Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:40 - ಕನ್ನಡ ಸತ್ಯವೇದವು C.L. Bible (BSI)

40 ಪೇತ್ರನು ಅವರೆಲ್ಲರನ್ನೂ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಅನಂತರ ಶವದ ಕಡೆಗೆ ತಿರುಗಿ, “ತಬಿಥಾ, ಮೇಲಕ್ಕೇಳು,” ಎಂದನು. ಆಕೆ ಕಣ್ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; “ತಬಿಥಾ, ಎದ್ದೇಳು” ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು - ತಬಿಥಾ, ಏಳು ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಪೇತ್ರನು ಜನರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಬಳಿಕ ಅವನು ತಬಿಥಳ ದೇಹದ ಕಡೆಗೆ ತಿರುಗಿ, “ತಬಿಥಾ, ಎದ್ದುನಿಲ್ಲು!” ಎಂದನು. ಆಕೆ ತನ್ನ ಕಣ್ಣುಗಳನ್ನು ತೆರೆದಳು. ಆಕೆಯು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಪೇತ್ರನು ಅವರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಮೃತ ಸ್ತ್ರೀಯ ಕಡೆಗೆ ತಿರುಗಿಕೊಂಡು, “ತಬಿಥಾ, ಏಳು,” ಎಂದು ಹೇಳಿದನು. ಆಕೆ ತನ್ನ ಕಣ್ಣು ತೆರೆದು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಪೆದ್ರುನ್ ಸಗ್ಳ್ಯಾ ಲೊಕಾಕ್ನಿ ಖೊಲಿತ್ನಾ ಭಾಯ್ರ್ ಧಾಡುನ್ ಡಿಂಬಿಯಾ ಘಾಲುನ್ ಮಾಗ್ನಿ ಕರ್‍ಲ್ಯಾನ್, ಮಾನಾ ತಬಿಥಾಚ್ಯಾ ಮಡ್ಯಾಕ್ಡೆ ಪರ್ತುನ್ “ತಬಿಥಾ, ಉಟುನ್ ಇಬೆರಾ” ಮಟ್ಲ್ಯಾನ್, ತಿನೆ ಅಪ್ಲೆ ಡೊಳೆ ಉಗಡ್ಲಿನ್, ಅನಿ ಪೆದ್ರುಕ್ ಬಗುನ್ ಉಟುನ್ ಬಸ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:40
14 ತಿಳಿವುಗಳ ಹೋಲಿಕೆ  

ಆದರೂ ಜನರ ಗುಂಪನ್ನು ಹೊರಗೆ ಕಳುಹಿಸಿ, ಯೇಸು ಕೊಠಡಿಯೊಳಕ್ಕೆ ಹೋಗಿ, ಬಾಲಕಿಯ ಕೈಹಿಡಿದು ಎಬ್ಬಿಸಿದರು. ಆಕೆ ಎದ್ದಳು.


ಅನಂತರ ಮೊಣಕಾಲೂರಿ, “ಪ್ರಭೂ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡಿ,” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು. ಸೌಲನು ಸ್ತೇಫನನ ಕೊಲೆಗೆ ಸಮ್ಮತಿಸಿದ್ದನು.


ಯೇಸು ಅವಳ ಕೈಹಿಡಿದು, “ಮಗೂ, ಎದ್ದೇಳು,” ಎಂದು ಕೂಗಿ ಹೇಳಿದರು.


ಇಷ್ಟು ಹೇಳಿದ ಮೇಲೆ ಪೌಲನು ಅವರೆಲ್ಲರ ಸಂಗಡ ಮೊಣಕಾಲೂರಿ ಪ್ರಾರ್ಥನೆ ಮಾಡಿದನು.


ಒಂದು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ ಪ್ರಾರ್ಥನೆಮಾಡುತ್ತಾ,


ಜನಸಂದಣಿ ಬೆಳೆಯುತ್ತಿರುವುದನ್ನು ಕಂಡ ಯೇಸು, ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡು ಮೂಕ ದೆವ್ವವೇ, ಇವನನ್ನು ಬಿಟ್ಟು ತೊಲಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.


ಆದರೂ, ಆ ದಿನಗಳು ಕಳೆದ ಮೇಲೆ, ಅವರನ್ನು ಬಿಟ್ಟು ನಮ್ಮ ಪ್ರಯಾಣವನ್ನು ಮುಂದುವರಿಸಲು ಅನುವಾದೆವು. ಅವರಾದರೋ, ಮಡದಿ ಮಕ್ಕಳೊಡನೆ ಪಟ್ಟಣ ಬಿಟ್ಟು ಸಮುದ್ರತೀರದವರೆಗೂ ನಮ್ಮೊಡನೆ ಬಂದರು. ಅಲ್ಲಿ ನಾವೆಲ್ಲರೂ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.


ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.”


ಪೊಪ್ಲಿಯನ ತಂದೆ ಜ್ವರದಿಂದಲೂ ರಕ್ತಬೇಧಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ, ಪ್ರಾರ್ಥನೆ ಮಾಡಿ, ತನ್ನ ಕರಗಳನ್ನು ಅವನ ಮೇಲಿಟ್ಟು, ಅವನನ್ನು ಗುಣಪಡಿಸಿದನು.


ಆಗ ಪ್ರವಾದಿ ಯೆಶಾಯನು ಸರ್ವೇಶ್ವರನಿಗೆ ಮೊರೆಯಿಡಲು ಅವರು ಆಹಾಜನ ಸೋಪಾನಪಂಕ್ತಿಯಲ್ಲಿ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹಿಂದೆ ಬರಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು