Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:17 - ಕನ್ನಡ ಸತ್ಯವೇದವು C.L. Bible (BSI)

17 ಅಂತೆಯೇ ಅನನೀಯನು ಹೊರಟು ಆ ಮನೆಗೆ ಹೋದನು. ಸೌಲನ ಮೇಲೆ ಹಸ್ತನಿಕ್ಷೇಪಮಾಡಿ, “ಸಹೋದರ ಸೌಲನೇ, ಪ್ರಭು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ನೀನು ಬರುವಾಗ ದಾರಿಯಲ್ಲಿ ಕಾಣಿಸಿಕೊಂಡ ಯೇಸುಸ್ವಾಮಿಯೇ, ನೀನು ದೃಷ್ಟಿಯನ್ನು ಮರಳಿ ಪಡೆಯುವಂತೆಯೂ ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು - ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ಅನನೀಯನು ಅಲ್ಲಿಂದ ಹೊರಟು ಯೂದನ ಮನೆಗೆ ಹೋದನು. ಅವನು ಸೌಲನ ಮೇಲೆ ತನ್ನ ಕೈಗಳನ್ನಿಟ್ಟು, “ಸೌಲನೇ, ನನ್ನ ಸಹೋದರನೇ, ಪ್ರಭುವಾದ ಯೇಸು ನನ್ನನ್ನು ಕಳುಹಿಸಿದ್ದಾನೆ. ನೀನು ಇಲ್ಲಿಗೆ ಬರುವಾಗ ದಾರಿಯಲ್ಲಿ ಕಂಡದ್ದು ಆತನನ್ನೇ. ನೀನು ಮತ್ತೆ ದೃಷ್ಟಿಪಡೆಯಬೇಕೆಂತಲೂ ಪವಿತ್ರಾತ್ಮಭರಿತನಾಗಬೇಕೆಂತಲೂ ಯೇಸು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಮೇಲೆ ಅನನೀಯನು ಆ ಮನೆಗೆ ಹೋಗಿ ಒಳಗೆ ಪ್ರವೇಶಿಸಿದನು. ತನ್ನ ಕೈಗಳನ್ನು ಸೌಲನ ಮೇಲಿಟ್ಟು, “ಸಹೋದರ ಸೌಲನೇ, ನೀನು ಇಲ್ಲಿಗೆ ಬರುತ್ತಿದ್ದಾಗ ದಾರಿಯಲ್ಲಿ ನಿನಗೆ ದರ್ಶನಕೊಟ್ಟ ಕರ್ತ ಯೇಸು, ನಿನಗೆ ಪುನಃ ದೃಷ್ಟಿ ಬರುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಸೆ ಹೊವ್ನ್ ಅನನಿಯ್ ಜುದಾಸಾಚ್ಯಾ ಘರಾಕ್ ಗೆಲೊ, ಅನಿ ಸಾವ್ಲುಚೆರ್ ಅಪ್ನಿ ಹಾತಾ ಥವ್ನ್ “ಸಾವ್ಲ್, ಮಾಜ್ಯಾ ಭಾವಾ, ಧನಿಯಾ ಜೆಜುನ್ ಮಾಕಾ ಧಾಡುನ್ ದಿಲಾ, ತಿಯಾ ಹಿತ್ತೆ ಯೆತಾನಾ ವಾಟೆರ್ ಬಗಟಲ್ಲೆ ತೆಕಾಚ್, ತುಕಾ ಪರ್ತುನ್ ಡೊಳೆ ಯೆಯ್ ಸಾರ್ಕೆ ಹೊವ್ಚೆ, ಅನಿ ಪವಿತ್ರ್ ಆತ್ಮ್ಯಾನ್ ಭರುಚೊ ಮನುನ್ ಜೆಜುನ್ ಮಾಕಾ ಧಾಡುನ್ ದಿಲಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:17
36 ತಿಳಿವುಗಳ ಹೋಲಿಕೆ  

ಪ್ರೇಷಿತರು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಅವರು ಪವಿತ್ರಾತ್ಮ ವರವನ್ನು ಪಡೆದರು.


ಪ್ರೇಷಿತರ ಮುಂದೆ ಅವರನ್ನು ನಿಲ್ಲಿಸಿದರು. ಪ್ರೇಷಿತರು ಪ್ರಾರ್ಥನೆಮಾಡಿ ಅವರ ಮೇಲೆ ಹಸ್ತನಿಕ್ಷೇಪ ಮಾಡಿದರು.


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.


ದೇವರ ಸೇವೆಗೆಂದು ಅವಸರದಿಂದ ಯಾರ ಮೇಲೂ ಹಸ್ತನಿಕ್ಷೇಪ ಮಾಡಿ ದೀಕ್ಷೆ ನೀಡಬೇಡ. ಹಾಗೆ ಮಾಡಿದರೆ, ಅವರ ಪಾಪಗಳಲ್ಲಿ ನೀನೂ ಭಾಗಿಯಾಗುವೆ. ನೀನು ಪರಿಶುದ್ಧನಾಗಿರುವ ಹಾಗೆ ನೋಡಿಕೋ.


ಭಕ್ತ ವಿಶ್ವಾಸಿಗಳಾದರೋ ಪರಮಾನಂದಪಟ್ಟರು, ಪವಿತ್ರಾತ್ಮಭರಿತರಾದರು.


ಜಡ ಕರ್ಮಗಳನ್ನು ಬಿಟ್ಟು ದೇವರಲ್ಲಿ ವಿಶ್ವಾಸವಿಡುವುದು, ಸ್ನಾನಸಂಸ್ಕಾರಗಳು, ಹಸ್ತನಿಕ್ಷೇಪ, ಸತ್ತವರ ಪುನರುತ್ಥಾನ, ನಿತ್ಯವಾದ ನ್ಯಾಯತೀರ್ಪು - ಈ ಬೋಧನಾ ಅಸ್ತಿವಾರವನ್ನು ಮತ್ತೆ ಮತ್ತೆ ಹಾಕಬೇಕಾಗಿಲ್ಲ.


ಈಗ ಅವನು ನಿನ್ನ ಬಳಿಗೆ ಬರುತ್ತಿರುವುದು ಕೇವಲ ಗುಲಾಮನಂತೆ ಅಲ್ಲ. ಅದಕ್ಕಿಂತಲೂ ಬಹಳ ಮೇಲಾದವನಂತೆ, ಕ್ರಿಸ್ತಯೇಸುವಿನಲ್ಲಿ ಪ್ರಿಯ ಸಹೋದರನಂತೆ, ಅವನೆಂದರೆ ನನಗೆಷ್ಟೋ ಪ್ರೀತಿ. ಹಾಗಾದರೆ ನಿನ್ನ ಸೇವಕನೂ ನಮ್ಮ ಪ್ರಭುವಿನಲ್ಲಿ ನಿನ್ನ ಪ್ರಿಯ ಸಹೋದರನೂ ಆಗಿರುವ ಅವನ ಬಗ್ಗೆ ನಿನಗೆ ಮತ್ತಷ್ಟು ಪ್ರೀತಿ ಇರಬೇಕಲ್ಲವೇ?


ನಾನು ನಿನ್ನ ಮೇಲೆ ಹಸ್ತ ನಿಕ್ಷೇಪಮಾಡಿ ಪ್ರಾರ್ಥಿಸಿದಾಗ ನೀನು ಪಡೆದಂಥ ವರದಾನವನ್ನು ಪುನಃ ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಿಸುತ್ತೇನೆ.


ನಿನ್ನಲ್ಲಿರುವ ವರದಾನವನ್ನು ಅಲಕ್ಷಿಸಬೇಡ. ಸಭೆಯ ಹಿರಿಯರು ನಿನ್ನ ಮೇಲೆ ದೈವವಾಕ್ಯದ ಉಚ್ಚಾರದೊಂದಿಗೆ ಹಸ್ತನಿಕ್ಷೇಪಮಾಡಿದಾಗ ಈ ವರವು ನಿನಗೆ ಲಭಿಸಿತಲ್ಲವೇ?


ಮೊದಲನೆಯ ಮಾನವನು ಮಣ್ಣಿನಿಂದಾದವನು; ಮಣ್ಣಿಗೆ ಸಂಬಂಧಪಟ್ಟವನು. ಎರಡನೆಯ ಮಾನವನಾದರೋ ಸ್ವರ್ಗದಿಂದ ಬಂದವನು.


ಕಟ್ಟಕಡೆಗೆ ದಿನತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು.


ಕ್ರಿಸ್ತಯೇಸು ನಿಮ್ಮನ್ನು ಅಂಗೀಕರಿಸಿದಂತೆ ದೇವರ ಮಹಿಮೆಗಾಗಿ ನೀವು ಸಹ ಒಬ್ಬರನ್ನು ಒಬ್ಬರು ಅಂಗೀಕರಿಸಿರಿ.


‘ಪ್ರಭೂ ನೀವಾರು?’ ಎಂದು ನಾನು ಕೇಳಿದೆ. ಅದಕ್ಕೆ ಪ್ರಭು, ‘ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.


ಇದನ್ನು ಕೇಳಿದ ಅವರು ದೇವರನ್ನು ಕೊಂಡಾಡಿದರು. ಅನಂತರ ಅವರು ಪೌಲನಿಗೆ ಹೀಗೆಂದರು: "ಸಹೋದರಾ, ನಿನಗೆ ತಿಳಿದಿರುವಂತೆ ಯೆಹೂದ್ಯರಲ್ಲಿ ಭಕ್ತವಿಶ್ವಾಸಿಗಳಾಗಿರುವವರು ಸಾವಿರಾರು ಮಂದಿ ಇದ್ದಾರೆ; ಅವರೆಲ್ಲರೂ ಯೆಹೂದ್ಯ ಧರ್ಮಶಾಸ್ತ್ರದಲ್ಲಿ ಬಹಳ ಶ್ರದ್ಧೆ ಉಳ್ಳವರು.


ಪೌಲನು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಪವಿತ್ರಾತ್ಮ ಅವರ ಮೇಲೆ ಬಂದರು. ಆಗ ಅವರೆಲ್ಲರೂ ನಾನಾ ಭಾಷೆಗಳನ್ನು ಮಾತನಾಡುತ್ತಾ ಪ್ರವಾದಿಸಿದರು.


ಅಂತೆಯೇ ಅವರು ಉಪವಾಸವಿದ್ದು, ಪ್ರಾರ್ಥನೆಮಾಡಿ, ಇವರಿಬ್ಬರ ಮೇಲೆ ಹಸ್ತನಿಕ್ಷೇಪಮಾಡಿ ಕಳುಹಿಸಿಕೊಟ್ಟರು.


ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ.


ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.


ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”


ಆದರೆ ನಿಮ್ಮ ಆಸ್ತಿಪಾಸ್ತಿಯನ್ನೆಲ್ಲಾ ವೇಶ್ಯೆಯರಿಗೆ ಸುರಿದ ಈ ನಿಮ್ಮ ಮಗ ಬಂದದ್ದೇ ಕೊಬ್ಬಿಸಿದ ಪ್ರಾಣಿಯನ್ನು ಕೊಯ್ಯಿಸಿದ್ದೀರಿ!’ ಎಂದು ವಾದಿಸಿದ.


ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


ಸುಕುಮಾರಾ, ನೀನೆನಿಸಿಕೊಳ್ಳುವೆ ‘ಪರಾತ್ಪರನ ಪ್ರವಾದಿ’ I


ಕೆಲವು ರೋಗಿಗಳ ಮೇಲೆ ಕೈಗಳನ್ನಿರಿಸಿ, ಅವರನ್ನು ಗುಣಪಡಿಸಿದ್ದನ್ನು ಬಿಟ್ಟರೆ ಇನ್ನಾವ ಮಹತ್ತಾದ ಕಾರ್ಯಗಳನ್ನೂ ಅವರು ಅಲ್ಲಿ ಮಾಡಲಾಗಲಿಲ್ಲ.


ಅನಂತರ ಕೆಲವರು ಚಿಕ್ಕಮಕ್ಕಳನ್ನು ಯೇಸುಸ್ವಾಮಿಯ ಬಳಿಗೆ ತಂದರು. ಅವುಗಳ ಮೇಲೆ ಕೈಯಿಟ್ಟು ಪ್ರಾರ್ಥನೆ ಮಾಡಬೇಕೆಂದು ಕೇಳಿಕೊಂಡರು. ಶಿಷ್ಯರು ಅವರನ್ನು ಗದರಿಸಿದರು.


ಜೋಸೆಫನು, “ಹತ್ತಿರಕ್ಕೆ ಬನ್ನಿ” ಎನ್ನಲು, ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ, “ಈಜಿಪ್ಟ್ ದೇಶಕ್ಕೆ ಹೋಗಲಿ" ಎಂದು ನೀವು ಮಾರಿಬಿಟ್ಟ ನಿಮ್ಮ ತಮ್ಮ ಜೋಸೆಫ್ ನಾನೇ.


ಅವನು ಯೇಸುವನ್ನು ನೋಡಿದೊಡನೆ ಅವರ ಪಾದಕ್ಕೆರಗಿ, “ನನ್ನ ಪುಟ್ಟ ಮಗಳು ಮರಣಾವಸ್ಥೆಯಲ್ಲಿದ್ದಾಳೆ; ತಾವು ಬಂದು ತಮ್ಮ ಹಸ್ತವನ್ನು ಅವಳ ಮೇಲಿಟ್ಟು, ಅವಳು ಗುಣಹೊಂದಿ ಬದುಕುವಂತೆ ಅನುಗ್ರಹಿಸಬೇಕು,” ಎಂದು ಬಹಳವಾಗಿ ವಿನಂತಿಸಿದನು.


ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿ ಶಿಶು ನಲಿದಾಡಿತು; ಎಲಿಜಬೇತಳೂ ಪವಿತ್ರಾತ್ಮಭರಿತಳಾಗಿ,


ಆಗ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು :


ಆ ಕ್ಷಣವೇ ಸೌಲನ ಕಣ್ಣುಗಳಿಂದ ಪರೆಯೊಂದು ಕಳಚಿಬಿದ್ದಿತು. ಅವನಿಗೆ ಪುನಃ ಕಣ್ಣು ಕಾಣತೊಡಗಿತು. ಎದ್ದು ದೀಕ್ಷಾಸ್ನಾನವನ್ನು ಪಡೆದನು.


ನಾನು ಸ್ವತಂತ್ರನಲ್ಲವೇ? ಪ್ರೇಷಿತನಲ್ಲವೇ? ನಮ್ಮ ಪ್ರಭು ಯೇಸುವನ್ನು ಕಂಡವನಲ್ಲವೇ? ಪ್ರಭುವಿನಲ್ಲಿ ನಾನು ಮಾಡಿದ ಸೇವೆಯ ಪ್ರತಿಫಲ ನೀವಲ್ಲವೇ?


ನಮ್ಮ ಪ್ರಭುವಿನ ದೀರ್ಘಶಾಂತಿ ಹಾಗು ಸಹನೆ ನಮ್ಮ ಜೀವೋದ್ಧಾರಕ್ಕಾಗಿಯೇ ಎಂದು ತಿಳಿದುಕೊಳ್ಳಿ. ನಮ್ಮ ಪ್ರಿಯ ಸಹೋದರನಾದ ಪೌಲನೂ ಸಹ ತನಗೆ ದೇವರಿತ್ತ ಜ್ಞಾನದ ಪ್ರಕಾರ ಹೀಗೆಯೇ ನಿಮಗೆ ಬರೆದಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು