Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ಇಲ್ಲಿ ಕಾಲಿಡುವಷ್ಟು ನೆಲವನ್ನು ಕೂಡ ದೇವರು ಅವನಿಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ. ಸ್ವಂತ ಸೊತ್ತಾಗಿ ಅವನಿಗೂ ಅವನ ಬಳಿಕ ಅವನ ಸಂತತಿಗೂ ಕೊಡುವುದಾಗಿ ವಾಗ್ದಾನಮಾಡಿದರಷ್ಟೆ. ಆಗ ಅಬ್ರಹಾಮನಿಗೆ ಮಕ್ಕಳೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ದೇಶದಲ್ಲಿ ಅವನಿಗೆ ಕಾಲಿಡುವಷ್ಷ್ಟು ಭೂಮಿಯನ್ನು ಸ್ವತ್ತಾಗಿ ಕೊಡದೆ ಅವನಿಗೆ ಮಕ್ಕಳೇ ಇಲ್ಲದಿರುವಾಗ ನೀನಿರುವ ದೇಶವನ್ನು ನಿನಗೂ, ನಿನ್ನ ನಂತರ ಬರುವ ನಿನ್ನ ಸಂತತಿಗೂ ಸ್ವತ್ತಾಗಿ ಕೊಡುವೆನೆಂದು ಅವನಿಗೆ ವಾಗ್ದಾನಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದರಲ್ಲಿ ಅವನಿಗೆ ಕಾಲಿಡುವಷ್ಟು ಭೂವಿುಯನ್ನು ಸ್ವಾಸ್ತ್ಯವಾಗಿ ಕೊಡದೆ ಅವನಿಗೆ ಮಕ್ಕಳು ಇನ್ನೂ ಇಲ್ಲದಿರುವಾಗ - ಈ ದೇಶವನ್ನು ನಿನಗೂ ನಿನ್ನ ಹಿಂದೆ ಬರುವ ನಿನ್ನ ಸಂತತಿಗೂ ಸ್ವಾಸ್ತ್ಯವಾಗಿ ಕೊಡುವೆನು ಎಂದು ಅವನಿಗೆ ವಾಗ್ದಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ದೇವರು ಅಬ್ರಹಾಮನಿಗೆ ಇಲ್ಲಿ ಯಾವ ಭೂಮಿಯನ್ನೂ ಕೊಡಲಿಲ್ಲ. ದೇವರು ಅವನಿಗೆ ಒಂದು ಅಡಿ ಸ್ಥಳವನ್ನೂ ಕೊಡಲಿಲ್ಲ. ಆದರೆ ಮುಂದಿನ ಕಾಲದಲ್ಲಿ ಈ ದೇಶವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವುದಾಗಿ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದನು. (ಅಬ್ರಹಾಮನಿಗೆ ಮಕ್ಕಳೇ ಇಲ್ಲದಿದ್ದಾಗ ಇದಾಯಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರು ಅವನಿಗೆ ಇಲ್ಲಿ ಕಾಲಿಡುವಷ್ಟು ಸ್ಥಳವನ್ನಾಗಲಿ, ಯಾವುದೇ ಬಾಧ್ಯಸ್ತಿಕೆಯನ್ನಾಗಲಿ ಕೊಡಲಿಲ್ಲ. ಆದರೆ ಅಬ್ರಹಾಮನಿಗೆ ಆ ಸಮಯದಲ್ಲಿ ಮಕ್ಕಳಿಲ್ಲದಿದ್ದರೂ ಅವನೂ ಅವನ ನಂತರ ಅವನ ಸಂತತಿಯವರೂ ದೇಶವನ್ನು ಹೊಂದುವರೆಂದು ದೇವರು ಅವನಿಗೆ ವಾಗ್ದಾನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ದೆವಾನ್ ತೆಕಾ ಖಲೆ ಸೆತ್ ಬಿ ದಿವ್ಕ್ ನಾ, ಎಕ್ ಗೆನ್ಬರ್ ಜಾಗೊ ಬಿ ದೆವಾನ್ ತೆಕಾ ದಿವ್ಕ್ ನಾ, ಖರೆ ತೆಕಾ ಅಜುನ್ ಪೊರಾಬಿ ಹೊವ್ಚ್ಯಾ ಅದ್ದಿಚ್ ತುಕಾ ಅನಿ ತುಜ್ಯಾ ಪೊರಾಕ್ನಿ ಹ್ಯೊ ದೆಶ್ ಮಿಯಾ ದಿತಾ ಮನುನ್ ದೆವಾನ್ ತೆಕಾ ಗೊಸ್ಟ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:5
22 ತಿಳಿವುಗಳ ಹೋಲಿಕೆ  

ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.”


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ನಿನ್ನ ಕಣ್ಣಿಗೆ ಕಾಣಿಸುವ ಈ ಪ್ರಾಂತ್ಯವನ್ನೆಲ್ಲಾ ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾಗಿ ಕೊಡುತ್ತೇನೆ.


ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಆತ ಪ್ರಾಮಾಣಿಕ ವ್ಯಕ್ತಿಯೆಂದು ಗುರುತಿಸಿದಿರಿ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಯೆಬೂಸಿಯರ, ಗಿರ್ಗಾಷಿಯರ ನಾಡನು ಆತನ ಸಂತಾನದವರಿಗೆ ವಾಗ್ದಾನ ಮಾಡಿದಿರಿ. ಅಂತೆಯೇ ಸತ್ವ ಸ್ವರೂಪರಾದ ನೀವು ಅದನು ಈಡೇರಿಸಿದಿರಿ.


ಅನಂತರ, “ನಾನು ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನ ಮಾಡಿದ ನಾಡು ಇದೇ; ಇದನ್ನು ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿದಾಟಿ ಅಲ್ಲಿಗೆ ಹೋಗಕೂಡದು,” ಎಂದು ಹೇಳಿದರು.


ಸರ್ವೇಶ್ವರ ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ನಾಡಿನಲ್ಲಿ ನೀವು ಬಹುಕಾಲ ಬಾಳುವಿರಿ; ಅದು ಹಾಲೂ ಜೇನೂ ಹರಿಯುವ ನಾಡು.


ತರುವಾಯ ಸರ್ವೇಶ್ವರ ನನಗೆ, ‘ನೀನು ಈ ಜನರ ಮುಂದುಗಡೆ ಹೊರಡು; ನಾನು ಇವರ ಪಿತೃಗಳಿಗೆ ಪ್ರಮಾಣ ಮಾಡಿಕೊಟ್ಟ ನಾಡನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ,’ ಎಂದು ಆಜ್ಞಾಪಿಸಿದರು.


ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.


ನಾನು ಸೇಯೀರ್ ಮಲೆನಾಡನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿದ್ದೇನೆ. ಆದುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.


“ನಿಮ್ಮ ಮಧ್ಯೆ ನಾನೊಬ್ಬ ಹೊರನಾಡಿಗ, ಒಬ್ಬ ಪ್ರವಾಸಿ, ಮೃತಳಾಗಿರುವ ನನ್ನ ಪತ್ನಿಯನ್ನು ಸಮಾಧಿ ಮಾಡಲು ಸ್ವಲ್ಪ ಜಮೀನನ್ನು ನನ್ನ ಸ್ವಂತಕ್ಕೆ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ,” ಎಂದನು.


ಎಂದೇ ಸಾರಯಳು ಅಬ್ರಾಮನಿಗೆ, “ನೋಡಿ, ನನಗೇನೋ ಸರ್ವೇಶ್ವರ ಸ್ವಾಮಿ ಮಕ್ಕಳನ್ನು ದಯಪಾಲಿಸಲಿಲ್ಲ; ನೀವು ನನ್ನ ದಾಸಿಯನ್ನು ಸೇರಬೇಕು. ಬಹುಶಃ ಅವಳ ಮೂಲಕವಾದರೂ ನನಗೆ ಮಕ್ಕಳಾದೀತು,” ಎಂದು ಹೇಳಿದಳು. ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.


“ನರಪುತ್ರನೇ, ಇಸ್ರಯೇಲ್ ನಾಡಿನ ಹಾಳುಪ್ರದೇಶಗಳಲ್ಲಿ ವಾಸಿಸುವರು, ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ನಾಡು ಅವನಿಗೆ ಸೊತ್ತಾಗಿ ಸಿಕ್ಕಿತು; ಅದು ಬಹುಜನರಾದ ನಮಗೆ ಸೊತ್ತಾಗಿ ಸಿಕ್ಕಿದ್ದು ಏನು ದೊಡ್ಡದು! ಎಂದುಕೊಳ್ಳುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು