Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:23 - ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರ ಅವನಿಗೆ, “ಸರ್ವೇಶ್ವರನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನೇ ನೋಡುವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನು ಮೋಶೆಗೆ, “ನನ್ನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಈಗ ನೀನು ನೋಡುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನು ಅವನಿಗೆ - ಯೆಹೋವನ ಕೈ ಮೋಟುಗೈಯೋ; ನನ್ನ ಮಾತು ನೆರವೇರುತ್ತದೋ ಇಲ್ಲವೋ ಈಗ ನೀನು ನೋಡುವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಯೆಹೋವನು ಮೋಶೆಗೆ, “ಯೆಹೋವನ ಶಕ್ತಿಗೆ ಮಿತಿಯಿಲ್ಲ. ನಾನು ಹೇಳುತ್ತಿರುವ ಸಂಗತಿಗಳು ನಡೆಯುವುದನ್ನು ನೀನು ನೋಡುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಎಂದು ನೀನು ನೋಡುವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:23
21 ತಿಳಿವುಗಳ ಹೋಲಿಕೆ  

ನಾನು ಹೇಳುವುದನ್ನು ಕೇಳಿ : ಸರ್ವೇಶ್ವರ ಸ್ವಾಮಿಯ ಕೈ ನಿಮ್ಮನ್ನು ರಕ್ಷಿಸಲಾಗದಂಥ ಮೋಟುಗೈಯಲ್ಲ, ಅವರ ಕಿವಿ ಕಿವುಡಲ್ಲ.


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ನಾನೇ ಸರ್ವೇಶ್ವರ; ನಾನು ನುಡಿದೆ ತೀರುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು. ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು. ಇದು ಸರ್ವೇಶ್ವರನಾದ ದೇವರ ವಾಕ್ಯ.”


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ಸರ್ವೇಶ್ವರನಿಗೆ ಅಸಾಧ್ಯವಾದುದು ಯಾವುದು? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುತ್ತಾನೆ” ಎಂದು ಹೇಳಿದರು.


ದೇವರಿಗೆ ಅಸಾಧ್ಯವಾದುದು ಯಾವುದೂ ಇಲ್ಲ,” ಎಂದನು.


ಯೇಸು ಅವರನ್ನು ನಿಟ್ಟಿಸಿ ನೋಡುತ್ತಾ, “ಮನುಷ್ಯರಿಗಿದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದರು.


ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ; ಇದು ನಡೆದೇ ತೀರುವುದು, ನಾನು ನೆರವೇರಿಸುವೆನು; ಹಿಂತೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು; ಇದು ಸರ್ವೇಶ್ವರನಾದ ದೇವರ ನುಡಿ.”


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಯಕೋಬ ವಂಶವು ಶಾಪಗ್ರಸ್ತವಾಗಲು ಸಾಧ್ಯವೆ? ಸರ್ವೇಶ್ವರ ತಾಳ್ಮೆಗೆಡುವುದುಂಟೆ? ಇಂಥ ಕೃತ್ಯಗಳನ್ನು ಅವರು ಮಾಡಿಯಾರೆ? ಸನ್ಮಾರ್ಗದಲ್ಲಿ ನಡೆಯುವವರಿಗೆ ಸ್ವಾಮಿಯ ವಾಕ್ಯ ಒಳಿತನ್ನುಂಟುಮಾಡುವುದಿಲ್ಲವೆ?” ಎನ್ನುವರು.


ಪದೇಪದೇ ಪರೀಕ್ಷಿಸಿದರು ದೇವರನು I ಕೆಣಕಿದರು ಇಸ್ರಯೇಲರ ಸದಮಲನನು II


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೈವಪುರುಷನಿಗೆ, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದನು. ಅದಕ್ಕೆ ಎಲೀಷನು, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ಹೇಳಿದನು.


ಅವರಿಗೆ ಬೇಕಾದಷ್ಟು ಸಿಗುವಂತೆ ಆಡುಕುರಿಗಳನ್ನು ದನಗಳನ್ನೂ ಕೊಯ್ಯಬೇಕೆನ್ನುತ್ತೀರೋ? ಇಲ್ಲವೆ ಸಮುದ್ರದಲ್ಲಿರುವ ಮೀನುಗಳನ್ನೆಲ್ಲಾ ಹಿಡಿದುಕೊಳ್ಳಬೇಕೆನ್ನುತ್ತೀರೋ? ಎಂದು ಹೇಳಿದನು.


ದಿಕ್ಕು ತೋಚದವನಂತೆ ನಿಶ್ಚಲರಾಗಿರುವಿರಿ, ಏಕೆ? ರಕ್ಷಿಸಲಾಗದ ರಣಧೀರನಂತಿರುವಿರಿ, ಏಕೆ? ಆದರೂ ಸರ್ವೇಶ್ವರಾ, ನೀವು ನಮ್ಮ ಮಧ್ಯೆ ಇರುವಿರಿ; ನಾವು ನಿಮ್ಮ ಹೆಸರಿನವರು, ನಮ್ಮನ್ನು ಕೈಬಿಡಬೇಡಿ.


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ದಾಸನೇ, ನೀನು ದಿನನಿತ್ಯವೂ ಆರಾಧಿಸುವ ನಿನ್ನ ದೇವರಿಗೆ ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಸಾಧ್ಯವಾಯಿತೋ?” ಎಂದು ಕೇಳಿದನು.


ಅದಕ್ಕೆ ಸರ್ವೇಶ್ವರ ಸ್ವಾಮಿ ಮೋಶೆಗೆ, “ನಾನು ಫರೋಹನಿಗೆ ಮಾಡಲು ಹೋಗುವುದನ್ನು ನೀನು ಇಷ್ಟರಲ್ಲೇ ನೋಡುವೆ. ಅವನು ನನ್ನ ಭುಜಬಲವನ್ನು ಕಂಡು ಅವರನ್ನು ಹೋಗಲು ಬಿಡುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ನಾಡಿನಿಂದ ಹೊರಡಿಸುವನು,” ಎಂದರು.


ಅದಕ್ಕೆ ಅವನು, “ಇಷ್ಟನ್ನು ನೂರುಮಂದಿಗೆ ಹೇಗೆ ಬಡಿಸಲಿ,” ಎಂದನು. ಎಲೀಷನು, “ಇರಲಿ, ಕೊಡು; ಅವರು ಊಟಮಾಡಲಿ. ‘ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರು’ ಎಂಬುದು ಸರ್ವೇಶ್ವರನ ನುಡಿ,” ಎಂದು ಹೇಳಿದನು.


“ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


“ನೋಡು, ನಾನು ಸರ್ವೇಶ್ವರ, ನರಪ್ರಾಣಿಗಳಿಗೆ ದೇವರು. ನನಗೆ ಅಸಾಧ್ಯವಾದುದು ಯಾವುದು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು