Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:24 - ಕನ್ನಡ ಸತ್ಯವೇದವು C.L. Bible (BSI)

24 ಆಗ ಸಿಮೋನನು, “ನೀವು ಹೇಳಿದ ಯಾವ ಕೇಡೂ ನನಗೆ ತಗಲದಂತೆ ನನಗಾಗಿ ನೀವೇ ಪ್ರಭುವಿನಲ್ಲಿ ಪ್ರಾರ್ಥನೆಮಾಡಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅದಕ್ಕೆ ಸೀಮೋನನು, “ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇಡಿಕೊಳ್ಳಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅದಕ್ಕೆ ಸೀಮೋನನು - ನೀವು ಹೇಳಿರುವ ಸಂಗತಿಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸಿಮೋನನು, “ನೀವಿಬ್ಬರೂ ನನಗೋಸ್ಕರ ಪ್ರಭುವಿನಲ್ಲಿ ಪ್ರಾರ್ಥಿಸಿ. ನೀವು ಹೇಳಿದ ಸಂಗತಿಗಳು ನನಗಾಗದಂತೆ ಪ್ರಾರ್ಥಿಸಿ!” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಸೀಮೋನನು, “ನೀವು ಹೇಳಿದ ಯಾವುದೂ ನನಗೆ ಸಂಭವಿಸದಂತೆ ನನಗೋಸ್ಕರ ಕರ್ತ ಯೇಸುವಿನಲ್ಲಿ ಪ್ರಾರ್ಥಿಸಿರಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ಸಿಮಾವಾನ್ ಮಾಜ್ಯಾ ಸಾಟ್ನಿ ತುಮಿ ದೊಗೆಬಿ ಧನಿಯಾಕ್ಡೆ ತುಮಿ ಸಾಂಗಲ್ಲ್ಯಾ ಸಂಗ್ತಿಯಾತ್ನಿ ಎಕ್ಬಿ ಮಾಕಾ ಹೊವ್ಕ್ ನ್ಹಯ್ ಸಾರ್ಕೆ ಮಾಗ್ನಿ ಕರಾ! ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:24
15 ತಿಳಿವುಗಳ ಹೋಲಿಕೆ  

ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ,” ಎಂದು ಬೇಡಿಕೊಂಡರು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಸರ್ವೇಶ್ವರನನ್ನು ಪ್ರಾರ್ಥನೆಮಾಡಿ ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಿರಿ. ಹಾಗೆ ಮಾಡಿದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸುವಂತೆ ನಿಮ್ಮ ಜನರಿಗೆ ನಾನು ಹೋಗಲು ಅಪ್ಪಣೆ ಕೊಡುತ್ತೇನೆ,” ಎಂದನು.


ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.


ಆದುದರಿಂದ ನೀವು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸ ಯೋಬನ ಬಳಿಗೆ ಬನ್ನಿರಿ; ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ. ನನ್ನ ದಾಸ ಯೋಬ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಆಲಿಸಿ ನಿಮ್ಮ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ವಿಧಿಸುವುದಿಲ್ಲ. ನನ್ನ ದಾಸ ಯೋಬನು ನನ್ನ ವಿಷಯದಲ್ಲಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ,” ಎಂದರು.


ಅರಸನು ಆ ಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರನು ಪ್ರಸನ್ನನಾಗುವಂತೆ ಬೇಡಿಕೊ; ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಅವರನ್ನು ನನ್ನ ಪರವಾಗಿ ಪ್ರಾರ್ಥಿಸು,” ಎಂದು ಕೇಳಿದನು. ಅಂತೆಯೇ ಆ ದೈವಭಕ್ತನು ಸರ್ವೇಶ್ವರನನ್ನು ಬೇಡಿಕೊಂಡನು; ಅರಸನ ಕೈ ವಾಸಿಯಾಗಿ ಮೊದಲಿನಂತೆ ಆಯಿತು.


ನಾನಾದರೋ ನಿಮ್ಮ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸುತ್ತೇನೆ; ಅವರ ನೀತಿಯುತ ಉತ್ತಮ ಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದಿಲ್ಲ; ಬಿಟ್ಟರೆ ದೇವರ ದೃಷ್ಟಿಯಲ್ಲಿ ನಾನೂ ಪಾಪಿಯಾಗುತ್ತೇನೆ.


ನೀವು ಕೇಳಿಕೊಂಡಂತೆ ಸರ್ವೇಶ್ವರನನ್ನು ಆರಾಧಿಸಿ. ನಿಮ್ಮ ಕೋರಿಕೆಯಂತೆ ಕುರಿದನಗಳನ್ನೂ ತೆಗೆದುಕೊಂಡು ಹೋಗಬಹುದು. ನನ್ನ ಹಿತಕ್ಕಾಗಿಯೂ ಪ್ರಾರ್ಥನೆಮಾಡಿ,” ಎಂದನು.


ಈ ಒಂದು ಸಾರಿ ನನ್ನನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ಈ ಮಾರಕ ವಿಪತ್ತನ್ನು ನನ್ನಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು,” ಎಂದು ವಿನಂತಿಸಿದನು.


ಈಗ ಆ ಮನುಷ್ಯನ ಹೆಂಡತಿಯನ್ನು ಮರಳಿ ಅವನಿಗೆ ಒಪ್ಪಿಸಿಬಿಡು. ಅವನೊಬ್ಬ ಪ್ರವಾದಿ. ನಿನ್ನ ಪರವಾಗಿ ನನ್ನನ್ನು ಪ್ರಾರ್ಥಿಸುವನು, ನೀನು ಬದುಕುವೆ. ಆಕೆಯನ್ನು ಒಪ್ಪಿಸಲು ನಿರಾಕರಿಸಿದೆಯಾದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೊ,” ಎಂದು ಕನಸಿನಲ್ಲಿ ಹೇಳಿದರು.


ನಾವು ಈ ಕಾರಣ ಉಪವಾಸಮಾಡಿ ದೇವರನ್ನು ಪ್ರಾರ್ಥಿಸಿದೆವು; ಅವರು ನಮಗೆ ಪ್ರಸನ್ನರಾದರು.


ಅವರಾದರೋ ಪರಲೋಕ ದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಮಾಡಲಿ.


ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಕೂಡಿತು; ಆದುದರಿಂದ ನಿಮ್ಮ ಸೇವಕರಾದ ನಾವು ಸಾಯದಂತೆ ನಿಮ್ಮ ದೇವರಾದ ಸರ್ವೇಶ್ವರನನ್ನು ಬೇಡಿಕೊಳ್ಳಿ,” ಎಂದು ಸಮುವೇಲನನ್ನು ವಿಜ್ಞಾಪಿಸಿದರು.


ತರುವಾಯ ಅಬ್ರಹಾಮನು ಅಬೀಮೆಲೆಕನಿಗೋಸ್ಕರ ದೇವರಲ್ಲಿ ಪ್ರಾರ್ಥನೆ ಮಾಡಿದನು. ದೇವರು ಅಬೀಮೆಲೆಕನನ್ನು, ಅವನ ಪತ್ನಿಯನ್ನು ಹಾಗೂ ದಾಸಿಯರನ್ನು ಗುಣಪಡಿಸಿದನು; ಅವರಿಗೆ ಮಕ್ಕಳಾದರು.


ಹೀಗಿರುವಲ್ಲಿ ಅರಸ ಚಿದ್ಕೀಯನು ಶೆಲೆಮ್ಯನ ಮಗ ಯೆಹೂಕಲನನ್ನು ಮತ್ತು ಯಾಜಕ ಮಾಸೇಯನ ಮಗ ಚೆಫನ್ಯನನ್ನು ಯೆರೆಮೀಯನ ಬಳಿಗೆ ಕಳಿಸಿ, “ನಮಗಾಗಿ ನಮ್ಮ ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸು” ಎಂದು ವಿನಂತಿಸಿದನು.


“ದಯಮಾಡಿ ನಮ್ಮ ಬಿನ್ನಹವನ್ನು ಆಲಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು