Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:30 - ಕನ್ನಡ ಸತ್ಯವೇದವು C.L. Bible (BSI)

30 ಫಿಲಿಪ್ಪನು ಮುಂದಕ್ಕೆ ಧಾವಿಸಿ, ಅವನು ಯೆಶಾಯನ ಪ್ರವಾದನೆಯನ್ನು ಓದುತ್ತಿರುವುದನ್ನು ಕೇಳಿಸಿಕೊಂಡನು. “ನೀವು ಓದುತ್ತಿರುವುದು ಅರ್ಥವಾಗುತ್ತಿದೆಯೇ?” ಎಂದು ಪ್ರಶ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, “ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಫಿಲಿಪ್ಪನು ಓಡಿ ಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ - ಎಲೈ, ನೀನು ಓದುವದು ನಿನಗೆ ತಿಳಿಯುತ್ತದೋ? ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅಂತೆಯೇ ಫಿಲಿಪ್ಪನು ರಥದ ಬಳಿಗೆ ಹೋದನು. ಆ ಮನುಷ್ಯನು ಓದುತ್ತಿರುವುದು ಅವನಿಗೆ ಕೇಳಿಸಿತು. ಅವನು ಯೆಶಾಯನ ಪ್ರವಾದನಾ ಗ್ರಂಥವನ್ನು ಓದುತ್ತಿದ್ದನು. ಫಿಲಿಪ್ಪನು ಅವನಿಗೆ, “ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಫಿಲಿಪ್ಪನು ರಥದ ಹತ್ತಿರಕ್ಕೆ ಓಡಿದನು. ಆ ಮನುಷ್ಯನು ಪ್ರವಾದಿ ಯೆಶಾಯನ ಗ್ರಂಥ ಓದುತ್ತಿರುವುದನ್ನು ಕೇಳಿಸಿಕೊಂಡು, “ನೀವು ಓದುತ್ತಿರುವುದು ನಿಮಗೆ ಅರ್ಥವಾಗುತ್ತಿದೆಯೇ?” ಎಂದು ಫಿಲಿಪ್ಪನು ಪ್ರಶ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಸಾಂಗಲ್ಲ್ಯಾ ಸಾರ್ಕೆಚ್ ಫಿಲಿಪ್ ರಥಾಚ್ಯಾ ಜಗ್ಗೊಳ್ ಗೆಲೊ, ತೊ ಮಾನುಸ್ ವಾಚುಲಾಗಲೆ ಯೆಶಾಯಾಚೆ ಪ್ರವಾದನ್ ಪುಸ್ತಕ್ ಫಿಲಿಪಾಕ್‍ಬಿ ಆಯ್ಕಲೆ, ತನ್ನಾ ಫಿಲಿಪಾನ್ ತೆಕಾ ತಿಯಾ ವಾಚುಲಾಗಲೆ ತುಕಾ ಅರ್ತ್‍ ಹೊವ್ಲಾ ಕಾಯ್? ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:30
18 ತಿಳಿವುಗಳ ಹೋಲಿಕೆ  

ಪವಿತ್ರಗ್ರಂಥದಿಂದಲೇ ನಿತ್ಯಜೀವ ಲಭಿಸುವುದೆಂದು ಭಾವಿಸಿ, ನೀವು ಅದನ್ನು ಪರಿಶೀಲಿಸಿ ನೋಡುತ್ತೀರಿ. ಆ ಗ್ರಂಥವು ಸಹ ನನ್ನ ಪರವಾಗಿ ಸಾಕ್ಷಿಹೇಳುತ್ತದೆ.


ಬುದ್ಧಿಹೀನರಾಗಿರದೆ ಪ್ರಭುವಿನ ಚಿತ್ತವೇನೆಂದು ಗ್ರಹಿಸಿಕೊಳ್ಳಿರಿ.


ಅನಂತರ ಯೇಸುಸ್ವಾಮಿ ಜನರನ್ನು ತಮ್ಮ ಬಳಿಗೆ ಕರೆದು, “ನಾನು ಹೇಳುವುದನ್ನು ಕೇಳಿ ಚೆನ್ನಾಗಿ ತಿಳಿದುಕೊಳ್ಳಿರಿ:


ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ,” ಎಂದರು.


ಒಬ್ಬನು ಶ್ರೀಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಆದರೂ ಸಭೆಯಲ್ಲಿ ಪರವಶನಾಗಿ ಹತ್ತುಸಾವಿರ ನುಡಿಗಳನ್ನಾಡುವ ಬದಲು ಮನಸ್ಸಾರೆ ಐದೇ ಮಾತುಗಳನ್ನಾಡಿ ಉಪದೇಶಿಸುವುದು ಉತ್ತಮವೆಂದು ನನಗೆ ತೋರುತ್ತದೆ.


“ವಿನಾಶಕಾರಿಯಾದ ವಿಕಟಮೂರ್ತಿಯು ಇರಬಾರದ ಸ್ಥಾನದಲ್ಲಿ ಇರುವುದನ್ನು ನೀವು ನೋಡುವಾಗ (ಇದನ್ನು ಓದುವವನು ಅರ್ಥಮಾಡಿಕೊಳ್ಳಲಿ) ಜುದೇಯದಲ್ಲಿರುವ ಜನರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ;


“ಪ್ರವಾದಿ ದಾನಿಯೇಲನು ಸೂಚಿಸಿರುವ ‘ವಿನಾಶಕರ ವಿಕಟ ಮೂರ್ತಿ’ ಪವಿತ್ರಸ್ಥಾನದಲ್ಲಿ ನಿಂತಿರುವುದನ್ನು ನೀವು ಕಾಣುವಿರಿ.


“ಇದೆಲ್ಲ ನಿಮಗೆ ಅರ್ಥವಾಯಿತೇ?” ಎಂದು ಯೇಸುಸ್ವಾಮಿ ಕೇಳಿದರು. ಶಿಷ್ಯರು “ಅರ್ಥವಾಯಿತು” ಎಂದರು.


ಹಿಡಿದಿರುವೆನು ನಿನ್ನ ಆಜ್ಞಾಮಾರ್ಗವನು I ಏಕೆನೆ ಹಿರಿದಾಗಿಸಿರುವೆ ನೀ ನನ್ನ ಅರಿವನು II


ಇದನ್ನು ಅರ್ಥಮಾಡಿಕೊಳ್ಳಲು ಜ್ಞಾನ ಬೇಕು. ಬುದ್ಧಿವಂತನು ಮೃಗದ ಸಂಖ್ಯೆಯನ್ನು ಎಣಿಸಲಿ. ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆ. ಆ ಸಂಖ್ಯೆಯು 666.


ಅಂತೆಯೇ ಫಿಲಿಪ್ಪನು ಹೊರಟನು. ಆಗ ಇಥಿಯೋಪಿಯದ ಕಂಚುಕಿಯೊಬ್ಬನು ಅದೇ ಮಾರ್ಗವಾಗಿ ಬರುತ್ತಿದ್ದನು. ಅವನು ಆ ದೇಶದ ರಾಣಿ ಕಂದಾಕಿಯ ಕೋಶಾಧಿಕಾರಿ ಹಾಗೂ ಸಚಿವ. ದೇವಾರಾಧನೆಗೆಂದು ಜೆರುಸಲೇಮಿಗೆ ಹೋಗಿ ಹಿಂದಿರುಗುತ್ತಿದ್ದನು. ಅವನು ತನ್ನ ರಥದಲ್ಲಿ ಕುಳಿತು ಯೆಶಾಯನ ಪ್ರವಾದನೆಯನ್ನು ಓದುತ್ತಿದ್ದನು.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸುವುದೇ ನನಗೇ ಆಹಾರ. ಆತನು ಕೊಟ್ಟ ಕಾರ್ಯಗಳನ್ನು ಪೂರೈಸುವುದೇ ನನಗೆ ತಿಂಡಿತೀರ್ಥ.


ಫಿಲಿಪ್ಪನು ಸಮಾರಿಯದ ಪ್ರಮುಖ ಪಟ್ಟಣ ಒಂದಕ್ಕೆ ಹೋಗಿ ಅಲ್ಲಿಯ ಜನರಿಗೆ ಯೇಸುವೇ ಅಭಿಷಿಕ್ತನಾದ ಲೋಕೋದ್ಧಾರಕನೆಂದು ಸಾರಿದನು.


ಪವಿತ್ರಾತ್ಮರು ಫಿಲಿಪ್ಪನಿಗೆ, “ನೀನು ಮುಂದೆ ಹೋಗಿ ಆ ರಥದ ಜೊತೆಯಲ್ಲೇ ನಡೆ,” ಎಂದು ತಿಳಿಸಿದರು.


ಆ ಅಧಿಕಾರಿ ಪ್ರತ್ಯುತ್ತರವಾಗಿ, “ಯಾರಾದರೂ ವಿವರಿಸಿದ ಹೊರತು ಇದು ನನಗೆ ಅರ್ಥವಾಗುವುದಾದರೂ ಹೇಗೆ?” ಎಂದನು. ರಥವನ್ನು ಹತ್ತಿ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಹ್ವಾನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು