Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:21 - ಕನ್ನಡ ಸತ್ಯವೇದವು C.L. Bible (BSI)

21 ಅವನ ಬೋಧನೆಯನ್ನು ಕೇಳಿದವರೆಲ್ಲರೂ ಚಕಿತರಾದರು. “ಜೆರುಸಲೇಮಿನಲ್ಲಿ ಯೇಸುವಿನ ನಾಮಸ್ಮರಣೆ ಮಾಡುತ್ತಿದ್ದವರನ್ನು ಬಲಿಹಾಕುತ್ತಿದ್ದವನು ಇವನೇ ಅಲ್ಲವೇ? ಅಂಥವರನ್ನು ಬಂಧಿಸಿ ಮುಖ್ಯಯಾಜಕರ ಬಳಿಗೆ ಎಳೆದೊಯ್ಯುವ ಉದ್ದೇಶದಿಂದಲೇ ಅಲ್ಲವೆ ಇವನು ಇಲ್ಲಿಗೆ ಬಂದಿರುವುದು?” ಎಂದು ಪ್ರಶ್ನಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕೇಳಿದವರೆಲ್ಲರು ಬೆರಗಾಗಿ; “ಯೇಸುಕ್ರಿಸ್ತನ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ನಾಶಮಾಡುತ್ತಿದ್ದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮುಖ್ಯಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದು ಇಲ್ಲಿಗೆ ಬಂದಿರುವನಲ್ಲವೇ” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕೇಳಿದವರೆಲ್ಲರು ಬೆರಗಾಗಿ - ಈ ಹೆಸರು ಹೇಳುವವರನ್ನು ಯೆರೂಸಲೇವಿುನಲ್ಲಿ ಹಾಳುಮಾಡಿದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮಹಾಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದೇ ಇಲ್ಲಿಗೆ ಬಂದನಲ್ಲವೇ ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಸೌಲನ ಮಾತನ್ನು ಕೇಳಿದ ಜನರೆಲ್ಲರೂ ವಿಸ್ಮಯಗೊಂಡು, “ಜೆರುಸಲೇಮಿನಲ್ಲಿದ್ದವನು ಈ ಮನುಷ್ಯನೇ. ಈ ಹೆಸರಿನಲ್ಲಿ (ಯೇಸುವಿನ) ನಂಬಿಕೆ ಇಡುವ ಜನರನ್ನು ನಾಶಮಾಡಲು ಇವನು ಪ್ರಯತ್ನಿಸುತ್ತಿದ್ದನು! ಯೇಸುವಿನ ಶಿಷ್ಯರನ್ನು ಬಂಧಿಸಿ ಜೆರುಸಲೇಮಿನಲ್ಲಿರುವ ಮಹಾಯಾಜಕರ ಬಳಿಗೆ ಕೊಂಡೊಯ್ಯಲು ಇವನು ಇಲ್ಲಿಗೂ ಬಂದಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನ ಮಾತುಗಳನ್ನು ಕೇಳಿದವರಿಗೆ ಅತ್ಯಾಶ್ಚರ್ಯವಾಯಿತು. ಅವರು, “ಈ ಹೆಸರನ್ನು ಹೇಳುವವರೆಲ್ಲರಿಗೆ ಯೆರೂಸಲೇಮಿನಲ್ಲಿ ತೊಂದರೆಕೊಟ್ಟು ಗೊಂದಲವೆಬ್ಬಿಸಿದವನು ಇವನೇ ಅಲ್ಲವೇ? ಅಂಥವರನ್ನು ಸೆರೆಹಿಡಿದು ಮುಖ್ಯಯಾಜಕರ ಬಳಿಗೆ ಎಳೆದೊಯ್ಯಲು ಇಲ್ಲಿಗೆ ಬಂದವನಲ್ಲವೇ?” ಎಂದು ಪ್ರಶ್ನಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆಜೆ ಬೊಲ್ನೆ ಆಯ್ಕಲ್ಲಿ ಲೊಕಾ ಸಗ್ಳ್ಯಿ ಅಜಾಪ್ ಹೊಲಿ, ಅನಿ ಜೆರುಜಲೆಮಾತ್ ಹೊತ್ತೊ ಮಾನುಸ್ ಹ್ಯೊಚ್, ಜೆಜುಚ್ಯಾ ನಾವಾರ್ ವಿಶ್ವಾಸ್ ಥವ್ತಲ್ಯಾ ಲೊಕಾಕ್ನಿ ಜಿವಾನಿ ಮಾರುಕ್ ಬಗಿತ್ ಹೊತ್ತೊ! ಜೆಜುಚ್ಯಾ ಲೊಕಾಕ್ನಿ ಧರುನ್ ಮುಖ್ಯ್ ಯಾಜಕಾಂಚ್ಯಾಕ್ಡೆ ವೊಡುನ್ ನ್ಹೆವ್ಚೆ ಮನುನ್ ಯೆಲ್ಲೊ ಹ್ಯೊಚ್ ನ್ಹಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:21
20 ತಿಳಿವುಗಳ ಹೋಲಿಕೆ  

ಇತ್ತ ಸೌಲನು ಧರ್ಮಸಭೆಯನ್ನು ನಾಶಪಡಿಸಲು ತೊಡಗಿದನು; ಮನೆಮನೆಗೂ ನುಗ್ಗಿ ಸ್ತ್ರೀಪುರುಷರೆನ್ನದೆ ಭಕ್ತರನ್ನು ಎಳೆದುತಂದು ಸೆರೆಮನೆಗೆ ತಳ್ಳುತ್ತಿದ್ದನು.


ಪ್ರಭು ತಮ್ಮ ಸದ್ಭಕ್ತರೆಲ್ಲರಿಂದ ಸನ್ಮಾನವನ್ನೂ ವಿಶ್ವಾಸಿಗಳೆಲ್ಲರಿಂದ ಗೌರವವನ್ನೂ ಪಡೆಯುವ ಆ ದಿನದಲ್ಲಿ ಇದೆಲ್ಲಾ ಸಂಭವಿಸುವುದು. ನಾವು ನಿಮಗಿತ್ತ ಸಾಕ್ಷಿಯನ್ನು ನಂಬಿದ ನೀವೆಲ್ಲರೂ ಅವರೊಂದಿಗಿರುವಿರಿ.


ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ.


ಅವಿದ್ಯಾವಂತರು ಹಾಗೂ ಜನಸಾಮಾನ್ಯರು ಆಗಿದ್ದರೂ, ಇವರು ಇಷ್ಟು ಧೈರ್ಯಶಾಲಿಗಳಾಗಿರುವುದನ್ನು ಕಂಡು ಸಭೆಯ ಸದಸ್ಯರು ಚಕಿತರಾದರು; ಯೇಸುವಿನ ಸಂಗಡಿಗರೆಂದು ಇವರ ಗುರುತು ಹಚ್ಚಿದರು.


ದೇವಾಲಯದ ಸುಂದರದ್ವಾರದ ಬಳಿ ಕುಳಿತು ಭಿಕ್ಷೆಬೇಡುತ್ತಿದ್ದವನು ಇವನೇ ಎಂದು ಜನರು ಗುರುತು ಹಚ್ಚಿದರು. ಅವನಿಗೆ ಸಂಭವಿಸಿದ್ದನ್ನು ಕಂಡು ಬೆಕ್ಕಸಬೆರಗಾದರು.


ಸರ್ವರೂ ಭ್ರಮೆಗೊಂಡು, ಇದರ ಅರ್ಥವಾದರೂ ಏನೆಂದು ಒಬ್ಬರನ್ನು ಒಬ್ಬರು ವಿಸ್ಮಯದಿಂದ ವಿಚಾರಿಸತೊಡಗಿದರು.


ಆ ಶಬ್ದವನ್ನು ಕೇಳಿದ್ದೇ, ಜನರ ದೊಡ್ಡ ಗುಂಪು ಸೇರಿತು. ಭಕ್ತಾದಿಗಳು ಮಾತನಾಡುತ್ತಿದ್ದುದನ್ನು ತಮ್ಮ ತಮ್ಮ ಭಾಷೆಗಳಲ್ಲೇ ಕೇಳಿದ ಜನರು ದಿಗ್ಭ್ರಮೆಗೊಂಡರು.


ಪ್ರಧಾನ ಯಾಜಕನಾದ ಯೆಹೋಶುವನೇ, ನೀನೂ ಮತ್ತು ನಿನ್ನ ಜೊತೆಯಲ್ಲಿ ಉಪಸ್ಥಿತರಾದ ಸಹಯಾಜಕರೂ, ಕೇಳಲಿ: ನೀವು ಶುಭದಿನಗಳ ಮುಂಗುರುತು. ‘ಮೊಳಕೆ’ ಎಂಬಸೇವಕನೊಬ್ಬನು ಕಾಣಿಸಿಕೊಳ್ಳುವಂತೆ ಮಾಡುವೆನು.


ಇಗೋ, ನನ್ನನ್ನೂ ನನಗೆ ಸ್ವಾಮಿ ದಯಪಾಲಿಸಿರುವ ಮಕ್ಕಳನ್ನೂ ನೋಡು. ಸಿಯೋನ್ ಶಿಖರದಲ್ಲಿ ವಾಸವಾಗಿರುವ ಸೇನಾಧೀಶ್ವರಸ್ವಾಮಿಯೇ ಇಸ್ರಯೇಲರಿಗೆ ನೀಡುವ ಸೂಚನೆಗಳು ಹಾಗೂ ಜೀವಂತ ಸಂಕೇತಗಳು ನಾವೇ ಆಗಿದ್ದೇವೆ.


ಹಲವರಿಗೆ ನಾನೊಂದು ಒಗಟು I ನೀನೆನಗೆ ಬಲವಾದ ನೆಲೆಗಟ್ಟು II


ಯಕೋಬ್ಯರಿಗೆ ವಿರುದ್ಧವಾದ ಶಕುನವಿಲ್ಲ ಇಸ್ರಯೇಲರಿಗೆ ವಿರುದ್ಧವಾದ ತಂತ್ರಮಂತ್ರವಿಲ್ಲ. ತಾನು ಮಾಡುವುದನ್ನು ತತ್ಕಾಲದಲ್ಲೇ ದೇವ ತಿಳಿಸುತ್ತಾನೆ ಯಕೋಬ್ಯರಿಗೆ ಅದನ್ನು ಸೂಚಿಸುತ್ತಾನೆ ಸಮಯೋಚಿತವಾಗಿ ಆ ಇಸ್ರಯೇಲರಿಗೆ.


ಬೋಧಿಸುವೆನಾಗ ನಿನ್ನ ಮಾರ್ಗವನು ದುರುಳರಿಗೆ I ತಿರುಗಿಕೊಳ್ವರಾಗ ದ್ರೋಹಿಗಳು ನಿನ್ನ ಕಡೆಗೆ II


ಅವರು ತನ್ನ ಮೇಲೆ ಕಲ್ಲುಬೀರುತ್ತಿದ್ದಾಗ ಸ್ತೇಫನನು, “ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ಸೌಲನಾದರೋ ಮತ್ತಷ್ಟು ಸಾಮರ್ಥ್ಯದಿಂದ ಪ್ರಭು ಯೇಸುವೇ ಲೋಕೋದ್ಧಾರಕನೆಂದು ರುಜುವಾತುಪಡಿಸಿ ದಮಸ್ಕಸಿನ ಯೆಹೂದ್ಯರ ಬಾಯಿಮುಚ್ಚಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು