Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:53 - ಕನ್ನಡ ಸತ್ಯವೇದವು C.L. Bible (BSI)

53 ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗೆ ಮಾಡಿದರೆ ನನ್ನ ಕೋಪ ಇಸ್ರಯೇಲರ ಮೇಲೆ ಎರಗಲು ಆಸ್ಪದವಿರದು. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ [ಯೆಹೋವನ] ಕೋಪವು ಇಸ್ರಾಯೇಲ್ಯರ ಮೇಲೆ ಉಂಟಾಗುವದಕ್ಕೆ ಆಸ್ಪದವಿರುವದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಆದರೆ ಲೇವಿಯರು ಮಾತ್ರ ಪವಿತ್ರ ಗುಡಾರದ ಸುತ್ತಲೂ ತಮ್ಮ ಪಾಳೆಯ ಮಾಡಿಕೊಳ್ಳಬೇಕು. ಹೀಗೆ ಲೇವಿಯರು ಒಡಂಬಡಿಕೆಯ ಪವಿತ್ರ ಗುಡಾರವನ್ನು ಕಾಯುವರು; ಇಸ್ರೇಲರಿಗೆ ಯಾವ ಕೇಡೂ ಸಂಭವಿಸದಂತೆ ಅವರು ಪವಿತ್ರ ಗುಡಾರವನ್ನು ಸಂರಕ್ಷಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:53
26 ತಿಳಿವುಗಳ ಹೋಲಿಕೆ  

ಮೋಶೆ, ಆರೋನನನ್ನು ಉದ್ದೇಶಿಸಿ, “ಸರ್ವೇಶ್ವರನಿಗೆ ಕೋಪವುಂಟಾಗಿದೆ: ಈ ಜನರೊಳಗೆ ಘೋರ ವ್ಯಾಧಿಯೊಂದು ಪ್ರಾರಂಭವಾಗಿಬಿಟ್ಟಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಬಲಿಪೀಠದಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮುದಾಯದವರ ಬಳಿಗೆ ಬೇಗ ಹೋಗು; ಅವರ ಪರವಾಗಿ ದೋಷಪರಿಹಾರವನ್ನು ಮಾಡು,” ಎಂದು ಹೇಳಿದನು.


ಹೀಗೆ ಅವರು ತಮ್ಮ ಸಹೋದರರಾದ ಆರೋನ್ಯರ ಸಹಾಯಕರಾಗಿದ್ದು, ದೇವದರ್ಶನದ ಗುಡಾರವನ್ನೂ ಪರಿಶುದ್ಧವಾದ ಎಲ್ಲಾ ಸಾಮಾನುಗಳನ್ನೂ ನೋಡಿಕೊಳ್ಳುವುದೇ ಸರ್ವೇಶ್ವರನ ಆಲಯದಲ್ಲಿ ಅವರು ಮಾಡಬೇಕಾಗಿದ್ದ ಪರಿಚರ್ಯೆ.


ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರಿಗೆ, “ನೀವು ಸಂತಾಪ ಸೂಚಿಸಲು ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವು ಕೂಡ ಸಾಯುವಿರಿ; ಅದು ಮಾತ್ರವಲ್ಲ, ಇಡೀ ಜನಸಮೂಹದ ಮೇಲೆ ಸರ್ವೇಶ್ವರ ಸಿಟ್ಟುಗೊಳ್ಳುವರು. ಸರ್ವೇಶ್ವರನಿಂದ ಹೊರಟ ಆ ಬೆಂಕಿಯ ನಿಮಿತ್ತ ನಿಮ್ಮ ಸೋದರರಾದ ಇಸ್ರಯೇಲ್ ಸಮಾಜದವರೇ ದುಃಖಿಸಲಿ.


ಇವುಗಳಲ್ಲಿ ಮೋಶೆ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಸರ್ವೇಶ್ವರನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.


ಮಿಕ್ಕ ಇಸ್ರಯೇಲರಿಗೆ ಬರುವ ಭಾಗದಿಂದ ಸೆರೆಯಾಳು, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಸರ್ವೇಶ್ವರನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಿ,” ಎಂದು ಆಜ್ಞಾಪಿಸಿದರು.


ಇಸ್ರಯೇಲರ ಪರವಾಗಿ ದೇವದರ್ಶನದ ಗುಡಾರದ ಪರಿಚರ್ಯವನ್ನು ನಡೆಸುವುದಕ್ಕೂ ಪಾಪಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರಿಸಿಕೊಂಡು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಆದುದರಿಂದ ಇಸ್ರಯೇಲರು ದೇವಸ್ಥಾನದ ಹತ್ತಿರಕ್ಕೆ ಬಂದಾಗ ಅವರಿಗೆ ಯಾವ ಅಪಾಯವು ಸಂಭವಿಸುವುದಿಲ್ಲ.”


ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.


ಆದಕಾರಣ ಸರ್ವಶಕ್ತ ಸರ್ವೇಶ್ವರ ಪ್ರವಾದಿಗಳ ವಿಷಯದಲ್ಲಿ ಹೇಳುವುದನ್ನು ಕೇಳಿ: “ಇವರು ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು. ವಿಷಬೆರೆತ ನೀರನ್ನು ಕುಡಿಯುವಂತೆ ಮಾಡುವೆನು ಜೆರುಸಲೇಮಿನ ಈ ಪ್ರವಾದಿಗಳಿಂದ ಭ್ರಷ್ಟತನ ನಾಡಿನಲ್ಲೆಲ್ಲೂ ಹರಡಿರುವುದು.”


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ನಮಗಾದರೋ ಸರ್ವೇಶ್ವರನೊಬ್ಬನೇ ದೇವರು; ನಾವು ಅವರನ್ನು ಬಿಡಲಿಲ್ಲ. ಸರ್ವೇಶ್ವರನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರು ಹಾಗೂ ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರು ನಮಗಿರುತ್ತಾರೆ.


ಮಂಜೂಷವನ್ನು ತೆರೆದು ನೋಡಿದ ಬೇತ್ ಷೆಮೆಷಿನವರಾದ ಎಪ್ಪತ್ತು ಮಂದಿಯನ್ನು ಸರ್ವೇಶ್ವರ ನಾಶಮಾಡಿದರು. ಈ ವಿನಾಶಕ್ಕಾಗಿ ಬೇತ್ ಷೆಮೆಷಿನವರು ಗೋಳಾಡಿದರು.


ದೇವದರ್ಶನದ ಗುಡಾರದ ಪೂರ್ವದಿಕ್ಕಿನಲ್ಲಿ, ಅಂದರೆ ಸೂರ್ಯೋದಯವಾಗುವ ಕಡೆಯಲ್ಲಿ ಮೋಶೆ ಮತ್ತು ಆರೋನನು ಹಾಗೂ ಆರೋನನ ಮಕ್ಕಳು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು. ಅವರು ಇಸ್ರಯೇಲರ ಪರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕಾಗಿತ್ತು. ಬೇರೆ ಯಾರಾದರೂ ಆ ಕೆಲಸಕ್ಕೆ ಕೈ ಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕಾಗಿತ್ತು.


ಆಜ್ಞಾಶಾಸನಗಳಿರುವ ಗುಡಾರವನ್ನು ಹಾಗು ಅವರ ಸಾಮಾನು ಸರಂಜಾಮುಗಳನ್ನು ನೋಡಿಕೊಳ್ಳುವುದಕ್ಕೆ ಅವರನ್ನು ನೇಮಿಸಬೇಕು. ಅವರು ಆ ಗುಡಾರವನ್ನು ಅದರ ಉಪಕರಣಗಳನ್ನು ಹೊರುವವರಾಗಿರಬೇಕು. ಅದರ ಸೇವೆ ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ನಡೆದುಕೊಂಡರು.


“ಅನಂತರ ಸೈನ್ಯಗಳ ನಟ್ಟನಡುವೆ ದೇವದರ್ಶನದ ಗುಡಾರ ಮತ್ತು ಲೇವಿಯರ ಪಾಳೆಯದವರು ಹೊರಡಬೇಕು. ಅವರು ಹೇಗೆ ಇಳಿದುಕೊಂಡಿದ್ದರೋ ಹಾಗೆಯೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮ್ಮ ತಮ್ಮ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು.


ಗೇರ್ಷೋನ್ಯರ ಕುಟುಂಬಗಳವರು ದೇವದರ್ಶನದ ಗುಡಾರದ ಹಿಂದುಗಡೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು.


ಕೆಹಾತ್ಯರ ಕುಟುಂಬಗಳವರು ದೇವದರ್ಶನದ ಗುಡಾರದ ದಕ್ಷಿಣ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು.


ಮೆರಾರೀಯರ ಗೋತ್ರಗಳ ಮುಖ್ಯಸ್ಥನು ಅಬೀಹೈಲನ ಮಗ ಚೂರೀಯೇಲ್. ಇವರು ದೇವದರ್ಶನದ ಗುಡಾರದ ಉತ್ತರ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು.


ಮೋಶೆ ಆ ಕೋಲುಗಳನ್ನು ಮಂಜೂಷವಿರುವ ಗುಡಾರದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಇಟ್ಟನು.


ಇಸ್ರಯೇಲರ ದೇವರು ತಮ್ಮ ಸಮೂದಾಯದವರಾದ ನಿಮ್ಮನ್ನು ಪ್ರತ್ಯೇಕಿಸಿ ತಮ್ಮ ಗುಡಾರದ ಪರಿಚರ್ಯವನ್ನು ಮಾಡಲು ಹಾಗೂ ಸರ್ವಸಮುದಾಯದ ಸೇವೆಯನ್ನು ಕೈಗೊಳ್ಳಲು ತಮ್ಮ ಬಳಿಯಲ್ಲೇ ಇಟ್ಟುಕೊಂಡರು.


ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು