Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:27 - ಕನ್ನಡ ಸತ್ಯವೇದವು C.L. Bible (BSI)

27 ಆಗ ಬಾರ್ನಬನು ಅವನನ್ನು ಪ್ರೇಷಿತರ ಬಳಿಗೆ ಕರೆದುಕೊಂಡು ಹೋದನು. ಸೌಲನು ಪ್ರಭುವನ್ನು ಮಾರ್ಗದಲ್ಲಿ ದರ್ಶಿಸಿದ್ದನ್ನೂ ಅವರು ಅವನೊಂದಿಗೆ ಮಾತನಾಡಿದ್ದನ್ನೂ ತಿಳಿಸಿದನು. ಅಲ್ಲದೆ ದಮಸ್ಕಸಿನಲ್ಲಿ ಧೈರ್ಯದಿಂದ ಯೇಸುವಿನ ಹೆಸರಿನಲ್ಲಿ ಬೋಧಿಸಿದ್ದನ್ನೂ ಅವರಿಗೆ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೆ ಬಾರ್ನಬನು ಅವನನ್ನು ಕೈಹಿಡಿದು, ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ, ಅವನು ದಮಸ್ಕದ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ, ಕರ್ತನು ಅವನ ಸಂಗಡ ಮಾತನಾಡಿದ್ದನ್ನೂ, ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಪ್ರಚಾರ ಮಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದರೆ ಬಾರ್ನಬನು ಅವನನ್ನು ಕೈಹಿಡಿದು ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ ಅವನು ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಕರ್ತನು ಅವನ ಸಂಗಡ ಮಾತಾಡಿದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ಬಾರ್ನಬನು ಸೌಲನನ್ನು ಸ್ವೀಕರಿಸಿಕೊಂಡು ಅಪೊಸ್ತಲರ ಬಳಿಗೆ ಕರೆದುಕೊಂಡು ಬಂದನು. ಸೌಲನು ದಮಸ್ಕದ ದಾರಿಯಲ್ಲಿ ಪ್ರಭುವನ್ನು ನೋಡಿರುವುದನ್ನೂ ಪ್ರಭುವು ಸೌಲನೊಂದಿಗೆ ಮಾತಾಡಿದ್ದನ್ನೂ ಬಾರ್ನಬನು ಅವರಿಗೆ ವಿವರಿಸಿದನು. ಅಲ್ಲದೆ ಸೌಲನು ದಮಸ್ಕದಲ್ಲಿ ಜನರಿಗೆ ಪ್ರಭುವಿನ ವಿಷಯದಲ್ಲಿ ನಿರ್ಭಯವಾಗಿ ಬೋಧಿಸಿದ್ದನ್ನೂ ಅವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಬಾರ್ನಬನು ಅವನನ್ನು ಕರೆದುಕೊಂಡು ಅಪೊಸ್ತಲರ ಬಳಿಗೆ ಬಂದನು. ಸೌಲನು ಪ್ರಯಾಣ ಮಾಡುತ್ತಿದ್ದಾಗ ಅವನಿಗೆ ಕರ್ತ ಯೇಸು ದರ್ಶನವಾದದ್ದನ್ನೂ ಕರ್ತ ಯೇಸು ಅವನೊಂದಿಗೆ ಮಾತನಾಡಿದ್ದನ್ನೂ ಯಾವ ಭಯವಿಲ್ಲದೆ ದಮಸ್ಕದಲ್ಲಿ ಯೇಸುವಿನ ಹೆಸರಿನಲ್ಲಿ ಅವನು ಬೋಧಿಸಿದ್ದನ್ನೂ ಬಾರ್ನಬನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖರೆ ಬಾರ್ನಾಬಾಸ್ ತೆಕಾ ಮಜತ್ ಕರುಕ್ ಯೆಲೊ ಅನಿ ಅಪೊಸ್ತಲಾಂಚ್ಯಾ ಜಗ್ಗೊಳ್ ಬುಲ್ವುನ್ ಹಾನ್ಲ್ಯಾನ್, ಸಾವ್ಲಾನ್ ದಮಸ್ಕಾಚ್ಯಾ ವಾಟೆರ್ ಧನಿಯಾಕ್ ಬಗಲ್ಲೆ, ಅನಿ ಧನಿಯಾನ್ ತೆಚ್ಯಾ ವಾಂಗ್ಡಾ ಬೊಲಲ್ಲೆ ಬರ್ನಾಬಾಸಾನ್ ತೆಂಕಾ ಸಾಂಗ್ಲ್ಯಾನ್, ತವ್ಡೆಚ್ ನ್ಹಯ್ ಸಾವ್ಲಾನ್ ಧಮಾಸ್ಕಾತ್ ಲೊಕಾಕ್ನಿ ಧನಿಯಾಚ್ಯಾ ವಿಶಯಾತ್ ಧೈರ್‍ಯಾನಿ ಪರ್ಗಟ್ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:27
20 ತಿಳಿವುಗಳ ಹೋಲಿಕೆ  

ಜೋಸೆಫ್ ಎಂಬ ಲೇವಿಯನು ಅವರ ಸಂಗಡ ಇದ್ದನು. ಇವನ ಹುಟ್ಟೂರು ಸೈಪ್ರಸ್. ಇವನಿಗೆ ‘ಬಾರ್ನಬ’ (ಎಂದರೆ ಪ್ರೋತ್ಸಾಹಪುತ್ರ) ಎಂದು ಪ್ರೇಷಿತರು ಹೆಸರಿಟ್ಟಿದ್ದರು.


ಪ್ರಭುವೇ, ಇಗೋ, ಇವರು ನಮ್ಮನ್ನು ಬೆದರಿಸುತ್ತಿದ್ದಾರೆ; ನಿಮ್ಮ ಸಂದೇಶವನ್ನು ಧೈರ್ಯವಾಗಿ ಸಾರಲು ಶರಣರಾದ ನಮಗೆ ನೆರವು ನೀಡಿರಿ.


ಅವಿದ್ಯಾವಂತರು ಹಾಗೂ ಜನಸಾಮಾನ್ಯರು ಆಗಿದ್ದರೂ, ಇವರು ಇಷ್ಟು ಧೈರ್ಯಶಾಲಿಗಳಾಗಿರುವುದನ್ನು ಕಂಡು ಸಭೆಯ ಸದಸ್ಯರು ಚಕಿತರಾದರು; ಯೇಸುವಿನ ಸಂಗಡಿಗರೆಂದು ಇವರ ಗುರುತು ಹಚ್ಚಿದರು.


ಅಂತೆಯೇ, ಕೇಫನ ಸಂಗಡ ಇದ್ದ ಮಿಕ್ಕ ಯೆಹೂದ್ಯರು ಕಪಟತನದಿಂದ ವರ್ತಿಸಿದರು. ಇವರ ವರ್ತನೆಗೆ ಬಾರ್ನಬನೂ ಸಹ ಮಾರುಹೋದನು.


ನನಗೆ ಕೊಡಲಾಗಿದ್ದ ಈ ವಿಶೇಷ ವರವನ್ನು ಮನಗಂಡು ಸಭಾಸ್ತಂಭಗಳೆಂದು ಪರಿಗಣಿತರಾದ ಯಕೋಬ, ಕೇಫ ಮತ್ತು ಯೊವಾನ್ನರು ನನಗೂ ಬಾರ್ನಬನಿಗೂ ಕೈಯಲ್ಲಿ ಕೈಯನ್ನಿಟ್ಟು ಅನ್ಯೋನ್ಯತೆಯನ್ನು ಸೂಚಿಸಿದರು. ಅಲ್ಲದೆ, “ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ, ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ,” ಎಂದೂ ಹೇಳಿದರು.


ಕಟ್ಟಕಡೆಗೆ ದಿನತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು.


ಜೀವನೋಪಾಯಕ್ಕಾಗಿ ಬಾರ್ನಬ ಮತ್ತು ನಾನು ಮಾತ್ರ ದುಡಿಯಬೇಕೇ?


ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯೆಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು.


ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ಮೀಸಲಾಗಿಡಿ,” ಎಂದರು.


ಬಾರ್ನಬ ಮತ್ತು ಸೌಲನು ತಮ್ಮ ಧರ್ಮಕಾರ್ಯವನ್ನು ಮುಗಿಸಿಕೊಂಡು ಮಾರ್ಕ. ಎಂಬ ಹೆಸರುಗೊಂಡ ಯೊವಾನ್ನನೊಂದಿಗೆ ಜೆರುಸಲೇಮಿನಿಂದ ಹಿಂದಿರುಗಿದರು.


ಅನಂತರ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಕ್ಕೆ ಹೋದನು.


ಈ ಸಮಾಚಾರ ಜೆರುಸಲೇಮಿನ ಧರ್ಮಸಭೆಗೆ ತಲುಪಿತು. ಬಾರ್ನಬನನ್ನು ಅಂತಿಯೋಕ್ಯಕ್ಕೆ ಅವರು ಕಳುಹಿಸಿದರು.


ಅಂತೆಯೇ ಅನನೀಯನು ಹೊರಟು ಆ ಮನೆಗೆ ಹೋದನು. ಸೌಲನ ಮೇಲೆ ಹಸ್ತನಿಕ್ಷೇಪಮಾಡಿ, “ಸಹೋದರ ಸೌಲನೇ, ಪ್ರಭು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ನೀನು ಬರುವಾಗ ದಾರಿಯಲ್ಲಿ ಕಾಣಿಸಿಕೊಂಡ ಯೇಸುಸ್ವಾಮಿಯೇ, ನೀನು ದೃಷ್ಟಿಯನ್ನು ಮರಳಿ ಪಡೆಯುವಂತೆಯೂ ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದನು.


ಗ್ರೀಕ್ ಮಾತನಾಡುತ್ತಿದ್ದ ಯೆಹೂದ್ಯರೊಡನೆ ಸಂಭಾಷಿಸುತ್ತಾ ಅವರ ವಿರುದ್ಧ ವಾದಿಸುತ್ತಿದ್ದನು. ಅವರಾದರೋ ಅವನನ್ನು ಕೊಲ್ಲಲು ಹವಣಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು