಮಾಕಾ ಜನಾವರಾಂಚಿ ಬಲಿ ಭೆಟ್ವುಲ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:42
26 ತಿಳಿವುಗಳ ಹೋಲಿಕೆ  

“ಇಸ್ರಯೇಲ್ ವಂಶದವರೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹೋಗಿರಿ, ನಿಮ್ಮ ವಿಗ್ರಹಗಳನ್ನು ಪೂಜಿಸಿರಿ; ಮುಂದಕ್ಕಾದರು ನನ್ನ ಮಾತನ್ನು ಕೇಳಿಯೇ ಕೇಳುವಿರಿ; ಇನ್ನು ಮೇಲಾದರು ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದ ಹಾಗೂ ವಿಗ್ರಹಗಳಿಂದ ನೀವು ಅಪಕೀರ್ತಿಗೆ ಒಳಪಡಿಸಲಾರಿರಿ.


ಜೆರುಸಲೇಮಿನ ಮನೆಗಳೂ ಜುದೇಯದ ಅರಸರ ಮನೆಗಳೂ, ಅಂದರೆ ಯಾವ ಯಾವ ಮನೆಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಾರತಿ ಎತ್ತಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲ ಹೊಲಸಾಗಿ ತೋಫೆತ್ ಸ್ಥಳಕ್ಕೆ ಸಮಾನವಾಗುವುವು.”


ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.


ಈಜಿಪ್ಟಿನಲ್ಲೂ ಕೆಂಪುಸಮುದ್ರದಲ್ಲೂ ನಲವತ್ತು ವರ್ಷಕಾಲ ಮರಳು ಬೆಂಗಾಡಿನಲ್ಲೂ ಅದ್ಭುತಗಳನ್ನು ಹಾಗೂ ಸೂಚಕಕಾರ್ಯಗಳನ್ನು ಮಾಡಿ ಇಸ್ರಯೇಲರನ್ನು ಬಿಡುಗಡೆಮಾಡಿದವನು ಇವನೇ.


ಎಫ್ರಯಿಮ್ ವಿಗ್ರಹಗಳ ಪ್ರಭಾವಕ್ಕೆ ಒಳಗಾಗಿದೆ. ಅದನ್ನು ಅದರಷ್ಟಕ್ಕೆ ಬಿಟ್ಟುಬಿಡಿ.


ಸರ್ವೇಶ್ವರನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆದುತಂದರು; ಇಗೋ, ಆ ಆಲಯದ ಬಾಗಿಲ ಮುಂದೆ, ಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಸುಮಾರು ಇಪ್ಪತ್ತೈದು ಜನರು ಸರ್ವೇಶ್ವರನ ಆಲಯಕ್ಕೆ ಬೆನ್ನುಮಾಡಿ ಪೂರ್ವದ ಕಡೆಗೆ ಮುಖಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.


ಆದುದರಿಂದ ಅವರಿಗೆ ಆಪತ್ತು ಬಂದೊದಗುವಂತೆ ಮಾಡುವೆನು. ಅವರು ಅಂಜುತ್ತಿದ್ದ ವಿಪತ್ತುಗಳನ್ನೇ ಅವರ ಮೇಲೆ ಬರಮಾಡುವೆನು. ಏಕೆಂದರೆ, ನಾನು ಕೂಗಿದಾಗ ಯಾರೂ ಉತ್ತರಿಸಲಿಲ್ಲ, ನಾನು ಹೇಳಿದಾಗ ಅವರು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು, ನನಗೆ ಇಷ್ಟವಲ್ಲದ್ದನ್ನೇ ಆಯ್ಕೆಮಾಡಿಕೊಂಡರು.”


ನೀವು ಅವರನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸಿದರೆ ನಿಮಗೆ ವಿಮುಖರಾಗಿ, ಒಳಿತಿಗೆ ಬದಲಾಗಿ ಕೇಡನ್ನೇ ಬರಮಾಡಿ ನಿಮ್ಮನ್ನು ನಾಶಮಾಡಿಬಿಡುವರು,” ಎಂದನು.


“ಇದಲ್ಲದೆ, ‘ನಾನೇ ಸರ್ವೇಶ್ವರ’ ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ ಜೀವಾಧಾರವಲ್ಲದ ವಿಧಿಗಳನ್ನೂ ನೇಮಿಸಿದೆ.


ನಲವತ್ತು ವರುಷ ಆ ಪೀಳಿಗೆಯ ಬಗ್ಗೆ ನಾ ಬೇಸರಗೊಂಡೆ I ‘ತಪ್ಪುಮನಸ್ಕರು ಇವರು, ನನ್ನ ಮಾರ್ಗವನು ಮೆಚ್ಚರಿವರು’ ಎಂದುಕೊಂಡೆ II


ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ ಇಸ್ರಯೇಲರ ಅರಸನಾದ ಅಹಾಬನಂತೆ ಬಾಳ್ ದೇವತೆಗಾಗಿ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು, ಆರಾಧಿಸಿದನು.


ತಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಮೀರಿ, ಎರಡು ಎರಕದ ಹೋರಿಕರುಗಳ ಮೂರ್ತಿಗಳನ್ನು ಮಾಡಿಕೊಂಡರು; ಅಶೇರ ವಿಗ್ರಹಸ್ಥಂಭಗಳನ್ನು ನಿಲ್ಲಿಸಿಕೊಂಡರು; ಆಕಾಶಸೈನ್ಯ ಹಾಗು ಬಾಳ್ ದೇವತೆಗಳನ್ನು ಪೂಜಿಸಿದರು;


ಅನ್ಯ ದೇವರುಗಳನ್ನಾಗಲಿ, ಪೂಜಿಸಬಾರದೆಂದು ನಿಷೇಧಿಸಿರುವ ಸೂರ್ಯಚಂದ್ರ ನಕ್ಷತ್ರಗಳನ್ನಾಗಲಿ, ಪೂಜಿಸಿ, ಆರಾಧಿಸಿ ಸರ್ವೇಶ್ವರನ ದೃಷ್ಟಿಯಲ್ಲಿ ದುಷ್ಟವಾದುದನ್ನು ನಡೆಸಿದ್ದಾರೆ ಎಂದೂ


ಕುರಿಮೇಕೆಗಳನ್ನು ನೀನು ತರಲಿಲ್ಲ ನನಗೆ ಹೋಮಕ್ಕಾಗಿ ಬಲಿಗಳನ್ನು ಅರ್ಪಿಸಲಿಲ್ಲ ನನ್ನ ಘನತೆಗಾಗಿ ನಾ ನಿನ್ನನು ಒತ್ತಾಯಿಸಲಿಲ್ಲ ನೈವೇದ್ಯಕ್ಕಾಗಿ ನಾ ನಿನ್ನನು ಬೇಸರಗೊಳಿಸಲಿಲ್ಲ ಧೂಪಾರತಿಗಾಗಿ.


ಎಂದೇ ದೇವರಿಂತೆಂದರು: ಮರುಭೂಮಿಯಲಿ ಅವರೆನ್ನನು ಕೆಣಕಿದರು; ನಲವತ್ತು ವರುಷ ನಾನೆಸಗಿದ ಮಹತ್ಕಾರ್ಯಗಳನು ಕಂಡರಾದರೂ ಎನ್ನ ಕೆಣಕಿ ಪರೀಕ್ಷಿಸಿದರು.


ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ,‍ ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.


‘ದೇವರಿಂದಲೇ ಅವರೆಲ್ಲರೂ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ಪಿತನಿಗೆ ಕಿವಿಕೊಟ್ಟು ಅವರಿಂದಲೇ ಕಲಿತುಕೊಂಡ ಪ್ರತಿ ಒಬ್ಬನೂ ನನ್ನ ಬಳಿಗೆ ಬರುತ್ತಾನೆ.


ಆದುದರಿಂದ ಪ್ರವಾದಿಗಳ ಈ ಮಾತುಗಳು ನಿಮ್ಮಲ್ಲಿ ನಿಜವಾಗದಂತೆ ಎಚ್ಚರಿಕೆಯಾಗಿರಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು