Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:2 - ಕನ್ನಡ ಸತ್ಯವೇದವು C.L. Bible (BSI)

2 “ನೀನು ಬೆಳ್ಳಿಯ ತಗಡಿನಿಂದ ಎರಡು ಕಹಳೆಗಳನ್ನು ಮಾಡಿಸು. ಜನರನ್ನು ಸಭೆಸೇರಿಸುವುದಕ್ಕೂ ಹಾಗೂ ದಂಡನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಬೆಳ್ಳಿಯ ತಗಡಿನಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಿಸುವುದಕ್ಕೂ ಮತ್ತು ದಂಡುಗಳನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಬೆಳ್ಳಿಯ ತಗಡಿನಿಂದ ಎರಡು ತುತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಕರಿಸುವದಕ್ಕೂ ದಂಡುಗಳನ್ನು ಹೊರಡಿಸುವದಕ್ಕೂ ಅವುಗಳನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನೀನು ಬೆಳ್ಳಿಯ ತಗಡುಗಳಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಒಟ್ಟಾಗಿ ಕರೆಸುವುದಕ್ಕೂ ಅವರು ಯಾವಾಗ ಹೊರಡಬೇಕೆಂದು ಹೇಳುವುದಕ್ಕೂ ಇವುಗಳನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಕ್ಷೆಯ ಕೆಲಸದಿಂದ ಹೊಡೆದು ಮಾಡಿದ ಬೆಳ್ಳಿಯ ತಗಡಿನ ಎರಡು ತುತೂರಿಗಳನ್ನು ನೀನು ಮಾಡಿಸಬೇಕು. ಸಭೆಯನ್ನು ಕರೆಯುವುದಕ್ಕಾಗಿಯೂ, ಪಾಳೆಯಗಳ ಪ್ರಯಾಣಕ್ಕಾಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:2
14 ತಿಳಿವುಗಳ ಹೋಲಿಕೆ  

ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ.


ನಿಮ್ಮ ನೈವೇದ್ಯಗಳನ್ನು ಇನ್ನು ತರಬೇಡಿ, ಅವು ವ್ಯರ್ಥ. ನಿಮ್ಮ ಧೂಪಾರತಿ ನನಗೆ ಅಸಹ್ಯ. ನೀವು ಆಚರಿಸುವ ಹಬ್ಬ ಹುಣ್ಣಿಮೆ, ಸಬ್ಬತ್ ವಿಶ್ರಾಂತಿ, ನಿಮ್ಮ ಸಭೆಕೂಟಗಳು ನನಗೆ ಬೇಡ. ಅಧರ್ಮದಿಂದ ಕೂಡಿದ ಇಂಥ ಸಮಾರಂಭಗಳು ನನಗೆ ಇಷ್ಟವಿಲ್ಲ.


ಊದಿರಿ ಕೊಂಬನು ಅಮವಾಸ್ಯೆಯಲಿ I ಉತ್ಸವದಿನವಾದ ಪೂರ್ಣಿಮೆಯಲಿ II


ನಮ್ಮೆಲ್ಲರಿಗೂ ಪ್ರಭು ಒಬ್ಬರೇ; ವಿಶ್ವಾಸವೂ ಒಂದೇ; ದೀಕ್ಷಾಸ್ನಾನವೂ ಒಂದೇ.


“ತುತೂರಿಯನ್ನು ಎತ್ತಿಕೊಂಡು ಊದು. ಶತ್ರುಗಳು ಹದ್ದಿನಂತೆ ದೇವರ ಆಲಯದ ಮೇಲೆ ಎರಗಿಬರುತ್ತಿದ್ದಾರೆ. ಕಾರಣ - ಜನರು ನನ್ನ ಒಡಂಬಡಿಕೆಯನ್ನು ಮೀರಿದ್ದಾರೆ, ನನ್ನ ವಿಧಿನಿಯಮಗಳನ್ನು ಉಲ್ಲಂಘಿಸಿದ್ದಾರೆ.


ಧನ್ಯರು ಪ್ರಭು, ನಿನಗೆ ಜಯಕಾರ ಹಾಡುವವರು I ನಿನ್ನ ಮುಖದ ಪ್ರಕಾಶದೊಳವರು ನಡೆಯುವರು II


ನಾರುಮಡಿಗಳನ್ನು ಧರಿಸಿಕೊಂಡು ತಾಳ, ಸ್ವರಮಂಡಲ, ಕಿನ್ನರಿ, ಇವುಗಳನ್ನು ಹಿಡಿದುಕೊಂಡು, ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರು ಹಾಗೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಬಲಿಪೀಠದ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.


ಸರ್ವೇಶ್ವರನ ಆಲಯಕ್ಕೆ ತರಲಾದ ಹಣವನ್ನು ದುರಸ್ತುಕಾರ್ಯದವರ ಸಂಬಳಕ್ಕಾಗಿ ಉಪಯೋಗಿಸಿದರೇ ಹೊರತು,


ಜನರನ್ನು ಸಭೆಸೇರಿಸಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಮೊಳಗಿಸಬೇಕಾಗಿಲ್ಲ.


“ಅಪ್ಪಟ ಬಂಗಾರದಿಂದ ಒಂದು ದೀಪವೃಕ್ಷವನ್ನು ಮಾಡಿಸಬೇಕು. ಅದರ ಬುಡವನ್ನು ಹಾಗು ಕಾಂಡವನ್ನು ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪವೃಕ್ಷವೆಲ್ಲಾ ಅಖಂಡವಾಗಿರಬೇಕು. ಹೂಗಳಿಂದ, ಹೂಮೊಗ್ಗುಗಳಿಂದ ಕೂಡಿ ಅಲಂಕಾರವಾಗಿ ಕೆತ್ತಿರಬೇಕು.


ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ನಕಾಸಿ ಕೆಲಸದಿಂದ ಮಾಡಿಸಬೇಕು.


ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದು ಆಜ್ಞಾಪಿಸಿದರು:


ಜುದೇಯದಲ್ಲಿ ಸಾರಿರಿ; ಜೆರುಸಲೇಮಿನಲ್ಲಿ ಪ್ರಕಟಿಸಿರಿ. ನಾಡಿನಲ್ಲೆಲ್ಲ ಕೊಂಬೂದುತ್ತಾ ಆಜ್ಞಾಪಿಸಿರಿ. ‘ಕೂಡಿಬನ್ನಿ, ಕೋಟೆಕೊತ್ತಲಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ’ ಎಂದು ಕೂಗಿ ಹೇಳಿರಿ.


ಸಿಯೋನಿನಲ್ಲಿ ಕೊಂಬೂದಿರಿ; ನನ್ನ ಪರಿಶುದ್ಧಪರ್ವತದಲ್ಲಿ ಎಚ್ಚರಿಕೆಯ ವಾಣಿ ಮೊಳಗಲಿ; ಸಮಸ್ತ ದೇಶನಿವಾಸಿಗಳು ಹೆದರಿ ನಡುಗಲಿ; ಸರ್ವೇಶ್ವರಸ್ವಾಮಿಯ ದಿನ ಬರಲಿದೆ. ಸನ್ನಿಹಿತವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು