Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:22 - ಕನ್ನಡ ಸತ್ಯವೇದವು C.L. Bible (BSI)

22 ಸೌಲನಾದರೋ ಮತ್ತಷ್ಟು ಸಾಮರ್ಥ್ಯದಿಂದ ಪ್ರಭು ಯೇಸುವೇ ಲೋಕೋದ್ಧಾರಕನೆಂದು ರುಜುವಾತುಪಡಿಸಿ ದಮಸ್ಕಸಿನ ಯೆಹೂದ್ಯರ ಬಾಯಿಮುಚ್ಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರಾಗ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಸೌಲನು ಹೆಚ್ಚುಹೆಚ್ಚು ಪ್ರಬಲವಾಗಿ ಯೇಸುವೇ ಕ್ರಿಸ್ತನೆಂದು ನಿರೂಪಿಸಿದನು. ಅವನ ಆಧಾರಗಳು ಬಹು ಬಲವಾಗಿದ್ದ ಕಾರಣ ದಮಸ್ಕದ ಯೆಹೂದ್ಯರು ಅವನೊಂದಿಗೆ ವಾದ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೂ ಸೌಲನು ಹೆಚ್ಚೆಚ್ಚು ಸಾಮರ್ಥ್ಯವುಳ್ಳವನಾಗಿ ಯೇಸುವೇ ಕ್ರಿಸ್ತ ಆಗಿದ್ದಾರೆಂದು ರುಜುವಾತುಪಡಿಸುತ್ತಾ ದಮಸ್ಕದ ನಿವಾಸಿಗಳಾದ ಯೆಹೂದ್ಯರನ್ನು ಗಲಿಬಿಲಿಗೆ ಒಳಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಖರೆ ಸಾವ್ಲಾ, ಅನಿಬಿ ಲೈ ಬಳಾನಿ ಜೆಜುಚ್ ಕ್ರಿಸ್ತ್ ಮನುನ್ ಸಾಂಗುಕ್ ಲಾಗಲ್ಲೊ, ತೆಚ್ಯಾ ವೈನಾ ದಮಸ್ಕಾತ್ಲ್ಯಾ ಜುದೆವಾಂಚ್ಯಾ ಲೊಕಾಂಚ್ಯಾಕ್ಡೆ ಕಾಯ್ಬಿ ಬೊಲುಕ್ ಹೊವ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:22
21 ತಿಳಿವುಗಳ ಹೋಲಿಕೆ  

ಸೀಲ ಮತ್ತು ತಿಮೊಥೇಯ ಮಕೆದೋನಿಯದಿಂದ ಬಂದ ಮೇಲೆ ಪೌಲನು ಶುಭಸಂದೇಶವನ್ನು ಸಾರುವುದರಲ್ಲೂ ಯೇಸುವೇ ಬರಬೇಕಾದ ಲೋಕೋದ್ಧಾರಕ ಎಂದು ಯೆಹೂದ್ಯರಿಗೆ ರುಜುವಾತುಪಡಿಸುವುದರಲ್ಲೂ ತನ್ನ ಸಮಯವನ್ನು ಕಳೆದನು.


ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ದಯಪಾಲಿಸುವನಾತ ಬಲಾಭಿವೃದ್ಧಿಯನ್ನು ಬಳಲಿದವನಿಗೆ ಅನುಗ್ರಹಿಸುವನಾತ ಚೈತನ್ಯವನು ನಿತ್ರಾಣನಿಗೆ.


ಜ್ಞಾನಿಗಳನ್ನು ನಾಚಿಕೆಗೀಡುಮಾಡಲು ದೇವರು ಲೋಕದ ದೃಷ್ಟಿಯಲ್ಲಿ ಮೂರ್ಖರನ್ನು ಆರಿಸಿಕೊಂಡರು; ಅಂತೆಯೇ ಬಲಿಷ್ಠರನ್ನು ಲಜ್ಜೆಗೀಡುಮಾಡಲು ಲೋಕದ ದೃಷ್ಟಿಯಲ್ಲಿ ಬಲಹೀನರನ್ನು ಆರಿಸಿಕೊಂಡರು.


ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ಪವಿತ್ರಗ್ರಂಥದ ಪ್ರಕಾರ ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕಾಗಿತ್ತೆಂದೂ ಮರಣಹೊಂದಿ ಪುನರುತ್ಥಾನ ಹೊಂದಬೇಕಾಗಿತ್ತೆಂದೂ ಪ್ರತಿಪಾದಿಸಿದನು. ‘ನಾನು ನಿಮಗೆ ಸಾರುತ್ತಿರುವ ಯೇಸುಸ್ವಾಮಿಯೇ ಆ ಉದ್ಧಾರಕ’ ಎಂದು ಸ್ಪಷ್ಟಪಡಿಸಿದನು.


ಸಾಗುಸಾಗುತ್ತಾ ಬೆಳೆವುದಾ ಯಾತ್ರಿಕರ ಚೇತನ I ಪಡೆವರು ಸಿಯೋನ್ ಗಿರಿಯೊಳು ದೇವಾಧಿದೇವನ ದರ್ಶನ II


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


ಆದರೂ ಯಕೋಬಕುಲದ ಸರ್ವ ಬಲಾಢ್ಯನ ಶಕ್ತಿಯಿಂದ ಇಸ್ರಯೇಲನ ಪೊರೆಬಂಡೆ - ಪರಿಪಾಲಕನ ನಾಮದಿಂದ ನಿಂತಿತು ಸ್ಥಿರವಾಗಿ ಅವನ ಬಿಲ್ಲು ಚುರುಕುಗೊಂಡಿತು ಅವನ ಕೈಗಳ ಬಲ್ಬು.


ಬೋಧಿಸುವೆನಾಗ ನಿನ್ನ ಮಾರ್ಗವನು ದುರುಳರಿಗೆ I ತಿರುಗಿಕೊಳ್ವರಾಗ ದ್ರೋಹಿಗಳು ನಿನ್ನ ಕಡೆಗೆ II


ಅನಂತರ ಸೌಲನು ತಡಮಾಡದೆ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಯೇಸುವೇ ‘ದೇವರ ಪುತ್ರ’ ಎಂದು ಬೋಧಿಸಲು ಆರಂಭಿಸಿದನು.


ಅವನ ಬೋಧನೆಯನ್ನು ಕೇಳಿದವರೆಲ್ಲರೂ ಚಕಿತರಾದರು. “ಜೆರುಸಲೇಮಿನಲ್ಲಿ ಯೇಸುವಿನ ನಾಮಸ್ಮರಣೆ ಮಾಡುತ್ತಿದ್ದವರನ್ನು ಬಲಿಹಾಕುತ್ತಿದ್ದವನು ಇವನೇ ಅಲ್ಲವೇ? ಅಂಥವರನ್ನು ಬಂಧಿಸಿ ಮುಖ್ಯಯಾಜಕರ ಬಳಿಗೆ ಎಳೆದೊಯ್ಯುವ ಉದ್ದೇಶದಿಂದಲೇ ಅಲ್ಲವೆ ಇವನು ಇಲ್ಲಿಗೆ ಬಂದಿರುವುದು?” ಎಂದು ಪ್ರಶ್ನಿಸತೊಡಗಿದರು.


ಕೆಲವು ದಿನಗಳಾದ ಮೇಲೆ, ಯೆಹೂದ್ಯರು ಸೌಲನನ್ನು ಕೊಲ್ಲಲು ಒಳಸಂಚು ಮಾಡಿದರು.


ಆಗ ಬಾರ್ನಬನು ಅವನನ್ನು ಪ್ರೇಷಿತರ ಬಳಿಗೆ ಕರೆದುಕೊಂಡು ಹೋದನು. ಸೌಲನು ಪ್ರಭುವನ್ನು ಮಾರ್ಗದಲ್ಲಿ ದರ್ಶಿಸಿದ್ದನ್ನೂ ಅವರು ಅವನೊಂದಿಗೆ ಮಾತನಾಡಿದ್ದನ್ನೂ ತಿಳಿಸಿದನು. ಅಲ್ಲದೆ ದಮಸ್ಕಸಿನಲ್ಲಿ ಧೈರ್ಯದಿಂದ ಯೇಸುವಿನ ಹೆಸರಿನಲ್ಲಿ ಬೋಧಿಸಿದ್ದನ್ನೂ ಅವರಿಗೆ ವಿವರಿಸಿದನು.


ಮೂರು ವರ್ಷಗಳ ನಂತರವೇ ಕೇಫನನ್ನು ಕಂಡು ಮಾತನಾಡಲು ಜೆರುಸಲೇಮಿಗೆ ಹೋದೆ; ಹದಿನೈದು ದಿನ ಆತನೊಂದಿಗೆ ತಂಗಿದ್ದೆ.


ಶುಭಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು