Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:50 - ಕನ್ನಡ ಸತ್ಯವೇದವು C.L. Bible (BSI)

50 ಆಜ್ಞಾಶಾಸನಗಳಿರುವ ಗುಡಾರವನ್ನು ಹಾಗು ಅವರ ಸಾಮಾನು ಸರಂಜಾಮುಗಳನ್ನು ನೋಡಿಕೊಳ್ಳುವುದಕ್ಕೆ ಅವರನ್ನು ನೇಮಿಸಬೇಕು. ಅವರು ಆ ಗುಡಾರವನ್ನು ಅದರ ಉಪಕರಣಗಳನ್ನು ಹೊರುವವರಾಗಿರಬೇಕು. ಅದರ ಸೇವೆ ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವದಕ್ಕೆ ಅವರನ್ನು ನೇವಿುಸಬೇಕು. ಅವರು ಆ ಗುಡಾರವನ್ನೂ ಅದರ ಸಾಮಾನನ್ನೂ ಹೊರುವದಕ್ಕಾಗಿ ಇರಬೇಕು. ಮತ್ತು ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಒಡಂಬಡಿಕೆಯ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಜವಾಬ್ದಾರಿಯು ಲೇವಿಯರಿಗೆ ಸೇರಿರುವುದರಿಂದ ಅವರಿಗೆ ಅದನ್ನು ತಿಳಿಸು. ಅವರು ಅದನ್ನೂ ಅದರ ಉಪಕರಣಗಳನ್ನೂ ಮತ್ತು ಅದಕ್ಕೆ ಸಂಬಂಧಿಸಿದ ಪ್ರತಿಯೊಂದನ್ನೂ ನೋಡಿಕೊಳ್ಳಬೇಕು. ಅವರು ಪವಿತ್ರ ಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಹೊತ್ತುಕೊಂಡು ಹೋಗಬೇಕು. ಅವರು ಅದರ ಸುತ್ತಲೂ ಪಾಳೆಯಮಾಡಿಕೊಂಡು ಅದನ್ನು ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಆದರೆ ನೀನು ಸಾಕ್ಷಿಯ ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಅದಕ್ಕೆ ಬೇಕಾದ ಎಲ್ಲವನ್ನೂ ನೋಡಿಕೊಳ್ಳಲು ಲೇವಿಯರನ್ನು ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಹೊತ್ತುಕೊಳ್ಳುವರು. ಅದರ ಸೇವೆಮಾಡಿ, ಗುಡಾರದ ಸುತ್ತುಮುತ್ತಲೂ ಇಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:50
30 ತಿಳಿವುಗಳ ಹೋಲಿಕೆ  

ದೇವದರ್ಶನದ ಗುಡಾರವನ್ನು ನಿರ್ಮಿಸಿದಾಗ ಉಪಯೋಗಿಸಿದ ಲೋಹಗಳ ಲೆಕ್ಕ ಮೋಶೆಯ ಆಜ್ಞೆಯ ಮೇರೆಗೆ ಮಹಾಯಾಜಕನಾದ ಆರೋನನ ಮಗ ಈತಾಮಾರನು ಲೇವಿಯರ ಕೈಯಿಂದ ಮಾಡಿಸಿದ ಪಟ್ಟಿ:


ಆರೋನನು ಮತ್ತು ಅವನ ಮಕ್ಕಳು ದಂಡು ಹೊರಡುವ ಕಾಲದಲ್ಲಿ ದೇವಸ್ಥಾನದ ಎಲ್ಲ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು. ಮುಟ್ಟಿದರೆ ಬದುಕಲಾರರು. ಕೆಹಾತ್ಯರು ದೇವದರ್ಶನದ ಗುಡಾರದ ಸಲಕರಣೆಗಳಲ್ಲಿ ಹೊರಬೇಕಾದವುಗಳು ಇವೇ.


ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವುದನ್ನು ಮುಗಿಸಿದ ಮೇಲೆ ಅವನಿಗೆ ತಮ್ಮ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳಾದ ಎರಡು ಆಜ್ಞಾಶಾಸನಗಳನ್ನು ಕೊಟ್ಟರು.


ಅವರು ಅಂದಿನಿಂದ ಸಬ್ಬತ್‍ದಿನದಂದು ಪುನಃ ಬರಲಿಲ್ಲ. ಆಮೇಲೆ ನಾನು ಲೇವಿಯರಿಗೆ, “ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು,” ಎಂದು ಆಜ್ಞಾಪಿಸಿದೆ. “ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿಮ್ಮ ಮಹಾಕೃಪೆಗನುಸಾರ ನನ್ನನ್ನು ಕನಿಕರಿಸಿರಿ.”


ಕೈಯೆತ್ತಿ ತನ್ನ ಕೈಯಲ್ಲಿದ್ದ ಕೋಲಿನಿಂದ ಆ ಬಂಡೆಯನ್ನು ಎರಡು ಸಾರಿ ಹೊಡೆದನು. ನೀರು ಪ್ರವಾಹವಾಗಿ ಹೊರಟಿತು. ಜನಸಮೂಹದವರೂ ಅವರ ಜಾನುವಾರಗಳೂ ಕುಡಿದರು.


ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ I ಮಾಡುವರಿಲ್ಲಿಯೆ ಪ್ರಭುವಿನ ನಾಮ ಕೀರ್ತನೆ I ಪಾಲಿಪರಿಂತು ಇಸ್ರೇಲರಿಗೆ ವಿಧಿಸಿದಾಜ್ಞೆ II


ನೈವೇದ್ಯದ್ರವ್ಯ, ಧೂಪಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ದಶಮಾಂಶವನ್ನೂ ಲೇವಿಯರಿಗೆ, ಗಾಯಕರಿಗೆ ಹಾಗು ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ ಯಾಜಕರಿಗಾಗಿ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಅವನಿಗಾಗಿ ಸಿದ್ಧಮಾಡಿಸಿಕೊಟ್ಟಿದ್ದನು.


ಜೆರುಬ್ಬಾಬೆಲ್, ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಯೇಲರು ಗಾಯಕರಿಗೂ ದ್ವಾರಪಾಲಕರಿಗೂ ದಿನದಿನಕ್ಕೆ ಸಿಕ್ಕತಕ್ಕ ಪಾಲುಗಳನ್ನು ಕೊಡುತ್ತ ಇದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಲೇವಿಯರು ತಮ್ಮದರಲ್ಲಿ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.


ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯ ಗೋತ್ರಪ್ರಧಾನರ ಪಟ್ಟಿ ಹಾಗು ಪರ್ಷಿಯಾದ ದಾರ್ಯಾವೆಷ ರಾಜನ ಆಳ್ವಿಕೆಯವರೆಗಿದ್ದ ಯಾಜಕರ ಪಟ್ಟಿಯೂ ಇದೆ.


ಲೇವಿಯರು - ಯೇಷೂವ, ಬೆನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ್ಯ, ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಭಜನ ನಾಯಕರು.


ಅವರ ಹಿಂದೆ ಕೆಹಾತ್ಯರು ದೇವಸ್ಥಾನದ ಸಾಮಾಗ್ರಿಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಮಿಕ್ಕ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


“ಅನಂತರ ಸೈನ್ಯಗಳ ನಟ್ಟನಡುವೆ ದೇವದರ್ಶನದ ಗುಡಾರ ಮತ್ತು ಲೇವಿಯರ ಪಾಳೆಯದವರು ಹೊರಡಬೇಕು. ಅವರು ಹೇಗೆ ಇಳಿದುಕೊಂಡಿದ್ದರೋ ಹಾಗೆಯೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮ್ಮ ತಮ್ಮ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು.


ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗೆ ಮಾಡಿದರೆ ನನ್ನ ಕೋಪ ಇಸ್ರಯೇಲರ ಮೇಲೆ ಎರಗಲು ಆಸ್ಪದವಿರದು. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”


ಇವುಗಳಾದ ಮೇಲೆ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ ಸ್ವರ್ಗದ ದೇವಾಲಯವು ತೆರೆದಿತ್ತು. ದೈವಪ್ರಸನ್ನತೆಯ ಗುಡಾರವು ಅದರೊಳಗಿತ್ತು.


ಮೋಶೆ ಆ ಕೋಲುಗಳನ್ನು ಮಂಜೂಷವಿರುವ ಗುಡಾರದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಇಟ್ಟನು.


ಆದರೂ ಆ ಲೇವಿಯರು ಅವಸರಪಡಲಿಲ್ಲ. ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ, “ಸರ್ವೇಶ್ವರನ ದಾಸನಾದ ಮೋಶೆಯ ವಿಧಿಗನುಸಾರ ಇಸ್ರಯೇಲ್ ಸಮಾಜದವರೆಲ್ಲರು ದೇವದರ್ಶನದ ಗುಡಾರಕ್ಕೆ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಜೆರುಸಲೇಮಿನ ಜನರಿಂದಲೂ ವಸೂಲಿ ಮಾಡುವಂತೆ ನೀನೇಕೆ ನೋಡಿಕೊಳ್ಳಲಿಲ್ಲ?


ಇಸ್ರಯೇಲರ ಪರವಾಗಿ ದೇವದರ್ಶನದ ಗುಡಾರದ ಪರಿಚರ್ಯವನ್ನು ನಡೆಸುವುದಕ್ಕೂ ಪಾಪಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರಿಸಿಕೊಂಡು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಆದುದರಿಂದ ಇಸ್ರಯೇಲರು ದೇವಸ್ಥಾನದ ಹತ್ತಿರಕ್ಕೆ ಬಂದಾಗ ಅವರಿಗೆ ಯಾವ ಅಪಾಯವು ಸಂಭವಿಸುವುದಿಲ್ಲ.”


ಸರ್ವೇಶ್ವರ ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆ, ಆರೋನನು ಹಾಗು ಇಸ್ರಯೇಲ್ ಜನರೆಲ್ಲರು ಮಾಡಿದರು.


ಇದಾದ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನದ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ನಡೆಸಲಾರಂಭಿಸಿದರು. ಅವರ ಬಗ್ಗೆ ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.


ದೇವಸ್ಥಾನದ ವ್ಯವಹಾರವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು. ಆಗ ದೇವರ ಕೋಪ ಮತ್ತೆ ಇಸ್ರಯೇಲರ ಮೇಲೆ ಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು